Homeಕರ್ನಾಟಕರಾಜ್ಯಪಾಲರ ಬದಲು ಸಿಎಂ ಕುಲಾಧಿಪತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ವಿಧೇಯಕ ಅಂಗೀಕಾರ

ರಾಜ್ಯಪಾಲರ ಬದಲು ಸಿಎಂ ಕುಲಾಧಿಪತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ವಿಧೇಯಕ ಅಂಗೀಕಾರ

- Advertisement -
- Advertisement -

ರಾಜ್ಯಪಾಲರ ಬದಲಾಗಿ ಮುಖ್ಯಮಂತ್ರಿಯನ್ನು ಕುಲಾಧಿಪತಿಯನ್ನಾಗಿ ಮಾಡುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ-2024 ಪ್ರತಿಪಕ್ಷ ಸದಸ್ಯರ ಸಭಾತ್ಯಾಗದ ನಡುವೆ ಮಂಗಳವಾರ (ಡಿ.17) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.

ವಿಧೇಯಕವನ್ನು ಸಮರ್ಥಿಸಿಕೊಂಡು ಸದನದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ” ಈ ಕಾನೂನು ವಿಶ್ವವಿದ್ಯಾಲಯದ ಆಡಳಿತವನ್ನು ಸುಧಾರಿಸಲಿದೆ ಮತ್ತು ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ನೆರವಾಗಲಿದೆ ಎಂದು ತಿಳಿಸಿದರು.

ಯಾವುದೇ ಕಾನೂನು ರಾಜ್ಯಪಾಲರು ಕುಲಪತಿಯಾಗಬೇಕು ಎಂಬುವುದಾಗಿ ಆದೇಶಿಸುವುದಿಲ್ಲ ಎಂದ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣದ ಮೇಲೆ ಕಾನೂನು ಮಾಡುವ ರಾಜ್ಯದ ಹಕ್ಕನ್ನು ಒತ್ತಿ ಹೇಳಿದರು.

ಪ್ರತಿಪಕ್ಷದ ಸದಸ್ಯರು ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದರು. ಪ್ರತಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಕಾಂಗ್ರೆಸ್ ಸರ್ಕಾರವು ರಾಜ್ಯಪಾಲರ ಏಕಮಾತ್ರ ಅಧಿಕಾರವನ್ನು ಕಸಿದುಕೊಂಡಿದೆ ಎಂದು ಆರೋಪಿಸಿದರು. ಮಸೂದೆಯನ್ನು ‘ವಿಭಜಕ’ ಎಂದು ಕರೆದರು.
ವಿಶ್ವವಿದ್ಯಾನಿಲಯದ ಸ್ವಾಯತ್ತತೆಯನ್ನು ಕಡಿಮೆ ಮಾಡುವ ‘ಹಿಮ್ಮುಖ ಹೆಜ್ಜೆ’ ಇದು ಎಂದು ಬಿಜೆಪಿ ಶಾಸಕ ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ಶಾಸಕರು ವಿಧೇಯಕವನ್ನು ವಿರೋಧಿಸಿ ಸದನದಿಂದ ಹೊರ ನಡೆದರು. ರಾಜ್ಯಪಾಲರನ್ನು ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಯಾಗಿ ಏಕೆ ಮುಂದುವರಿಸಲು ಸಾಧ್ಯವಿಲ್ಲ? ಎಂದು ಶಾಸಕ ಆರಗ ಜ್ಞಾನೇಂದ್ರ ಪ್ರಶ್ನಿಸಿದರು.

ವಿಧೇಯಕವನ್ನು ಬೆಂಬಲಿಸಿದ ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ, ಮುಖ್ಯಮಂತ್ರಿ ಮೂಲಕ ಉಪಕುಲಪತಿಗಳನ್ನು ನೇಮಕ ಮಾಡುವ ಗುಜರಾತ್‌ನ ಮಾದರಿಯನ್ನು ಉಲ್ಲೇಖಿಸಿದರು.

ಉಪಕುಲಪತಿಗಳನ್ನು ನೇಮಿಸುವ ಅಧಿಕಾರ ಮುಖ್ಯಮಂತ್ರಿಗೆ ನೀಡುವ ಕಾನೂನು ಪರಿಚಯಿಸುವ ಉದ್ದೇಶದ ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಈ ಹಿಂದೆ ಸೂಚನೆ ನೀಡಿದ್ದರು.

ಕರ್ನಾಟಕ ಕಾರ್ಮಿಕರ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ-2024 ಕೂಡ ಮಂಗಳವಾರ ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ. ಮೂಲಕ ಈ ಮೊದಲು ಪ್ರತಿ ಕಾರ್ಮಿಕರಿಂದ 20 ರೂ., ಮಾಲಕರಿಂದ ಕಾರ್ಮಿಕರ ಪಾಲು 40 ರೂ., ಸರ್ಕಾರದಿಂದ ಕಾರ್ಮಿಕರ ಪಾಲು 20 ರೂ.ಗಳನ್ನು ಕಾರ್ಮಿಕ ಕಲ್ಯಾಣ ನಿಧಿಗೆ ಸಂಗ್ರಹಿಸುವುದನ್ನು ಹೆಚ್ಚಿಸಿ, ಕಾರ್ಮಿಕರಿಂದ 50 ರೂ., ಮಾಲಕರಿಂದ ಪ್ರತಿ ಕಾರ್ಮಿಕರಿಗೆ 100 ರೂ. ಹಾಗೂ ಸರ್ಕಾರದಿಂದ ಪ್ರತಿ ಕಾರ್ಮಿಕರಿಗೆ 50 ರೂ.ಗಳ ವಂತಿಗೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ : ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ : ಸಚಿವ ದಿನೇಶ್ ಗುಂಡೂರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...