Homeಮುಖಪುಟಜೈಪುರ:  ಗ್ಯಾಸ್ ಟ್ಯಾಂಕರ್ ಇತರ ವಾಹನಗಳಿಗೆ ಡಿಕ್ಕಿ;  9 ಸಾವು

ಜೈಪುರ:  ಗ್ಯಾಸ್ ಟ್ಯಾಂಕರ್ ಇತರ ವಾಹನಗಳಿಗೆ ಡಿಕ್ಕಿ;  9 ಸಾವು

- Advertisement -
- Advertisement -

ಜೈಪುರ: ಇಲ್ಲಿನ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಹಲವು ವಾಹನಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಘಟನೆಯಲ್ಲಿ 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟವಾದ ಕಪ್ಪು ಹೊಗೆ ಅವರಿಸಿದೆ. ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನಗಳು ಅಪಘಾತದ  ನಡೆದ ಸ್ಥಳಕ್ಕೆ ಧಾವಿಸುತ್ತಿದ್ದಂತೆ ಸುಮಾರು ಒಂದು ಕಿಲೋಮೀಟರ್ ದೂರದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಕರೆದೊಯ್ಯಲು ಹೋಗುತ್ತಿದ್ದ ಶಾಲಾ ವ್ಯಾನ್ ಚಾಲಕನೊಬ್ಬ ಬೆಂಕಿಯಲ್ಲಿ ಸುಟ್ಟು ಕರಕಲಾದ ದೃಶ್ಯವನ್ನು ವ್ಯಕ್ತಿಯೊಬ್ಬ ಚಿತ್ರಿಕರಿಸಿದ್ದಾನೆ.

ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನದ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವರು ವಾಹನದಿಂದ ಹೊರಬರಲಾಗದೆ ಒಳಗೆ ಸುಟ್ಟು ಕರಕಲಾದ ಸಾಧ್ಯತೆಗಳಿವೆ. ಎಲ್ಲ ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಪರಿಸ್ಥಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಮತ್ತು ಆರೋಗ್ಯ ಸಚಿವ ಗಜೇಂದ್ರ ಸಿಂಗ್ ಖಿಮ್ಸರ್ ಅವರು ಗಾಯಾಳುಗಳನ್ನು ದಾಖಲಿಸಲಾಗಿರುವ ಎಸ್‌ಎಂಎಸ್ ಆಸ್ಪತ್ರೆಗೆ ಧಾವಿಸಿದ್ದಾರೆ. ಶರ್ಮಾ ಅವರು ಆಡಳಿತ ಅಧಿಕಾರಿಗಳು ಮತ್ತು ವೈದ್ಯರೊಂದಿಗೆ ಮಾತನಾಡಿ, ಸೂಕ್ತ ಚಿಕಿತ್ಸೆಗೆ ಅನುಕೂಲವಾಗುವಂತೆ ನಿರ್ದೇಶನಗಳನ್ನು ನೀಡಿದ್ದಾರೆ. ನಂತರ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ತಮ್ಮ ಎಕ್ಸ್‌ನಲ್ಲಿ ಹಿಂದಿಯಲ್ಲಿ ಬರೆದ ಪೋಸ್ಟ್‌ನಲ್ಲಿ, ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಘಟನೆಯಿಂದಾದ ಸಾವುನೋವುಗಳ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ನಾನು ಸ್ಥಳಕ್ಕೆ ಹೋದೆ. ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಎಸ್‌ಎಂಎಸ್ ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದೆ.

ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಮತ್ತು ಇಲಾಖೆಯ ಇತರ ಅಧಿಕಾರಿಗಳು ದುರ್ಘಟನೆ ನಡೆದ ಹೆದ್ದಾರಿಯಲ್ಲಿ ಮೊಕಂ ಹೂಡಿದ್ದಾರೆ. ಆಸ್ಪತ್ರೆಗೆ ಕರೆತರಲಾದ ಸುಮಾರು ಅರ್ಧದಷ್ಟು ಗಾಯಾಳುಗಳ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಖಿಮ್ಸರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಯನ್ನು ಕರೆಸಲಾಗಿದೆ. ರೋಗಿಗಳಿಗೆ ವಸತಿ ಕಲ್ಪಿಸಲು ಮತ್ತೊಂದು ವಾರ್ಡ್ ತೆರೆಯಲಾಗಿದೆ. ಕೆಲವರು ಹತ್ತಿರದ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಪಘಾತ ನಡೆದ ಸ್ಥಳದಿಂದ ಎಸ್‌ಎಂಎಸ್‌ ಆಸ್ಪತ್ರೆವರೆಗೆ ‘ಗ್ರೀನ್‌ ಕಾರಿಡಾರ್‌’ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಅಪಘಾತ ಸಂಭವಿಸಿದಾಗ ರಾಜ್‌ಸಮಂದ್‌ನಿಂದ ಜೈಪುರಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಗ್ಯಾಸ್ ಟ್ಯಾಂಕರ್ ಹಿಂದೆ ಇತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಟ್ಟ ವಾಹನಗಳನ್ನು ಹೆದ್ದಾರಿಯಿಂದ ತೆಗೆಯಲಾಗುತ್ತಿದ್ದು, ಸಂಚಾರ ಪುನರಾರಂಭಿಸಬಹುದಾಗಿದೆ. ಸಿಎಂ ಶರ್ಮಾ, ರಾಜ್ಯಪಾಲ ಹರಿಭಾವು ಬಗಾಡೆ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಪಘಾತದಲ್ಲಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಆರಂಭದಲ್ಲಿ ಬೆಂಕಿಯನ್ನು ಹತೋಟಿಗೆ ತರಲು ಕಷ್ಟವಾಯಿತು ಎಂದು ಬಂಕ್ರೋಟಾದ ಠಾಣಾಧಿಕಾರಿ ಮನೀಶ್ ಗುಪ್ತಾ ತಿಳಿಸಿದ್ದಾರೆ.

ಆಗ್ನಿಶಾಮಕ ದಳದ ತಂಡಗಳು ಆರಂಭದಲ್ಲಿ ಸುಟ್ಟುಹೋದ ವಾಹನಗಳ ಹತ್ತಿರ ತಲುಪಲು ಸಾಧ್ಯವಾಗಲಿಲ್ಲ. ಈ ಪ್ರದೇಶದಲ್ಲಿ ಮೂರು ಪೆಟ್ರೋಲ್ ಪಂಪ್‌ಗಳಿವೆ. ಆದರೆ ಅದೃಷ್ಟವಶಾತ್ ಅವು ಸುರಕ್ಷಿತವಾಗಿವೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತರನ್ನು ಆಸ್ಪತ್ರೆಗೆ ಸಾಗಿಸಲು 25ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ಬಳಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯ ಸುಮಾರು 300 ಮೀಟರ್ ಜನನಿಬಿಡ ಪ್ರದೇಶಕ್ಕೆ ಪರಿಣಾಮ ಬೀರಿದೆ. ಇದರಿಂದಾಗಿ ವಾಹನಗಳ ಉದ್ದನೆಯ ಸರತಿಗೆ ಕಾರಣವಾಯಿತು. ಹೆದ್ದಾರಿಯುದ್ದಕ್ಕೂ ಕೆಲವು ಸಂಸ್ಥೆಗಳಿಗೆ ಬೆಂಕಿ ಆವರಿಸಿದೆ. ಆದರೆ ನಿಜವಾದ ನಷ್ಟದ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ಕಿಲೋಮೀಟರ್ ದೂರದಿಂದ ಜ್ವಾಲೆಗಳು ಗೋಚರಿಸುತ್ತಿವೆ ಮತ್ತು ಹೆದ್ದಾರಿಯಲ್ಲಿ ಭಯ ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಶಾಲಾ ವ್ಯಾನ್ ಚಾಲಕ ತಿಳಿಸಿದ್ದಾರೆ.

ನಾನು ಸ್ಥಳಕ್ಕೆ ಹತ್ತಿರವಾಗುತ್ತಿದ್ದಂತೆ, ಜನರು ತರಾತುರಿಯಲ್ಲಿ ಓಡಿ ಬಂದು ಸಹಾಯಕ್ಕಾಗಿ ಕೂಗುತ್ತಿರುವುದನ್ನು ನಾನು ನೋಡಿದೆ. ಒಬ್ಬ ವ್ಯಕ್ತಿ ಬೆಂಕಿಯಲ್ಲಿ ಬೆಂದುಹೋಗುತ್ತಿರುವುದನ್ನು ನೋಡಿದೆ. ಇದು ಭಯಾನಕ ದೃಶ್ಯವಾಗಿತ್ತು. ಅಗ್ನಿಶಾಮಕ ದಳಗಳು ಮತ್ತು ಆಂಬ್ಯುಲೆನ್ಸ್‌ಗಳು ಅಲ್ಲಿದ್ದವು. ಆದರೆ ಅವರಿಗೆ ದುರ್ಘಟನೆಯ ಸ್ಥಳಕ್ಕೆ ತಲುಪಲು ಕಷ್ಟವಾಯಿತು ಎಂದು ಅವರು ಹೇಳಿದರು.

ಸಂತ್ರಸ್ತರ ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಜಿಲ್ಲಾಡಳಿತದ ತಂಡ ಸಜ್ಜುಗೊಂಡಿದೆ. ಜನರು ವಿಚಾರಣೆ ಅಥವಾ ಸೂಕ್ತ ಮಾಹಿತಿಗಾಗಿ ಸಂಪರ್ಕಿಸಲು ಜೈಪುರ ಪೊಲೀಸರು ಸಹಾಯವಾಣಿ ಸಂಖ್ಯೆ 9166347551, 8764688431 ಮತ್ತು 7300363636 ಅನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ…ಚಿಕ್ಕಮಗಳೂರು | ದೇವಾಲಯ ಪ್ರವೇಶಿಸಿದ ದಲಿತರಿಗೆ 2.50 ಲಕ್ಷ ರೂ. ದಂಡ ವಿಧಿಸಿದ ಸವರ್ಣೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...