Homeಮುಖಪುಟಬಿಜೆಪಿಯ ಜಾತಿವಾದಿ, ದಲಿತ ವಿರೋಧಿ ಮನಸ್ಥಿತಿಯ ಪ್ರದರ್ಶನ - ಅಮಿತ್ ಶಾ ವಿರುದ್ಧ ಮಮತಾ ವಾಗ್ದಾಳಿ

ಬಿಜೆಪಿಯ ಜಾತಿವಾದಿ, ದಲಿತ ವಿರೋಧಿ ಮನಸ್ಥಿತಿಯ ಪ್ರದರ್ಶನ – ಅಮಿತ್ ಶಾ ವಿರುದ್ಧ ಮಮತಾ ವಾಗ್ದಾಳಿ

- Advertisement -
- Advertisement -

ಬಿ.ಆರ್. ಅಂಬೇಡ್ಕರ್ ಕುರಿತು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಬಿಜೆಪಿಯ ಜಾತಿವಾದಿ ಮತ್ತು ದಲಿತ ವಿರೋಧಿ ಮನಸ್ಥಿತಿಯ ಪ್ರದರ್ಶನವಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. ಅಮಿತ್ ಶಾ ಅವರ ಹೇಳಿಕೆಗಳು ಅವಹೇಳನಕಾರಿ ಎಂದು ಕರೆದ ಅವರು, ”ಅವರು ಹೇಳಿಕೆಯು ಮಾರ್ಗದರ್ಶನ ಮತ್ತು ಸ್ಫೂರ್ತಿಗಾಗಿ ಅಂಬೇಡ್ಕರ್‌ರನ್ನು ಎದುರು ನೋಡುವ ಲಕ್ಷಾಂತರ ಜನರಿಗೆ ಮಾಡಿದ ಅವಮಾನವಾಗಿದೆ” ಎಂದು ಅವರು ಹೇಳಿದ್ದಾರೆ.

“ಮುಖವಾಡ ಕಳಚಿದೆ! ಸಂಸತ್ತು ಸಂವಿಧಾನದ 75 ವೈಭವದ ವರ್ಷಗಳನ್ನು ಪ್ರತಿಬಿಂಬಿಸುತ್ತಿದೆ, ಗೃಹ ಸಚಿವ ಅಮಿತ್ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಈ ಸಂದರ್ಭವನ್ನು ಕಳಂಕಗೊಳಿಸಲು ನೋಡಿದ್ದಾರೆ. ಅದೂ ಕೂಡಾ ಪ್ರಜಾಪ್ರಭುತ್ವದ ದೇವಾಲಯದಲ್ಲಿ…” ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಜೆಪಿಯ ಜಾತಿವಾದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇದು ಬಿಜೆಪಿಯ ಜಾತಿವಾದಿ ಮತ್ತು ದಲಿತ ವಿರೋಧಿ ಮನಸ್ಥಿತಿಯ ಪ್ರದರ್ಶನವಾಗಿದೆ. 240 ಸ್ಥಾನಗಳಿಗೆ ಇಳಿದಾಗಲೂ ಅವರು ಈ ರೀತಿ ವರ್ತಿಸಿದರೆ, ಒಂದು ವೇಳೆ ಅವರು 400 ಸ್ಥಾನಗಳು ಪಡೆದಿದ್ದರೆ ಅವರು ಉಂಟುಮಾಡುತ್ತಿದ್ದ ಹಾನಿಯನ್ನು ಊಹಿಸಿ. ಅವರು ಡಾ. ಅಂಬೇಡ್ಕರ್ ಅವರ ಕೊಡುಗೆಗಳ ಇತಿಹಾಸವನ್ನು ಸಂಪೂರ್ಣವಾಗಿ ಅಳಿಸಿ ಪುನಃ ಬರೆಯುತ್ತಿದ್ದರು” ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿಯ ಮೇಲೆ ದಾಳಿ ಮಾಡಿದ ಮಮತಾ ಅವರು, ದ್ವೇಷ ಮತ್ತು ಧರ್ಮಾಂಧತೆಯನ್ನು ಆಂತರಿಕಗೊಳಿಸಿದ ಪಕ್ಷದಿಂದ ಇನ್ನೇನು ನಿರೀಕ್ಷಿಸಬಹುದಿತ್ತು ಎಂದು ಹೇಳಿದ್ದಾರೆ. “ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳು ಮಾರ್ಗದರ್ಶನ ಮತ್ತು ಸ್ಫೂರ್ತಿಗಾಗಿ ಬಾಬಾಸಾಹೇಬರನ್ನು ಎದುರು ನೋಡುವ ಲಕ್ಷಾಂತರ ಜನರಿಗೆ ಮಾಡಿರುವ ಅವಮಾನವಾಗಿದೆ.” ಎಂದು ಅವರು ಹೇಳಿದ್ದಾರೆ.

“ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಪಿತಾಮಹ, ಈ ಅತಿರೇಕದ ಹೇಳಿಕೆಯು ಅವರ ಮೇಲಿನ ನೇರ ದಾಳಿ ಮಾತ್ರವಲ್ಲ, ಸಂವಿಧಾನದ ಕರಡು ಸಮಿತಿಯ ಎಲ್ಲಾ ಸದಸ್ಯರ ಮೇಲಿ ದಾಳಿಯಾಗಿದೆ. ಇದು ಎಲ್ಲಾ ಜಾತಿ, ಮತ, ಜನಾಂಗಗಳ ಸದಸ್ಯರೊಂದಿಗೆ ವಿವಿಧತೆಯಲ್ಲಿ ಭಾರತದ ಏಕತೆಯನ್ನು ಸಂಕೇತಿಸುತ್ತದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅವರ ಪೋಸ್ಟ್ ಅನ್ನು ಹಂಚಿಕೊಂಡಿರುವ ಟಿಎಂಸಿ, ಅಮಿತ್ ಶಾ ಅವರ ಹೇಳಿಕೆ ನಾಲಿಗೆ ಸ್ಲಿಪ್ ಆಗಿ ಹೇಳಿದ್ದಲ್ಲ, ಬದಲಾಗಿ ಉದ್ದೇಶಪೂರ್ವಕವಾಗಿ ಹೇಳಿದ ಮಾತಾಗಿದೆ ಎಂದು ಹೇಳಿದೆ. ಸಂಸತ್ತಿನಲ್ಲಿ ಅಮಿತ್ ಶಾ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ಟಿಎಂಸಿ ಒತ್ತಾಯಿಸಿದೆ.

“ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಅಮಿತ್ ಶಾ ರಾಜ್ಯ ಸಭೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ ಅವರು “ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...