Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿ ನಾಯಕರು

FACT CHECK : ರಾಹುಲ್ ಗಾಂಧಿ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿ ನಾಯಕರು

- Advertisement -
- Advertisement -

ರಾಜ್ಯಸಭೆಯಲ್ಲಿ ಮಾತನಾಡುವಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆಯನ್ನು ವಿರೋಧಿಸಿ ಡಿಸೆಂಬರ್ 19ರಂದು ಸಂಸತ್ ಭವನದ ಬಳಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಸಂಸದರು ಪ್ರತಿಭಟನೆ ಹಮ್ಮಿಕೊಂಡಿದ್ದರು.

ಸಂಸತ್‌ ಆವರಣದಲ್ಲಿ ಮೆರವಣಿಗೆ ನಡೆಸಿದ ಪ್ರತಿಪಕ್ಷಗಳ ಸಂಸದರು ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು. ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.

ಇದೇ ವೇಳೆ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಮೈತ್ರಿಕೂಟದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಪ್ರತಿಭಟಿಸಿ “ಕಾಂಗ್ರೆಸ್ ತನ್ನ ಆಡಳಿತಾವಧಿಯಲ್ಲಿ ಅಂಬೇಡ್ಕರ್ ಅವರನ್ನು ಹೀನಾಯವಾಗಿ ನಡೆಸಿಕೊಂಡಿದೆ. ಈಗ ಅಂಬೇಡ್ಕರ್ ಮೇಲೆ ಹುಸಿ ಅಭಿಮಾನ ತೋರಿಸುತ್ತಿದೆ” ಎಂದು ಘೋಷಣೆಗಳನ್ನು ಕೂಗಿದ್ದರು.

ಇಂಡಿಯಾ ಮತ್ತು ಎನ್‌ಡಿಎ ಸಂಸದರು ಸಂಸತ್‌ ದ್ವಾರದ ಬಳಿ ಮುಖಾಮುಖಿಯಾದಾಗ ಘರ್ಷಣೆ ಉಂಟಾಗಿತ್ತು. ತನ್ನ ಇಬ್ಬರು ಸಂಸದರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಳ್ಳಿದ್ದಾರೆ. ಇದರಿಂದ ಅವರು ನೆಲಕ್ಕೆ ಬಿದ್ದು ಗಾಯಗಳಾಗಿವೆ ಎಂದು ಬಿಜೆಪಿ ಆರೋಪಿಸಿತ್ತು.

ಕಾಂಗ್ರೆಸ್‌ ಕೂಡ, ಅದರ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ. ಇದರಿಂದ ಅವರ ಮೊಣಕಾಲಿಗೆ ಗಾಯವಾಗಿದೆ ಎಂದು ಆರೋಪಿಸಿತ್ತು.

ಎರಡೂ ಕಡೆಯವರು ಪರಸ್ಪರ ಆರೋಪಗಳನ್ನು ಮಾಡಿಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಬಿಜೆಪಿಯ ಇಬ್ಬರು ಸಂಸದರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿರುದ್ದ ಬಿಜೆಪಿಯ ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸಂಸತ್ ದ್ವಾರದ ಬಳಿ ಸಂಸದರ ನಡುವೆ ಘರ್ಷಣೆ ಉಂಟಾದಾಗ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮಗಳಿಗೆ ಹೇಳಿಕೆಯೊಂದನ್ನು ನೀಡಿದ್ದರು. ಅದನ್ನು ಕ್ಷಣ ಮಾತ್ರದಲ್ಲಿ ತಿರುಚಿದ ಬಿಜೆಪಿಯ ಹಲವು ಸಂಸದರು ಸುಳ್ಳು ಬರಹಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ವಿಡಿಯೋದಲ್ಲಿ ಏನಿದೆ?

ರಾಹುಲ್ ಗಾಂಧಿ ಮಾಧ್ಯಮಗಳಿಗೆ ನೀಡಿದ ಹೇಳಿಕೆ ಹೀಗಿದೆ…”ದೇಕಿಯೇ, ಹಾನ್ ಕಿಯಾ ಹೈ, ಕಿಯಾ ಹೈ, ಮಗರ್ ಟೀಕ್ ಹೈ…ಧಕ್ಕಾ-ಮುಕ್ಕಿ ಸೇ ಹಮ್ನೇ ಕುಚ್ ಹೋತಾ ನಹೀ ಹೈ..ಮಗರ್” (ನೋಡಿ, ಹೌದು ಅದು ಸಂಭವಿಸಿದೆ, ಅದು ಸಂಭವಿಸಿದೆ ಆದರೆ ಅದು ಸರಿ, ನಾವು ಗಲಾಟೆಯಿಂದ ವಿಚಲಿತರಾಗುವುದಿಲ್ಲ … ಆದರೆ …)

ರಾಹುಲ್ ಗಾಂಧಿ ಹೇಳಿಕೆಯ ವಿಡಿಯೋವನ್ನು ಡಿ. 19ರಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು “ರಾಹುಲ್ ಗಾಂಧಿಯೇ ತಾನು ತಳ್ಳಿದ್ದೇನೆ ಎಂದು ಒಪ್ಪಿಕೊಳ್ಳುತ್ತಿದ್ದಾರೆ ಮತ್ತು ತಳ್ಳುವುದರಿಂದ ಏನನ್ನೂ ಸಾಧಿಸಲಾಗುವುದಿಲ್ಲ ಎಂದು ನಾಚಿಕೆಯಿಲ್ಲದೆ ಹೇಳುತ್ತಿದ್ದಾರೆ. ಅವರ ತಳ್ಳುವಿಕೆಯಿಂದಾಗಿ, ಹಿರಿಯ ಸಂಸದರ ತಲೆಗೆ ಗಾಯವಾಗಿದೆ, ಇಬ್ಬರು ಸಂಸದರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಳ್ಳುವಿಕೆಯಿಂದ ಏನೂ ಆಗುವುದಿಲ್ಲ ಎಂದು ರಾಹುಲ್ ಜಿ ಹೇಳುತ್ತಿದ್ದಾರೆ. ದುರಹಂಕಾರ, ದಬ್ಬಾಳಿಕೆ ಮತ್ತು ಸರ್ವಾಧಿಕಾರವು ಗಾಂಧಿ ಕುಟುಂಬದ ರಕ್ತನಾಳಗಳಲ್ಲಿ ಓಡುತ್ತಿದೆ … ನಾಚಿಕೆಗೇಡಿನ ಸಂಗತಿ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದರು.

ಬಿಜೆಪಿ ಪಕ್ಷದ ಮಾಹಿತಿ ತಂತ್ರಜ್ಞಾನ (ಐಟಿ) ವಿಭಾಗದ ಉಸ್ತುವಾರಿಯಾಗಿರುವ ಅಮಿತ್ ಮಾಳವಿಯಾ ಅವರು ಡಿ.19ರಂದು ಎಕ್ಸ್‌ನಲ್ಲಿ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ಹಂಚಿಕೊಂಡಿದ್ದು, “ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರ ಮೇಲೆ ಹಲ್ಲೆ ಮಾಡಿರುವುದಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕ್ಯಾಮರಾ ಮುಂದೆ ಒಪ್ಪಿಕೊಂಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಬಿಜೆಪಿಯ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೂಡ ಡಿ.19ರಂದು ಎಕ್ಸ್‌ನ ವಿಡಿಯೋ ಹಂಚಿಕೊಂಡು, “ಬಿಜೆಪಿ ಸಂಸದರ ಮೇಲೆ ದೌರ್ಜನ್ಯ ನಡೆಸಿರುವುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಇದೇ ಪ್ರತಿಪಾದನೆಯೊಂದಿಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನವಾಲಾ, ಪಕ್ಷದ ಗುಜರಾತ್ ಘಟಕದ ಮಾಧ್ಯಮ ವಿಭಾಗದ ಸಹ-ಉಸ್ತುವಾರಿ ಝುಬಿನ್ ಅಶಾರ ಮತ್ತು ಬಿಜೆಪಿ ಅಸ್ಸಾ ರಾಜ್ಯ ಘಟಕದ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ಹಂಚಿಕೊಳ್ಳಲಾಗಿತ್ತು.

ಈ ಹಿಂದೆ ಹಲವಾರು ಕೋಮುದ್ವೇಷದ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲಪಂಥೀಯ ಎಕ್ಸ್ ಬಳಕೆದಾರರಾದ ಮಿ.ಸಿನ್ಹಾ ಕೂಡ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ನಾಯಕರು ಹಂಚಿಕೊಂಡ ಬಳಿಕ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು. ಹಾಗಾಗಿ, ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿದ್ದ ವಿಡಿಯೊಂದರ ಒಂದು ಭಾಗ (ಕ್ಲಿಪ್) ಎಂದು ಗೊತ್ತಾಗಿದೆ.

ಎಎನ್‌ಐ ಹಂಚಿಕೊಂಡಿದ್ದ ಸಂಪೂರ್ಣ ವಿಡಿಯೋ ಕೆಳಗಿದೆ…

ಎಎನ್‌ಐ ಹಂಚಿಕೊಂಡಿದ್ದ ವಿಡಿಯೋವನ್ನು ನಾವು ಸಂಪೂರ್ಣ ವೀಕ್ಷಿಸಿದ್ದೇವೆ. ಈ ವೇಳೆ ನಮಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಿದೆ.

ರಾಹುಲ್ ಗಾಂಧಿಯವರು ಸಂಸತ್ ಬಳಿ ನಡೆದ ಘರ್ಷಣೆಯ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ, ವರದಿಗಾರರೊಬ್ಬರು “ಖರ್ಗೆ ಜಿ ಕೆ ಸಾತ್ ಧಕ್ಕಾ-ಮುಕ್ಕಿ ಹುವಾ ಹೈ?” (ಖರ್ಗೆಯವರನ್ನೂ ತಳ್ಳಲಾಗಿದೆಯೇ?) ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ “ಹಾನ್ ಕಿಯಾ ಹೈ, ಕಿಯಾ ಹೈ, ಮಗರ್ ಟೀಕ್ ಹೈ…ಧಕ್ಕಾ-ಮುಕ್ಕಾ ಸೇ ಹಮ್ನೇ ಕುಚ್ ಹೋತಾ ನಹೀ ಹೈ..”(ಹೌದು, ಅದು ಸಂಭವಿಸಿದೆ, ಅದು ಸಂಭವಿದೆ, ಆದರೂ, ಪರವಾಗಿಲ್ಲ..ತಳ್ಳಾಟ ಮತ್ತು ನೂಕಾಟ ನಮ್ಮ ಮೇಲೆ ಯಾವುದೇ ಪರಣಾಮ ಬಿರುವುದಿಲ್ಲ ) ಎಂದು ಹೇಳಿದ್ದಾರೆ.

ಎಎನ್‌ಐ ಹಂಚಿಕೊಂಡಿದ್ದ ವಿಡಿಯೋ ಜೊತೆಗೆ ರಾಹುಲ್ ಗಾಂಧಿಯ ಹೇಳಿಕೆಯನ್ನು ಅಕ್ಷರ ರೂಪದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿತ್ತು. ಅದರಲ್ಲಿ(yes, this happend (ಹೌದು, ಅದು ಸಂಭವಿಸಿದೆ (ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಲಾಗಿದೆ) ಎಂದು ಎಎನ್‌ಐ ಸ್ಪಷ್ಟವಾಗಿ ಉಲ್ಲೇಖಿಸಿದೆ.

ಎಎನ್‌ಐ ಇದೇ ವಿಷಯದಲ್ಲಿ ಪ್ರಕಟಿಸಿರುವ ಮತ್ತೊಂದು ವಿಸ್ಕೃತ ವರದಿಯಲ್ಲೂ ಇದೇ ಸಾಲುಗಳನ್ನು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಮಾಧ್ಯಮದವರು ಕೇಳಿದಾಗ “ಹೌದು, ಅದು ಸಂಭವಿಸಿದೆ ಅಥವಾ ಅಗಿದೆ. ಆದರೆ, ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದರು. ಅಂದರೆ, ಮಲ್ಲಿಕಾರ್ಜುನ ಖರ್ಗೆಯವರನ್ನು ತಳ್ಳಲಾಗಿದೆಯಾ? ಎಂದು ವರದಿಗಾರರು ಕೇಳಿದ್ದಕ್ಕೆ ” ಹೌದು, ತಳ್ಳಲಾಗಿದೆ. ಆದರೆ, ಅದರ ಬಗ್ಗೆ ನಾವು ತಲೆ ಕೆಡಸಿಕೊಳ್ಳುವುದಿಲ್ಲ ಅಥವಾ ಅದು ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ರಾಹುಲ್ ಗಾಂಧಿ ಉತ್ತರಿಸಿದ್ದಾರೆ. ಅಲ್ಲದೆ, ಬಿಜೆಪಿ ಸಂಸದರನ್ನು ತಳ್ಳಿರುವುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿರುವುದಲ್ಲ. ಬಿಜೆಪಿ ಸಂಸದರು ಎಎನ್‌ಐ ಪೋಸ್ಟ್ ಮಾಡಿದ್ದ ವಿಡಿಯೋವನ್ನು ಅರ್ಧ ಮಾತ್ರ ಹಂಚಿಕೊಂಡು ಸುಳ್ಳು ಪ್ರತಿಪಾದನೆ ಮಾಡಿದ್ದಾರೆ.

ಇದನ್ನೂ ಓದಿ : FACT CHECK : ಅಜ್ಮೀರ್ ದರ್ಗಾ ವಿರುದ್ಧ ಪಂಜಿನ ಮೆರವಣಿಗೆ ವೇಳೆ ಬೆಂಕಿ ಅವಘಡ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...