Homeಮುಖಪುಟಜೈಪುರ:  ಗ್ಯಾಸ್ ಟ್ಯಾಂಕರ್ ಇತರ ವಾಹನಗಳಿಗೆ ಡಿಕ್ಕಿ;  9 ಸಾವು

ಜೈಪುರ:  ಗ್ಯಾಸ್ ಟ್ಯಾಂಕರ್ ಇತರ ವಾಹನಗಳಿಗೆ ಡಿಕ್ಕಿ;  9 ಸಾವು

- Advertisement -
- Advertisement -

ಜೈಪುರ: ಇಲ್ಲಿನ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಹಲವು ವಾಹನಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಘಟನೆಯಲ್ಲಿ 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟವಾದ ಕಪ್ಪು ಹೊಗೆ ಅವರಿಸಿದೆ. ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನಗಳು ಅಪಘಾತದ  ನಡೆದ ಸ್ಥಳಕ್ಕೆ ಧಾವಿಸುತ್ತಿದ್ದಂತೆ ಸುಮಾರು ಒಂದು ಕಿಲೋಮೀಟರ್ ದೂರದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಕರೆದೊಯ್ಯಲು ಹೋಗುತ್ತಿದ್ದ ಶಾಲಾ ವ್ಯಾನ್ ಚಾಲಕನೊಬ್ಬ ಬೆಂಕಿಯಲ್ಲಿ ಸುಟ್ಟು ಕರಕಲಾದ ದೃಶ್ಯವನ್ನು ವ್ಯಕ್ತಿಯೊಬ್ಬ ಚಿತ್ರಿಕರಿಸಿದ್ದಾನೆ.

ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನದ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವರು ವಾಹನದಿಂದ ಹೊರಬರಲಾಗದೆ ಒಳಗೆ ಸುಟ್ಟು ಕರಕಲಾದ ಸಾಧ್ಯತೆಗಳಿವೆ. ಎಲ್ಲ ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಪರಿಸ್ಥಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಮತ್ತು ಆರೋಗ್ಯ ಸಚಿವ ಗಜೇಂದ್ರ ಸಿಂಗ್ ಖಿಮ್ಸರ್ ಅವರು ಗಾಯಾಳುಗಳನ್ನು ದಾಖಲಿಸಲಾಗಿರುವ ಎಸ್‌ಎಂಎಸ್ ಆಸ್ಪತ್ರೆಗೆ ಧಾವಿಸಿದ್ದಾರೆ. ಶರ್ಮಾ ಅವರು ಆಡಳಿತ ಅಧಿಕಾರಿಗಳು ಮತ್ತು ವೈದ್ಯರೊಂದಿಗೆ ಮಾತನಾಡಿ, ಸೂಕ್ತ ಚಿಕಿತ್ಸೆಗೆ ಅನುಕೂಲವಾಗುವಂತೆ ನಿರ್ದೇಶನಗಳನ್ನು ನೀಡಿದ್ದಾರೆ. ನಂತರ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ತಮ್ಮ ಎಕ್ಸ್‌ನಲ್ಲಿ ಹಿಂದಿಯಲ್ಲಿ ಬರೆದ ಪೋಸ್ಟ್‌ನಲ್ಲಿ, ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಘಟನೆಯಿಂದಾದ ಸಾವುನೋವುಗಳ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ನಾನು ಸ್ಥಳಕ್ಕೆ ಹೋದೆ. ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಎಸ್‌ಎಂಎಸ್ ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದೆ.

ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಮತ್ತು ಇಲಾಖೆಯ ಇತರ ಅಧಿಕಾರಿಗಳು ದುರ್ಘಟನೆ ನಡೆದ ಹೆದ್ದಾರಿಯಲ್ಲಿ ಮೊಕಂ ಹೂಡಿದ್ದಾರೆ. ಆಸ್ಪತ್ರೆಗೆ ಕರೆತರಲಾದ ಸುಮಾರು ಅರ್ಧದಷ್ಟು ಗಾಯಾಳುಗಳ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಖಿಮ್ಸರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಯನ್ನು ಕರೆಸಲಾಗಿದೆ. ರೋಗಿಗಳಿಗೆ ವಸತಿ ಕಲ್ಪಿಸಲು ಮತ್ತೊಂದು ವಾರ್ಡ್ ತೆರೆಯಲಾಗಿದೆ. ಕೆಲವರು ಹತ್ತಿರದ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಪಘಾತ ನಡೆದ ಸ್ಥಳದಿಂದ ಎಸ್‌ಎಂಎಸ್‌ ಆಸ್ಪತ್ರೆವರೆಗೆ ‘ಗ್ರೀನ್‌ ಕಾರಿಡಾರ್‌’ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಅಪಘಾತ ಸಂಭವಿಸಿದಾಗ ರಾಜ್‌ಸಮಂದ್‌ನಿಂದ ಜೈಪುರಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಗ್ಯಾಸ್ ಟ್ಯಾಂಕರ್ ಹಿಂದೆ ಇತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಟ್ಟ ವಾಹನಗಳನ್ನು ಹೆದ್ದಾರಿಯಿಂದ ತೆಗೆಯಲಾಗುತ್ತಿದ್ದು, ಸಂಚಾರ ಪುನರಾರಂಭಿಸಬಹುದಾಗಿದೆ. ಸಿಎಂ ಶರ್ಮಾ, ರಾಜ್ಯಪಾಲ ಹರಿಭಾವು ಬಗಾಡೆ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಪಘಾತದಲ್ಲಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಆರಂಭದಲ್ಲಿ ಬೆಂಕಿಯನ್ನು ಹತೋಟಿಗೆ ತರಲು ಕಷ್ಟವಾಯಿತು ಎಂದು ಬಂಕ್ರೋಟಾದ ಠಾಣಾಧಿಕಾರಿ ಮನೀಶ್ ಗುಪ್ತಾ ತಿಳಿಸಿದ್ದಾರೆ.

ಆಗ್ನಿಶಾಮಕ ದಳದ ತಂಡಗಳು ಆರಂಭದಲ್ಲಿ ಸುಟ್ಟುಹೋದ ವಾಹನಗಳ ಹತ್ತಿರ ತಲುಪಲು ಸಾಧ್ಯವಾಗಲಿಲ್ಲ. ಈ ಪ್ರದೇಶದಲ್ಲಿ ಮೂರು ಪೆಟ್ರೋಲ್ ಪಂಪ್‌ಗಳಿವೆ. ಆದರೆ ಅದೃಷ್ಟವಶಾತ್ ಅವು ಸುರಕ್ಷಿತವಾಗಿವೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತರನ್ನು ಆಸ್ಪತ್ರೆಗೆ ಸಾಗಿಸಲು 25ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ಬಳಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯ ಸುಮಾರು 300 ಮೀಟರ್ ಜನನಿಬಿಡ ಪ್ರದೇಶಕ್ಕೆ ಪರಿಣಾಮ ಬೀರಿದೆ. ಇದರಿಂದಾಗಿ ವಾಹನಗಳ ಉದ್ದನೆಯ ಸರತಿಗೆ ಕಾರಣವಾಯಿತು. ಹೆದ್ದಾರಿಯುದ್ದಕ್ಕೂ ಕೆಲವು ಸಂಸ್ಥೆಗಳಿಗೆ ಬೆಂಕಿ ಆವರಿಸಿದೆ. ಆದರೆ ನಿಜವಾದ ನಷ್ಟದ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ಕಿಲೋಮೀಟರ್ ದೂರದಿಂದ ಜ್ವಾಲೆಗಳು ಗೋಚರಿಸುತ್ತಿವೆ ಮತ್ತು ಹೆದ್ದಾರಿಯಲ್ಲಿ ಭಯ ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಶಾಲಾ ವ್ಯಾನ್ ಚಾಲಕ ತಿಳಿಸಿದ್ದಾರೆ.

ನಾನು ಸ್ಥಳಕ್ಕೆ ಹತ್ತಿರವಾಗುತ್ತಿದ್ದಂತೆ, ಜನರು ತರಾತುರಿಯಲ್ಲಿ ಓಡಿ ಬಂದು ಸಹಾಯಕ್ಕಾಗಿ ಕೂಗುತ್ತಿರುವುದನ್ನು ನಾನು ನೋಡಿದೆ. ಒಬ್ಬ ವ್ಯಕ್ತಿ ಬೆಂಕಿಯಲ್ಲಿ ಬೆಂದುಹೋಗುತ್ತಿರುವುದನ್ನು ನೋಡಿದೆ. ಇದು ಭಯಾನಕ ದೃಶ್ಯವಾಗಿತ್ತು. ಅಗ್ನಿಶಾಮಕ ದಳಗಳು ಮತ್ತು ಆಂಬ್ಯುಲೆನ್ಸ್‌ಗಳು ಅಲ್ಲಿದ್ದವು. ಆದರೆ ಅವರಿಗೆ ದುರ್ಘಟನೆಯ ಸ್ಥಳಕ್ಕೆ ತಲುಪಲು ಕಷ್ಟವಾಯಿತು ಎಂದು ಅವರು ಹೇಳಿದರು.

ಸಂತ್ರಸ್ತರ ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಜಿಲ್ಲಾಡಳಿತದ ತಂಡ ಸಜ್ಜುಗೊಂಡಿದೆ. ಜನರು ವಿಚಾರಣೆ ಅಥವಾ ಸೂಕ್ತ ಮಾಹಿತಿಗಾಗಿ ಸಂಪರ್ಕಿಸಲು ಜೈಪುರ ಪೊಲೀಸರು ಸಹಾಯವಾಣಿ ಸಂಖ್ಯೆ 9166347551, 8764688431 ಮತ್ತು 7300363636 ಅನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ…ಚಿಕ್ಕಮಗಳೂರು | ದೇವಾಲಯ ಪ್ರವೇಶಿಸಿದ ದಲಿತರಿಗೆ 2.50 ಲಕ್ಷ ರೂ. ದಂಡ ವಿಧಿಸಿದ ಸವರ್ಣೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...