HomeUncategorizedಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

ಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

- Advertisement -
- Advertisement -

ಪಾಟ್ನಾ: ಇನ್ನು 10 ತಿಂಗಳ ನಂತರ, ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಬಿಹಾರದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು 2025ರ ಸೆಪ್ಟೆಂಬರ್‌ನಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಬಿಜೆಪಿಯ ಎರಡನೇ ಅತ್ಯಂತ ಶಕ್ತಿಶಾಲಿ ವ್ಯಕ್ತಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಹಾರ ವಿಧಾನಸಭೆಯು  ನಿತೀಶ್ ನಾಯಕತ್ವದಲ್ಲಿ ಎನ್‌ಡಿಎ ಸ್ಪರ್ಧಿಸುತ್ತದೆಯೇ ಅಥವಾ ಮಹಾರಾಷ್ಟ್ರದಂತೆ ಅಲ್ಲಿ ಸ್ಪರ್ಧಿಸುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ “ನಾವು ಚರ್ಚಿಸಿ, ನಿರ್ಧರಿಸುತ್ತೇವೆ”. ಬಿಹಾರದಲ್ಲಿ 2025ರಲ್ಲಿ ನಡೆಯುವ ಚುನಾವಣೆಯಲ್ಲಿ ಯಾವುದೇ ಮುಖ್ಯಮಂತ್ರಿಯ ಮುಖವಿರುವುದಿಲ್ಲವೆಂದಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಶಾ ಅವರ ಈ ಹೇಳಿಕೆಯು ಮತ್ತಷ್ಟು ವಿವಾದದ ಕಿಡಿಹೊತ್ತಿಸಿದೆ. ಆದರೆ ಜೆಡಿಯು ಬಿಹಾರದಲ್ಲಿ ಮಹಾರಾಷ್ಟ್ರದಂತೆ ಇರುವುದಿಲ್ಲವೆಂದು ಸ್ಪಷ್ಟಪಡಿಸಿದೆ. ನಿತೀಶ್ ಅವರು ಏಕನಾಥ್ ಶಿಂಧೆಯಂತೆ ಅಲ್ಲ ಎಂದು ನಿತೀಶ್ ಅವರ ಆಪ್ತ ಸಹಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

2005ರಿಂದಲೂ ನಿತೀಶ್ ಹೆಸರಿನಲ್ಲಿ ಜನರು ಮತ ಚಲಾಯಿಸಿದ್ದಾರೆ. ಕಾನೂನುರಹಿತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಖಾತ್ರಿಪಡಿಸಿದ ಮತ್ತು ಬಿಹಾರವನ್ನು ಮತ್ತೆ ಅಭಿವೃದ್ಧಿ ಪಥಕ್ಕೆ ತಂದ ನಿತೀಶ್ ಅವರ  ಉತ್ತಮ ಆಡಳಿತಕ್ಕಾಗಿ ಮತದಾರರು ಅವರ ಪರವಾಗಿ ನಿಂತಿದ್ದಾರೆ ಎಂದು ಅವರ ಸಹಾಯಕ ಹೇಳಿದ್ದಾರೆ.

ಬಿಹಾರ ವಿಧಾನಸಭೆಯಲ್ಲಿ ಬಿಜೆಪಿಯು ಪ್ರಸ್ತುತ ಏಕೈಕ ದೊಡ್ಡ ಪಕ್ಷವಾಗಿದ್ದರೂ ಸಹ ಅದಕ್ಕೆ ಇಲ್ಲಿಯವರೆಗೆ ಮುಖ್ಯಮಂತ್ರಿಯನ್ನು ಹೊಂದಿಲ್ಲದ ಒಂದು ರಾಜ್ಯವಾಗಿ ಬಿಹಾರ ಉಳಿದಿದೆ. 2025 ರಲ್ಲಿ ಬಿಹಾರದಲ್ಲಿ ಬಿಜೆಪಿ ತನ್ನದೇ ಆದ ಮುಖ್ಯಮಂತ್ರಿಯನ್ನು ಹೊಂದುವ ಸಮಯ ಬಂದಿದೆ ಎಂದು ಕೆಲವು ರಾಜ್ಯ ಮಟ್ಟದ ನಾಯಕರು ಸೂಚಿಸಿದ್ದಾರೆ. ಇದು ಚುನಾವಣಾ ಲೆಕ್ಕಾಚಾರಕ್ಕಿಂತ ಹೊರಗಿದೆ.

ಹೀಗಾಗಿಯೇ ಬಿಹಾರ ಚುನಾವಣೆಯನ್ನು ನಿತೀಶ್ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಬಿಜೆಪಿ ಭಾನುವಾರ ಸ್ಪಷ್ಟಪಡಿಸಿದೆ. “ಮುಂದಿನ ವರ್ಷದ ಚುನಾವಣೆಯು ನಿತೀಶ್ ಮತ್ತು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪರ್ಧಿಸುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಡಿಸೆಂಬರ್ 22 ರಂದು ನವದೆಹಲಿಯಲ್ಲಿ ಹೇಳುವ ಮೂಲಕ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಗೆ ಇಷ್ಟವಿರಲಿ ಇಲ್ಲದಿರಲಿ, ನಿತೀಶ್ ಕುಮಾರ್ ಅವರನ್ನು ಅವಲಂಭಿಸಲು ಮೂರು ಕಾರಣಗಳಿವೆ. ಮೊದಲನೆಯದಾಗಿ, ಬಿಹಾರವನ್ನು ಸಮರ್ಥವಾಗಿ ಆಳಿದ ಮತ್ತು ಅಭಿವೃದ್ಧಿಯ ವೇಗದ ಹಾದಿಯಲ್ಲಿ ಇರಿಸಿರುವ ಪ್ರಾಮಾಣಿಕ, ಕಳಂಕರಹಿತ ರಾಜಕಾರಣಿಯ ವ್ಯಕ್ತಿತ್ವವನ್ನು ಅವರು ಹೊಂದಿರುವುದು.

ಎರಡನೆಯದಾಗಿ, ನಿತೀಶ್ ಅವರ ಶೇಕಡಾ 15 ರಷ್ಟು ನಿಷ್ಟವಂತ ಮತದಾರರು ಅವರ ಮೈತ್ರಿಯನ್ನು ಲೆಕ್ಕಿಸದೆ ಯಾವಾಗಲೂ ಅವರ ಬೆಂಬಲಕ್ಕೆ ನಿಂತಿರುವುದು.

ಬಿಜೆಪಿಯ ಶೇ.19 , ಚಿರಾಗ್ ಪಾಸ್ವಾನ್‌ರ ಎಲ್‌ಜೆಪಿಯಿಂದ ಶೇ.5 ಮತ್ತು ಇತರರು ಶೇಕಡಾ 2.5 ಸೇರಿದರೆ ಇದು ಮೈತ್ರಿಕೂಟಕ್ಕೆ ಶೇ. 40 ಕ್ಕಿಂತ ಹೆಚ್ಚು ಮತಗಳನ್ನು ಗಳಿಸುತ್ತದೆ. ಇದು ಪ್ರಚಂಡ ವಿಜಯವನ್ನು ಖಚಿತಪಡಿಸುತ್ತದೆ. ಇದು 2010ರಲ್ಲಿ ಮತ್ತು 2015ರಲ್ಲಿ ಸಾಬೀತಾಗಿದೆ.

ಮೂರನೆಯದಾಗಿ, ಮುಖ್ಯಮಂತ್ರಿಯಾಗಬಲ್ಲ ಒಬ್ಬ ನಾಯಕನನ್ನು ಬಿಜೆಪಿ ಎಂದಿಗೂ ಬೆಳೆಸಲಿಲ್ಲ. ದಿವಂಗತ ಸುಶೀಲ್ ಮೋದಿ ಅವರನ್ನು ಹೊರತುಪಡಿಸಿ, ಬಿಜೆಪಿಯ ಯಾವುದೇ ಉಪಮುಖ್ಯಮಂತ್ರಿಗಳು ನಿತೀಶ್ ಅವರ ಸಮಗ್ರತೆ ಮತ್ತು ಆಡಳಿತ ಕೌಶಲ್ಯಕ್ಕೆ ಸರಿಸಾಟಿಯಾಗಬಲ್ಲ ನಾಯಕರಾಗಿ ಬೆಳೆಯಲಿಲ್ಲ.

ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...