Homeಮುಖಪುಟ10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

- Advertisement -
- Advertisement -

ಕಳೆದ 10 ವರ್ಷಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿಲೋಮೀಟರ್ ಅರಣ್ಯ ನಾಶವಾಗಿದೆ ಎಂದು ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌) -2023 ಹೇಳಿದೆ.

ಭಾರತೀಯ ಅರಣ್ಯ ಸಮೀಕ್ಷೆ (ಐಎಫ್‌ಎಸ್‌)ಯ ಭಾಗವಾಗಿ ಸಿದ್ದಪಡಿಸಲಾದ ವರದಿಯನ್ನು ಶನಿವಾರ (ಡಿ.21) ಉತ್ತರಾಖಂಡದ ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಭೂಪೇಂದರ್ ಯಾದವ್ ಬಿಡುಗಡೆ ಮಾಡಿದರು.

PC : pib.gov.in

ವರದಿಯಲ್ಲಿ, ಕಳೆದ 10 ವರ್ಷದ ಅವಧಿಯಲ್ಲಿ ಪಶ್ಚಿಮ ಘಟ್ಟದಲ್ಲಿ ಅತ್ಯಂತ ದಟ್ಟಾರಣ್ಯಗಳು 3,465.12 ಚ.ಕಿ.ಮೀಗಳಷ್ಟು ಹೆಚ್ಚಾದರೆ, ಮಧ್ಯಮ ದಟ್ಟಾರಣ್ಯಗಳು ಮತ್ತು ತೆರೆದ ಅರಣ್ಯಗಳು ಕ್ರಮವಾಗಿ 1,043.23 ಚ.ಕಿ.ಮೀ ಮತ್ತು 2,480.11 ಚ.ಕಿ.ಮೀ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಆರು ರಾಜ್ಯಗಳ 45 ಘಟ್ಟ ಜಿಲ್ಲೆಗಳ ಪೈಕಿ ಮಧ್ಯಮ ದಟ್ಟಾರಣ್ಯ ಹಾಗೂ ತೆರೆದ ಅರಣ್ಯ ಹೊಂದಿದ 25 ಜಿಲ್ಲೆಗಳು ಅರಣ್ಯ ನಾಶಕ್ಕೆ ಸಾಕ್ಷಿಯಾಗಿವೆ. ಗರಿಷ್ಠ ಪ್ರಮಾಣದಲ್ಲಿ ಅರಣ್ಯ ಪ್ರದೇಶವನ್ನು ಕಳೆದುಕೊಂಡಿರುವ ಪ್ರದೇಶಗಳಾಗಿ ತಮಿಳುನಾಡಿನ ನೀಲಗಿರಿ (123 ಚ.ಕಿ.ಮೀಗಿಂತ ಹೆಚ್ಚು), ಕೇರಳದ ಇಡುಕ್ಕಿ (98 ಚ.ಕಿ.ಮೀ), ಮಹಾರಾಷ್ಟ್ರದ ಪುಣೆ (83 ಚ.ಕಿ.ಮೀ), ಹಾಗೂ ಕರ್ನಾಟಕದ ಶಿವಮೊಗ್ಗ ಜಿಲ್ಲೆಗಳನ್ನು (74.5 ಚ.ಕಿ.ಮೀ) ಗುರುತಿಸಲಾಗಿದೆ.

ಪ್ರಸ್ತುತ ಅಂದಾಜಿನ ಪ್ರಕಾರ, ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು 827,357 ಚದರ ಕಿ.ಮೀ ಇದೆ. ಇದು ದೇಶದ ಭೌಗೋಳಿಕ ಪ್ರದೇಶದ ಶೇಕಡಾ 25.17 ಆಗಿದೆ. ಅರಣ್ಯ ಪ್ರದೇಶವು ಸುಮಾರು 715,343 ಚದರ ಕಿ.ಮೀ (21.76%) ವಿಸ್ತೀರ್ಣವನ್ನು ಹೊಂದಿದೆ. ಮರಗಳ ಹೊದಿಕೆಯು 112,014 ಚದರ ಕಿ.ಮೀ (3.41%) ವಿಸ್ತೀರ್ಣವನ್ನು ಆವರಿಸಿದೆ.

2021ಕ್ಕೆ ಹೋಲಿಸಿದರೆ, ದೇಶದ ಒಟ್ಟು ಅರಣ್ಯ ಮತ್ತು ಮರಗಳ ಹೊದಿಕೆಯಲ್ಲಿ 1,445 ಚದರ ಕಿ.ಮೀ ಹೆಚ್ಚಳವಾಗಿದೆ. ಮಹಾರಾಷ್ಟ್ರ (65,383 ಚದರ ಕಿ.ಮೀ) ಅತಿದೊಡ್ಡ ಅರಣ್ಯ ಮತ್ತು ಮರಗಳನ್ನು ಹೊಂದಿರುವ ಮೊದಲ ಮೂರು ರಾಜ್ಯಗಳಲ್ಲಿ ಒಂದಾಗಿದೆ ಎಂದು ಐಎಸ್‌ಎಫ್‌ಆರ್‌ ಎತ್ತಿ ತೋರಿಸಿದೆ.

ವರದಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ (WGESA) ಅರಣ್ಯ ವ್ಯಾಪ್ತಿಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದೆ. ಪಶ್ಚಿಮಘಟ್ಟ ಭಾರತದ ಅತ್ಯಂತ ಅಮೂಲ್ಯ ಜೀವವೈವಿಧ್ಯದ ತಾಣವಾಗಿದೆ. ಇದು ಗೋವಾ, ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡು ಈ ಆರು ರಾಜ್ಯಗಳ 45 ಜಿಲ್ಲೆಗಳು ಆವರಿಸಿದೆ.

ಭಾರತೀಯ ರಾಜ್ಯ ಅರಣ್ಯ ವರದಿ (ಐಎಸ್‌ಎಫ್‌ಆರ್‌)

1987ರಿಂದ ಎರಡು ವರ್ಷಕೊಮ್ಮೆ ಭಾರತೀಯ ಅರಣ್ಯ ಸಮೀಕ್ಷೆ(ಎಫ್‌ಎಸ್‌ಐ) ವತಿಯಿಂದ ಭಾರತೀಯ ರಾಜ್ಯ ಅರಣ್ಯ ವರದಿ ( ಐಎಸ್‌ಎಫ್‌ಆರ್‌) ಪ್ರಕಟಿಸಲಾಗುತ್ತಿದೆ. ಎಫ್‌ಎಸ್‌ಐ ರಿಮೋಟ್ ಸೆನ್ಸಿಂಗ್‌ನ ವ್ಯಾಖ್ಯಾನದ ಆಧಾರದ ಮೇಲೆ ದೇಶದ ಅರಣ್ಯ ಮತ್ತು ಮರದ ಸಂಪನ್ಮೂಲಗಳ ಆಳವಾದ ಮೌಲ್ಯಮಾಪನವನ್ನು ನಡೆಸುತ್ತದೆ. ಉಪಗ್ರಹ ಡೇಟಾ ಮತ್ತು ಕ್ಷೇತ್ರ ಆಧಾರಿತ ರಾಷ್ಟ್ರೀಯ ಅರಣ್ಯ ದಾಸ್ತಾನು (ಎನ್‌ಎಫ್‌ಐಐ) ಫಲಿತಾಂಶಗಳನ್ನು ಐಎಸ್‌ಎಫ್‌ಆರ್‌ನಲ್ಲಿ ಪ್ರಕಟಿಸಲಾಗುತ್ತದೆ.

ಈ ಬಾರಿ ಪ್ರಕಟಿಸಿರುವುದು 18ನೇ ಐಎಸ್‌ಎಫ್‌ಆರ್‌ ಆಗಿದೆ. ಇದು ಭಾರತದ ಅರಣ್ಯ ಪ್ರದೇಶ, ಮರಗಳ ಹೊದಿಕೆ, ಮ್ಯಾಂಗ್ರೋವ್ ಹೊದಿಕೆ, ಅರಣ್ಯ ಹೊದಿಕೆ ಹೆಚ್ಚಳ, ಭಾರತದ ಕಾಡುಗಳಲ್ಲಿನ ಇಂಗಾಲದ ಸಂಗ್ರಹ, ಅರಣ್ಯ ಬೆಂಕಿಯ ನಿದರ್ಶನಗಳು, ಕೃಷಿ ಅರಣ್ಯ ಇತ್ಯಾದಿಗಳ ಮಾಹಿತಿಯನ್ನು ಒಳಗೊಂಡಿದೆ.

ಇದನ್ನೂ ಓದಿ : ಚುನಾವಣಾ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶನ; ನಿಯಮವನ್ನೆ ಬದಲಾಯಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...