Homeಮುಖಪುಟಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

ಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

- Advertisement -
- Advertisement -

ಭಾರತದ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳನ್ನು ಅಪರಾಧೀಕರಿಸುವ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 152 ಅನ್ನು ಕಾನೂನುಬದ್ಧ ಭಿನ್ನಾಭಿಪ್ರಾಯದ ವಿರುದ್ಧ ಅಸ್ತ್ರವಾಗಿ ಬಳಸಬಾರದು ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ.

ಬಿಎನ್‌ಎಸ್‌ ಸೆಕ್ಷನ್‌ನ ಮೂಲ ದೇಶದ್ರೋಹವನ್ನು ಅಪರಾಧೀಕರಿಸುವ ಬ್ರಿಟಿಷರು ಜಾರಿಗೆ ತಂದಿದ್ದ ಐಪಿಸಿ ಸೆಕ್ಷನ್‌ 124ಎರಲ್ಲಿ ಇದೆ ಎಂದು ನ್ಯಾ. ಅರುಣ್‌ ಮೋಂಗಾ ತಿಳಿಸಿದ್ದಾರೆ.

ತಮ್ಮ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 152 ಮತ್ತು ಸೆಕ್ಷನ್‌ 197(1)(ಸಿ) (ಆರೋಪಗಳು, ರಾಷ್ಟ್ರೀಯ ಏಕೀಕರಣಕ್ಕೆ ಪ್ರತಿಕೂಲವಾದ ಸಮರ್ಥನೆಗಳು) ಅಡಿ ದಾಖಲಿಸಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಸಿಖ್‌ ಬೋಧಕ ತೇಜೇಂದರ್ ಪಾಲ್ ಸಿಂಗ್ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅವಲೋಕನ ಮಾಡಿದೆ.

ಖಲಿಸ್ತಾನ ಪರ ನಾಯಕ ಮತ್ತು ಸಂಸದ ಅಮೃತಪಾಲ್ ಸಿಂಗ್ ಅವರಿಗೆ ಸಹಾನುಭೂತಿ ತೋರಿದ್ದ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ತೇಜೇಂದರ್‌ ಅವರ ವಿರುದ್ದ ಕಳೆದ ಜುಲೈನಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ದುರುದ್ದೇಶದಿಂದ ಮಾಡುವ ಕೃತ್ಯಗಳ ಮಾತ್ರವೇ ಬಿಎನ್‌ಎಸ್‌ ಸೆಕ್ಷನ್ 152ರ ವ್ಯಾಪ್ತಿಯಲ್ಲಿ ಬರುತ್ತವೆ. ಬಿಎನ್‌ಎಸ್‌ ಸೆಕ್ಷನ್ 152ಕ್ಕೆ ಇರುವ ವಿವರಣೆಯು ಸರ್ಕಾರದ ನೀತಿಗಳ ನ್ಯಾಯಸಮ್ಮತ ಟೀಕೆಗೆ ವಿನಾಯಿತಿ ನೀಡುವ ಮೂಲಕ ಅಗತ್ಯವಾದ ಸುರಕ್ಷತೆಯನ್ನು ಒದಗಿಸುತ್ತದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿಗೆ ಅನುಗುಣವಾಗಿ ಬಿಎನ್‌ಎಸ್‌ ಸೆಕ್ಷನ್ 152ನ್ನು ಎಚ್ಚರಿಕೆಯಿಂದ ಅನ್ವಯಿಸುವಂತೆ ನ್ಯಾಯಾಲಯ ಸೂಚಿಸಿದೆ. ರಚನಾತ್ಮಕ ಸಂವಾದ ಅಥವಾ ರಾಜಕೀಯ ಅಭಿಪ್ರಾಯ ಭೇದವನ್ನು ಹತ್ತಿಕ್ಕುವುದನ್ನು ತಪ್ಪಿಸುವುದಕ್ಕಾಗಿ ಕಾನೂನು ಜಾರಿ ಅಧಿಕಾರಿಗಳು ಸಂಯಮ ಮತ್ತು ವಿವೇಚನೆಯನ್ನು ಬಳಸಬೇಕು ಎಂದು ಪೀಠ ಕಿವಿಮಾತು ಹೇಳಿದೆ.

ಝುಬೈರ್ ವಿರುದ್ದ ಸೆಕ್ಷನ್ 152 ಅಡಿ ಆರೋಪ ಹೊರಿಸಿರುವ ಯುಪಿ ಪೊಲೀಸರು

ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ಅವರು ಯತಿ ನರಸಿಂಗಾನದ ಅವರ ಪ್ರಚೋದನಕಾರಿ ಭಾಷಣದ ವಿಡಿಯೋ ಹಂಚಿಕೊಂಡಿದ್ದಕ್ಕೆ ಉತ್ತರ ಪ್ರದೇಶ ಪೊಲೀಸರು ಬಿಎನ್‌ಎಸ್‌ ಸೆಕ್ಷನ್ 152 ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ) ಸೇರಿದಂತೆ ಪತ್ರಿಕಾ ಸಂಸ್ಥೆಗಳು, “ಈ ಸೆಕ್ಷನ್‌ ಸ್ವತಂತ್ರ ಚಿಂತಕರು ಮತ್ತು ಮಾಧ್ಯಮಗಳನ್ನು ಮೌನಗೊಳಿಸುವ ಸಾಮರ್ಥ್ಯ ಹೊಂದಿರುವುದರಿಂದ ಎಲ್ಲಾ ವಿವೇಕಯುತ ಮನಸ್ಸುಗಳು ಇದನ್ನು ವಿರೋಧಿಸುತ್ತಿವೆ. ದೇಶದ್ರೋಹದ ಕಾನೂನನ್ನು ದುರುಪಯೋಗಪಡಿಸಿಕೊಂಡ ಹಲವಾರು ಪ್ರಕರಣಗಳನ್ನು ನಾವು ಈ ಹಿಂದೆ ನೋಡಿದ್ದೇವೆ. ಬಿಎನ್ಎಸ್‌ ಸೆಕ್ಷನ್‌ 152ಕೂಡ ಅದೇ, ಆದರೆ ಹೊಸ ಅವತಾರದಲ್ಲಿದೆ ಎಂದು ನವೆಂಬರ್ 29ರಂದು ಹೊರಡಿಸಿದ್ದ ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ : ಚುನಾವಣಾ ಆಯೋಗದ ಸಾಂಸ್ಥಿಕ ಸಮಗ್ರತೆ ನಾಶಪಡಿಸುವುದು ಮೋದಿ ಸರ್ಕಾರದ ಪಿತೂರಿಯ ಭಾಗ: ಖರ್ಗೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...