Homeಮುಖಪುಟ'ಪುಷ್ಪ-2' ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ...

‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

- Advertisement -
- Advertisement -

ಡಿಸೆಂಬರ್ 4ರಂದು ಪುಷ್ಪ 2 (Pushpa 2: The Rule)ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಮತ್ತು ನಟ ಅಲ್ಲು ಅರ್ಜುನ್ ನಡುವಿನ ವಾಗ್ಯುದ್ಧ ತಾರಕಕ್ಕೇರಿದೆ.

ತೆಲಂಗಾಣ ವಿಧಾನಸಭೆಯಲ್ಲಿ ಶನಿವಾರ (ಡಿ.21) ಮಾತನಾಡಿದ್ದ ಸಿಎಂ ರೇವಂತ್ ರೆಡ್ಡಿ ” ಕಾಲ್ತುಳಿತ ಸಂಭವಿಸಿದ ಬಗ್ಗೆ ಪೊಲೀಸರು ಮಾಹಿತಿ ನೀಡಿದರೂ ಅಲ್ಲು ಅರ್ಜುನ್ ಥಿಯೇಟರ್ ಬಿಟ್ಟು ಹೋಗಲು ನಿರಾಕರಿಸಿದ್ದರು” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಲ್ಲು ಅರ್ಜುನ್, “ಕಾಲ್ತುಳಿತ ದುರಂತ ನಡೆದು ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಗೊತ್ತಾಯಿತು” ಎಂದಿದ್ದಾರೆ.

“ಯಾವುದೇ ಪೊಲೀಸ್ ಬಂದು ನನಗೆ ಮಾಹಿತಿ ನೀಡಿಲ್ಲ. ಥಿಯೇಟರ್ ಆಡಳಿತದವರು ಬಂದು ಹೊರಗಡೆ ಭಾರೀ ಜನ ಸೇರಿದ್ದಾರೆ. ಹಾಗಾಗಿ, ತಾವು ದಯವಿಟ್ಟು ಇಲ್ಲಿಂದ ಹೋಗಿ ಎಂದರು. ನಾನು ತಕ್ಷಣ ಹೊರಟು ಬಂದೆ. ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಮಾಹಿತಿ ಗೊತ್ತಾಯಿತು” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

“ನಾನು ಥಿಯೇಟರ್‌ಗೆ ಭೇಟಿ ಕೊಡುವುದಕ್ಕೆ ಅನುಮತಿ ಇಲ್ಲ ಎಂದಿದ್ದರೆ ಪೊಲೀಸರು ತಿಳಿಸಬೇಕಿತ್ತು. ಕಾನೂನು ಪಾಲಿಸುವವನಾಗಿ ನಾನು ವಾಪಸ್ ಹೋಗುತ್ತಿದ್ದೆ” ಎಂದು ಅಲ್ಲು ಅರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 4ರಂದು ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ಅನ್ನು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಆಯೋಜಿಸಲಾಗಿತ್ತು. ಇಲ್ಲಿಗೆ ಅಲ್ಲು ಅರ್ಜುನ್ ಹಠಾತ್ ಭೇಟಿ ಕೊಟ್ಟಿದ್ದರಿಂದ ಭಾರೀ ಸಂಖ್ಯೆಯಲ್ಲಿ ಜನ ಸೇರಿ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಕಾಲ್ತುಳಿತ ಸಂಭವಿಸಿ ದಿಲ್‌ಸುಖ್ ನಗರ ನಿವಾಸಿ 35 ವರ್ಷದ ರೇವತಿ ಸಾವನ್ನಪ್ಪಿದ್ದಾರೆ. ಅವರ 8 ವರ್ಷದ ಮಗ ಶ್ರೀತೇಜಾ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಿಕಡ್‌ಪಲ್ಲಿ ಪೊಲೀಸರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುವಾಗ ಸಿಎಂ ರೇವಂತ್ ರೆಡ್ಡಿ,”ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸಂಧ್ಯಾ ಥಿಯೇಟರ್‌ಗೆ ಹೋಗಿ ಹೊರಗಡೆ ಭಾರೀ ಜನ ಸೇರಿ ಗದ್ದಲ ಉಂಟಾಗಿದೆ. ಇಲ್ಲಿಂದ ಹೊರಟು ಹೋಗಿ ಎಂದು ಅಲ್ಲು ಅರ್ಜುನ್‌ಗೆ ಮನವಿ ಮಾಡಿದ್ದರು. ಆದರೆ, ಅವರು ಸಿನಿಮಾ ಮುಗಿಯುವವರೆಗೆ ಹೋಗಲ್ಲ ಎಂದಿದ್ದಾರೆ. ಕೊನೆಗೆ ಡಿಸಿಪಿ ಹೋಗಿ ಬಂಧಿಸಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟ ಬಳಿಕವಷ್ಟೇ ಥಿಯೇಟರ್ ಬಿಟ್ಟು ಹೋಗಿದ್ದಾರೆ” ಎಂದು ಆರೋಪಿಸಿದ್ದರು.

ಎಐಎಂಐಎಂ ನಾಯಕ ಅಕ್ಬರುದ್ದೀನ್ ಓವೈಸಿ ಕೂಡ ಹೆಸರು ಉಲ್ಲೇಖಿಸದೆ ಪರೋಕ್ಷವಾಗಿ ಅಲ್ಲು ಅರ್ಜುನ್ ವಿರುದ್ದ ಕಿಡಿಕಾರಿದ್ದಾರೆ. “ಚಿತ್ರ ಈಗ ಹಿಟ್ ಆಗಬಹುದು” ಎಂದಿದ್ದಾರೆ.

ಕಾಲ್ತುಳಿತ ಸಂಭವಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ “ಚಿತ್ರ ಹಿಟ್ ಆಗಲಿದೆ” ಎಂದು ಹೇಳಿದ್ದಾಗಿ ಅಕ್ಬರುದ್ದೀನ್ ಓವೈಸಿ ಆರೋಪಿಸಿದ್ದಾರೆ.

” ಜನರು ಸಾಯುವಾಗ ನಾನು ಆ ರೀತಿಯ ಹೇಳಿಕೆಗಳನ್ನು ಕನಸಿನಲ್ಲೂ ಹೇಳುವವನಲ್ಲ. ನನ್ನ ವಿರುದ್ದ ಈ ರೀತಿಯ ಆರೋಪಗಳು ನನ್ನ ತೇಜೋವದೆ ಮಾಡುವ ಉದ್ದೇಶ ಹೊಂದಿದೆ. ಕಳೆದ 20 ವರ್ಷಗಳಲ್ಲಿ ಕಷ್ಟಪಟ್ಟು ಮೇಲೆ ಬಂದ ನಾನು ಈ ಹೆಸರು, ಗೌರವವನ್ನು ಗಳಿಸಿಕೊಂಡಿದ್ದೇನೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಮುಂದುರಿದು “ನಾನು ಯಾರನ್ನೂ ದೂಷಿಸುವುದಿಲ್ಲ. ನನ್ನ ಹೆಸರಿನಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಗಳ ಕುರಿತು ಸ್ಪಷ್ಟನೆ ನೀಡಿದ್ದೇನೆ” ಅಷ್ಟೆ ಎಂದಿದ್ದಾರೆ.

“ಮಹಿಳೆ ಸಾವನ್ನಪ್ಪಿದ ವಿಷಯ ತಿಳಿದು ಅವರ ಕುಟುಂಬವನ್ನು ಭೇಟಿ ಮಾಡಲು ನಾನು ನನ್ನ ಸಿಬ್ಬಂದಿಯನ್ನು ಕಳಿಸಿದ್ದೆ. ನನ್ನ ಮೇಲೆ ಆ ಕುಟುಂಬ ದೂರು ದಾಖಲಿಸಿದ್ದರಿಂದ ನಾನು ಹೋಗುವುದು ಕಾನೂನಾತ್ಮಕವಾಗಿ ತಪ್ಪಾಗುತ್ತದೆ ಎಂದು ಹೋಗಿರಲಿಲ್ಲ. ಗಾಯಗೊಂಡಿರುವ ಬಾಲಕನ ಬಗ್ಗೆ ನಾವು ಕಾಳಜಿವಹಿಸುತ್ತೇವೆ. ಮುಂದೆ ಅವರ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...