Homeಮುಖಪುಟ`ಅಯೋಧ್ಯೆ ತೀರ್ಪು, ಯಾರದ್ದೋ ಸೋಲು-ಗೆಲುವು ಅಲ್ಲ': ನರೇಂದ್ರ ಮೋದಿ

`ಅಯೋಧ್ಯೆ ತೀರ್ಪು, ಯಾರದ್ದೋ ಸೋಲು-ಗೆಲುವು ಅಲ್ಲ’: ನರೇಂದ್ರ ಮೋದಿ

- Advertisement -
- Advertisement -

ಅಯೋಧ್ಯೆ ವಿವಾದಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ “ಸುಪ್ರೀಂ ಕೋರ್ಟಿನ ಈ ತೀರ್ಪು ಗಮನಾರ್ಹವಾದುದು, ಏಕೆಂದರೆ; ನ್ಯಾಯಾಂಗದ ಸರಿಯಾದ ಪ್ರಕ್ರಿಯೆಯ ಲಯದಲ್ಲಿ ಎಂಥಾ ವಿವಾದವನ್ನೂ ಸೌಹಾರ್ದಯುತವಾಗಿ ಬಗೆಹರಿಸಬಹುದು ಎಂಬುದನ್ನು ಇದು ಸಾಬೀತು ಮಾಡಿದೆ. ಇದು ನಮ್ಮ ನ್ಯಾಯಾಂಗ ವ್ಯವಸ್ಥೆಯ ಸ್ವಾಯತ್ತೆ, ಪಾರದರ್ಶಕತೆ ಮತ್ತು ದೂರದೃಷ್ಟಿತ್ವವನ್ನು ಮತ್ತೊಮ್ಮೆ ದೃಢಪಡಿಸಿದೆ. ಇದು ನ್ಯಾಯಾಂಗದ ಮುಂದೆ ಎಲ್ಲರೂ ಸಮಾನರು ಎಂಬುದನ್ನು ಸ್ಪಷ್ಟವಾಗಿ ಸಾಬೀತು ಮಾಡಿದೆ” ಎಂದಿದ್ದಾರೆ.

ಮತ್ತೊಂದು ಟ್ವೀಟಿನಲ್ಲಿ “ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ಅಯೋಧ್ಯ ವಿವಾದಕ್ಕೆ ಸಂಬಂಧಿಸಿದ ತನ್ನ ತೀರ್ಪು ಪ್ರಕಟಿಸಿದೆ. ಈ ತೀರ್ಪನ್ನು ಯಾರದ್ದೋ ಗೆಲುವು, ಮತ್ತ್ಯಾರದ್ದೋ ಸೋಲಿನಂತೆ ಗ್ರಹಿಸಬಾರದು. ಅದು ರಾಮಭಕ್ತಿಯೇ ಇರಲಿ, ರಹೀಮ ಭಕ್ತಿಯೇ ಇರಲಿ, ನಾವು ನಮ್ಮ ರಾಷ್ಟ್ರಭಕ್ತಿಯನ್ನು ಬಲಪಡಿಸುವುದು ಕಡ್ಡಾಯ. ಶಾಂತಿ ಮತ್ತು ಸೌಹಾರ್ದತೆ ಮೇಲುಗೈ ಸಾಧಿಸಲಿ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ಶಂಕಿತ ಮೂವರು ಭಾರತೀಯರ ಬಂಧನ

0
ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಕೆನಡಾದಲ್ಲಿ ಕೆಲ ತಿಂಗಳ ಹಿಂದೆಯೇ ಈ ಶಂಕಿತರನ್ನು ಪೊಲೀಸರು ಗುರುತಿಸಿದ್ದು,...