Homeಮುಖಪುಟ'ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..'; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ...

‘ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..’; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ರೈತರ ಹಕ್ಕುಗಳಿಗಾಗಿ ಕಳೆದ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಗಜಿತ್ ಸಿಂಗ್ ದಲ್ಲೆವಾಲ್, 15 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಅವರು, “ತಮ್ಮ ಬೇಡಿಕೆಗಳನ್ನು ಅಂಗೀಕರಿಸುವವರೆಗೆ ಅಥವಾ ನನ್ನ ಕೊನೆ ಉಸಿರೆಳೆಯುವವರೆಗೆ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಮಂಗಳವಾರ ಪುನರುಚ್ಚರಿಸಿದರು.

ಫೆಬ್ರವರಿ 13 ರಿಂದ ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹರಿಯಾಣದ ಗಡಿಭಾಗದಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಲ್ಲಿ ವೇದಿಕೆಯ ಮೇಲೆ ಹಾಸಿಗೆಯ ಮೇಲೆ ಮಲಗಿರುವಾಗಲೇ ಹೇಳಿಕೆ ನೀಡಿದ್ದಾರೆ. ಉಪವಾಸ ಮತ್ತು ವಯಸ್ಸಾದ ಕಾರಣದಿಂದ ದಲ್ಲೇವಾಲ್ ಪ್ರಮುಖ ಅಂಗಗಳು ಕ್ಷೀಣಿಸುತ್ತಿವೆ ಎಂದು ವೈದ್ಯರು ಹೇಳಿದರು. “ರೈತರ ಪ್ರತಿಭಟನೆಯ ಕರೆಗೆ ಇತರ ರಾಜ್ಯಗಳು ಸಹ ಸೇರಬೇಕು, ಈ ಹೋರಾಟವು ಒಗ್ಗಟ್ಟಿನಿಂದ ಹೋರಾಡಬೇಕು” ಎಂದು ದಲ್ಲೇವಾಲ್ ಮನವಿ ಮಾಡಿದ್ದಾರೆ.

“ನಾನು ಕ್ಷೇಮವಾಗಿದ್ದೇನೆ.. ನಾವು ಈ ಯುದ್ಧವನ್ನು ಒಗ್ಗಟ್ಟಿನಿಂದ ಗೆಲ್ಲಬೇಕು” ಎಂದು 70 ವರ್ಷದ ದಲ್ಲೆವಾಲ್ ಹೇಳಿದರು. ಅವರ ಆರೋಗ್ಯವನ್ನು 24 ಗಂಟೆಗಳ ಕಾಲ ವೈದ್ಯರ ತಂಡವು ಮೇಲ್ವಿಚಾರಣೆ ಮಾಡುತ್ತಿದೆ. ರೈತ ನಾಯಕನಿಗೆ ಹೃದಯ ಸ್ತಂಭನದ ಅಪಾಯವಿದೆ ಎಂದು ಈಗಾಗಲೇ ಎಚ್ಚರಿಸಿದ್ದಾರೆ.

29 ದಿನಗಳ ಉಪವಾಸ ಸತ್ಯಾಗ್ರಹದಿಂದಾಗಿ ಅವರ ರೋಗನಿರೋಧಕ ಶಕ್ತಿ ದಿನದಿಂದ ದಿನಕ್ಕೆ ದುರ್ಬಲವಾಗುತ್ತಿದ್ದು, ಸೋಂಕಿನ ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಅವರ ಪ್ರಮುಖ ಅಂಗಗಳಾದ ಯಕೃತ್ತು ಮತ್ತು ಮೂತ್ರಪಿಂಡಗಳು ದುರ್ಬಲಗೊಳ್ಳುತ್ತಿವೆ. ಸ್ಥಿತಿಯು ಹದಗೆಡುತ್ತಿದೆ” ಎಂದು ಖಾನೌರಿ ಗಡಿಯಲ್ಲಿ ದಲ್ಲೆವಾಲ್ ಅವರನ್ನು ಪರೀಕ್ಷಿಸಿದ ವೈದ್ಯರು ಹೇಳಿದರು. ಇತ್ತೀಚಿನ ಪರೀಕ್ಷಾ ವರದಿಯ ಪ್ರಕಾರ, ಅವರ ದೇಹದಲ್ಲಿ ಕೀಟೋನ್ ಮಟ್ಟಗಳು ಸಾಕಷ್ಟು ಹೆಚ್ಚಾಗಿದ್ದು, ಅವರು ದುರ್ಬಲರಾಗಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕೇಂದ್ರದಿಂದ ಕಾನೂನು ಖಾತ್ರಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನವೆಂಬರ್ 26 ರಂದು ಉಪವಾಸ ಸತ್ಯಾಗ್ರಹ ಆರಂಭಿಸಿದ 70 ವರ್ಷದ ದಲ್ಲೆವಾಲ್, “ರೈತರನ್ನು ಪ್ರತಿಭಟನಾ ಸ್ಥಳದಿಂದ ಕಳುಹಿಸುವುದಕ್ಕೆ ಸರ್ಕಾರಕ್ಕೆ ಅವಕಾಶ ನೀಡಬಾರದು” ಎಂದು ಹೇಳಿದರು.

“ಒಂದೋ ನಾವು ನಮ್ಮ ಬೇಡಿಕೆಗಳಿಗಾಗಿ ಹೋರಾಡುತ್ತೇವೆ ಅಥವಾ ನಾವು ಇಲ್ಲಿಯೇ ಸಾಯುತ್ತೇವೆ” ಎಂದು ಧ್ವನಿವರ್ಧಕದಲ್ಲಿ ಸಂಕ್ಷಿಪ್ತ ಭಾಷಣದಲ್ಲಿ ಅವರು ತಮ್ಮ ಕ್ಷೀಣವಾದ ಧ್ವನಿಯೊಂದಿಗೆ ಹೇಳಿದರು. “ಈಗ ದೊಡ್ಡಣ್ಣ (ಹರಿಯಾಣ) ಪ್ರತಿಭಟನೆಗೆ ಸೇರಿಕೊಂಡಿದ್ದಾರೆ” ಎಂದು ಹೇಳುವ ಮೂಲಕ ಆತ್ಮವಿಶ್ವಾಸವನ್ನು ಪ್ರತಿಧ್ವನಿಸಿದರು.

2020-21ರಲ್ಲಿ ಈಗ ರದ್ದಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನದ ಹಿಂದೆ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ದಲ್ಲೆವಾಲ್, ಪಂಜಾಬ್ ರೈತರ ಇತ್ತೀಚಿನ ‘ದೆಹಲಿ ಚಲೋ’ ಮೆರವಣಿಗೆಯ ಹಿಂದಿನ ಮುಖವೂ ಹೌದು.

ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣದ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ರೈತರು ರಾಷ್ಟ್ರೀಯ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ ನಂತರ ಬಿಡಾರ ಹೂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ, ಪಂಜಾಬ್ ಸರ್ಕಾರವು ಪಟಿಯಾಲ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿಯನ್ನು ಇಡೀ ದಿನದ ಮೇಲ್ವಿಚಾರಣೆಗಾಗಿ ಸ್ಥಾಪಿಸಿದೆ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಪ್ರತಿಭಟನಾ ಸ್ಥಳದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ.

ರೈತರ ಹೋರಾಟವನ್ನು ಬೆಂಬಲಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಠಮಾರಿತನವನ್ನು ಬಿಟ್ಟು ರೈತರೊಂದಿಗೆ ಮಾತನಾಡಬೇಕೆಂದು ಕೇಳಿಕೊಂಡರು.

“ಕೇಂದ್ರ ಸರ್ಕಾರ ತನ್ನ ಮೊಂಡುತನ ಬಿಟ್ಟು ರೈತ ಸಂಘಟನೆಗಳ ಜತೆ ಮಾತುಕತೆಗೆ ದಾರಿ ಮಾಡಿಕೊಡಬೇಕು.. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಮೋದಿಜೀ ತಡೆಯಲು ಸಾಧ್ಯವಾದರೆ, 200 ಕಿ.ಮೀ ದೂರದಲ್ಲಿ ಕೂತು ಅನ್ನದಾತರೊಂದಿಗೆ ಮಾತನಾಡಬಹುದಲ್ಲವೇ? ನೀವು ಕಾಯುತ್ತಿದ್ದೀರಾ..?” ಸಿಎಂ ಮಾನ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಚಳಿಗಾಲದ ಅಧಿವೇಶನ ರದ್ದುಗೊಳಿಸಿದ ಮಣಿಪುರ ಸರ್ಕಾರ; ‘ಸಂವಿಧಾನ ನಿಯಮ ಉಲ್ಲಂಘಿಸಿಲ್ಲ’ ಎಂದ ಕಾನೂನು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...