Homeಮುಖಪುಟಕೇರಳ | ಶಾಲೆಯ ಕ್ರಿಸ್‌ಮಸ್ ಆಚರಣೆಗೆ ಅಡ್ಡಿ; ಬಿಜೆಪಿ ಪರ ಸಂಘಟನೆ ವಿಎಚ್‌ಪಿ, ಭಜರಂಗದಳ ದುಷ್ಕರ್ಮಿಗಳ...

ಕೇರಳ | ಶಾಲೆಯ ಕ್ರಿಸ್‌ಮಸ್ ಆಚರಣೆಗೆ ಅಡ್ಡಿ; ಬಿಜೆಪಿ ಪರ ಸಂಘಟನೆ ವಿಎಚ್‌ಪಿ, ಭಜರಂಗದಳ ದುಷ್ಕರ್ಮಿಗಳ ಬಂಧನ

- Advertisement -
- Advertisement -

ಕೇರಳದ ಪಾಲಕ್ಕಾಡ್‌ನ ನಲ್ಲೆಪಿಲ್ಲಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಲು ಯತ್ನಿಸಿದ ಬಿಜೆಪಿ ಪರ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳದ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ಕೇರಳ

ಕ್ರಿಸ್‌ಮಸ್ ಹಬ್ಬವನ್ನಷ್ಟೇ ಏಕೆ ಆಚರಿಸುತ್ತಿದ್ದಾರೆ ಎಂದು ಪ್ರಶ್ನಿಸಿ ಮೂವರು ದುಷ್ಕರ್ಮಿಗಳು ನಲ್ಲೇಪಿಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ವರದಿ ಹೇಳಿದೆ. ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೂವರು ದುಷ್ಕರ್ಮಿಗಳನ್ನು ನಲ್ಲೆಪಿಲ್ಲಿ ನಿವಾಸಿಗಳಾದ ವಡಕ್ಕುಂತಾರ ಕೆ ಅನಿಲ್‌ಕುಮಾರ್, ಮನಂಕುಜಿ ಸುಶಾಸನನ್ ಮತ್ತು ತೆಕ್ಕುಮುರಿ ವೇಲಾಯುಧನ್ ಎಂದು ಗುರುತಿಸಲಾಗಿದೆ. ಬಂಧಿತರ ವಿರುದ್ಧ ಪೊಲೀಸರು ಜಾಮೀನು ರಹಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಪಾಲಕ್ಕಾಡ್‌ನ ನಲ್ಲೆಪಿಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ದುಷ್ಕರ್ಮಿಗಳು ಶಾಲೆಯ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕ್ರಿಸ್‌ಮಸ್ ಕ್ಯಾರೋಲ್‌ಗಾಗಿ ಧರಿಸಿದ್ದ ಉಡುಪಿನ ಬಗ್ಗೆ ಕೂಡಾ ದುಷ್ಕರ್ಮಿಗಳು ಪ್ರಶ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಎದುರೇ ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ದುಷ್ಕರ್ಮಿ ಕೆ. ಅನಿಲ್‌ಕುಮಾರ್‌ ಬಿಜೆಪಿ ಪರ ಸಂಘಟನೆಯಾದ ವಿಎಚ್‌ಪಿಯ ಜಿಲ್ಲಾ ಕಾರ್ಯದರ್ಶಿಯಾಗಿದ್ದು, ವಿ.ಸುಶಾಸನನ್‌ ಭಜರಂಗದಳ ಜಿಲ್ಲಾ ಸಂಯೋಜಕನಾಗಿದ್ದಾನೆ. ಮತ್ತೊಬ್ಬ ದುಷ್ಕರ್ಮಿ ಕೆ.ವೇಲಾಯುಧನ್‌ ವಿಎಚ್‌ಪಿಯ ಪಂಚಾಯಿತಿ ಸಮಿತಿ ಅಧ್ಯಕ್ಷನಾಗಿದ್ದಾನೆ.

“ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಬೆದರಿಕೆ ಹಾಕಿರುವ ಆರೋಪದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ಚಿತ್ತೂರು ಪೊಲೀಸ್ ಠಾಣೆಯ ಎಸ್‌ಎಚ್‌ಒ ಕೆ. ಮ್ಯಾಥ್ಯೂ ತಿಳಿಸಿದ್ದಾರೆ.

ಕೇರಳದಲ್ಲಿ ಕ್ರಿಶ್ಚಿಯನ್ ಸಮುದಾಯದ ಮತವನ್ನು ಗಳಿಸಲು ಬಿಜೆಪಿ ನಡೆಸುತ್ತಿರುವ ನಾನಾ ಕಸರತ್ತುಗಳ ನಡುವೆ ಈ ಘಟನೆ ನಡೆದಿದೆ. ಅದಾಗ್ಯೂ, ಘಟನೆ ಬಗ್ಗೆ ಮತ್ತು ತಮ್ಮ ಬೆಂಬಲಿಗ ಸಂಘಟನೆಗಳ ದುಷ್ಕರ್ಮಿಗಳ ಬಗ್ಗೆ ರಾಜ್ಯ ಬಿಜೆಪಿಯ ನಾಯಕತ್ವವು ಮೌನ ವಹಿಸಿದೆ.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...