HomeUncategorizedಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

ಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

- Advertisement -
- Advertisement -

ಪಾಟ್ನಾ: ಇನ್ನು 10 ತಿಂಗಳ ನಂತರ, ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಬಿಹಾರದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು 2025ರ ಸೆಪ್ಟೆಂಬರ್‌ನಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಬಿಜೆಪಿಯ ಎರಡನೇ ಅತ್ಯಂತ ಶಕ್ತಿಶಾಲಿ ವ್ಯಕ್ತಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಹಾರ ವಿಧಾನಸಭೆಯು  ನಿತೀಶ್ ನಾಯಕತ್ವದಲ್ಲಿ ಎನ್‌ಡಿಎ ಸ್ಪರ್ಧಿಸುತ್ತದೆಯೇ ಅಥವಾ ಮಹಾರಾಷ್ಟ್ರದಂತೆ ಅಲ್ಲಿ ಸ್ಪರ್ಧಿಸುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ “ನಾವು ಚರ್ಚಿಸಿ, ನಿರ್ಧರಿಸುತ್ತೇವೆ”. ಬಿಹಾರದಲ್ಲಿ 2025ರಲ್ಲಿ ನಡೆಯುವ ಚುನಾವಣೆಯಲ್ಲಿ ಯಾವುದೇ ಮುಖ್ಯಮಂತ್ರಿಯ ಮುಖವಿರುವುದಿಲ್ಲವೆಂದಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಶಾ ಅವರ ಈ ಹೇಳಿಕೆಯು ಮತ್ತಷ್ಟು ವಿವಾದದ ಕಿಡಿಹೊತ್ತಿಸಿದೆ. ಆದರೆ ಜೆಡಿಯು ಬಿಹಾರದಲ್ಲಿ ಮಹಾರಾಷ್ಟ್ರದಂತೆ ಇರುವುದಿಲ್ಲವೆಂದು ಸ್ಪಷ್ಟಪಡಿಸಿದೆ. ನಿತೀಶ್ ಅವರು ಏಕನಾಥ್ ಶಿಂಧೆಯಂತೆ ಅಲ್ಲ ಎಂದು ನಿತೀಶ್ ಅವರ ಆಪ್ತ ಸಹಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

2005ರಿಂದಲೂ ನಿತೀಶ್ ಹೆಸರಿನಲ್ಲಿ ಜನರು ಮತ ಚಲಾಯಿಸಿದ್ದಾರೆ. ಕಾನೂನುರಹಿತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಖಾತ್ರಿಪಡಿಸಿದ ಮತ್ತು ಬಿಹಾರವನ್ನು ಮತ್ತೆ ಅಭಿವೃದ್ಧಿ ಪಥಕ್ಕೆ ತಂದ ನಿತೀಶ್ ಅವರ  ಉತ್ತಮ ಆಡಳಿತಕ್ಕಾಗಿ ಮತದಾರರು ಅವರ ಪರವಾಗಿ ನಿಂತಿದ್ದಾರೆ ಎಂದು ಅವರ ಸಹಾಯಕ ಹೇಳಿದ್ದಾರೆ.

ಬಿಹಾರ ವಿಧಾನಸಭೆಯಲ್ಲಿ ಬಿಜೆಪಿಯು ಪ್ರಸ್ತುತ ಏಕೈಕ ದೊಡ್ಡ ಪಕ್ಷವಾಗಿದ್ದರೂ ಸಹ ಅದಕ್ಕೆ ಇಲ್ಲಿಯವರೆಗೆ ಮುಖ್ಯಮಂತ್ರಿಯನ್ನು ಹೊಂದಿಲ್ಲದ ಒಂದು ರಾಜ್ಯವಾಗಿ ಬಿಹಾರ ಉಳಿದಿದೆ. 2025 ರಲ್ಲಿ ಬಿಹಾರದಲ್ಲಿ ಬಿಜೆಪಿ ತನ್ನದೇ ಆದ ಮುಖ್ಯಮಂತ್ರಿಯನ್ನು ಹೊಂದುವ ಸಮಯ ಬಂದಿದೆ ಎಂದು ಕೆಲವು ರಾಜ್ಯ ಮಟ್ಟದ ನಾಯಕರು ಸೂಚಿಸಿದ್ದಾರೆ. ಇದು ಚುನಾವಣಾ ಲೆಕ್ಕಾಚಾರಕ್ಕಿಂತ ಹೊರಗಿದೆ.

ಹೀಗಾಗಿಯೇ ಬಿಹಾರ ಚುನಾವಣೆಯನ್ನು ನಿತೀಶ್ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಬಿಜೆಪಿ ಭಾನುವಾರ ಸ್ಪಷ್ಟಪಡಿಸಿದೆ. “ಮುಂದಿನ ವರ್ಷದ ಚುನಾವಣೆಯು ನಿತೀಶ್ ಮತ್ತು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪರ್ಧಿಸುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಡಿಸೆಂಬರ್ 22 ರಂದು ನವದೆಹಲಿಯಲ್ಲಿ ಹೇಳುವ ಮೂಲಕ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಗೆ ಇಷ್ಟವಿರಲಿ ಇಲ್ಲದಿರಲಿ, ನಿತೀಶ್ ಕುಮಾರ್ ಅವರನ್ನು ಅವಲಂಭಿಸಲು ಮೂರು ಕಾರಣಗಳಿವೆ. ಮೊದಲನೆಯದಾಗಿ, ಬಿಹಾರವನ್ನು ಸಮರ್ಥವಾಗಿ ಆಳಿದ ಮತ್ತು ಅಭಿವೃದ್ಧಿಯ ವೇಗದ ಹಾದಿಯಲ್ಲಿ ಇರಿಸಿರುವ ಪ್ರಾಮಾಣಿಕ, ಕಳಂಕರಹಿತ ರಾಜಕಾರಣಿಯ ವ್ಯಕ್ತಿತ್ವವನ್ನು ಅವರು ಹೊಂದಿರುವುದು.

ಎರಡನೆಯದಾಗಿ, ನಿತೀಶ್ ಅವರ ಶೇಕಡಾ 15 ರಷ್ಟು ನಿಷ್ಟವಂತ ಮತದಾರರು ಅವರ ಮೈತ್ರಿಯನ್ನು ಲೆಕ್ಕಿಸದೆ ಯಾವಾಗಲೂ ಅವರ ಬೆಂಬಲಕ್ಕೆ ನಿಂತಿರುವುದು.

ಬಿಜೆಪಿಯ ಶೇ.19 , ಚಿರಾಗ್ ಪಾಸ್ವಾನ್‌ರ ಎಲ್‌ಜೆಪಿಯಿಂದ ಶೇ.5 ಮತ್ತು ಇತರರು ಶೇಕಡಾ 2.5 ಸೇರಿದರೆ ಇದು ಮೈತ್ರಿಕೂಟಕ್ಕೆ ಶೇ. 40 ಕ್ಕಿಂತ ಹೆಚ್ಚು ಮತಗಳನ್ನು ಗಳಿಸುತ್ತದೆ. ಇದು ಪ್ರಚಂಡ ವಿಜಯವನ್ನು ಖಚಿತಪಡಿಸುತ್ತದೆ. ಇದು 2010ರಲ್ಲಿ ಮತ್ತು 2015ರಲ್ಲಿ ಸಾಬೀತಾಗಿದೆ.

ಮೂರನೆಯದಾಗಿ, ಮುಖ್ಯಮಂತ್ರಿಯಾಗಬಲ್ಲ ಒಬ್ಬ ನಾಯಕನನ್ನು ಬಿಜೆಪಿ ಎಂದಿಗೂ ಬೆಳೆಸಲಿಲ್ಲ. ದಿವಂಗತ ಸುಶೀಲ್ ಮೋದಿ ಅವರನ್ನು ಹೊರತುಪಡಿಸಿ, ಬಿಜೆಪಿಯ ಯಾವುದೇ ಉಪಮುಖ್ಯಮಂತ್ರಿಗಳು ನಿತೀಶ್ ಅವರ ಸಮಗ್ರತೆ ಮತ್ತು ಆಡಳಿತ ಕೌಶಲ್ಯಕ್ಕೆ ಸರಿಸಾಟಿಯಾಗಬಲ್ಲ ನಾಯಕರಾಗಿ ಬೆಳೆಯಲಿಲ್ಲ.

ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...