Homeಮುಖಪುಟಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!

ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!

ಭರವಸೆ ನೀಡಿದ್ದ ವರ್ಷಕ್ಕೆ 2 ಕೋಟಿ ಉದ್ಯೋಗ ಎಲ್ಲಿ ಪ್ರಶ್ನಿಸಿದ ಯುವ ಜನರು

- Advertisement -
- Advertisement -

ಕಳೆದ ಒಂದೂವರೆ ವರ್ಷಗಳಲ್ಲಿ ತಮ್ಮ ಸರ್ಕಾರ ಸುಮಾರು 10 ಲಕ್ಷ ಖಾಯಂ ಸರ್ಕಾರಿ ಉದ್ಯೋಗಗಳನ್ನು ಯುವಕರಿಗೆ ಒದಗಿಸಿ ದಾಖಲೆ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವರ್ಷಕ್ಕೆ 2 ಕೋಟಿ ಉದ್ಯೋಗ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ಒಂದೂವರೆ ವರ್ಷದಲ್ಲಿ

‘ರೋಜ್‌ಗಾರ್ ಮೇಳ’ ಕಾರ್ಯಕ್ರಮದ ಅಡಿಯಲ್ಲಿ ನೇಮಕಾತಿಯಾದವರನ್ನು ಉದ್ದೇಶಿಸಿ ಆನ್‌ಲೈನ್‌ ಮೂಲಕ ಮಾತನಾಡಿದ ಅವರು, ಮೇಳದಲ್ಲಿ 71,000 ಕ್ಕೂ ಹೆಚ್ಚು ಜನರಿಗೆ ಹಲವಾರು ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಹಿಂದಿನ ಯಾವುದೇ ಸರ್ಕಾರಿ ಉದ್ಯೋಗಗಳನ್ನು ಇಂತಹ “ಮಿಷನ್ ಮೋಡ್”ನಲ್ಲಿ ಹಿಂದೆಂದೂ ನೀಡಲಾಗಿಲ್ಲ ಎಂದು ಮೋದಿ ಹೇಳಿದ್ದು, ತಮ್ಮ ಸರ್ಕಾರದಲ್ಲಿ ಯುವಜನರನ್ನು ಕೇಂದ್ರವಾಗಿಟ್ಟು ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ದೇಶವು ಎಲ್ಲಾ ಕ್ಷೇತ್ರಗಳಲ್ಲಿ ನಿಜವಾದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ‘ಯುವ ಪ್ರತಿಭೆ’ಯನ್ನು ಅನ್ವೇಷಿಸುತ್ತಿದೆ ಮತ್ತು ಪ್ರೋತ್ಸಾಹಿಸುತ್ತಿದೆ. ಬಾಹ್ಯಾಕಾಶದಿಂದ ರಕ್ಷಣೆವರೆಗೆ, ಪ್ರವಾಸೋದ್ಯಮದಿಂದ ಆರೋಗ್ಯ ಕ್ಷೇತ್ರದವರೆಗೆ, ಇಂದು ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಹೊಸ ಮೈಲುಗಲ್ಲು ಮುಟ್ಟಿತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರೋಜ್‌ಗಾರ್ ಮೇಳದಲ್ಲಿ ನೇಮಕಗೊಂಡವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಇರುವುದನ್ನು ಎತ್ತಿತೋರಿಸಿದ ಮೋದಿ, ಅವರ ಸಾಧನೆಗಳು ಇತರ ಮಹಿಳೆಯರಿಗೆ ಸ್ಫೂರ್ತಿಯಾಗಲಿವೆ ಎಂದು ಹೇಳಿದ್ದಾರೆ. “ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಸ್ವಾವಲಂಬಿಯಾಗಲು ಸಬಲೀಕರಣಗೊಳಿಸುವುದು ನಮ್ಮ ಗುರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ ನೀಡುವ ಸರ್ಕಾರದ ನಿರ್ಧಾರವು ಅವರ ವೃತ್ತಿಜೀವನಕ್ಕೆ ಸಾಕಷ್ಟು ಸಹಾಯ ಮಾಡಿದ್ದು, ‘ಪ್ರಧಾನಿ ಆವಾಸ್ ಯೋಜನೆ’ ಅಡಿಯಲ್ಲಿ ನಿರ್ಮಿಸಲಾದ ಮನೆಯ ಬಹುತೇಕ ಮಾಲೀಕರಾಗಿರುವುದು ಮಹಿಳೆಯರೇ ಆಗಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆಯ ಬಳಕೆಗೆ ಒತ್ತು ನೀಡುವ ಮೂಲಕ ಯುವಜನರ ಅಭಿವೃದ್ಧಿಗೆ ರಾಷ್ಟ್ರೀಯ ಶಿಕ್ಷಣ ನೀತಿಯು ಸಹಾಯ ಮಾಡಿದೆ ಎಂದು ಸಮರ್ಥಿಸಿಕೊಂಡ ಪ್ರಧಾನಿ ಮೋದಿ,”ಯುವಕರು 13 ಭಾರತೀಯ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ಬರೆಯಬಹುದೆಂದು ಖಚಿತಪಡಿಸಿಕೊಳ್ಳುವ ಮೂಲಕ ಉದ್ಯೋಗಕ್ಕೆ ಭಾಷೆಯು ಅಡ್ಡಿಯಾಗುವುದಿಲ್ಲ ಎಂದು ಸರ್ಕಾರ ಖಚಿತಪಡಿಸಿದೆ” ಎಂದು ಹೇಳಿದ್ದಾರೆ.

ಅದಾಗ್ಯೂ, ಪ್ರಧಾನಿ ಮೋದಿ ಅವರ ಹೇಳಿಕೆಗೆ ಟೀಕೆ ವ್ಯಕ್ತವಾಗಿದ್ದು, “ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಅಧಿಕಾರಕ್ಕೆ ಬಂದವರು ಒಂದುವರೆ ವರ್ಷಗಳಿಗೆ 10 ಲಕ್ಷ ಉದ್ಯೋಗ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ, 2 ಕೋಟಿ ಉದ್ಯೋಗ ಎಲ್ಲಿ ಹೋಯಿತು?” ಎಂದು ಯುವ ಪತ್ರಕರ್ತ ಹಾರಿಸ್ ಅವರು ಪ್ರಶ್ನಿಸಿದ್ದಾರೆ. ಒಂದೂವರೆ ವರ್ಷದಲ್ಲಿ

ಯುವ ಹೋರಾಟಗಾರ ಕೃಷ್ಣ ಪ್ರತಿಕ್ರಿಯಿಸಿ, “ತನ್ನ ಭರವಸೆಗಳನ್ನು ಉಳಿಸಿಕೊಳ್ಳಲು ಆಗದೆ ದೇಶದ ಯುವಜನರಿಗೆ ಮೋಸ ಮಾಡಿದ ಪ್ರಧಾನಿ ಮೋದಿ ನಾಚಿಕೆ ಪಟ್ಟಕೊಳ್ಳಬೇಕಿತ್ತು. ಆದರೆ ಇವರು 10 ಲಕ್ಷ ಉದ್ಯೋಗ ನೀಡಿದ್ದೇವೆ ಎಂದು ಹೆಮ್ಮಪಟ್ಟುಕೊಳ್ಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...