ಕೇರಳದ ಪಾಲಕ್ಕಾಡ್ನ ನಲ್ಲೆಪಿಲ್ಲಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿಪಡಿಸಲು ಯತ್ನಿಸಿದ ಬಿಜೆಪಿ ಪರ ಸಂಘಟನೆಗಳಾದ ವಿಎಚ್ಪಿ ಮತ್ತು ಬಜರಂಗದಳದ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ಕೇರಳ
ಕ್ರಿಸ್ಮಸ್ ಹಬ್ಬವನ್ನಷ್ಟೇ ಏಕೆ ಆಚರಿಸುತ್ತಿದ್ದಾರೆ ಎಂದು ಪ್ರಶ್ನಿಸಿ ಮೂವರು ದುಷ್ಕರ್ಮಿಗಳು ನಲ್ಲೇಪಿಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ವರದಿ ಹೇಳಿದೆ. ಕೇರಳ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮೂವರು ದುಷ್ಕರ್ಮಿಗಳನ್ನು ನಲ್ಲೆಪಿಲ್ಲಿ ನಿವಾಸಿಗಳಾದ ವಡಕ್ಕುಂತಾರ ಕೆ ಅನಿಲ್ಕುಮಾರ್, ಮನಂಕುಜಿ ಸುಶಾಸನನ್ ಮತ್ತು ತೆಕ್ಕುಮುರಿ ವೇಲಾಯುಧನ್ ಎಂದು ಗುರುತಿಸಲಾಗಿದೆ. ಬಂಧಿತರ ವಿರುದ್ಧ ಪೊಲೀಸರು ಜಾಮೀನು ರಹಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಪಾಲಕ್ಕಾಡ್ನ ನಲ್ಲೆಪಿಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ದುಷ್ಕರ್ಮಿಗಳು ಶಾಲೆಯ ಕ್ರಿಸ್ಮಸ್ ಆಚರಣೆಗೆ ಅಡ್ಡಿಪಡಿಸಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕ್ರಿಸ್ಮಸ್ ಕ್ಯಾರೋಲ್ಗಾಗಿ ಧರಿಸಿದ್ದ ಉಡುಪಿನ ಬಗ್ಗೆ ಕೂಡಾ ದುಷ್ಕರ್ಮಿಗಳು ಪ್ರಶ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಎದುರೇ ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ದುಷ್ಕರ್ಮಿ ಕೆ. ಅನಿಲ್ಕುಮಾರ್ ಬಿಜೆಪಿ ಪರ ಸಂಘಟನೆಯಾದ ವಿಎಚ್ಪಿಯ ಜಿಲ್ಲಾ ಕಾರ್ಯದರ್ಶಿಯಾಗಿದ್ದು, ವಿ.ಸುಶಾಸನನ್ ಭಜರಂಗದಳ ಜಿಲ್ಲಾ ಸಂಯೋಜಕನಾಗಿದ್ದಾನೆ. ಮತ್ತೊಬ್ಬ ದುಷ್ಕರ್ಮಿ ಕೆ.ವೇಲಾಯುಧನ್ ವಿಎಚ್ಪಿಯ ಪಂಚಾಯಿತಿ ಸಮಿತಿ ಅಧ್ಯಕ್ಷನಾಗಿದ್ದಾನೆ.
“ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಬೆದರಿಕೆ ಹಾಕಿರುವ ಆರೋಪದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ಚಿತ್ತೂರು ಪೊಲೀಸ್ ಠಾಣೆಯ ಎಸ್ಎಚ್ಒ ಕೆ. ಮ್ಯಾಥ್ಯೂ ತಿಳಿಸಿದ್ದಾರೆ.
ಕೇರಳದಲ್ಲಿ ಕ್ರಿಶ್ಚಿಯನ್ ಸಮುದಾಯದ ಮತವನ್ನು ಗಳಿಸಲು ಬಿಜೆಪಿ ನಡೆಸುತ್ತಿರುವ ನಾನಾ ಕಸರತ್ತುಗಳ ನಡುವೆ ಈ ಘಟನೆ ನಡೆದಿದೆ. ಅದಾಗ್ಯೂ, ಘಟನೆ ಬಗ್ಗೆ ಮತ್ತು ತಮ್ಮ ಬೆಂಬಲಿಗ ಸಂಘಟನೆಗಳ ದುಷ್ಕರ್ಮಿಗಳ ಬಗ್ಗೆ ರಾಜ್ಯ ಬಿಜೆಪಿಯ ನಾಯಕತ್ವವು ಮೌನ ವಹಿಸಿದೆ.
ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ
ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ


