Homeಮುಖಪುಟನಿತೀಶ್, ಮೋದಿ ನೇತೃತ್ವದಲ್ಲಿ ಬಿಹಾರ ಚುನಾವಣೆ ಎದುರಿಸುತ್ತೇವೆ - ಬಿಜೆಪಿ

ನಿತೀಶ್, ಮೋದಿ ನೇತೃತ್ವದಲ್ಲಿ ಬಿಹಾರ ಚುನಾವಣೆ ಎದುರಿಸುತ್ತೇವೆ – ಬಿಜೆಪಿ

- Advertisement -
- Advertisement -

ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ವರ್ಷ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಸ್ಪರ್ಧಿಸಲಿದೆ ಎಂದು ಬಿಜೆಪಿ ನಾಯಕ, ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಭಾನುವಾರ ಹೇಳಿದ್ದಾರೆ. ”ಇದರಲ್ಲಿ ಯಾವುದೇ ಗೊಂದಲ ಬೇಡ. ಸಿಎಂ ನಿತೀಶ್ ಕುಮಾರ್ ಮತ್ತು ಪಿಎಂ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಎನ್‌ಡಿಎ ಮತ್ತೊಮ್ಮೆ ಜನಾದೇಶವನ್ನು ಪಡೆಯಲಿದೆ” ಎಂದು ಅವರು ಹೇಳಿದ್ದಾರೆ. ಬಿಹಾರ ಚುನಾವಣೆಯನ್ನು

ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2025 ರ ರಾಜ್ಯ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರನ್ನು ಮೈತ್ರಿಕೂಟದ ನಾಯಕನಾಗಿ ಪ್ರಕಟಿಸುವ ಬಗ್ಗೆಗಿನ ಊಹಾಪೋಹಗಳಿಗೆ ಅವರು ಪ್ರತಿಕ್ರಿಯಿಸಿದ್ದಾರೆ. ಅದಕ್ಕೂ ಮುನ್ನ, ಮುಂಬರುವ ಚುನಾವಣೆಯಲ್ಲಿ ನಿತೀಶ್ ಅವರ ಪ್ರಮುಖ ಪಾತ್ರದ ಬಗ್ಗೆ ಜೆಡಿಯು ಭಾನುವಾರ ತನ್ನ ನಿಲುವನ್ನು ಪುನರುಚ್ಚರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಮಹಾರಾಷ್ಟ್ರದಲ್ಲಿ ಉತ್ತಮ ಯಶಸ್ಸನ್ನು ಸಾಧಿಸಿದಂತೆ ಬಿಹಾರಲ್ಲಿ ಕೂಡಾ ಚುನಾವಣೆಗೆ ಹೋಗುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತಿಚೆಗೆ ಮಾತನಾಡಿದ್ದರು. ಅವರ ಹೇಳಿಕೆಗೆ ಉಂಟಾದ ಗೊಂದಲದ ನಂತರ ಉಪ ಮುಖ್ಯಮಂತ್ರಿ  ಚೌಧರಿ ಅವರ ಹೇಳಿಕೆಗಳು ಹೊರಬಂದಿವೆ.

ಪಕ್ಷದ ಪ್ರಮುಖ ಚುನಾವಣಾ ತಂತ್ರಜ್ಞ ಎಂದು ಇನ್ನೂ ಪರಿಗಣಿಸಲ್ಪಟ್ಟಿರುವ ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿರುವ ಅಮಿತ್ ಶಾ ಅವರು, “ನಾಯಕತ್ವದ ಬಗ್ಗೆ ನಾವು ಒಟ್ಟಿಗೆ ಕುಳಿತು ನಿರ್ಧರಿಸುತ್ತೇವೆ. ನಾವು ನಿರ್ಧಾರ ತೆಗೆದುಕೊಂಡ ನಂತರ ನಿಮಗೆ ತಿಳಿಸುತ್ತೇವೆ” ಎಂದು ಅಸ್ಪಷ್ಟ ರೀತಿಯಲ್ಲಿ ಇತ್ತಿಚೆಕಗೆ ಪ್ರತಿಕ್ರಿಯಿಸಿದ್ದರು. ಅವರ ಈ ಹೇಳಿಕೆ 2025 ರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರನ್ನು ಬಿಹಾರದಲ್ಲಿ ತಮ್ಮ ಮೈತ್ರಿಯ ನಾಯಕನನ್ನಾಗಿ ಬಿಂಬಿಸಲು ಬಿಜೆಪಿ ಮುಂದಾಗುತ್ತಿಲ್ಲ ಎಂಬ ವದಂತಿಗಳು ಹರಡಿತ್ತು.

ಈ ಗೊಂದಲಗಳನ್ನು ಹೋಗಲಾಡಿಸಿದ ಉಪ ಮುಖ್ಯಮಂತ್ರಿ ಚೌಧರಿ, “ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಎನ್‌ಡಿಎ ಕೆಲಸ ಮಾಡುತ್ತಿದೆ. ನಾವು ಇಬ್ಬರೂ ನಾಯಕರ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸುತ್ತೇವೆ” ಎಂದು ಹೇಳಿದ್ದಾರೆ. ಬಿಹಾರ ಚುನಾವಣೆಯನ್ನು

ಎನ್‌ಡಿಎ 2020 ರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿತ್ತು ಮತ್ತು ಅವರನ್ನು ಬಿಹಾರದಲ್ಲಿ ಮೈತ್ರಿಕೂಟದ ನಾಯಕನಾಗಿ ನೋಡುತ್ತಿದೆ ಎಂದು ಅವರು ಹೇಳಿದ್ದಾರೆ. “ಭವಿಷ್ಯದಲ್ಲಿಯೂ ನಾವು ನಿತೀಶ್ ಕುಮಾರ್ ಮತ್ತು ಪ್ರಧಾನಿ ನೇತೃತ್ವದಲ್ಲಿ ಚುನಾವಣೆಗಳನ್ನು ಎದುರಿಸುತ್ತೇವೆ” ಎಂದು ಅವರು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...