Homeಅಂತರಾಷ್ಟ್ರೀಯಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ - ಬಾಂಗ್ಲಾದೇಶ ಆರೋಪ

ಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ – ಬಾಂಗ್ಲಾದೇಶ ಆರೋಪ

- Advertisement -
- Advertisement -

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನ್ ಅವರ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆಯಲ್ಲಿ ಭಾರತದ ಪಾತ್ರವಿದೆ ಎಂದು ನಾಪತ್ತೆಗಳ ಕುರಿತು ತನಿಖೆ ನಡೆಸಲು ದೇಶದ ಮಧ್ಯಂತರ ಸರ್ಕಾರ ರಚಿಸಿರುವ ಆಯೋಗವು ಆರೋಪಿಸಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 16 ವರ್ಷಗಳ ಆಡಳಿತದಲ್ಲಿ ಇಂತಹ ಪ್ರಕರಣಗಳ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರವು ಆಯೋಗವೊಂದನ್ನು ರಚಿಸಿತ್ತು. ಶೇಖ್ ಹಸೀನಾ ಆಡಳಿತದಲ್ಲಿ

“ಬಾಂಗ್ಲಾದೇಶದ ಬಲವಂತದ ಕಣ್ಮರೆ ವ್ಯವಸ್ಥೆಯಲ್ಲಿ ಭಾರತೀಯರ ಕೈವಾಡವಿರುವುದು ಸಾರ್ವಜನಿಕ ದಾಖಲೆಯ ವಿಷಯವಾಗಿದೆ” ಎಂದು ಬಲವಂತದ ಕಣ್ಮರೆಯ ಕುರಿತ ತನಿಖಾ ಆಯೋಗ ಹೇಳಿದೆ ಎಂದು ಬಾಂಗ್ಲಾದೇಶದ ಸರ್ಕಾರಿ ಸುದ್ದಿ ಸಂಸ್ಥೆ ಹೇಳಿದೆ.

ಆಗಸ್ಟ್ 27 ರಂದು, ಢಾಕಾದ ಮಧ್ಯಂತರ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಮೈನುಲ್ ಇಸ್ಲಾಂ ಚೌಧರಿ ನೇತೃತ್ವದ ಐದು ಸದಸ್ಯರ ಆಯೋಗವನ್ನು ರಚಿಸಿ, ಶೇಖ್ ಹಸೀನಾ ಅವರ ಅಧಿಕಾರಾವಧಿಯಲ್ಲಿ ಭದ್ರತಾ ಪಡೆಗಳಿಂದ ನಡೆದ ಬಲವಂತದ ಕಣ್ಮರೆಗಳ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿತ್ತು. ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ಗುರುತಿಸಲು ಮತ್ತು ವಿವಿಧ ಗುಪ್ತಚರ ಮತ್ತು ಕಾನೂನು ಜಾರಿ ಏಜೆನ್ಸಿಗಳಿಂದ ಅವರು ಕಣ್ಮರೆಯಾದ ಕಾರಣಗಳನ್ನು ತನಿಖೆ ಮಾಡಲು ಆಯೋಗವನ್ನು ಕೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 14 ರಂದು ಆಯೋಗವು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರಿಗೆ ವರದಿಯನ್ನು ಸಲ್ಲಿಸಿದೆ. ಬಾಂಗ್ಲಾದೇಶ ಮತ್ತು ಭಾರತದ ನಡುವೆ “ಬಂಧಿತರ ವಿನಿಮಯ” ಪ್ರಕ್ರಿಯೆಯ ಬಗ್ಗೆ ಆಯೋಗವು ಗುಪ್ತಚರವನ್ನು ಕಂಡುಕೊಂಡಿದೆ ಎಂದು ಈ ವರದಿ ಹೇಳಿದೆ. ಬಾಂಗ್ಲಾದ ಕಾನೂನು ಜಾರಿ ವಲಯಗಳ ನಿರಂತರ ಸಲಹೆಯ ಮೇರೆಗೆ ಕೆಲವು ಕೈದಿಗಳು ಇನ್ನೂ ಭಾರತೀಯ ಜೈಲುಗಳಲ್ಲಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಶೇಖ್ ಹಸೀನಾ ಆಡಳಿತದಲ್ಲಿ

“ಭಾರತದಲ್ಲಿ ಬಂಧಿಯಾಗಿ ಜೈಲಿನಲ್ಲಿ ಇರಬಹುದಾದ ಯಾವುದೇ ಬಾಂಗ್ಲಾದೇಶದ ನಾಗರಿಕರನ್ನು ಗುರುತಿಸಲು ವಿದೇಶಾಂಗ ಮತ್ತು ಗೃಹ ಸಚಿವಾಲಯಗಳು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಬೇಕು ಎಂದು ನಾವು ಶಿಫಾರಸು ಮಾಡುತ್ತೇವೆ. ಬಾಂಗ್ಲಾದೇಶದ ಹೊರಗೆ ಇದನ್ನು ತನಿಖೆ ನಡೆಸಲು ಆಯೋಗಕ್ಕೆ ಅಧಿಕಾರವಿಲ್ಲ” ಎಂದು ತನಿಖಾ ಆಯೋಗದ ವರದಿ ಹೇಳಿದೆ.

ಅಷ್ಟೆ ಅಲ್ಲದೆ, ಆಯೋಗವು ಬಲವಂತದ ಕಣ್ಮರೆಯ ಎರಡು ಪ್ರಕರಣಗಳನ್ನು ವರದಿಯಲ್ಲಿ ಉಲ್ಲೇಖಿಸಿದೆ. ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಆವರಣದಿಂದ ಅಪಹರಣಕ್ಕೊಳಗಾಗಿ ನಂತರ ಭಾರತೀಯ ಜೈಲಿನಲ್ಲಿ ಸಿಕ್ಕಿದ್ದ ಶುಖ್ರಂಜನ್ ಬಾಲಿ ಹಾಗೂ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಕ್ಷದ ನಾಯಕ ಸಲಾವುದ್ದೀನ್ ಅಹ್ಮದ್ ಅವರ ನಾಪತ್ತೆ ಘಟನೆಯನ್ನು ಅದು ಉಲ್ಲೇಖಿಸಿದೆ. 2015 ರಲ್ಲಿ ಢಾಕಾದ ಉತ್ತರಾದಲ್ಲಿ ತಲೆಮರೆಸಿಕೊಂಡಿದ್ದ ಸಲಾವುದ್ದೀನ್ ಅಹ್ಮದ್ ಅವರನ್ನು ಭಾರತ-ಬಾಂಗ್ಲಾದೇಶ ಗಡಿಗೆ ಸಾಗಿಸಲಾಯಿತು ಮತ್ತು ಅಲ್ಲಿ ಅವರನ್ನು ಭಾರತದ ಕಡೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು ಎಂದು ವರದಿ ಉಲ್ಲೇಖಿಸಿದೆ.

ಔಪಚಾರಿಕ ಹಸ್ತಾಂತರ, ಮಾರುವೇಷದಲ್ಲಿ ಬಾಂಗ್ಲಾದೇಶದ ಭದ್ರತಾ ಸಿಬ್ಬಂದಿಯೊಂದಿಗೆ ಭಾರತದ ಭೂಪ್ರದೇಶದೊಳಗಿನ ಕಾರ್ಯಾಚರಣೆಗಳು ಎರಡು ಸರ್ಕಾರಗಳು ಮತ್ತು ಅವರ ಭದ್ರತಾ ಪಡೆಗಳ ನಡುವಿನ ಉನ್ನತ ಮಟ್ಟದ ಸಮನ್ವಯವನ್ನು ಸೂಚಿಸುತ್ತದೆ ಎಂದು ವರದಿ ಆರೋಪಿಸಿದೆ.

ಬಲವಂತದ ಕಣ್ಮರೆಗಳ ಬಗ್ಗೆ 1,676 ದೂರುಗಳನ್ನು ದಾಖಲಿಸಲಾಗಿದೆ ಎಂದು ಆಯೋಗವು ಹೇಳಿದ್ದು, ಈ ಪೈಕಿ 758 ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ಅದು ತಿಳಿಸಿದೆ. ಅದಾಗ್ಯೂ, ಬಾಂಗ್ಲಾದೇಶದಲ್ಲಿ ಬಲವಂತದ ಕಣ್ಮರೆಗಳ ಸಂಖ್ಯೆ 3,500 ದಾಟಿರಬಹುದು ಎಂದು ಅದು ಹೇಳಿದ್ದು, ಮಾನವ ಹಕ್ಕುಗಳ ದುರುಪಯೋಗದ ಆರೋಪ ಹೊತ್ತಿರುವ ಭಯೋತ್ಪಾದನಾ ವಿರೋಧಿ ಸಂಘಟನೆ ರಾಪಿಡ್ ಆಕ್ಷನ್ ಬೆಟಾಲಿಯನ್ ಅನ್ನು ವಿಸರ್ಜಿಸುವಂತೆ ವರದಿ ಶಿಫಾರಸು ಮಾಡಿದೆ.

ವರದಿ ಕುರಿತ ಹೇಳಿಕೆಯಲ್ಲಿ ಆಯೋಗದ ಅಧ್ಯಕ್ಷ ಚೌಧರಿ ಅವರು, “ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ರಕ್ಷಣಾ ಸಲಹೆಗಾರ, ಮೇಜರ್ ಜನರಲ್ (ನಿವೃತ್ತ) ತಾರಿಕ್ ಅಹ್ಮದ್ ಸಿದ್ದಿಕ್ ಸೇರಿದಂತೆ ಭದ್ರತಾ ಪಡೆಗಳ ಮತ್ತು ಅವರ ಸರ್ಕಾರದ ಕೆಲವು ಉನ್ನತ ಮಟ್ಟದ ಅಧಿಕಾರಿಗಳು ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಪ್ರಾಥಮಿಕವಾಗಿ ತೊಡಗಿಸಿಕೊಂಡಿದ್ದಾರೆ” ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅದಾಗ್ಯೂ, ಅವಾಮಿ ಲೀಗ್ ಸರ್ಕಾರವು ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂಬ ಆರೋಪವನ್ನು ಶೇಖ್ ಹಸೀನಾ ಈ ಹಿಂದೆ ಸತತವಾಗಿ ನಿರಾಕರಿಸಿದ್ದಾರೆ. ಹಸೀನಾ ರಾಜೀನಾಮೆ ನೀಡಿ ಆಗಸ್ಟ್ 5 ರಂದು ಭಾರತಕ್ಕೆ ಬಂದಿಳಿದ ನಂತರ ಆಗಸ್ಟ್ 8 ರಂದು ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಯೂನಸ್ ಅಧಿಕಾರ ವಹಿಸಿಕೊಂಡರು.

ಇದನ್ನೂ ಓದಿ: ‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...