Homeಕರ್ನಾಟಕವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ವಕ್ಫ್ ಆಸ್ತಿಗಳ ಒಡೆತನ, ಖಾತೆ ವರ್ಗಾವಣೆ ಸಂಬಂಧಿಸಿದ ಗೊಂದಲಗಳ ಪರಿಶೀಲನೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಡಿ.18) ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ವಕ್ಫ್ ಮಂಡಳಿಯು ರೈತರು, ಮಠ-ಮಂದಿರಗಳ ಆಸ್ತಿಯನ್ನು ಕಬಳಿಸುತ್ತಿದೆ ಎಂದು ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಗೆ ಸದನದಲ್ಲಿ ಉತ್ತರ ನೀಡಿದ ಸಿಎಂ, “ರೈತರಿಗೆ ಮಂಜೂರಾದ ಜಮೀನು, ಮಠ-ಮಂದಿರಗಳ ಆಸ್ತಿ ಮತ್ತು ರುದ್ರಭೂಮಿಗಳ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸುವುದಿಲ್ಲ. ಇದರ ಹೊರತಾಗಿಯೂ ಗೊಂದಲಗಳಿದ್ದರೆ ಪರಿಹಾರ ಕಂಡುಕೊಳ್ಳಲು ಸಮಿತಿ ರಚಿಸಲಾಗುವುದು ಎಂದಿದ್ದಾರೆ.

ಇನಾಂ ರದ್ದತಿ ಕಾಯ್ದೆ ಮತ್ತು ಕರ್ನಾಟಕ ಭೂ ಸುಧಾರಣಾ ಕಾಯ್ದೆಯಡಿ ರೈತರಿಗೆ ಮಂಜೂರಾಗಿರುವ ಯಾವುದೇ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಲು ಅವಕಾಶ ನೀಡುವುದಿಲ್ಲ. ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳು ವಕ್ಫ್ ಆಸ್ತಿಯಲ್ಲಿದ್ದರೆ ಅಂತಹ ಆಸ್ತಿಗಳ ಮೇಲಿನ ಹಕ್ಕನ್ನೂ ತ್ಯಜಿಸಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸಭೆಯಲ್ಲಿ ತೀರ್ಮಾನವಾಗಿದೆ ಎಂದು ವಕ್ಫ್ ಸಚಿವ ಝಮೀರ್ ಅಹ್ಮದ್ ತಿಳಿಸಿದ್ದಾರೆ. ಅವರ ಸಲಹೆಯಂತೆ ವಕ್ಫ್ ಆಸ್ತಿಯಲ್ಲಿರುವ ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳಿಗೆ ರಕ್ಷಣೆ ದೊರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಯಾವುದೇ ಖಾಸಗಿ ಆಸ್ತಿಗೆ ವಕ್ಫ್ ಮಂಡಳಿ ನೋಟಿಸ್ ನೀಡಿದ್ದರೆ, ಮಂಜೂರಾದ ಜಮೀನುಗಳ ಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದರೆ, ಇನಾಂ ರದ್ದತಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯಡಿ ಹಕ್ಕು ಮಂಡನೆ ಬಾಕಿ ಉಳಿದಿದ್ದರೆ ಸಮಿತಿ ಮುಂದೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಸಮಿತಿಯು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಹೇಳಿದ್ದಾರೆ.

ವಕ್ಫ್ ಅದಾಲತ್ ಅನ್ನು ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು- ಸಚಿವ ಝಮೀರ್ ಅಹ್ಮದ್

ವಕ್ಫ್ ಮಂಡಳಿಗೆ ಸೇರಿದ ಆಸ್ತಿಗಳ ರಕ್ಷಣೆ ಹಾಗೂ ಗೊಂದಲಗಳ ನಿವಾರಣೆಗೆ ನಾನು ವಕ್ಫ್‌ ಆದಾಲತ್ ನಡೆಸಿದ್ದೆ. ಅದನ್ನೇ ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು. ಕೇಂದ್ರ ಸರ್ಕಾರ ರೂಪಿಸಿರುವ ಕಾಯ್ದೆಯಂತೆ ವಕ್ಫ್ ಆಸ್ತಿಗಳ ರಕ್ಷಣೆ ಕಾರ್ಯ ನಡೆದಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿ ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿತ್ತು ಎಂದು ಸಚಿವ ಝಮೀರ್ ಅಹ್ಮದ್ ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗಲೇ 2010, 2020 ಮತ್ತು 2021ರಲ್ಲಿ ನಾಲ್ಕು ಆದೇಶಗಳನ್ನೂ ಹೊರಡಿಸಲಾಗಿದೆ ಎಂದು ಸದನದಲ್ಲಿ ದಾಖಲೆ ಪ್ರದರ್ಶಿಸಿದರು.

ರಾಜ್ಯದಲ್ಲಿ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಿತ್ತು. ಅದೆಲ್ಲ ದಾನಿಗಳು ಸಮಾಜದ ಶ್ರೇಯೋಭಿವೃದ್ದಿಗಾಗಿ ನೀಡಿರುವಂತದ್ದು. ಖಬರಸ್ಥಾನಗಳನ್ನು ಹೊರತುಪಡಿಸಿ ಒಂದೇ ಒಂದು ಇಂಚು ಜಾಗವನ್ನು ವಕ್ಫ್ ಮಂಡಳಿ ಸರ್ಕಾರದಿಂದ ಪಡೆದಿಲ್ಲ. 1.28 ಲಕ್ಷ ಎಕರೆಯಲ್ಲಿ ಇನಾಂ ರದ್ದತಿ ಕಾಯ್ದೆಯಡಿ 47,263 ಎಕರೆ, ಭೂ ಸುಧಾರಣಾ ಕಾಯ್ದೆಯಡಿ 23,620 ಎಕರೆ, ಸರ್ಕಾರದ ವಿವಿಧ ಯೋಜನೆಗಳಿಗೆ ಸ್ವಾಧೀನಪಡಿಸಿಕೊಳ್ಳುವ ಮೂಲಕ 3 ಸಾವಿರ ಎಕರೆ ಹೋಗಿದೆ. ಉಳಿದಿರುವುದು 17, 966 ಎಕರೆ ಮಾತ್ರ ಎಂದು ಝಮೀರ್ ಅಹ್ಮದ್ ತಿಳಿಸಿದರು.

ಸುಳ್ಳು ಹಬ್ಬಿಸಿ ಜನರಲ್ಲಿ ಭೀತಿ ಹುಟ್ಟಿಸಲಾಗುತ್ತಿದೆ – ಸಚಿವ ಕೃಷ್ಣಬೈರೇಗೌಡ

ವಕ್ಫ್‌ ಆಸ್ತಿಯನ್ನು ಶೇ.95ರಷ್ಟು ಒತ್ತುವರಿ ಮಾಡಿರುವುದು ಮುಸ್ಲಿಮರೇ ಆಗಿದ್ದಾರೆ. ವಕ್ಫ್‌ ಆಸ್ತಿಯ ಹೆಸರಿನಲ್ಲಿ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಈ ಮೂಲಕ ಒಗ್ಗಟ್ಟಿನಿಂದ ಇರುವ ಗ್ರಾಮೀಣ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ವಕ್ಫ್ ಆಸ್ತಿ ಅತಿಕ್ರಮಣದ ವಿರುದ್ದ ಕಾರ್ಯಪಡೆ ರಚಿಸಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದೇಶವಾಗಿತ್ತು. ಹೀಗಿದ್ದರೂ, ರೈತರು, ದೇವಸ್ಥಾನಗಳ ಆಸ್ತಿಯನ್ನು ಕಸಿದುಕೊಳ್ಳಲಾಗತ್ತಿದೆ ಎಂದು ಬಿಜೆಪಿಗರು ವಿವಾದ ಎಬ್ಬಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.

ವಕ್ಫ್ ಮಂಡಳಿಗೆ 1,12,000 ಎಕರೆ ಜಮೀನು ನೋಟಿಫೈ ಆಗಿತ್ತು. 47,263 ಎಕರೆ ಇನಾಂ ರದ್ಧತಿ ಹಾಗೂ 23,620 ಎಕರೆಯನ್ನು ಭೂಸುಧಾರಣಾ ಕಾಯಿದೆಯಡಿ ರೈತರಿಗೆ ಮಂಜೂರು ಮಾಡಲಾಗಿದೆ. ಒಟ್ಟು 70 ಸಾವಿರ ಎಕರೆ ರೈತರ ವಶದಲ್ಲಿದೆ. ಇನಾಮ್ ರದ್ದತಿ ಮತ್ತು ಭೂ ಸುಧಾರಣೆ ಕಾಯ್ದೆಯಡಿ ಭೂಮಿ ಮಂಜೂರಾದ ರೈತರ ತಂಟೆಗೆ ಸರ್ಕಾರ ಹೋಗುವುದಿಲ್ಲ. ವಕ್ಫ್ ಜಮೀನಿನಲ್ಲಿ ಮಸೀದಿ, ದರ್ಗಾ, ಖಬರ್‌ಸ್ತಾನ ಇದೆ. ಅಂತದ್ದು ಒತ್ತುವರಿ ಆಗಿದ್ದರೆ ಅದನ್ನು ಬಿಟ್ಟು ಕೊಡುವಂತೆ ಹೇಳಿದ್ದಾರೆ. ನೀರಾವರಿ ಹಾಗೂ ಇನ್ನಿತರೆ ಉದ್ದೇಶಗಳಿಗೆ 3,101 ಎಕರೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದಿದೆ. ಸುಮಾರು 17,969 ಎಕರೆಯನ್ನು ಖಾಸಗಿಯವರು ಒತ್ತುವರಿ ಮಾಡಿದ್ದಾರೆ ಕೃಷ್ಣಬೈರೆಗೌಡ ಸದನಕ್ಕೆ ತಿಳಿಸಿದರು.

ಬಿಜೆಪಿಗೆ ಕೈಕೊಟ್ಟ ಜೆಡಿಎಸ್

ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಭಾತ್ಯಾಗ ಮಾಡಿತು. ಆದರೆ, ಅದರ ಮಿತ್ರಪಕ್ಷ  ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸೇರಿದಂತೆ ಸದಸ್ಯರಾದ ಎ. ಮಂಜು, ಶಾರದಾ ಪೂರ್ಯಾನಾಯ್ಕ್, ಜಿ.ಟಿ ದೇವೇಗೌಡ ಸದನದಲ್ಲೇ ಉಳಿಯುವ ಮೂಲಕ ಬಿಜೆಪಿ ಮುಖಭಂಗ ಉಂಟು ಮಾಡಿದರು. ಸರ್ಕಾರ ನೀಡಿದ ಸುದೀರ್ಘ ಉತ್ತರಕ್ಕೆ ಸುರೇಶ್ ಬಾಬು ಅಭಿನಂದಿಸಿದರು. ಈ ಮೂಲಕ ಬಿಜೆಪಿ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ ಎಂಬ ಸಂದೇಶ ನೀಡಿದರು. ಇದೇ ವೇಳೆ ಬಿಜೆಪಿ ಸದಸ್ಯರಾದ ಎಸ್‌.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಕೂಡ ಸದನದಲ್ಲೇ ಉಳಿಯುವ ಮೂಲಕ ಗಮನಸೆಳೆದರು.

ಇದನ್ನೂ ಓದಿ : ಕೆಐಎಡಿಬಿ ಭೂ ಸ್ವಾಧೀನ ಪರಿಹಾರದ ಹಣ ಆರ್‌ಟಿಜಿಎಸ್‌ ಮೂಲಕ ಪಾವತಿ: ಸಚಿವ ಎಂ.ಬಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...