Homeಮುಖಪುಟಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

ಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲಾ ನ್ಯಾಯಾಲಯವು 14ನೇ ಶತಮಾನದ ಐತಿಹಾಸಿಕ ಅಟಾಲಾ ಮಸೀದಿಯ ಸಮೀಕ್ಷೆಗೆ ಆದೇಶಿಸಲು ಸೋಮವಾರ (ಡಿ.16) ನಿರಾಕರಿಸಿದೆ.

ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ನೀಡದಂತೆ ಸೂಚಿಸಿದೆ. ಈ ಹಿನ್ನೆಲೆ, ಜೌನ್‌ಪುರ ಜಿಲ್ಲಾ ನ್ಯಾಯಾಲಯ ಮಸೀದಿಯ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ ಎಂದು ವರದಿಯಾಗಿದೆ.

‘ಸ್ವರಾಜ್ ವಾಹಿನಿ ಅಸೋಸಿಯೇಷನ್‌’ ಎಂಬ ಹಿಂದುತ್ವ ಸಂಘಟನೆ ಮತ್ತು ಸಂತೋಷ್ ಕುಮಾರ್ ಮಿಶ್ರಾ ಎಂಬವರು ಪುರಾತನ ಮಸೀದಿಯನ್ನು ‘ಅಟಾಲಾ ದೇವಿ ಮಂದಿರ’ ಎಂದು ಘೋಷಿಸಲು ಕೋರಿದ್ದರು. ಸನಾತನದ ಧರ್ಮದ ಅನುಯಾಯಿಗಳು ಅಲ್ಲಿ ಪೂಜೆ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿದ್ದರು.

ಮಸೀದಿಯನ್ನು ಮಂದಿರ ಎಂದು ಘೋಷಿಸುವಂತೆ ಕೋರಿ ಈ ಹಿಂದೆ ಹಿಂದುತ್ವ ಸಂಘಟನೆಗಳು ಸಲ್ಲಿಸಿರುವ ಬಹುತೇಕ ಅರ್ಜಿಗಳನ್ನು ವಿಚಾರಣೆ ನಡೆಸಿರುವ ದೇಶದ ವಿವಿಧ ನ್ಯಾಯಾಲಯಗಳು, ಮಸೀದಿಗಳ ಸಮೀಕ್ಷೆಗೆ ಆದೇಶಿಸಿವೆ. ಡಿಸೆಂಬರ್ 12ರ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ.

ಜೌನ್‌ಪುರ ಜಿಲ್ಲಾ ನ್ಯಾಯಾಲಯದ ಸಿವಿಲ್ ಜಡ್ಜ್ (ಜೆಡಿ) ಸುಧಾ ಶರ್ಮಾ ಅವರು ಪ್ರಕರಣ ಮುಂದಿನ ವಿಚಾರಣೆಯನ್ನು 2025ರ ಮಾರ್ಚ್ 2ಕ್ಕೆ ಮುಂದೂಡಿದ್ದಾರೆ. ಇದನ್ನೂ 12 ದಿನಗಳ ಮುಂಚೆ ಆರಾಧನಾ ಸ್ಥಳಗಳ ಕಾಯ್ದೆ-1991ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಬಾಬರಿ ಮಸೀದಿಯ ಜಾಗವನ್ನು ರಾಮಮಂದಿರಕ್ಕೆ ಬಿಟ್ಟುಕೊಟ್ಟು ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕ ದೇಶದಲ್ಲಿ ಮಸೀದಿಯಡಿ ಮಂದಿರ ಹುಡುಕುವ ಪರಿಪಾಠ ಹೆಚ್ಚಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಮಥುರಾದ ಶಾಹಿ ಈದ್ಗಾ-ಕೃಷ್ಣ ಜನ್ಮಭೂಮಿ, ವಾರಣಾಸಿಯ ಜ್ಞಾನವಾಪಿ, ಸಂಭಾಲ್‌ನ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಶರೀಫ್ ಸೇರಿದಂತೆ ವಿವಿಧ ಮಸೀದಿ ದರ್ಗಾಗಳನ್ನು ದೇವಸ್ಥಾನವೆಂದು ಘೋಷಿಸಲು ಕೋರಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ನ್ಯಾಯಾಲಯಗಳು ಸಮೀಕ್ಷೆಗೆ ಆದೇಶಿಸಿದೆ.

1991ರ ಆರಾಧನಾ ಸ್ಥಳಗಳ ಕಾಯ್ದೆ ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಆರಾಧನಾ ಸ್ಥಳಗಳು ಹೇಗಿತ್ತೋ, ಅದೇ ಸ್ವರೂಪದಲ್ಲಿ ಮುಂದುವರೆಸಲು ಹೇಳುತ್ತದೆ. ಆದರೆ, ನ್ಯಾಯಾಲಯದ ಸಮೀಕ್ಷೆ ಆದೇಶಗಳು ಈ ಕಾನೂನಿಗೆ ವಿರುದ್ದವಾಗಿದೆ. ಈ ಕಳವಳಕಾರಿ ಬೆಳವಣಿಗೆಯ ವಿರುದ್ದ ಹಲವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಗಳ ಸಮೀಕ್ಷೆಗೆ ಆದೇಶಿಸುವುದಕ್ಕೆ ಮಧ್ಯಂತರ ತಡೆ ನೀಡಿದೆ. ಆರಾಧನಾ ಸ್ಥಳಗಳ ಕಾಯ್ದೆಯನ್ನು ಪಾಲಿಸುವಂತೆ ಕೆಳ ನ್ಯಾಯಾಲಯಗಳಿಗೆ ಸೂಚಿಸಿದೆ. ಡಿಸೆಂಬರ್ 12ರಂದು ನೀಡಿರುವ ಈ ಆದೇಶ ಅತ್ಯಂತ ಮಹತ್ವದ್ದಾಗಿದೆ.

ಮತ್ತೊಂದೆಡೆ ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿಯೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿವೆ. ಅದು ಫೆಬ್ರವರಿಯಲ್ಲಿ ವಿಚಾರಣೆಗೆ ಬರಲಿದೆ.

ಇದನ್ನೂ ಓದಿ : ಪರ್ಭಾನಿ ಹಿಂಸಾಚಾರ: ಪೊಲೀಸ್ ಚಿತ್ರಹಿಂಸೆಯೇ ಕಾನೂನು ವಿದ್ಯಾರ್ಥಿಯ ಸಾವಿಗೆ ಕಾರಣ; ದೃಢಪಡಿಸಿದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...