Homeಅಂತರಾಷ್ಟ್ರೀಯರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ: ...

ರ‍ಷ್ಯಾ ಸೇನೆಯ ಅತ್ಯಂತ ಹಿರಿಯ  ಅಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಹತ್ಯೆ:  ಉಕ್ರೇನ್ ಕೈವಾಡ ಶಂಕೆ

- Advertisement -
- Advertisement -

ಮಾಸ್ಕೋ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಚ್ಚಿಟ್ಟಿದ್ದ ಬಾಂಬ್‌ ಸ್ಫೋಟದಿಂದ ಮಾಸ್ಕೋದಲ್ಲಿ ಪರಮಾಣು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ರಷ್ಯಾದ ಹಿರಿಯ ಜನರಲ್ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಇಂದು (ಮಂಗಳವಾರ) ಮೃತಪಟ್ಟಿದ್ದಾರೆ.

ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ಸಂರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಕ್ರೆಮ್ಲಿನ್‌ನಿಂದ ಆಗ್ನೇಯಕ್ಕೆ 7 ಕಿ.ಮೀ ದೂರದಲ್ಲಿರುವ ರಿಯಾಜಾನ್ಸ್ಕಿ ಪ್ರಾಸ್ಪೆಕ್ಟ್‌ನಲ್ಲಿರುವ ಅಪಾರ್ಟ್​ಮೆಂಟ್ ಕಟ್ಟಡದ ಬಳಿ ಬಾಂಬ್ ದಾಳಿಯಿಂದ ಮೃತರಾಗಿದ್ದಾರೆ.

ಜನರಲ್ ಕಿರಿಲ್ಲೋವ್ ಅವರ ಸಹಾಯಕ ಸಹ ಈ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ಸಾವಿನ ಕುರಿತು ತನಿಖೆ ಆರಂಭವಾಗಿದೆ. ತನಿಖಾಧಿಕಾರಿಗಳು, ವಿಧಿ ವಿಜ್ಞಾನ ತಂಡದ ತಜ್ಞರು ಸ್ಥಳದಲ್ಲಿ ಶೋಧ ನಡೆಸಿದ್ದಾರೆ.  ಸ್ಫೋಟಕ ಇರಿಸಿದವರ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಿರಿಲ್ಲೋವ್  ಅವರು ಉಕ್ರೇನ್  ವಿರುದ್ಧದ ಯುದ್ಧ ಆರಂಭವಾದ ಬಳಿಕ ಹತ್ಯೆಯಾದ ರಷ್ಯಾದ ಅತ್ಯಂತ ಹಿರಿಯ ಸೇನಾಧಿಕಾರಿ ಆಗಿದ್ದಾರೆ. ಉಕ್ರೇನ್ ಯುದ್ಧದಲ್ಲಿ  ರಷ್ಯಾ ಸಾಧಿಸಿರುವ ಯಶಸ್ಸಿನ ಬಗ್ಗೆ ಅಧ್ಯಕ್ಷ  ವ್ಲಾದಿಮಿರ್ ಪುಟಿನ್ ಅವರು ಹೆಮ್ಮೆಯ ಮಾತಗಳನ್ನಾಡಿದ ಮರುದಿನ ಈ ಬೆಳವಣಿಗೆ ನಡೆದಿದೆ. 54 ವರ್ಷದ  ಕಿರಿಲ್ಲೋವ್ ಅವರು ವಸತಿ ಸಮುಚ್ಚಯದಲ್ಲಿರುವ ತಮ್ಮ ಮನೆಯಿಂದ ಕಚೇರಿಗೆ ಹೊರಟಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ.

ರಿಮೋಟ್‌ನಿಂದ ಸ್ಫೋಟಿಸಲಾದ ಸ್ಫೋಟಕ ಸಾಧನದ ಶಕ್ತಿಯು ಸುಮಾರು 300 ಗ್ರಾಂ ಟಿಎನ್‌ಟಿಯಷ್ಟಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಟಿಎಎಸ್​ಎಸ್​ ವರದಿ ಮಾಡಿದೆ.

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಉಕ್ರೇನಿಯನ್ ಕೋರ್ಟ್​ ಜನರಲ್‌ ಕಿರಿಲ್ಲೋವ್​ ಅವರಿಗೆ ಗೈರುಹಾಜರಾಗಿದ್ದಕ್ಕೆ ಶಿಕ್ಷೆ ವಿಧಿಸಿತ್ತು. ಅದಾದ ಒಂದು ದಿನದ ನಂತರ ಕಿರಿಲ್ಲೋವ್ ಅವರ ಸಾವು ಸಂಭವಿಸಿದೆ. ಉಕ್ರೇನ್‌ನ ಭದ್ರತಾ ಸೇವೆಯ ಪ್ರಕಾರ, ಯುದ್ಧದ ಆರಂಭದಿಂದಲೂ ಕಿರಿಲ್ಲೋವ್ ಅವರ ಆದೇಶದ ಮೇರೆಗೆ ರಷ್ಯಾದ ರಾಸಾಯನಿಕ ಯುದ್ಧಸಾಮಗ್ರಿಗಳ ಬಳಕೆಯ 4,800 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಕಿರಿಲ್ಲೋವ್ ಅವರ ಹತ್ಯೆಯ ಹಿಂದೆ ಉಕ್ರೇನ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಇದು ತನ್ನ ವಿಶೇಷ ಕಾರ್ಯಾಚರಣೆ ಎಂದು ಉಕ್ರೇನ್‌ನ ಭದ್ರತೆ ಮತ್ತು ಗುಪ್ತಚರ ಸಂಸ್ಥೆ ಎಸ್‌ಬಿಯು ಹೇಳಿರುವುದಾಗಿ ಉಕ್ರೇನ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಿರಿಲ್ಲೋವ್ ಯುದ್ಧಾಪರಾಧಿಯಾಗಿದ್ದು, ಕಾನೂನಿನ ಪ್ರಕಾರವೆ ಅವರನ್ನು ಗುರಿಯಾಗಿಸಲಾಗಿದೆ. ಏಕೆಂದರೆ, ಉಕ್ರೇನ್ ಸೇನೆಯ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಸುವಂತೆ ಅವರು ರಷ್ಯಾ ಸೇನೆಗೆ ಆದೇಶಿಸಿದ್ದು, ಉಕ್ರೇನ್‌ನ ಜನರನ್ನು ಕೊಲ್ಲುವ  ಎಲ್ಲರಿಗೂ ಇಂತಹ ಅಪಮಾನಕರ ಅಂತ್ಯ ಕಾದು ಕುಳಿತಿದೆ. ಯುದ್ಧಾಪರಾಧಿಗಳ ವಿರುದ್ಧ ಪ್ರತೀಕಾರ ತೀರಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

2022ರ ಫೆಬ್ರವರಿಯಲ್ಲಿ ಆರಂಭಗೊಂಡ ಉಕ್ರೇನ್ ಯುದ್ಧದಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಕಿರಿಲ್ಲೋವ್ ಅವರು ನಿಷೇಧಿತ  ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಾರೆಂದು ಉಕ್ರೇನ್‌ನ ಭದ್ರತಾ ಸೇವಾ ಏಜೆನ್ಸಿ ಸೋಮವಾರ ಅಪಾದಿಸಿತ್ತು. 2022ರ ಫೆಬ್ರವರಿ ತಿಂಗಳಿನಿಂದೀಚೆಗೆ ರಷ್ಯಾವು ಉಕ್ರೇನ್ ಯುದ್ದರಂಗದಲ್ಲಿ 4,800ಕ್ಕೂ ಅಧಿಕ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಅದರಲ್ಲೂ ವಿಶೇಷವಾಗಿ ಕೆ-1 ಮಾದರಿಯ ಯುದ್ಧ ಗ್ರೇನೆಡ್‌ಗಳನ್ನು ಬಳಸಿರುವುದನ್ನು ಉಕ್ರೇನ್ ಭದ್ರತಾ ಸೇವೆಯು ದಾಖಲಿಸಿಕೊಂಡಿದೆ.

ಮೊದಲನೇ ಮಹಾಯುದ್ಧದಲ್ಲಿ ಬಳಕೆ ಮಾಡಲಾಗಿದ್ದ ರಾಸಾಯನಿಕ ಅಸ್ತ್ರವಾದ ಕ್ಲೊರೊಪಿಕ್ರಿನ್ ನನ್ನು ರಷ್ಯಾವು  ಉಕ್ರೇನ್‌ ವಿರುದ್ಧ  ಪ್ರಯೋಗಿಸಿರುವುದನ್ನು ತಾನು ದಾಖಲಿಸಿಕೊಂಡಿರುವುದಾಗಿ ಅಮೆರಿಕದ ವಿದೇಶಾಂಗ ಇಲಾಖೆಯು ಈ ವರ್ಷದ ಮೇ ತಿಂಗಳಿನಲ್ಲಿ ತಿಳಿಸಿತ್ತು.

ಉಕ್ರೇನ್‌ ನಲ್ಲಿ ರಷ್ಯಾ ನಡೆಸಿದ ಸೇನಾ ಕಾರ್ಯಾಚಣೆಯಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಕೆಗಾಗಿ ಕಿರಿಲ್ಲೋವ್ ಅವರು ಅಪರಾಧಿಯೆಂದು ಉಕ್ರೇನ್‌ನ ನ್ಯಾಯಾಲಯ ಡಿ.16ರಂದು ಅವರ ಅನುಪಸ್ಥಿತಿಯಲ್ಲಿ ತೀರ್ಪು ನೀಡಿತ್ತು.

ಕಿರಿಲ್ಲೋವ್ ಉಕ್ರೇನ್‌ ಯುದ್ಧದಲ್ಲಿ ಅವರು ವಹಿಸಿದ್ದ ಪಾತ್ರಕ್ಕಾಗಿ ಅವರ ವಿರುದ್ಧ ಬ್ರಿಟನ್, ಕೆನಡಾ ಸೇರಿದಂತೆ ವಿವಿಧ ದೇಶಗಳು ನಿರ್ಬಂಧ ಹೇರಿದ್ದವು. ಈಗಾಗಲೇ  ಉಕ್ರೇನ್‌ನ ಐದನೇ ಒಂದು ಭಾಗದಷ್ಟು ಭೂಪ್ರದೇಶವನ್ನು ರಶ್ಯವು  ಸ್ವಾಧೀನಪಡಿಸಿಕೊಂಡಿದೆ.

ಇದನ್ನೂ ಓದಿ…‘ಮನರೇಗಾ ಪಾವತಿಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಬಾರದು..’; ಸಂಸದೀಯ ಸಮಿತಿಯು ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...