Homeಮುಖಪುಟ55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ (ಡಿ.21) ನಡೆದ 55ನೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ಸಭೆಯಲ್ಲಿ ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲಿನ ಜಿಎಸ್‌ಟಿ ಕಡಿತಗೊಳಿಸುವ ನಿರ್ಧಾರವನ್ನು ಮುಂದೂಡಲಾಗಿದೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಹಣಕಾಸು ಮಂತ್ರಿಗಳ ಉಪಸ್ಥಿತಿಯಲ್ಲಿ ರಾಜಸ್ಥಾನದಲ್ಲಿ ನಡೆದ ಸಭೆಯಲ್ಲಿ ವಿಮಾ ಕಂತಿನ ಮೇಲಿನ ತೆರಿಗೆ ಪರಿಷ್ಕರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ಹೆಚ್ಚಿನ ಚರ್ಚೆ ಹಾಗೂ ಪರಾಮರ್ಶೆ ನಡೆಸುವ ಅಗತ್ಯವಿದೆ ಎಂದು ಮಂಡಳಿ ಹೇಳಿದೆ.

ಸ್ವಿಗ್ಗಿ ಮತ್ತು ಝೊಮ್ಯಾಟೋದ ಆಹಾರ ವಿತರಣೆ ಮೇಲೆ ಪ್ರಸ್ತುತ ಶೇ.18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಇದನ್ನು ಶೇ.5ಕ್ಕೆ ಇಳಿಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿತ್ತು. ಆದರೆ, ಸದ್ಯಕ್ಕೆ ಇದನ್ನೂ ಮುಂದೂಡಲಾಗಿದೆ.

ಏವಿಯೇಷನ್ ​​ಟರ್ಬೈನ್ ಫ್ಯೂಯಲ್ (ಎಟಿಎಫ್) ಅಥವಾ ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವ ಕುರಿತ ಸಭೆಯ ಕಾರ್ಯಸೂಚಿಯಲ್ಲಿನ (ಸಭೆಯ ಅಜೆಂಡಾದ) ಮತ್ತೊಂದು ಮಹತ್ವದ ಅಂಶವನ್ನು ಮಂಡಳಿಯು ತಿರಸ್ಕರಿಸಿದೆ. ಪ್ರಸ್ತುತ, ಎಟಿಎಫ್ ಅಬಕಾರಿ ಸುಂಕ ಮತ್ತು ಮೌಲ್ಯವರ್ಧಿತ ತೆರಿಗೆಗೆ (ವ್ಯಾಟ್) ಒಳಪಟ್ಟಿದೆ. ಇದು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ. ಹೆಚ್ಚಿನ ವೆಚ್ಚಗಳು ಅಂತಿಮವಾಗಿ ಟಿಕೆಟ್ ದರಗಳ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಕೋರಲಾಗಿದೆ.

ರಾಜ್ಯಗಳ ಸಹಕಾರ ಬೇಕಿದೆ : ನಿರ್ಮಲಾ ಸೀತಾರಾಮನ್

ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ರಾಜ್ಯಗಳು ಒಪ್ಪಲು ಸಿದ್ದವಿಲ್ಲ. ಕೇಂದ್ರ ಸರ್ಕಾರವೊಂದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇವಿ ಮಾರಾಟ ತೆರಿಗೆ ಪರಿಷ್ಕರಣೆ

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಎಲೆಕ್ಟ್ರಾನಿಕ್ ವಾಹನಗಳ (ಇವಿ) ಮಾರಾಟ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ. ವಿದ್ಯುತ್ ಚಾಲಿತ ಹೊಸ ಕಾರುಗಳಿಗೆ ಶೇ.5ರಷ್ಟು ಜಿಎಸ್‌ಟಿ ವಿಧಿಸಲು ನಿರ್ಧರಿಸಲಾಗಿದೆ. ಆದರೆ, ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಅದರ ಮಾಲೀಕ ನೇರವಾಗಿ ಮಾರಾಟ ಮಾಡಿದರೆ ಜಿಎಸ್‌ಟಿ ಅನ್ವಯಿಸುವುದಿಲ್ಲ. ಯಾವುದಾದರು ಕಂಪನಿಯು ಸೆಕೆಂಡ್ ಹ್ಯಾಂಡ್ ಇವಿ ಮಾರಿದರೆ ಅಥವಾ ಮಾರಾಟಗಾರರು ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಮಾರ್ಪಡಿಸಿ ಮಾರಿದರೆ ಶೇ.18ರಷ್ಟು ಜಿಎಸ್‌ಟಿ ಅನ್ವಯವಾಗಲಿದೆ.

55ನೇ ಜಿಎಸ್‌ಟಿ ಸಭೆಯ ಇತರ ನಿರ್ಣಯಗಳು :

  • ಅಂತಿಮ ಬಳಕೆಯ ಹೊರತಾಗಿಯೂ, ಬಲವರ್ಧಿತ ಅಕ್ಕಿ ಕಾಳುಗಳ ಜಿಎಸ್‌ಟಿ ದರವನ್ನು ಶೇ. 18ರಿಂದ ರಿಂದ ಶೇ.5ಕ್ಕೆ ಇಳಿಸಲಾಗಿದೆ. ಆಹಾರ ಪದಾರ್ಥವನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ತಂದಿರುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ.
  • ಸರ್ಕಾರದ ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್‌) ಉಚಿತ ವಿತರಣೆಗಾಗಿ ಉದ್ದೇಶಿಸಲಾದ ಆಹಾರ ತಯಾರಿಕೆಯ ಮೇಲಿನ ರಿಯಾಯಿತಿಯ ಶೇ. 5 ಜಿಎಸ್‌ಟಿ ವಿನಾಯಿತಿ ಇರುತ್ತದೆ.
  • ಉಪ್ಪು ಮತ್ತು ಮಸಾಲೆಗಳೊಂದಿಗೆ ಅನ್ಪ್ಯಾಕ್ ಮಾಡಲಾದ ಪಾಪ್‌ಕಾರ್ನ್ ಶೇ. 5 ಜಿಎಸ್‌ಟಿಗೆ ಒಳಪಡಲಿದೆ. ಆದರೆ, ಪ್ರಿ-ಪ್ಯಾಕ್ ಮಾಡಿದ ಪಾಪ್‌ಕಾರ್ನ್‌ಗೆ ಶೇ.12 ಮತ್ತು ಕ್ಯಾರಮೆಲ್ ಲೇಪಿತ ಪಾಪ್‌ಕಾರ್ನ್‌ಗೆ ಶೇ. 18 ಜಿಎಸ್‌ಟಿ ಅನ್ವಯವಾಗಲಿದೆ.
  • ಸಾಲದ ಷರತ್ತುಗಳನ್ನು ಅನುಸರಿಸಲು ವಿಫಲವಾದಾಗ ಸಾಲಗಾರರಿಂದ ಬ್ಯಾಂಕ್‌ಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು (NBFC) ವಿಧಿಸುವ ಮತ್ತು ಸಂಗ್ರಹಿಸುವ ದಂಡದ ಶುಲ್ಕಗಳ ಮೇಲೆ ಯಾವುದೇ ಜಿಎಸ್‌ಟಿ ಇರುವುದಿಲ್ಲ.
  • ವಹಿವಾಟುಗಳಲ್ಲಿ 2,000 ರೂ.ಗಿಂತ ಕಡಿಮೆ ಮೊತ್ತವನ್ನು ಪ್ರಕ್ರಿಯೆಗೊಳಿಸುವ ಪಾವತಿ ಸಂಗ್ರಾಹಕರು ಜಿಎಸ್‌ಟಿ ವಿನಾಯಿತಿಗೆ ಅರ್ಹರಾಗಿರುತ್ತಾರೆ. ಆದರೆ, ಪಾವತಿ ಗೇಟ್‌ವೇಗಳು ಮತ್ತು ಫಿನ್‌ಟೆಕ್ ಸೇವೆಗಳನ್ನು ಇದರಲ್ಲಿ ಒಳಗೊಂಡಿಲ್ಲ.
  • ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...