HomeUncategorizedಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ವಿರುದ್ಧ ಆಪ್ ಪ್ರತಿಭಟನೆ

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ವಿರುದ್ಧ ಆಪ್ ಪ್ರತಿಭಟನೆ

- Advertisement -
- Advertisement -

ನವದೆಹಲಿ: ಅಂಬೇಡ್ಕರ್ ಕುರಿತು ಅಮಿತ್ ಶಾ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಮತ್ತು ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷ (ಎಎಪಿ)ವು  ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಬುಧವಾರ ಪ್ರತಿಭಟನೆ ನಡೆಸಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಅಮಿತ್ ಶಾ ಅವರ ಹೇಳಿಕೆ  ಡಾ.ಬಿ.ಆರ್.ಅಂಬೇಡ್ಕರ್ ಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದಾರೆ.

ಅಂಬೇಡ್ಕರ್, ಅಂಬೇಡ್ಕರ್ ಎಂದು ಪಠಿಸುವುದು ನಮಗೆ ಏನೂ ಸಹಾಯ ಮಾಡುವುದಿಲ್ಲ; ದೇವರನ್ನು ಸ್ತುತಿಸುವುದೇ ಉತ್ತಮ. ಇದರಿಂದ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂದು ಅಮಿತ್ ಶಾ ಅವರು ಡಾ. ಅಂಬೇಡ್ಕರ್ ಅವರ ಕುರಿತು ಲೇವಡಿ ಮಾಡಿದ್ದರು. ಈ ದೇಶದ ಬಡವರು, ತುಳಿತಕ್ಕೊಳಗಾದವರಿಗೆ, ಅಂಚಿನಲ್ಲಿರುವವರಿಗೆ ಮತ್ತು ಹಿಂದುಳಿದವರಿಗ ಡಾ. ಅಂಬೇಡ್ಕರ್ ದೇವರಿಗಿಂತ ಕಡಿಮೆಯಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಜನ ಸಾವಿನ ನಂತರ ಸ್ವರ್ಗವನ್ನು ತಲುಪುತ್ತಾರೆಯೇ ಎಂದು ನಾವು ಹೇಳಲು ಸಾಧ್ಯವಿಲ್ಲ, ಆದರೆ ಭೂಮಿಯ ಮೇಲೆ, ಲಕ್ಷಾಂತರ ಹಿಂದುಳಿದ ಜನರು ತಮ್ಮ ಘನತೆ ಮತ್ತು ಹಕ್ಕುಗಳಿಗೆ ಸಂವಿಧಾನವನ್ನು ನೀಡಿದ ಡಾ. ಅಂಬೇಡ್ಕರ್ ಅವರಿಗೆ ಋಣಿಯಾಗಿದ್ದಾರೆ. ಅಮಿತ್ ಶಾ ಅವರ ಹೇಳಿಕೆಯು ಲಕ್ಷಾಂತರ ಭಾರತೀಯ ಜನರ ಭಾವನೆಗಳನ್ನು ತೀವ್ರವಾಗಿ ಘಾಸಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಅಮಿತ್ ಶಾ ಅವರನ್ನು ಪ್ರಧಾನಿ ಮೋದಿ ಸಮರ್ಥಿಸಿಕೊಂಡ ರೀತಿ ನೋಡಿದರೆ ಇದು ಸ್ವಯಂಪ್ರೇರಿತ ಹೇಳಿಕೆಯಲ್ಲ ಎಂದು ತೋರುತ್ತದೆ. ಸಂಸತ್ತಿನಲ್ಲಿ ಡಾ. ಅಂಬೇಡ್ಕರ್ ಅವರನ್ನು ಅವಮಾನಿಸಲು ಬಿಜೆಪಿ ನಡೆಸಿದ ವ್ಯವಸ್ಥಿತ ತಂತ್ರವಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ನಾವು ಇದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಈಗ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅದು ಡಾ. ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನದ ವಿರುದ್ಧವಾಗಿದ್ದಾರೆ.  ಡಾ. ಅಂಬೇಡ್ಕರ್ ಜೊತೆ ನಿಲ್ಲುತ್ತಾರೆಯೇ ಅಥವಾ ಬಿಜೆಪಿಯೊಂದಿಗೆ ನಿಲ್ಲುತ್ತಾರೆಯೇ? ಎಂಬುದನ್ನು ಬಿಜೆಪಿ ಬೆಂಬಲಿಗರು ಈಗ ಆಯ್ಕೆ ಮಾಡಬೇಕು. ಅವರು ಎರಡನ್ನೂ ಬೆಂಬಲಿಸಲು ಸಾಧ್ಯವಿಲ್ಲ. ಬಿಜೆಪಿಯ ನಾಯಕತ್ವವು ಡಾ. ಅಂಬೇಡ್ಕರ್ ಬಗ್ಗೆ ತಮ್ಮ ತಿರಸ್ಕಾರವನ್ನು ತೋರಿಸಿದೆ ಮತ್ತು ನಾವು ಗೃಹ ಸಚಿವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ. ಯಾವುದೇ ಕ್ರಮವು ಅಮಿತ್ ಶಾ ಮಾಡಿದ ಹಾನಿಯನ್ನು  ಸಂಪೂರ್ಣವಾಗಿ ತೊಡೆದುಹಾಕಲು ಸಾಧ್ಯವಿಲ್ಲ. ಆದರೆ ಶಾರ ಇಂತಹ ಅಗೌರವವನ್ನು ನಾವ ಸಹಿಸುವುದಿಲ್ಲ ಎಂಬ ಸಂದೇಶವನ್ನು ಕಳುಹಿಸುವುದು ಅತ್ಯಗತ್ಯ ಎಂದು ಅವರು ಹೇಳಿದರು.

ಬಿಜೆಪಿಯ ಉನ್ನತ ನಾಯಕತ್ವವು ಡಾ. ಅಂಬೇಡ್ಕರ್ ಅವರನ್ನು ಹೇಗೆ ಅವಮಾನಿಸಿದೆ ಎಂಬುದನ್ನು ನಾವು ಪ್ರತಿ ಮನೆಗೂ ಕೊಂಡೊಯ್ಯುತ್ತೇವೆ. ದೆಹಲಿ ಮತ್ತು ದೇಶದಾದ್ಯಂತ, ಬಿಜೆಪಿಯು ನಮ್ಮ ಸಂವಿಧಾನ ಶಿಲ್ಪಿಯನ್ನು ಹೇಗೆ ಅಗೌರವಗೊಳಿಸುತ್ತಿದೆ ಎಂಬುದರ ಬಗ್ಗೆ ಜನತೆ ತಿಳಿದುಕೊಳ್ಳಬೇಕಿದೆ ಎಂದು ಎಎಪಿಯ ಮಾಜಿ ಮುಖ್ಯಮಂತ್ರಿ ಪ್ರತಿಪಾದಿಸಿದರು.

ಏತನ್ಮಧ್ಯೆ, ಹಿರಿಯ ಆಪ್ ನಾಯಕ ಮನೀಶ್ ಸಿಸೋಡಿಯಾ ಮಾತನಾಡಿ, “ಡಾ. ಅಂಬೇಡ್ಕರ್ ಅವರ ಬಗ್ಗೆ ಹೆಚ್ಚುತ್ತಿರುವ ಗೌರವದಿಂದ ಗೃಹ ಸಚಿವ ಅಮಿತ್ ಶಾ ಸಿಟ್ಟಿಗೆದ್ದಿದ್ದಾರೆ. ಇಂದು ಇಡೀ ರಾಷ್ಟ್ರವು ‘ಅಂಬೇಡ್ಕರ್, ಅಂಬೇಡ್ಕರ್’ ಎಂದು ಜಪಿಸುತ್ತಿದೆ ಎಂದು ಅವರು ಹೇಳಿದರು.

ಸಂಸದ ಸಂಜಯ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಡಾ. ಸಂದೀಪ್ ಪಾಠಕ್, ಮುಖ್ಯಮಂತ್ರಿ ಅತಿಶಿ ಮತ್ತು ಕ್ಯಾಬಿನೆಟ್ ಸಚಿವ ಸೌರಭ್ ಭಾರದ್ವಾಜ್ ಸೇರಿದಂತೆ ಹಲವು ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ….ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ : ಮಂಡ್ಯದಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...