Homeಮುಖಪುಟ55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ (ಡಿ.21) ನಡೆದ 55ನೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ಸಭೆಯಲ್ಲಿ ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲಿನ ಜಿಎಸ್‌ಟಿ ಕಡಿತಗೊಳಿಸುವ ನಿರ್ಧಾರವನ್ನು ಮುಂದೂಡಲಾಗಿದೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಹಣಕಾಸು ಮಂತ್ರಿಗಳ ಉಪಸ್ಥಿತಿಯಲ್ಲಿ ರಾಜಸ್ಥಾನದಲ್ಲಿ ನಡೆದ ಸಭೆಯಲ್ಲಿ ವಿಮಾ ಕಂತಿನ ಮೇಲಿನ ತೆರಿಗೆ ಪರಿಷ್ಕರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ಹೆಚ್ಚಿನ ಚರ್ಚೆ ಹಾಗೂ ಪರಾಮರ್ಶೆ ನಡೆಸುವ ಅಗತ್ಯವಿದೆ ಎಂದು ಮಂಡಳಿ ಹೇಳಿದೆ.

ಸ್ವಿಗ್ಗಿ ಮತ್ತು ಝೊಮ್ಯಾಟೋದ ಆಹಾರ ವಿತರಣೆ ಮೇಲೆ ಪ್ರಸ್ತುತ ಶೇ.18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಇದನ್ನು ಶೇ.5ಕ್ಕೆ ಇಳಿಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿತ್ತು. ಆದರೆ, ಸದ್ಯಕ್ಕೆ ಇದನ್ನೂ ಮುಂದೂಡಲಾಗಿದೆ.

ಏವಿಯೇಷನ್ ​​ಟರ್ಬೈನ್ ಫ್ಯೂಯಲ್ (ಎಟಿಎಫ್) ಅಥವಾ ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವ ಕುರಿತ ಸಭೆಯ ಕಾರ್ಯಸೂಚಿಯಲ್ಲಿನ (ಸಭೆಯ ಅಜೆಂಡಾದ) ಮತ್ತೊಂದು ಮಹತ್ವದ ಅಂಶವನ್ನು ಮಂಡಳಿಯು ತಿರಸ್ಕರಿಸಿದೆ. ಪ್ರಸ್ತುತ, ಎಟಿಎಫ್ ಅಬಕಾರಿ ಸುಂಕ ಮತ್ತು ಮೌಲ್ಯವರ್ಧಿತ ತೆರಿಗೆಗೆ (ವ್ಯಾಟ್) ಒಳಪಟ್ಟಿದೆ. ಇದು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ. ಹೆಚ್ಚಿನ ವೆಚ್ಚಗಳು ಅಂತಿಮವಾಗಿ ಟಿಕೆಟ್ ದರಗಳ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಕೋರಲಾಗಿದೆ.

ರಾಜ್ಯಗಳ ಸಹಕಾರ ಬೇಕಿದೆ : ನಿರ್ಮಲಾ ಸೀತಾರಾಮನ್

ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ರಾಜ್ಯಗಳು ಒಪ್ಪಲು ಸಿದ್ದವಿಲ್ಲ. ಕೇಂದ್ರ ಸರ್ಕಾರವೊಂದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇವಿ ಮಾರಾಟ ತೆರಿಗೆ ಪರಿಷ್ಕರಣೆ

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಎಲೆಕ್ಟ್ರಾನಿಕ್ ವಾಹನಗಳ (ಇವಿ) ಮಾರಾಟ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ. ವಿದ್ಯುತ್ ಚಾಲಿತ ಹೊಸ ಕಾರುಗಳಿಗೆ ಶೇ.5ರಷ್ಟು ಜಿಎಸ್‌ಟಿ ವಿಧಿಸಲು ನಿರ್ಧರಿಸಲಾಗಿದೆ. ಆದರೆ, ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಅದರ ಮಾಲೀಕ ನೇರವಾಗಿ ಮಾರಾಟ ಮಾಡಿದರೆ ಜಿಎಸ್‌ಟಿ ಅನ್ವಯಿಸುವುದಿಲ್ಲ. ಯಾವುದಾದರು ಕಂಪನಿಯು ಸೆಕೆಂಡ್ ಹ್ಯಾಂಡ್ ಇವಿ ಮಾರಿದರೆ ಅಥವಾ ಮಾರಾಟಗಾರರು ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಮಾರ್ಪಡಿಸಿ ಮಾರಿದರೆ ಶೇ.18ರಷ್ಟು ಜಿಎಸ್‌ಟಿ ಅನ್ವಯವಾಗಲಿದೆ.

55ನೇ ಜಿಎಸ್‌ಟಿ ಸಭೆಯ ಇತರ ನಿರ್ಣಯಗಳು :

  • ಅಂತಿಮ ಬಳಕೆಯ ಹೊರತಾಗಿಯೂ, ಬಲವರ್ಧಿತ ಅಕ್ಕಿ ಕಾಳುಗಳ ಜಿಎಸ್‌ಟಿ ದರವನ್ನು ಶೇ. 18ರಿಂದ ರಿಂದ ಶೇ.5ಕ್ಕೆ ಇಳಿಸಲಾಗಿದೆ. ಆಹಾರ ಪದಾರ್ಥವನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ತಂದಿರುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ.
  • ಸರ್ಕಾರದ ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್‌) ಉಚಿತ ವಿತರಣೆಗಾಗಿ ಉದ್ದೇಶಿಸಲಾದ ಆಹಾರ ತಯಾರಿಕೆಯ ಮೇಲಿನ ರಿಯಾಯಿತಿಯ ಶೇ. 5 ಜಿಎಸ್‌ಟಿ ವಿನಾಯಿತಿ ಇರುತ್ತದೆ.
  • ಉಪ್ಪು ಮತ್ತು ಮಸಾಲೆಗಳೊಂದಿಗೆ ಅನ್ಪ್ಯಾಕ್ ಮಾಡಲಾದ ಪಾಪ್‌ಕಾರ್ನ್ ಶೇ. 5 ಜಿಎಸ್‌ಟಿಗೆ ಒಳಪಡಲಿದೆ. ಆದರೆ, ಪ್ರಿ-ಪ್ಯಾಕ್ ಮಾಡಿದ ಪಾಪ್‌ಕಾರ್ನ್‌ಗೆ ಶೇ.12 ಮತ್ತು ಕ್ಯಾರಮೆಲ್ ಲೇಪಿತ ಪಾಪ್‌ಕಾರ್ನ್‌ಗೆ ಶೇ. 18 ಜಿಎಸ್‌ಟಿ ಅನ್ವಯವಾಗಲಿದೆ.
  • ಸಾಲದ ಷರತ್ತುಗಳನ್ನು ಅನುಸರಿಸಲು ವಿಫಲವಾದಾಗ ಸಾಲಗಾರರಿಂದ ಬ್ಯಾಂಕ್‌ಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು (NBFC) ವಿಧಿಸುವ ಮತ್ತು ಸಂಗ್ರಹಿಸುವ ದಂಡದ ಶುಲ್ಕಗಳ ಮೇಲೆ ಯಾವುದೇ ಜಿಎಸ್‌ಟಿ ಇರುವುದಿಲ್ಲ.
  • ವಹಿವಾಟುಗಳಲ್ಲಿ 2,000 ರೂ.ಗಿಂತ ಕಡಿಮೆ ಮೊತ್ತವನ್ನು ಪ್ರಕ್ರಿಯೆಗೊಳಿಸುವ ಪಾವತಿ ಸಂಗ್ರಾಹಕರು ಜಿಎಸ್‌ಟಿ ವಿನಾಯಿತಿಗೆ ಅರ್ಹರಾಗಿರುತ್ತಾರೆ. ಆದರೆ, ಪಾವತಿ ಗೇಟ್‌ವೇಗಳು ಮತ್ತು ಫಿನ್‌ಟೆಕ್ ಸೇವೆಗಳನ್ನು ಇದರಲ್ಲಿ ಒಳಗೊಂಡಿಲ್ಲ.
  • ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...