Homeಕರ್ನಾಟಕಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಪ್ರತಿದೂರು : ಇಂದು ಬಿಜೆಪಿ-ಕಾಂಗ್ರೆಸ್ ಪ್ರತಿಭಟನೆ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಪ್ರತಿದೂರು : ಇಂದು ಬಿಜೆಪಿ-ಕಾಂಗ್ರೆಸ್ ಪ್ರತಿಭಟನೆ

- Advertisement -
- Advertisement -

ವಿಧಾನಪರಿಷತ್‌ನಲ್ಲಿ ಗುರುವಾರ (ಡಿ.19) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ ರವಿ ಅವಾಚ್ಯ ಶಬ್ಧ ಬಳಸಿ ನಿಂದಿಸಿದ್ದಾರೆ ಎಂಬ ವಿಚಾರ ರಾಜ್ಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ.

ನಿನ್ನೆ (ಡಿ.19) ಸಂಜೆ ಬೆಳಗಾವಿಯ ಸುವರ್ಣಸೌಧದಲ್ಲಿ ಬಂಧನಕ್ಕೊಳಗಾದ ಸಿ.ಟಿ ರವಿ ಅವರನ್ನು ತಡರಾತ್ರಿ ಬೆಳಗಾವಿಯಿಂದ ಬೆಂಗಳೂರಿಗೆ ಕರೆ ತರಲಾಗುತ್ತಿದೆ ಎಂದು ವರದಿಯಾಗಿತ್ತು. ಆದರೆ, ಇಂದು ಮುಂಜಾನೆಯ ವರದಿಗಳು ರವಿ ಅವರನ್ನು ರಾತ್ರಿಯಿಡೀ ಬೆಳಗಾವಿ ಜಿಲ್ಲೆಯಲ್ಲೇ ಸುತ್ತಾಡಿಸಲಾಗಿದೆ. ಪ್ರಸ್ತುತ ಅವರು ಜಿಲ್ಲೆಯ ಯರಗಟ್ಟಿ ಸಮೀಪ ಇದ್ದಾರೆ ಎಂದು ಹೇಳಿವೆ.

ಇಂದು ಸಿ.ಟಿ ರವಿ ಅವರನ್ನು ಬೆಳಗಾವಿಯಲ್ಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದಾ?, ಇಲ್ಲಾ ಬೆಂಗಳೂರಿಗೆ ಕರೆತಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರಾ? ಎಂಬುವುದು ತಿಳಿದು ಬರಬೇಕಿದೆ.

ಸಿ.ಟಿ ರವಿ ಪ್ರತಿದೂರು

ಅವಾಚ್ಯ ಪದ ಬಳಸಿ ನನ್ನನ್ನು ನಿಂದಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿನ್ನೆ ಸಂಜೆ ಸಿ.ಟಿ ರವಿ ವಿರುದ್ದ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬೆನ್ನಲ್ಲೇ ಅವರ ಬಂಧನವಾಗಿದೆ. ನಂತರ ರಾತ್ರಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಸಿ.ಟಿ ರವಿ ಪ್ರತಿದೂರು ದಾಖಲಿಸಿದ್ದಾರೆ. “ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಸಿ.ಟಿ ರವಿ ತಲೆಗೆ ಗಾಯ

ತಡರಾತ್ರಿ ಖಾನಾಪುರ ಪೊಲೀಸ್ ಠಾಣೆಯಿಂದ ಹೊರ ಬಂದಾಗ ಸಿ.ಟಿ ರವಿ ತಲೆಯಲ್ಲಿ ಗಾಯ ಆಗಿರುವುದು ಕಂಡು ಬಂದಿದೆ. ಆದರೆ, ಅದಕ್ಕೆ ಕಾರಣ ಏನು ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ. ಬಿಜೆಪಿಯವರು ಪೊಲೀಸರು ಸಿ.ಟಿ ರವಿ ಮೇಲೆ ಠಾಣೆಯಲ್ಲಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ವಿರುದ್ದ ತಡರಾತ್ರಿ ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ ಸಿ.ಟಿ ರವಿ

ನನಗಾಗುವ ತೊಂದರೆಗೆ ಸರ್ಕಾರ ಕಾರಣ-ಸಿ.ಟಿ ರವಿ

ಇಂದು (ಡಿ.20) ಮುಂಜಾನೆ 5.30ರ ಸುಮಾರಿಗೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಿ.ಟಿ ರವಿ “ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು. ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್‌ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗು ಕಾಂಗ್ರೇಸ್ ಸರ್ಕಾರವೇ ಕಾರಣ” ಎಂದು ಬರೆದುಕೊಂಡಿದ್ದಾರೆ.

ರಕ್ತ ಬರುವಂತೆ ಹೊಡೆದಿದ್ದಾರೆ -ಆರ್‌. ಅಶೋಕ್

ಪೊಲೀಸರು ಸಿ.ಟಿ ರವಿಗೆ ರಕ್ತ ಬರುವಂತೆ ಹೊಡೆದಿದ್ದಾರೆ. ಈ ಕಾಂಗ್ರೆಸ್​ನವರು ಏನು ಮಾಡುವುದಕ್ಕೂ ಹಿಂಜರಿಯುವುದಿಲ್ಲ. ಸರ್ಕಾರ ಬೆಳಗಾವಿಯನ್ನು ಮಿನಿ ಪಾಕಿಸ್ತಾನ ಮಾಡಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ.

ಇಂದು ಕಾಂಗ್ರೆಸ್-ಬಿಜೆಪಿ ಪ್ರತಿಭಟನೆ, ಚಿಕ್ಕಮಗಳೂರು ಬಂದ್‌ಗೆ ಕರೆ

ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದ ಬಳಸಿ ನಿಂದಿಸಿರುವುದನ್ನು ಖಂಡಿಸಿ ಮತ್ತು ಸಿ.ಟಿ ರವಿ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿಯ ಕ್ವೀನ್ಸ್ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಮಾಹಿತಿ ದೊರೆತಿದೆ. ಇದರ ಜೊತೆಗೆ ರಾಜ್ಯದ ವಿವಿದೆಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಸಿ.ಟಿ ರವಿ ವಿರುದ್ದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.

ಮತ್ತೊಂದೆಡೆ, ಸಿ.ಟಿ ರವಿ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಇಂದು ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಚಿಕ್ಕಮಗಳೂರು ಬಿಜೆಪಿ ಇಂದು ಜಿಲ್ಲಾ ಬಂದ್‌ಗೆ ಕರೆ ಕೊಟ್ಟಿದೆ.

ಇದನ್ನೂ ಓದಿ : ಮುಡಾ ಪ್ರಕರಣ| ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...