Homeಮುಖಪುಟ’ಬಿಜೆಪಿ ನನ್ನನ್ನು ಕೇಸರಿಮಯ ಮಾಡಲು ಹೊರಟಿದೆ. ಆದರದು ಸಾಧ್ಯವಿಲ್ಲ’: ನಟ ರಜನಿಕಾಂತ್

’ಬಿಜೆಪಿ ನನ್ನನ್ನು ಕೇಸರಿಮಯ ಮಾಡಲು ಹೊರಟಿದೆ. ಆದರದು ಸಾಧ್ಯವಿಲ್ಲ’: ನಟ ರಜನಿಕಾಂತ್

- Advertisement -
- Advertisement -

ತಮಿಳು ಹಾಗೂ ಬಹುಭಾಷಾ ನಟ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರು ಬಿಜೆಪಿ ವಿರುದ್ಧ ಗರಂ ಆಗಿದ್ದಾರೆ. ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರನ್ನು ಭೇಟಿಯಾದ ಬಳಿಕ, ರಜನಿಕಾಂತ್ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಎಲ್ಲೆಡೆ ಹರಿದಾಡಿದ್ದವು. ಈ ಎಲ್ಲಾ ಸುದ್ದಿಗಳನ್ನು ರಜನಿಕಾಂತ್ ತಳ್ಳಿ ಹಾಕಿದ್ದಾರೆ. ತಿರುವಳ್ಳುರ್ ಅವರಂತೆ ನನ್ನನ್ನೂ ಕೇಸರಿಮಯ ಮಾಡುವ ಯತ್ನ ನಡೆದಿದೆ ಎಂದು ಹರಿಹಾಯ್ದರು.

ತಮಿಳುನಾಡಿನಲ್ಲಿ ೨೦೨೧ಕ್ಕೆ ನಡೆಯಲಿರುವ ವಿಧಾನಸಭೆ ಚುನಾವಣೆ ವೇಳೆ ನಟ ರಜನಿಕಾಂತ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಅವರನ್ನು ಕೇಸರಿಮಯ ಮಾಡಲಾಗುವುದು ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಚೆನ್ನೈನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಬಿಜೆಪಿಯಿಂದ ಯಾವುದೇ ಆಫರ್ ಬಂದಿಲ್ಲ. ಯಾವುದೇ ಪಕ್ಷವನ್ನು ಸೇರಬೇಕೋ ಬೇಡವೋ ಎಂಬ ಬಗ್ಗೆ ಜನರು ತೀರ್ಮಾನಿಸಲಿದ್ದಾರೆ. ನನ್ನನ್ನು ಬಿಜೆಪಿ ಕೇಸರಿಮಯ ಮಾಡಲು ನೋಡುತ್ತಿದೆ. ಆದರೆ ಇದಕ್ಕೆ ಯಾವುದೇ ಅವಕಾಶವಿಲ್ಲ. ಅಷ್ಟು ಸುಲಭವಾಗಿ ನಮ್ಮನ್ನು ಭೇದಿಸಲು ಸಾಧ್ಯವಿಲ್ಲ ಎಂದರು.

ತಿರುವಳ್ಳುರ್ ಅವರನ್ನು ಕೇಸರಿಮಯ ಮಾಡಲು ಯತ್ನಿಸಿದಂತೆ, ರಜನಿಕಾಂತ್ ಅವರನ್ನೂ ಕೇಸರಿಮಯವನ್ನಾಗಿ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದರು. ತಮಿಳು ಹೊಸ ವರ್ಷವಾದ ನವೆಂಬರ್ ೨ರಂದು ತಮಿಳುನಾಡು ಬಿಜೆಪಿ ಘಟಕವು, ತಮಿಳಿನ ಖ್ಯಾತ ದಾರ್ಶನಿಕ ಕವಿ ತಿರುವಳ್ಳುರ್ ಅವರಿಗೆ ಕೇಸರಿ ನಿಲುವಂಗಿ ತೊಡಿಸಿದ ಚಿತ್ರವನ್ನು ಟ್ವೀಟ್ ಮಾಡಿತ್ತು. ಅದಕ್ಕೆ ಭಾರೀ ಪ್ರತಿರೋಧ ಎದುರಾಗಿತ್ತು.

“ತಿರುವಳ್ಳುರ್ ಅವರು ಬೌದ್ಧಿಕವಾಗಿ ಕೃಷಿ ಮಾಡಿದವರು. ಅಂತಹವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸಬಾರದು. ಇಂತಹ ವ್ಯಕ್ತಿಗಳನ್ನು ಧರ್ಮದ ಬಂಧನದಲ್ಲಿ ಬಂಧಿಸುವುದು ತಪ್ಪಾಗುತ್ತದೆ. ತಿರುವಳ್ಳುರ್ ನಾಸ್ತಿಕರಲ್ಲ. ಅವರು ನಂಬಿಕೆ ಉಳ್ಳವರು. ಅವರನ್ನು ಯಾರೂ ಮರೆಯಲು ಸಾಧ್ಯವಿಲ್ಲ” ಎಂದು ರಜನೀಕಾಂತ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

“ಬಿಜೆಪಿ ಪಕ್ಷವು ಕೇಸರಿ ಬಣ್ಣಕ್ಕೆ ಪೇಟೆಂಟ್ ಪಡೆದಿಟ್ಟುಕೊಂಡಂತೆ ಕಾಣುತ್ತೆ. ದೇಶದಲ್ಲಿ ಚರ್ಚಿಸಲು ಸಾಕಷ್ಟು ವಿಷಯಗಳಿವೆ. ಸಮಾಜವನ್ನು ಕಾಡುತ್ತಿರುವ ಅತಿದೊಡ್ಡ ಸಮಸ್ಯೆಗಳಿವೆ. ಅವುಗಳ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು, ಬರೀ ಕೇಸರಿ ಬಣ್ಣದ ಬಟ್ಟೆ ಧರಿಸುವುದನ್ನೇ ದೊಡ್ಡ ಸಮಸ್ಯೆಯನ್ನಾಗಿ ಬಿಂಬಿಸಲಾಗುತ್ತಿದೆ. ಇದೆಲ್ಲಾ ಸಿಲ್ಲಿಯಾಗಿದೆ” ಎಂದರು.

“ಇಂದು ನೋಟ್ ನಿಷೇಧಕ್ಕೆ ೩ ವರ್ಷ ಸಂದಿದೆ. ಭಾರತದ ಆರ್ಥಿಕತೆ ನೆಲಕಚ್ಚಿದೆ. ಅಭಿವೃದ್ಧಿ ಮಂದಗತಿಯಲ್ಲಿ ಸಾಗುತ್ತಿದೆ. ಕೇಂದ್ರ ಸರ್ಕಾರ ಕುಸಿಯುತ್ತಿರುವ ಆರ್ಥಿಕತೆಯನ್ನು ಸುಧಾರಿಸಲು ಸೂಕ್ತ ಕ್ರಮ ಕೈಗೊಳ್ಳುವತ್ತ ಹೆಜ್ಜೆಯಿಡಬೇಕು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...