Homeಕರ್ನಾಟಕವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ವಕ್ಫ್ ಆಸ್ತಿಗಳ ಒಡೆತನ, ಖಾತೆ ವರ್ಗಾವಣೆ ಸಂಬಂಧಿಸಿದ ಗೊಂದಲಗಳ ಪರಿಶೀಲನೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಡಿ.18) ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ವಕ್ಫ್ ಮಂಡಳಿಯು ರೈತರು, ಮಠ-ಮಂದಿರಗಳ ಆಸ್ತಿಯನ್ನು ಕಬಳಿಸುತ್ತಿದೆ ಎಂದು ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಗೆ ಸದನದಲ್ಲಿ ಉತ್ತರ ನೀಡಿದ ಸಿಎಂ, “ರೈತರಿಗೆ ಮಂಜೂರಾದ ಜಮೀನು, ಮಠ-ಮಂದಿರಗಳ ಆಸ್ತಿ ಮತ್ತು ರುದ್ರಭೂಮಿಗಳ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸುವುದಿಲ್ಲ. ಇದರ ಹೊರತಾಗಿಯೂ ಗೊಂದಲಗಳಿದ್ದರೆ ಪರಿಹಾರ ಕಂಡುಕೊಳ್ಳಲು ಸಮಿತಿ ರಚಿಸಲಾಗುವುದು ಎಂದಿದ್ದಾರೆ.

ಇನಾಂ ರದ್ದತಿ ಕಾಯ್ದೆ ಮತ್ತು ಕರ್ನಾಟಕ ಭೂ ಸುಧಾರಣಾ ಕಾಯ್ದೆಯಡಿ ರೈತರಿಗೆ ಮಂಜೂರಾಗಿರುವ ಯಾವುದೇ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಲು ಅವಕಾಶ ನೀಡುವುದಿಲ್ಲ. ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳು ವಕ್ಫ್ ಆಸ್ತಿಯಲ್ಲಿದ್ದರೆ ಅಂತಹ ಆಸ್ತಿಗಳ ಮೇಲಿನ ಹಕ್ಕನ್ನೂ ತ್ಯಜಿಸಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸಭೆಯಲ್ಲಿ ತೀರ್ಮಾನವಾಗಿದೆ ಎಂದು ವಕ್ಫ್ ಸಚಿವ ಝಮೀರ್ ಅಹ್ಮದ್ ತಿಳಿಸಿದ್ದಾರೆ. ಅವರ ಸಲಹೆಯಂತೆ ವಕ್ಫ್ ಆಸ್ತಿಯಲ್ಲಿರುವ ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳಿಗೆ ರಕ್ಷಣೆ ದೊರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಯಾವುದೇ ಖಾಸಗಿ ಆಸ್ತಿಗೆ ವಕ್ಫ್ ಮಂಡಳಿ ನೋಟಿಸ್ ನೀಡಿದ್ದರೆ, ಮಂಜೂರಾದ ಜಮೀನುಗಳ ಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದರೆ, ಇನಾಂ ರದ್ದತಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯಡಿ ಹಕ್ಕು ಮಂಡನೆ ಬಾಕಿ ಉಳಿದಿದ್ದರೆ ಸಮಿತಿ ಮುಂದೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಸಮಿತಿಯು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಹೇಳಿದ್ದಾರೆ.

ವಕ್ಫ್ ಅದಾಲತ್ ಅನ್ನು ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು- ಸಚಿವ ಝಮೀರ್ ಅಹ್ಮದ್

ವಕ್ಫ್ ಮಂಡಳಿಗೆ ಸೇರಿದ ಆಸ್ತಿಗಳ ರಕ್ಷಣೆ ಹಾಗೂ ಗೊಂದಲಗಳ ನಿವಾರಣೆಗೆ ನಾನು ವಕ್ಫ್‌ ಆದಾಲತ್ ನಡೆಸಿದ್ದೆ. ಅದನ್ನೇ ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು. ಕೇಂದ್ರ ಸರ್ಕಾರ ರೂಪಿಸಿರುವ ಕಾಯ್ದೆಯಂತೆ ವಕ್ಫ್ ಆಸ್ತಿಗಳ ರಕ್ಷಣೆ ಕಾರ್ಯ ನಡೆದಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿ ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿತ್ತು ಎಂದು ಸಚಿವ ಝಮೀರ್ ಅಹ್ಮದ್ ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗಲೇ 2010, 2020 ಮತ್ತು 2021ರಲ್ಲಿ ನಾಲ್ಕು ಆದೇಶಗಳನ್ನೂ ಹೊರಡಿಸಲಾಗಿದೆ ಎಂದು ಸದನದಲ್ಲಿ ದಾಖಲೆ ಪ್ರದರ್ಶಿಸಿದರು.

ರಾಜ್ಯದಲ್ಲಿ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಿತ್ತು. ಅದೆಲ್ಲ ದಾನಿಗಳು ಸಮಾಜದ ಶ್ರೇಯೋಭಿವೃದ್ದಿಗಾಗಿ ನೀಡಿರುವಂತದ್ದು. ಖಬರಸ್ಥಾನಗಳನ್ನು ಹೊರತುಪಡಿಸಿ ಒಂದೇ ಒಂದು ಇಂಚು ಜಾಗವನ್ನು ವಕ್ಫ್ ಮಂಡಳಿ ಸರ್ಕಾರದಿಂದ ಪಡೆದಿಲ್ಲ. 1.28 ಲಕ್ಷ ಎಕರೆಯಲ್ಲಿ ಇನಾಂ ರದ್ದತಿ ಕಾಯ್ದೆಯಡಿ 47,263 ಎಕರೆ, ಭೂ ಸುಧಾರಣಾ ಕಾಯ್ದೆಯಡಿ 23,620 ಎಕರೆ, ಸರ್ಕಾರದ ವಿವಿಧ ಯೋಜನೆಗಳಿಗೆ ಸ್ವಾಧೀನಪಡಿಸಿಕೊಳ್ಳುವ ಮೂಲಕ 3 ಸಾವಿರ ಎಕರೆ ಹೋಗಿದೆ. ಉಳಿದಿರುವುದು 17, 966 ಎಕರೆ ಮಾತ್ರ ಎಂದು ಝಮೀರ್ ಅಹ್ಮದ್ ತಿಳಿಸಿದರು.

ಸುಳ್ಳು ಹಬ್ಬಿಸಿ ಜನರಲ್ಲಿ ಭೀತಿ ಹುಟ್ಟಿಸಲಾಗುತ್ತಿದೆ – ಸಚಿವ ಕೃಷ್ಣಬೈರೇಗೌಡ

ವಕ್ಫ್‌ ಆಸ್ತಿಯನ್ನು ಶೇ.95ರಷ್ಟು ಒತ್ತುವರಿ ಮಾಡಿರುವುದು ಮುಸ್ಲಿಮರೇ ಆಗಿದ್ದಾರೆ. ವಕ್ಫ್‌ ಆಸ್ತಿಯ ಹೆಸರಿನಲ್ಲಿ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಈ ಮೂಲಕ ಒಗ್ಗಟ್ಟಿನಿಂದ ಇರುವ ಗ್ರಾಮೀಣ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ವಕ್ಫ್ ಆಸ್ತಿ ಅತಿಕ್ರಮಣದ ವಿರುದ್ದ ಕಾರ್ಯಪಡೆ ರಚಿಸಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದೇಶವಾಗಿತ್ತು. ಹೀಗಿದ್ದರೂ, ರೈತರು, ದೇವಸ್ಥಾನಗಳ ಆಸ್ತಿಯನ್ನು ಕಸಿದುಕೊಳ್ಳಲಾಗತ್ತಿದೆ ಎಂದು ಬಿಜೆಪಿಗರು ವಿವಾದ ಎಬ್ಬಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.

ವಕ್ಫ್ ಮಂಡಳಿಗೆ 1,12,000 ಎಕರೆ ಜಮೀನು ನೋಟಿಫೈ ಆಗಿತ್ತು. 47,263 ಎಕರೆ ಇನಾಂ ರದ್ಧತಿ ಹಾಗೂ 23,620 ಎಕರೆಯನ್ನು ಭೂಸುಧಾರಣಾ ಕಾಯಿದೆಯಡಿ ರೈತರಿಗೆ ಮಂಜೂರು ಮಾಡಲಾಗಿದೆ. ಒಟ್ಟು 70 ಸಾವಿರ ಎಕರೆ ರೈತರ ವಶದಲ್ಲಿದೆ. ಇನಾಮ್ ರದ್ದತಿ ಮತ್ತು ಭೂ ಸುಧಾರಣೆ ಕಾಯ್ದೆಯಡಿ ಭೂಮಿ ಮಂಜೂರಾದ ರೈತರ ತಂಟೆಗೆ ಸರ್ಕಾರ ಹೋಗುವುದಿಲ್ಲ. ವಕ್ಫ್ ಜಮೀನಿನಲ್ಲಿ ಮಸೀದಿ, ದರ್ಗಾ, ಖಬರ್‌ಸ್ತಾನ ಇದೆ. ಅಂತದ್ದು ಒತ್ತುವರಿ ಆಗಿದ್ದರೆ ಅದನ್ನು ಬಿಟ್ಟು ಕೊಡುವಂತೆ ಹೇಳಿದ್ದಾರೆ. ನೀರಾವರಿ ಹಾಗೂ ಇನ್ನಿತರೆ ಉದ್ದೇಶಗಳಿಗೆ 3,101 ಎಕರೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದಿದೆ. ಸುಮಾರು 17,969 ಎಕರೆಯನ್ನು ಖಾಸಗಿಯವರು ಒತ್ತುವರಿ ಮಾಡಿದ್ದಾರೆ ಕೃಷ್ಣಬೈರೆಗೌಡ ಸದನಕ್ಕೆ ತಿಳಿಸಿದರು.

ಬಿಜೆಪಿಗೆ ಕೈಕೊಟ್ಟ ಜೆಡಿಎಸ್

ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಭಾತ್ಯಾಗ ಮಾಡಿತು. ಆದರೆ, ಅದರ ಮಿತ್ರಪಕ್ಷ  ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸೇರಿದಂತೆ ಸದಸ್ಯರಾದ ಎ. ಮಂಜು, ಶಾರದಾ ಪೂರ್ಯಾನಾಯ್ಕ್, ಜಿ.ಟಿ ದೇವೇಗೌಡ ಸದನದಲ್ಲೇ ಉಳಿಯುವ ಮೂಲಕ ಬಿಜೆಪಿ ಮುಖಭಂಗ ಉಂಟು ಮಾಡಿದರು. ಸರ್ಕಾರ ನೀಡಿದ ಸುದೀರ್ಘ ಉತ್ತರಕ್ಕೆ ಸುರೇಶ್ ಬಾಬು ಅಭಿನಂದಿಸಿದರು. ಈ ಮೂಲಕ ಬಿಜೆಪಿ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ ಎಂಬ ಸಂದೇಶ ನೀಡಿದರು. ಇದೇ ವೇಳೆ ಬಿಜೆಪಿ ಸದಸ್ಯರಾದ ಎಸ್‌.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಕೂಡ ಸದನದಲ್ಲೇ ಉಳಿಯುವ ಮೂಲಕ ಗಮನಸೆಳೆದರು.

ಇದನ್ನೂ ಓದಿ : ಕೆಐಎಡಿಬಿ ಭೂ ಸ್ವಾಧೀನ ಪರಿಹಾರದ ಹಣ ಆರ್‌ಟಿಜಿಎಸ್‌ ಮೂಲಕ ಪಾವತಿ: ಸಚಿವ ಎಂ.ಬಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...