Homeಮುಖಪುಟಅಂಬೇಡ್ಕರ್‌ಗೆ ಅಗೌರವ ತೋರಿದ ಕಾಂಗ್ರೆಸ್ ವಂಚನೆಯ ರಾಜಕಾರಣ ಮಾಡುತ್ತಿದೆ: ಮಾಯಾವತಿ

ಅಂಬೇಡ್ಕರ್‌ಗೆ ಅಗೌರವ ತೋರಿದ ಕಾಂಗ್ರೆಸ್ ವಂಚನೆಯ ರಾಜಕಾರಣ ಮಾಡುತ್ತಿದೆ: ಮಾಯಾವತಿ

- Advertisement -
- Advertisement -

ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಬಿ.ಆರ್. ಅಂಬೇಡ್ಕರ್ ಅವರಿಗೆ ಅಗೌರವ ತೋರಿದ್ದಾರೆ ಎಂದು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯ ಪ್ರಾಮಾಣಿಕತೆಯನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಭಾನುವಾರ ಪ್ರಶ್ನಿಸಿದ್ದಾರೆ. ದೇಶಕ್ಕಾಗಿ ಅಂಬೇಡ್ಕರ್ ನಡೆಸಿದ ಹೋರಾಟವನ್ನು ನಿರ್ಲಕ್ಷಿಸಿ ಅದನ್ನು ದುರ್ಬಲಗೊಳಿಸಿದ ಕಾಂಗ್ರೆಸ್ ಪಕ್ಷವು “ಶುದ್ಧ ವಂಚನೆ ಮತ್ತು ಸ್ವಾರ್ಥದ ರಾಜಕೀಯ” ದಲ್ಲಿ ತೊಡಗಿದೆ ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್‌ಗೆ ಅಗೌರವ

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು ತೆಗೆದುಕೊಳ್ಳುವಲ್ಲಿ ಆಡಳಿತ ಪಕ್ಷ ಮತ್ತು ಕಾಂಗ್ರೆಸ್ ಒಂದೇ ಎಂದು ಅವರು ಆರೋಪಿಸಿದ್ದಾರೆ. ಈ ನಡುವೆ ಕಾಂಗ್ರೆಸ್, ಅಂಬೇಡ್ಕರ್ ಅವರನ್ನು “ಅವಮಾನ” ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಾಸ್ತವದಲ್ಲಿ, ಬಾಬಾ ಸಾಹೇಬ್ ಸೇರಿದಂತೆ ಬಹುಜನ ಸಮಾಜದಲ್ಲಿ ಜನಿಸಿದ ಸಂತರು, ಗುರುಗಳು ಮತ್ತು ಮಹಾನ್ ವ್ಯಕ್ತಿಗಳಿಗೆ ಸಂಪೂರ್ಣ ಗೌರವ ಸಿಕ್ಕಿದ್ದ ಬಿಎಸ್‌ಪಿ ಸರ್ಕಾರ ಇದ್ದಾಗ ಮಾತ್ರ. ಇದನ್ನು ಈ ಜಾತಿವಾದಿ ಪಕ್ಷಗಳು ಅರಗಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಮಾಯಾವತಿ ಅವರು ಹೇಳಿದ್ದಾರೆ.

ಭಾನುವಾರ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಮಾಯಾವತಿ ಅವರು, “ಅತ್ಯಂತ ಪೂಜ್ಯ ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರನ್ನು ಸಂಸತ್ತಿನಲ್ಲಿ ಅಮಿತ್ ಶಾ ಅವರು ಅವಮಾನ ಮಾಡಿದ್ದಕ್ಕಾಗಿ ದೇಶಾದ್ಯಂತ ಜನರಲ್ಲಿ ಭಾರಿ ಆಕ್ರೋಶವಿದೆ. ಆದರೆ ಕಾಂಗ್ರೆಸ್ ಪಕ್ಷದ ದೇಶಕ್ಕಾಗಿ ಹೋರಾಟ ಮಾಡಿದ ಅವನ್ನು ಯಾವಾಗಲೂ ನಿರ್ಲಕ್ಷಿಸಿ ನೋಯಿಸುತ್ತಿದೆ. ಕಾಂಗ್ರೆಸ್‌ನದ್ದು ಶುದ್ಧ ವಂಚನೆ ಮತ್ತು ಸ್ವಾರ್ಥದ ರಾಜಕಾರಣ” ಎಂದು ಹೇಳಿದ್ದಾರೆ. ಅಂಬೇಡ್ಕರ್‌ಗೆ ಅಗೌರವ

“ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, “ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಅಮಿತ್ ಶಾ ಹೇಳಿದ್ದರು.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ| ‘ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು’ ಎಂದ ಲಾಲು ಪ್ರಸಾದ್

ಅಂಬೇಡ್ಕರ್‌ಗೆ ಅವಮಾನ| ‘ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು’ ಎಂದ ಲಾಲು ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...