Homeಮುಖಪುಟಪರ್ಭಾನಿಯಲ್ಲಿ ಪೊಲೀಸರಿಂದ ದಲಿತ ವ್ಯಕ್ತಿ ಹತ್ಯೆ, ಸಿಎಂ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ ಆರೋಪ

ಪರ್ಭಾನಿಯಲ್ಲಿ ಪೊಲೀಸರಿಂದ ದಲಿತ ವ್ಯಕ್ತಿ ಹತ್ಯೆ, ಸಿಎಂ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

“ಪರ್ಭಾನಿಯಲ್ಲಿ ದಲಿತ ವ್ಯಕ್ತಿಯನ್ನು ‘ಪೊಲೀಸರು ಹತ್ಯೆ ಮಾಡಿದ್ದಾರೆ’, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಈ ವಿಷಯದ ಬಗ್ಗೆ ಸುಳ್ಳು ಹೇಳಿದ್ದಾರೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

ಡಾ.ಬಿ.ಆರ್. ಅವರ ಪ್ರತಿಮೆ ಮುಂದೆ ಇರಿಸಿದ್ದ ಸಂವಿಧಾನ ಪ್ರತಿ ಧ್ವಂಸಗೊಳಿಸಿದ ನಂತರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಕೇವಲ 72 ಗಂಟೆಗಳ ನಂತರ, ಡಿಸೆಂಬರ್ 15 ರಂದು ನ್ಯಾಯಾಂಗ ಬಂಧನದಲ್ಲಿ ಸೋಮನಾಥ್ ವ್ಯಂಕತ್ ಸೂರ್ಯವಂಶಿ (35) ಶವವಾಗಿ ಪತ್ತೆಯಾಗಿದ್ದರು. ಮೃತ ವ್ಯಕ್ತಿ ದಲಿತ ಸಮುದಾಯಕ್ಕೆ ಸೇರಿದ್ದು, ಕಾನೂನು ಪದವಿ ಅಧ್ಯಯನ ಮಾಡುತ್ತಿದ್ದರು. ಇಂದು  ಅವರ ಮನೆಗೆ ಪಕ್ಷದ ಉನ್ನತ ನಾಯಕರ ಜೊತೆಯಲ್ಲಿ ರಾಹುಲ್ ಗಾಂಧಿ ಭೇಟಿ ನೀಡಿದರು.

ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಹೊರಬಂದ ರಾಹುಲ್ ಗಾಂಧಿ, “ಇದು 100 ಪ್ರತಿಶತ ಕೊಲೆಯಾಗಿದೆ. ಪೋಲೀಸರು ಥಳಿಸಿದ್ದಾರೆ… ಪೋಲೀಸರು ಕಸ್ಟಡಿಯಲ್ಲಿ ಕೊಲೆ ಮಾಡಿದ್ದಾರೆ. ದಲಿತ ಎಂಬ ಕಾರಣಕ್ಕೆ ಸಂವಿಧಾನ ರಕ್ಷಣೆಗೆ ಯತ್ನಿಸುತ್ತಿದ್ದ ಅವರನ್ನು ಹತ್ಯೆ ಮಾಡಲಾಗಿದೆ. ಅವರನ್ನು ಹೊಡೆದು ಮುಗಿಸಿದರು” ಎಂದು ರಾಹುಲ್ ಗಾಂಧಿ ಕಟುವಾಗಿ ಹೇಳಿದರು.

“ಪೊಲೀಸರಿಗೆ ಸಂದೇಶ ರವಾನಿಸಲು ಮೇಲ್ನೋಟಕ್ಕೆ ಸಿಎಂ ವಿಧಾನಸಭೆಯಲ್ಲಿ ಸುಳ್ಳು ಹೇಳಿದ್ದಾರೆ” ಎಂದು ಆರೋಪಿಸಿ ಫಡ್ನವೀಸ್ ಅವರತ್ತ ಬೆರಳು ತೋರಿಸಿದರು.

“ಸಂವಿಧಾನವನ್ನು ಮುಗಿಸುವುದು ಆರ್‌ಎಸ್‌ಎಸ್ ಸಿದ್ಧಾಂತ, (ಮಹಾಯುತಿ) ಸರ್ಕಾರ ಮತ್ತು ಬಿಜೆಪಿಯ ಸಿದ್ಧಾಂತವು ಸೂರ್ಯವಂಶಿಯ ಸಾವಿಗೆ ಕಾರಣವಾಗಿದೆ. ಇದಕ್ಕೆಲ್ಲ ಸಿಎಂ ಮತ್ತು ದಲಿತ ವ್ಯಕ್ತಿಯನ್ನು ಥಳಿಸಿದವರೇ ಹೊಣೆ” ಎಂದು ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿ ತಮ್ಮ ಭೇಟಿ ಮತ್ತು ಹೇಳಿಕೆಗಳೊಂದಿಗೆ ಸಮಸ್ಯೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆಯೇ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, “ಇಲ್ಲಿ ರಾಜಕೀಯ ಇಲ್ಲ. ಇದು ನ್ಯಾಯದ ವಿಷಯ. ಒಂದು ಕೊಲೆ ನಡೆದಿದೆ. ಇದು ಸಿದ್ಧಾಂತದ ಪ್ರಶ್ನೆ; ನಾವು ಈ ವಿಷಯದಲ್ಲಿ ತಕ್ಷಣದ ಕ್ರಮವನ್ನು ಬಯಸುತ್ತೇವೆ. ಇದನ್ನು ಬಗೆಹರಿಸಬೇಕು ಮತ್ತು ಇದರ ಹಿಂದಿರುವವರಿಗೆ ಶಿಕ್ಷೆಯಾಗಬೇಕು ಎಂದು ನಾವು ಬಯಸುತ್ತೇವೆ” ಎಂದು ರಾಹುಲ್ ಗಾಂಧಿ ಆಗ್ರಹಿಸಿದರು.

ಸೂರ್ಯವಂಶಿ ಅವರ ಸಾವಿನ ಕುರಿತು ಸದನವನ್ನು ದಾರಿತಪ್ಪಿಸಿರುವ ಸಿಎಂ ವಿರುದ್ಧ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಶೀಘ್ರದಲ್ಲೇ ವಿಶೇಷ ಹಕ್ಕು ಉಲ್ಲಂಘನೆಯ ಪ್ರಸ್ತಾಪವನ್ನು ಮುಂದಿಡಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಎಫ್.ಪಟೋಲೆ ಹೇಳಿದ್ದಾರೆ.

“ಸಿಎಂ ಅವರು, ಸೂರ್ಯವಂಶಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರಿಂದ ನಿಧನರಾದರು ಎಂದು ಹೇಳಿದ್ದರು. ಎದೆನೋವು ಎಂದು ದೂರು ನೀಡಿದ್ದರು ಎಂದು ಪೊಲೀಸರು ಮೊದಲು ಹೇಳಿದ್ದರು. ಶವಪರೀಕ್ಷೆ ವರದಿಯಲ್ಲಿ (ಡಿಸೆಂಬರ್ 16) ‘ಬಹು ಗಾಯಗಳ ನಂತರ ಆಘಾತ’ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ” ಎಂದು ಪಟೋಲೆ ಸೂಚಿಸಿದರು.

ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ‘ರಾಜಕೀಯ’ ಎಂದು ತಳ್ಳಿಹಾಕಿದ ಫಡ್ನವಿಸ್, ಮಹಾಯುತಿ ಸರ್ಕಾರವು ಈಗಾಗಲೇ ಈ ವಿಷಯದ ಬಗ್ಗೆ ಎರಡು ತನಿಖೆಗಳನ್ನು ಪ್ರಾರಂಭಿಸಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯೊಂದಿಗೆ ನ್ಯಾಯವನ್ನು ನೀಡಲಾಗುವುದು ಎಂದು ಪುನರುಚ್ಚರಿಸಿದರು.

ಇದಕ್ಕೂ ಮುನ್ನ ಕಡು ನೀಲಿ ಬಣ್ಣದ ಟೀ ಶರ್ಟ್ ಧರಿಸಿದ ರಾಹುಲ್ ಗಾಂಧಿ ಅವರು ಸೂರ್ಯವಂಶಿ ಮನೆಗೆ ಬರಿಗಾಲಿನಲ್ಲಿ ಪ್ರವೇಶಿಸಿ, ಕಾನೂನು ವಿದ್ಯಾರ್ಥಿ ಸೋಮನಾಥ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.

ರಾಹುಲ್ ಗಾಂಧಿ ಮೃತ ಕಾನೂನು ವಿದ್ಯಾರ್ಥಿ ಕುಟುಂಬ ಸದಸ್ಯರ ಪಕ್ಕದಲ್ಲಿ ನೆಲದ ಮೇಲೆ ಕುಳಿತುಕೊಂಡರು. ಅವರು ನ್ಯಾಯಾಂಗ ಬಂಧನದಲ್ಲಿ ಸೋಮನಾಥ್ ಸೂರ್ಯವಂಶಿ ಅವರ ಸಾವಿಗೆ ಕಾರಣವಾದ ಘಟನೆಗಳನ್ನು ವಿವರಿಸಿ, ಅವರಿಗೆ ಕೆಲವು ದಾಖಲೆಗಳನ್ನು ತೋರಿಸಿದರು.

ರಾಹುಲ್ ಗಾಂಧಿ ಅವರಿಗೆ ತಾಳ್ಮೆಯ ವಿಚಾರಣೆಯನ್ನು ನೀಡಿದರು, ಹಲವಾರು ಸಂದರ್ಭಗಳಲ್ಲಿ ತಲೆದೂಗಿದರು, ಸಂತಾಪ ಸೂಚಿಸಿದ ಅವರು, ಮೃತ ವ್ಯಕ್ತಿಗೆ ನ್ಯಾಯ ಒದಗಿಸುವ ಭರವಸೆ ನೀಡಿದರು.

ನಂತರ, ಅವರು ಮತ್ತೊಬ್ಬ ದಲಿತ ಸಮಾಜ ಸೇವಕ ವಿಜಯ್ ವಾಕೋಡೆ ಅವರ ಮನೆಗೆ ಭೇಟಿ ನೀಡಿದರು. ಅವರು ಡಿಸೆಂಬರ್ 11-12 ರಂದು ಗುಂಪನ್ನು ನಿಯಂತ್ರಿಸಲು ಪ್ರಯತ್ನಿಸುವಾಗ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದರು.

ಡಿಸೆಂಬರ್ 10 ರಂದು ಪರ್ಭಾನಿ ರೈಲು ನಿಲ್ದಾಣದ ಬಳಿಯ ಡಾ. ಅಂಬೇಡ್ಕರ್ ಪ್ರತಿಮೆ ಮುಂದೆ ಇರಿಸಲಾಗಿದ್ದ ಸಂವಿಧಾನ ಪ್ರತಿಯನ್ನು ಸೋಪಾನ್ ಪವಾರ್ ಎಂಬ ‘ಮಾನಸಿಕ ಅಸ್ತವ್ಯಸ್ತ’ ವ್ಯಕ್ತಿ ವಿರೂಪಗೊಳಿಸಿದ್ದು, ನಂತರ ಉಂಟಾದ ಹಿಂಸಾತ್ಮಕ ಘಟನೆಗಳಿಗೆ ಸಂಬಂಧಿಸಿದಂತೆ ಸೂರ್ಯವಂಶಿ ಅವರನ್ನು ಬಂಧಿಸಲಾಯಿತು.

ಪರ್ಭಾನಿಯಲ್ಲಿ ಹಿಂಸಾತ್ಮಕ ಮತ್ತು ಉದ್ವಿಗ್ನತೆಯಿಂದ ನಗರ ಸ್ಥಗಿತಗೊಂಡಿತ್ತು. ಆದರೆ ಸ್ಥಳೀಯ ಪೊಲೀಸರು ಡಿಸೆಂಬರ್ 12 ರಂದು ಸೂರ್ಯವಂಶಿ ಸೇರಿದಂತೆ ಸುಮಾರು 300 ಜನರನ್ನು, ಬಹುತೇಕ ದಲಿತರನ್ನು ಬಂಧಿಸಿದರು.

ಕೇವಲ 72 ಗಂಟೆಗಳ ನಂತರ, ಸೂರ್ಯವಂಶಿ ನ್ಯಾಯಾಂಗ ಬಂಧನದಲ್ಲಿ ಸತ್ತರು, ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮತ್ತು ಇಂಡಿಯಾ ಬ್ಲಾಕ್ ಮಿತ್ರಪಕ್ಷಗಳು ಈ ವಿಷಯವನ್ನು ಅನೇಕ ಹಂತಗಳಲ್ಲಿ ಧ್ವನಿ ಎತ್ತಿದರು.

ಇದನ್ನೂ ಓದಿ; ತಮಿಳುನಾಡು: ಕಾರಿನ ಧೂಳಿನ ಮೇಲೆ ಗೀಚಿದ ದಲಿತ ಬಾಲಕನಿಗೆ ಥಳಿಸಿದ ಮಾಲೀಕ, ಪ್ರಶ್ನಿಸಿದವರಿಗೆ ಚಾಕು ಇರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...