Homeಮುಖಪುಟಅಮಿತ್ ಶಾ ಹೇಳಿಕೆ ಬಿಜೆಪಿಯ ಹಳೆಯ ಮನಸ್ಥಿತಿಯ ಪ್ರತಿಬಿಂಬ - ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್

ಅಮಿತ್ ಶಾ ಹೇಳಿಕೆ ಬಿಜೆಪಿಯ ಹಳೆಯ ಮನಸ್ಥಿತಿಯ ಪ್ರತಿಬಿಂಬ – ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನದ ಪಿತಾಮಹನ ಕುರಿತು ನೀಡಿರುವ ಹೇಳಿಕೆಯು ಬಿಜೆಪಿಯ ಅದೇ ಹಳೆಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಬುಧವಾರ ಆರೋಪಿಸಿದ್ದಾರೆ. “ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದರು. ಅಮಿತ್ ಶಾ ಹೇಳಿಕೆ

ರಾಜ್ಯಸಭೆಯಲ್ಲಿ ಮಾತನಾಡಿದ್ದ ಅಮಿತ್ ಶಾ ಅವರು, “ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿ ಅಸ್ತಿತ್ವಕ್ಕೆ ಬರುವ ಮೊದಲು, ಅದರ ಪೂರ್ವಜರಾದ ಜನಸಂಘ ಮತ್ತು ಆರೆಸ್ಸೆಸ್ ಸಂವಿಧಾನವನ್ನು ಅಂಗೀಕರಿಸುವಾಗ ಬಾಬಾಸಾಹೇಬ್ ಅವರನ್ನು ವಿರೋಧಿಸಿದ್ದವು” ಎಂದು ವಂಚಿತ್ ಬಹುಜನ ಅಘಾಡಿ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಪುಣೆಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅಮಿತ್ ಶಾ ಅವರ ಹೇಳಿಕೆಯು ಬಿಜೆಪಿಯ ಅದೇ ಹಳೆಯ ಮನಸ್ಥಿತಿಯನ್ನು ಮುನ್ನೆಲೆಗೆ ತಂದಿದೆ ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಯಲ್ಲಿ ಹೊಸದೇನೂ ಇಲ್ಲ, ಅವರಿಗೆ ತಮ್ಮ ಹಳೆಯ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಾಧ್ಯವಾಗುತ್ತಿಲ್ಲ. ಅದು ಕಾಂಗ್ರೆಸ್‌ನಿಂದಾಗಿ ಅಲ್ಲ, ಬದಲಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಕಾರಣದಿಂದ ಅವರಿಗೆ ಅದು ಸಾಧ್ಯವಾಗುತ್ತಿಲ್ಲ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ. ಅಮಿತ್ ಶಾ ಹೇಳಿಕೆ

ಇದೇ ವೇಳೆ, ಪರ್ಭಾನಿ ನಗರದಲ್ಲಿ ನಡೆದ ಸಂವಿಧಾನದ ಪ್ರತಿಕೃತಿಯನ್ನು ಅವಮಾನಿಸಿದ ಪ್ರಕರಣದ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ಬಂಧಿತನಾಗಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಮರಣ ಹೊಂದಿದ ಸೋಮನಾಥ ಸೂರ್ಯವಂಶಿಯ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಪ್ರಕಾಶ್ ಅಂಬೇಡ್ಕರ್ ಒತ್ತಾಯಿಸಿದ್ದಾರೆ.

ಈ ನಡುವೆ, ಅಂಬೇಡ್ಕರ್ ಅವರನ್ನು ಅವಮಾನ ಮಾಡಿರುವ ಅಮಿತ್ ಶಾ ಅವರು ತಮ್ಮ ಕೃತ್ಯಕ್ಕೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಇಂಡಿಯಾ ಒಕ್ಕೂಟದ ಹಲವಾರು ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಮಿತ್ ಶಾ ಅವರು ಸಾರ್ವಜನಿಕವಾಗಿ ಮತ್ತು ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

“ಪರ್ಭಾನಿಯಲ್ಲಿ ನಡೆದ ಹಿಂಸಾಚಾರವು ಗೋದ್ರಾದಂತಹ ಪರಿಸ್ಥಿತಿಯನ್ನು ಸೃಷ್ಟಿಸುವ ಪ್ರಯತ್ನವಾಗಿದೆ” ಎಂದು ಅವರು ಆರೋಪಿಸಿದ್ದಾರೆ. ಈ ಹಿಂಸಾಚಾರವು ಇಬ್ಬರು ಮರಾಠ ನಾಯಕರ ನಡುವಿನ ವಿವಾದದ ಪರಿಣಾಮವಾಗಿದೆ ಎಂದು ಅವರು ಹೇಳಿದ್ದು, ಅಪರಾಧಿಗಳನ್ನು ಬಹಿರಂಗಪಡಿಸಲು ಸತ್ಯಶೋಧನಾ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ.

ಲೋಕಸಭೆಯಲ್ಲಿ ಏಕಕಾಲಕ್ಕೆ ಚುನಾವಣೆಗೆ ಕಾರ್ಯವಿಧಾನವನ್ನು ಪರಿಚಯಿಸುವ ಮಸೂದೆಗಳ ಅಂಗೀಕಾರವು ರಾಜಕೀಯ ಪಕ್ಷಗಳ ಅಂತ್ಯವನ್ನು ಅರ್ಥೈಸುತ್ತದೆ ಎಂದು ಅವರು ಹೇಳಿದ್ದಾರೆ. “ಕಾಂಗ್ರೆಸ್‌ಗೆ ಈ ಮಸೂದೆಗಳ ಬಗ್ಗೆ ಗಟ್ಟಿ ನಿಲುವು ತೆಗೆದುಕೊಳ್ಳಲು ಕೇವಲ ಐದರಿಂದ ಆರು ದಿನಗಳು ಮಾತ್ರ ಇವೆ. ನಿಲುವು ತೆಗೆದುಕೊಳ್ಳಲು ವಿಫಲವಾದರೆ ಮತ್ತು ಮಸೂದೆಗಳ ಅಂಗೀಕಾರವಾದರೆ ರಾಜಕೀಯ ಪಕ್ಷಗಳ ಅಂತ್ಯ ಎಂದರ್ಥ. ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ನಿಲುವು ಇದರಲ್ಲಿ ನಿರ್ಣಾಯಕವಾಗಿದೆ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...