HomeUncategorizedಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

ಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

- Advertisement -
- Advertisement -

ಪಾಟ್ನಾ: ಇನ್ನು 10 ತಿಂಗಳ ನಂತರ, ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಬಿಹಾರದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು 2025ರ ಸೆಪ್ಟೆಂಬರ್‌ನಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಬಿಜೆಪಿಯ ಎರಡನೇ ಅತ್ಯಂತ ಶಕ್ತಿಶಾಲಿ ವ್ಯಕ್ತಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಹಾರ ವಿಧಾನಸಭೆಯು  ನಿತೀಶ್ ನಾಯಕತ್ವದಲ್ಲಿ ಎನ್‌ಡಿಎ ಸ್ಪರ್ಧಿಸುತ್ತದೆಯೇ ಅಥವಾ ಮಹಾರಾಷ್ಟ್ರದಂತೆ ಅಲ್ಲಿ ಸ್ಪರ್ಧಿಸುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ “ನಾವು ಚರ್ಚಿಸಿ, ನಿರ್ಧರಿಸುತ್ತೇವೆ”. ಬಿಹಾರದಲ್ಲಿ 2025ರಲ್ಲಿ ನಡೆಯುವ ಚುನಾವಣೆಯಲ್ಲಿ ಯಾವುದೇ ಮುಖ್ಯಮಂತ್ರಿಯ ಮುಖವಿರುವುದಿಲ್ಲವೆಂದಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಶಾ ಅವರ ಈ ಹೇಳಿಕೆಯು ಮತ್ತಷ್ಟು ವಿವಾದದ ಕಿಡಿಹೊತ್ತಿಸಿದೆ. ಆದರೆ ಜೆಡಿಯು ಬಿಹಾರದಲ್ಲಿ ಮಹಾರಾಷ್ಟ್ರದಂತೆ ಇರುವುದಿಲ್ಲವೆಂದು ಸ್ಪಷ್ಟಪಡಿಸಿದೆ. ನಿತೀಶ್ ಅವರು ಏಕನಾಥ್ ಶಿಂಧೆಯಂತೆ ಅಲ್ಲ ಎಂದು ನಿತೀಶ್ ಅವರ ಆಪ್ತ ಸಹಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

2005ರಿಂದಲೂ ನಿತೀಶ್ ಹೆಸರಿನಲ್ಲಿ ಜನರು ಮತ ಚಲಾಯಿಸಿದ್ದಾರೆ. ಕಾನೂನುರಹಿತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಖಾತ್ರಿಪಡಿಸಿದ ಮತ್ತು ಬಿಹಾರವನ್ನು ಮತ್ತೆ ಅಭಿವೃದ್ಧಿ ಪಥಕ್ಕೆ ತಂದ ನಿತೀಶ್ ಅವರ  ಉತ್ತಮ ಆಡಳಿತಕ್ಕಾಗಿ ಮತದಾರರು ಅವರ ಪರವಾಗಿ ನಿಂತಿದ್ದಾರೆ ಎಂದು ಅವರ ಸಹಾಯಕ ಹೇಳಿದ್ದಾರೆ.

ಬಿಹಾರ ವಿಧಾನಸಭೆಯಲ್ಲಿ ಬಿಜೆಪಿಯು ಪ್ರಸ್ತುತ ಏಕೈಕ ದೊಡ್ಡ ಪಕ್ಷವಾಗಿದ್ದರೂ ಸಹ ಅದಕ್ಕೆ ಇಲ್ಲಿಯವರೆಗೆ ಮುಖ್ಯಮಂತ್ರಿಯನ್ನು ಹೊಂದಿಲ್ಲದ ಒಂದು ರಾಜ್ಯವಾಗಿ ಬಿಹಾರ ಉಳಿದಿದೆ. 2025 ರಲ್ಲಿ ಬಿಹಾರದಲ್ಲಿ ಬಿಜೆಪಿ ತನ್ನದೇ ಆದ ಮುಖ್ಯಮಂತ್ರಿಯನ್ನು ಹೊಂದುವ ಸಮಯ ಬಂದಿದೆ ಎಂದು ಕೆಲವು ರಾಜ್ಯ ಮಟ್ಟದ ನಾಯಕರು ಸೂಚಿಸಿದ್ದಾರೆ. ಇದು ಚುನಾವಣಾ ಲೆಕ್ಕಾಚಾರಕ್ಕಿಂತ ಹೊರಗಿದೆ.

ಹೀಗಾಗಿಯೇ ಬಿಹಾರ ಚುನಾವಣೆಯನ್ನು ನಿತೀಶ್ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಬಿಜೆಪಿ ಭಾನುವಾರ ಸ್ಪಷ್ಟಪಡಿಸಿದೆ. “ಮುಂದಿನ ವರ್ಷದ ಚುನಾವಣೆಯು ನಿತೀಶ್ ಮತ್ತು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪರ್ಧಿಸುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಡಿಸೆಂಬರ್ 22 ರಂದು ನವದೆಹಲಿಯಲ್ಲಿ ಹೇಳುವ ಮೂಲಕ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಗೆ ಇಷ್ಟವಿರಲಿ ಇಲ್ಲದಿರಲಿ, ನಿತೀಶ್ ಕುಮಾರ್ ಅವರನ್ನು ಅವಲಂಭಿಸಲು ಮೂರು ಕಾರಣಗಳಿವೆ. ಮೊದಲನೆಯದಾಗಿ, ಬಿಹಾರವನ್ನು ಸಮರ್ಥವಾಗಿ ಆಳಿದ ಮತ್ತು ಅಭಿವೃದ್ಧಿಯ ವೇಗದ ಹಾದಿಯಲ್ಲಿ ಇರಿಸಿರುವ ಪ್ರಾಮಾಣಿಕ, ಕಳಂಕರಹಿತ ರಾಜಕಾರಣಿಯ ವ್ಯಕ್ತಿತ್ವವನ್ನು ಅವರು ಹೊಂದಿರುವುದು.

ಎರಡನೆಯದಾಗಿ, ನಿತೀಶ್ ಅವರ ಶೇಕಡಾ 15 ರಷ್ಟು ನಿಷ್ಟವಂತ ಮತದಾರರು ಅವರ ಮೈತ್ರಿಯನ್ನು ಲೆಕ್ಕಿಸದೆ ಯಾವಾಗಲೂ ಅವರ ಬೆಂಬಲಕ್ಕೆ ನಿಂತಿರುವುದು.

ಬಿಜೆಪಿಯ ಶೇ.19 , ಚಿರಾಗ್ ಪಾಸ್ವಾನ್‌ರ ಎಲ್‌ಜೆಪಿಯಿಂದ ಶೇ.5 ಮತ್ತು ಇತರರು ಶೇಕಡಾ 2.5 ಸೇರಿದರೆ ಇದು ಮೈತ್ರಿಕೂಟಕ್ಕೆ ಶೇ. 40 ಕ್ಕಿಂತ ಹೆಚ್ಚು ಮತಗಳನ್ನು ಗಳಿಸುತ್ತದೆ. ಇದು ಪ್ರಚಂಡ ವಿಜಯವನ್ನು ಖಚಿತಪಡಿಸುತ್ತದೆ. ಇದು 2010ರಲ್ಲಿ ಮತ್ತು 2015ರಲ್ಲಿ ಸಾಬೀತಾಗಿದೆ.

ಮೂರನೆಯದಾಗಿ, ಮುಖ್ಯಮಂತ್ರಿಯಾಗಬಲ್ಲ ಒಬ್ಬ ನಾಯಕನನ್ನು ಬಿಜೆಪಿ ಎಂದಿಗೂ ಬೆಳೆಸಲಿಲ್ಲ. ದಿವಂಗತ ಸುಶೀಲ್ ಮೋದಿ ಅವರನ್ನು ಹೊರತುಪಡಿಸಿ, ಬಿಜೆಪಿಯ ಯಾವುದೇ ಉಪಮುಖ್ಯಮಂತ್ರಿಗಳು ನಿತೀಶ್ ಅವರ ಸಮಗ್ರತೆ ಮತ್ತು ಆಡಳಿತ ಕೌಶಲ್ಯಕ್ಕೆ ಸರಿಸಾಟಿಯಾಗಬಲ್ಲ ನಾಯಕರಾಗಿ ಬೆಳೆಯಲಿಲ್ಲ.

ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...