Homeಮುಖಪುಟರೈತ ಮುಖಂಡ ದಲ್ಲೆವಾಲ್‌ಗೆ ಹೃದಯಾಘಾತದ ಭೀತಿ; ಬಹು ಅಂಗಾಂಗ ವೈಫಲ್ಯದ ಎಚ್ಚರಿಕೆ ನೀಡಿದ ವೈದ್ಯರು

ರೈತ ಮುಖಂಡ ದಲ್ಲೆವಾಲ್‌ಗೆ ಹೃದಯಾಘಾತದ ಭೀತಿ; ಬಹು ಅಂಗಾಂಗ ವೈಫಲ್ಯದ ಎಚ್ಚರಿಕೆ ನೀಡಿದ ವೈದ್ಯರು

- Advertisement -
- Advertisement -

ಖಾನೌರಿ ಗಡಿ ಪ್ರತಿಭಟನಾ ಸ್ಥಳದಲ್ಲಿ ಕಳೆದ 28 ದಿನಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ನಿಗಾವಹಿಸುತ್ತಿರುವ ವೈದ್ಯರು, ಆರೋಗ್ಯ ಹದಗೆಟ್ಟಿರುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಸಂಭಾವ್ಯ ಹೃದಯ ಸ್ತಂಭನ ಮತ್ತು ಬಹು ಅಂಗಗಳ ವೈಫಲ್ಯದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

“ಉಪವಾಸವು ದಲ್ಲೆವಾಲ್ ಅವರ ನರಮಂಡಲವು ತೀವ್ರ ಪರಿಣಾಮ ಬೀರುತ್ತದೆ, ಅವರ ರಕ್ತದೊತ್ತಡ ಏರುಪೇರಾಗುತ್ತಿದೆ. ಅವರು ತೀವ್ರವಾದ ಪ್ರೋಟೀನ್ ಮತ್ತು ದ್ರವದ ಕೊರತೆಯನ್ನು ಹೊಂದಿದ್ದಾರೆ” ಎಂದು ತಜ್ಞ ವೈದ್ಯರು ಭಾನುವಾರ ಹೇಳಿದ್ದಾರೆ.

“ಅವರ ಯಕೃತ್ತು ಮತ್ತು ಇತರ ಅಂಗಗಳ ಕಾರ್ಯನಿರ್ವಹಣೆ ಕಳಪೆಯಾಗಿದೆ. ಯಾವುದೇ ಕ್ಷಣದಲ್ಲಿ ಅವರು ಹೃದಯಾಘಾತವನ್ನು ಎದುರಿಸಬಹುದು” ಎಂದು ಅವರು ಎಚ್ಚರಿಸಿದ್ದಾರೆ.

ದಲ್ಲೇವಾಲ್ ತಮ್ಮ ಉಪವಾಸ ಸತ್ಯಾಗ್ರಹದ ಮೂಲಕ, ಹೊಸ ಕಾನೂನಿನ ಮೂಲಕ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸಿದ್ದಾರೆ. ಅವರನ್ನು ಬೆಂಬಲಿಸಲು ಸಾವಿರಾರು ರೈತರು, ನೂರಾರು ಟ್ರ್ಯಾಕ್ಟರ್-ಟ್ರಾಲಿಗಳೊಂದಿಗೆ ಖಾನೌರಿ ಗಡಿಯಲ್ಲಿ ಜಮಾಯಿಸಿದ್ದಾರೆ.

ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಎಸ್‌ಕೆಎಂ-ರಾಜಕೀಯೇತರ ಬ್ಯಾನರ್‌ನಡಿಯಲ್ಲಿ ಫೆಬ್ರವರಿ 13 ರಂದು ಪ್ರಾರಂಭವಾದ ಪ್ರತಿಭಟನೆಯಲ್ಲಿ ದಲ್ಲೆವಾಲ್ ಅವರ ಆರೋಗ್ಯವು ಹದಗೆಟ್ಟಿದ್ದರಿಂದ ಭಾಗವಹಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.

ದಲ್ಲೆವಾಲ್ ಅವರ ಸ್ಥಿತಿ ಸಾಮಾನ್ಯ ಎಂದು ಹೇಳುವ ಇತ್ತೀಚಿನ ಸುಪ್ರೀಂ ಕೋರ್ಟ್ ವರದಿಯನ್ನು ರೈತರು ತಳ್ಳಿಹಾಕಿದ್ದಾರೆ. ರೈತ ಮುಖಂಡ ಅಭಿಮನ್ಯು ಕೋಹರ್, “ಸುಪ್ರೀಂಕೋರ್ಟ್ ವರದಿಯು ಸತ್ಯವನ್ನು ಪ್ರತಿಬಿಂಬಿಸುವುದಿಲ್ಲ. ಪರೀಕ್ಷೆಗಳು ದಲ್ಲೆವಾಲ್ ಅವರ ದೇಹದಲ್ಲಿನ ಕೀಟೋನ್ ಮಟ್ಟಗಳು 6.90 ಎಂದು ತೋರಿಸುತ್ತವೆ, ಇದು ಸಾಮಾನ್ಯಕ್ಕಿಂತ 25% ಹೆಚ್ಚಾಗಿದೆ. ಈ ಸಂಶೋಧನೆಗಳನ್ನು ನಿರ್ಲಕ್ಷಿಸಲಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಉದ್ವಿಗ್ನತೆಯನ್ನು ಹೆಚ್ಚಿಸಿದ ರೈತ ಮುಖಂಡ ಸುರ್ಜಿತ್ ಸಿಂಗ್ ಫೂಲ್, “ಆಡಳಿತವು ದಲ್ಲೆವಾಲ್ ಅವರನ್ನು ಪ್ರತಿಭಟನಾ ಸ್ಥಳದಿಂದ ಬಲವಂತವಾಗಿ ತೆರವುಗೊಳಿಸಿದರೆ, ಎರಡೂ ಕಡೆ ರಕ್ತಪಾತವಾಗುತ್ತದೆ. ಇದು ಆಡಳಿತದ ಜವಾಬ್ದಾರಿಯಾಗಿದೆ” ಎಂದು ಎಚ್ಚರಿಸಿದರು.

ಪಂಜಾಬ್‌ನ ಮಾಜಿ ಸಿಎಂ ಚರಣ್‌ಜಿತ್‌ ಸಿಂಗ್‌ ಚನ್ನಿ ನೇತೃತ್ವದ ಸಂಸದೀಯ ಸಮಿತಿ ವರದಿ ಮೇಲೆ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾನಿರತ ರೈತರು ಒತ್ತಾಯಿಸಿದ್ದಾರೆ. ಬಿಜೆಪಿ ಪ್ರತಿನಿಧಿಗಳು ಸೇರಿದಂತೆ 30 ಸದಸ್ಯರು ಬೆಂಬಲಿಸಿದ ವರದಿಯು ಎಂಎಸ್‌ಪಿ ಆಯೋಗದ ಅಗತ್ಯವನ್ನು ಎತ್ತಿ ತೋರಿಸಿದೆ. ಕಡಿಮೆ ರೈತರ ಆದಾಯ ಮತ್ತು ಕೃಷಿ ಬಜೆಟ್‌ಗಳ ಅಸಮರ್ಪಕ ಬಳಕೆಯಂತಹ ಸಮಸ್ಯೆಗಳನ್ನು ಸಮಿತಿ ಪ್ರಸ್ತಾಪಿಸಿದೆ.

ಪಂಜಾಬ್ ನಡೆಯುತ್ತಿರುವ ಶಹೀದಿ ದಿನಗಳಿಂದಾಗಿ ಡಿಸೆಂಬರ್ 24 ರಂದು ರಾಷ್ಟ್ರವ್ಯಾಪಿ ಕ್ಯಾಂಡಲ್ ಮಾರ್ಚ್ ಮತ್ತು ಡಿಸೆಂಬರ್ 26 ರಂದು ಉಪವಾಸ ಸತ್ಯಾಗ್ರಹ ಸೇರಿದಂತೆ ಮುಂದಿನ ಕ್ರಮವನ್ನು ರೈತರು ಘೋಷಿಸಿದ್ದಾರೆ.

ಈ ಮಧ್ಯೆ, ರಾಜಕೀಯ ಮುಖಂಡರು ಮತ್ತು ಸೆಲೆಬ್ರಿಟಿಗಳು ಒಗ್ಗಟ್ಟು ವ್ಯಕ್ತಪಡಿಸಲು ದಲ್ಲೆವಾಲ್‌ ಅವರನ್ನು ಭೇಟಿಯಾಗಿದ್ದಾರೆ. ಅಗತ್ಯವಿದ್ದರೆ ರಾಹುಲ್ ಗಾಂಧಿ ಕೂಡ ಭೇಟಿ ನೀಡಬಹುದು ಎಂದು ಪಂಜಾಬ್ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿ ಹೇಳಿದ್ದಾರೆ. ಆದರೂ, ಬಿಜೆಪಿ ಸಂಸದ ರವನೀತ್ ಸಿಂಗ್ ಬಿಟ್ಟು ಅವರು ಈ ಭೇಟಿಗಳನ್ನು ಟೀಕಿಸಿದ್ದಾರೆ.

ಜನವರಿ 2, 2025 ರಂದು ಸುಪ್ರೀಂ ಕೋರ್ಟ್ ಈ ವಿಷಯವನ್ನು ವಿಚಾರಣೆಗೆ ಒಳಪಡಿಸುವುದರೊಂದಿಗೆ ಪರಿಸ್ಥಿತಿಯು ಅಸ್ಥಿರವಾಗಿಯೇ ಉಳಿದಿದೆ. ಉದ್ವಿಗ್ನತೆಯನ್ನು ಹೆಚ್ಚಿಸುವ ಭಯದಿಂದಾಗಿ ಪಂಜಾಬ್‌ನ ಅಧಿಕಾರಿಗಳು ದಲ್ಲೆವಾಲ್ ಅನ್ನು ಸ್ಥಳಾಂತರಿಸುವುದನ್ನು ಮುಂದೂಡಿದ್ದಾರೆ.

ಇದನ್ನೂ ಓದಿ; ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ವಿಚಾರಣೆ; ರೈಲಿಗೆ ಸಿಲುಕಿ ಪ್ರಾಣಬಿಟ್ಟ ಅಂಚೆ ಇಲಾಖೆ  ದಲಿತ ಉದ್ಯೋಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...