Homeಕರ್ನಾಟಕ"ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ" : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

“ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ” : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

- Advertisement -
- Advertisement -

“ಬಾಲಕಿಯ ಶರ್ಟ್ ಒಳಗೆ ಏಕೆ ಕೈ ಹಾಕಿದ್ದಿರಿ ಎಂದು ಕೇಳಿದ್ದಕ್ಕೆ, ಅವಳ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂಬುವುದನ್ನು ಚೆಕ್ ಮಾಡಲು ಹಾಕಿದ್ದೆ” ಎಂದು ಸ್ವತಃ ಯಡಿಯೂರಪ್ಪನವರೇ ಸಂತ್ರಸ್ತೆಯ ತಾಯಿಗೆ ಹೇಳಿದ್ದಾರೆ. ಯಡಿಯೂರಪ್ಪನವರ ಈ ನಡೆಯಿಂದ ಲೈಂಗಿಕ ದೌರ್ಜನ್ಯ ಎಸಗಿರುವುದು ಸ್ಪಷ್ಟವಾಗಿದೆ” ಎಂದು ರಾಜ್ಯ ಸರ್ಕಾರವು ಬುಧವಾರ (ಡಿ.18) ಹೈಕೋರ್ಟ್‌ಗೆ ಹೇಳಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಬುಧವಾರ ನಡೆಯಿತು.

ಈ ವೇಳೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್‌ ಅವರು “ಸ್ವತಃ ಯಡಿಯೂರಪ್ಪ ಅವರು “ಬಾಲಕಿಯ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂದು ಪರಿಶೀಲಿಸಲು ಆಕೆಯ ಶರ್ಟ್‌ ಒಳಕೆ ಕೈ ಹಾಕಿದ್ದೆ” ಎಂದು ಹೇಳಿರುವಾಗ ಅವರ ಈ ಕೃತ್ಯ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯವಲ್ಲವೇ? ಲೈಂಗಿಕ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿದೆ” ಎಂದು ವಾದಿಸಿದರು.

ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪ್ರೊ. ರವಿವರ್ಮ ಕುಮಾರ್ ಅವರ ವಾದವನ್ನು ಬಲವಾಗಿ ಅಲ್ಲಗಳೆದ ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು “ಸಂತ್ರಸ್ತ ಬಾಲಕಿಯ ತಾಯಿ ಈ ಪ್ರಕರಣದಲ್ಲಿ ದೂರುದಾರರು (ಈಗ ಮೃತರಾಗಿದ್ದಾರೆ). ಆದರೆ, ಆಕೆ ಇಂತಹುದೇ ದೂರುಗಳನ್ನು ಹಲವು ಅಧಿಕಾರಿಗಳು, ಸಂಬಂಧಿಗಳು, ರಾಜಕಾರಣಿಗಳ ಮೇಲೆ ದಾಖಲಿಸಿದ್ದು, ಒಟ್ಟು 53 ದೂರುಗಳನ್ನು ದಾಖಲಿಸಿದ್ದಾರೆ” ಎಂದರು.

“ಒಂದೂವರೆ ತಿಂಗಳ ನಂತರ ಪ್ರಕರಣ ದಾಖಲಿಸಲಾಗಿದೆ. ಯಡಿಯೂರಪ್ಪ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂಬ ಬಾಲಕಿಯ ಹೇಳಿಕೆ ಇದೆ. ವಾಸ್ತವವನ್ನು ಗಮನಿಸಿದಾಗ, ಹಲವು ಜನರ ಸಮ್ಮುಖದಲ್ಲಿ ಇಂತಹ ಘಟನೆ ನಡೆಯಲು ಸಾಧ್ಯವಿತ್ತೇ? ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ದಾಖಲಿಸಲಾಗಿದೆ. ಕೆಲವರ ಹೇಳಿಕೆ ಪಡೆದಿದ್ದರೂ ಅವರನ್ನು ಸಾಕ್ಷಿಯಾಗಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿಲ್ಲ” ಎಂದು ಹೇಳಿದರು.

ಆಗ, ನ್ಯಾಯಮೂರ್ತಿ ನಾಗಪ್ರಸನ್ನ ಅವರು “ನ್ಯಾಯಾಲಯ ಈ ಹಂತದಲ್ಲಿ ಬಾಲಕಿಯ ಸಿಆರ್‌ಪಿಸಿ ಸೆಕ್ಷನ್‌ 164ರ ಹೇಳಿಕೆಯನ್ನು ಪರಿಗಣಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಾಗೇಶ್‌ ಅವರು “ಯಡಿಯೂರಪ್ಪ ಅವರಿಗೆ 82 ವರ್ಷ ವಯಸ್ಸಾಗಿದೆ. ಅವರ ಕೈಗಳು ನಡುಗುತ್ತವೆ. ಲೈಟ್‌ ಸ್ವಿಚ್‌ ಹಾಕಲೂ ನಮಗೆ ಹೇಳುತ್ತಾರೆ ಎಂದು ಅವರ ಮನೆಯ ಕೆಲಸದವರ ಹೇಳಿಕೆಯಿದೆ. ಬಾಲಕಿ ರೂಮಿಗೆ ಹೋಗಿರಲಿಲ್ಲ ಎಂಬ ಸಾಕ್ಷಿಯ ಹೇಳಿಕೆ ಇದೆ. ಅಂಗರಕ್ಷಕರು ಯಡಿಯೂರಪ್ಪನವರ ಆಜುಬಾಜಿನಲ್ಲೇ ಇರುತ್ತಾರೆ. ಅಲ್ಲಿದ್ದ ಎಲ್ಲಾ ಸಾಕ್ಷಿಗಳೂ ಇಂತಹ ಘಟನೆ ನಡೆದಿಲ್ಲ, ಯಡಿಯೂರಪ್ಪ ಹಾಲ್‌ ಬಿಟ್ಟು ಎಲ್ಲೂ ಹೋಗಿರಲಿಲ್ಲ ಎಂದು ಹೇಳಿದ್ದಾರೆ. ಆದರೂ, ತನಿಖಾಧಿಕಾರಿ ಕೇವಲ ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮಹಿಳೆ ದೂರು ನೀಡುವ ಮುನ್ನ ರಾಜಕಾರಣಿಯೊಬ್ಬರನ್ನು ಭೇಟಿ ಮಾಡಿ ಠಾಣೆಗೆ ಬಂದಿದ್ದರು. ಹೀಗಾಗಿ, ಇದರ ಹಿಂದೆ ಕಾಣದ ಹಿತಾಸಕ್ತಿ ಅಡಗಿದೆ” ಎಂದರು.

ಆಗ ಪ್ರೊ.ರವಿವರ್ಮ ಕುಮಾರ್ ಅವರು ಆರೋಪ ಪಟ್ಟಿಯ ಮತ್ತಷ್ಟು ಅಂಶಗಳನ್ನು ಓದಲು ಮುಂದಾದರು. ಈ ಹಂತದಲ್ಲಿ ಪೀಠವು ಕೆಲವು ಅಂಶಗಳನ್ನು ಮುಕ್ತ ನ್ಯಾಯಾಲಯದಲ್ಲಿ ಓದುವುದು ಬೇಡ ಎಂದು ತಡೆಯಿತು. ಅಂತಿಮವಾಗಿ ವಿಚಾರಣೆಯನ್ನು ಗುರುವಾರಕ್ಕೆ (ಡಿ.19) ಮುಂದೂಡಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...