Homeಕರ್ನಾಟಕ25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

- Advertisement -
- Advertisement -

25 ವರ್ಷಗಳ ಹಿಂದೆ ಕುಟುಂಬದೊಂದಿಗೆ ಸಂಪರ್ಕ ಕಳೆದುಕೊಂಡ ಕರ್ನಾಟಕದ 50 ವರ್ಷದ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ವೃದ್ಧಾಶ್ರಮದಲ್ಲಿದ್ದ ಮಹಿಳೆ ಸಾಕಮ್ಮ ಮತ್ತೆ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾರೆ. ಅಧಿಕಾರಿಗಳ ನೆರವಿನಿಂದ ಬುಧವಾರ ಅವರು ತನ್ನ ಮನೆಗೆ ಮರಳಿದ್ದಾರೆ.

ಬಳ್ಳಾರಿ ಜಿಲ್ಲೆಯ ಡಣನಾಯಕನಕೆರೆ ಗ್ರಾಮದ ಸಾಕಮ್ಮ ಅವರು 25 ವರ್ಷಗಳ ಹಿಂದೆ ಹೊಸಪೇಟೆಯಲ್ಲಿ ಸಂಬಂಧಿಕರ ಮದುವೆಗೆ ಮಕ್ಕಳೊಂದಿಗೆ ಹಾಜರಾಗಿದ್ದರು. ಮಾನಸಿಕ ಅಸ್ವಸ್ತರಾಗಿದ್ದ ಅವರು, ಆಕಸ್ಮಿಕವಾಗಿ ಚಂಡೀಗಢಕ್ಕೆ ರೈಲನ್ನು ಹತ್ತಿದರು. ನಂತರ, ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಕಷ್ಟಕರ ಸಂದರ್ಭಗಳಲ್ಲಿ ವಾಸಿಸುತ್ತಿದ್ದರು.

ಸಾಕಮ್ಮನ ಮನೆಯವರು ನಾಪತ್ತೆ ದೂರು ದಾಖಲಿಸಿದ್ದರು; ಇಷ್ಟು ವರ್ಷಗಳಾದರೂ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆಯ ಅಂತ್ಯ ಸಂಸ್ಕಾರವನ್ನೂ ಮಾಡಿದ್ದರು.

ಕರ್ನಾಟಕ ಮೂಲದ ಯುವ ಐಪಿಎಸ್ ಅಧಿಕಾರಿಯೊಬ್ಬರು ವೃದ್ಧಾಶ್ರಮಕ್ಕೆ ಭೇಟಿ ನೀಡಿದಾಗ ಮಹಿಳೆ ಕನ್ನಡದಲ್ಲಿ ಮಾತನಾಡುತ್ತಿರುವುದನ್ನು ಕಂಡು ಆಕೆಯ ಸಂಪರ್ಕವನ್ನು ಪತ್ತೆಹಚ್ಚಿದ್ದಾರೆ.

ಸಾಕಮ್ಮ ಅವರನ್ನು ಕರೆತರಲು ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ.

ಮಂಡಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡಿಗ ಪೊಲೀಸ್ ಅಧಿಕಾರಿ ರವಿನಂದನ್ ಬಿ ಎಂ, ಸಾಕಮ್ಮ ಅವರೊಂದಿಗೆ ಮಾತನಾಡಿದ ವಿಡಿಯೋ ಪೋಸ್ಟ್ ಮಾಡಿದ್ದರು. ನಂತರ ಈ ವಿಡಿಯೋವನ್ನು ಬೆಂಗಳೂರಿನಲ್ಲಿರುವ ತನ್ನ ಸ್ನೇಹಿತ ವಿಜಯ್ ಕುಮಾರ್ ಗೆ ಕಳುಹಿಸಿದ್ದಾರೆ. ವಿಜಯ್ ಕುಮಾರ್ ಗುರುವಾರ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ಪೋಸ್ಟ್ ನೋಡಿದ ತಕ್ಷಣ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರು ಗುರುವಾರ ಮಂಡಿ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿನಂದನ್ ಅವರನ್ನು ಸಂಪರ್ಕಿಸಿದರು. ಅಂದಿನಿಂದ ಸಮಾಜ ಕಲ್ಯಾಣ ಇಲಾಖೆಯು ಸಾಕಮ್ಮನನ್ನು ಹಿಂದಿರುಗಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.

ಮಂಡಿ ನಿರಾಶ್ರಿತರ ಕೇಂದ್ರದಲ್ಲಿರುವ ಸಾಕಮ್ಮ ಅವರನ್ನು ಕರೆತರಲು ಸಮಾಜ ಕಲ್ಯಾಣ ಇಲಾಖೆಯ ತ್ರಿಸದಸ್ಯರ ತಂಡ ತೆರಳಿತ್ತು. “ಚಂಡೀಗಢದಿಂದ ಬೆಂಗಳೂರಿಗೆ ವಿಮಾನದಲ್ಲಿ ಬರಲಿದ್ದಾರೆ. ನಂತರ, ಅವರನ್ನು ಕರೆತರುತ್ತೇವೆ” ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದರು.

ಸದ್ಯ ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯಲ್ಲಿ ವಾಸವಾಗಿರುವ ಸಾಕಮ್ಮ ಅವರ ಪುತ್ರ ಯಲ್ಲಪ್ಪ, “ನಮ್ಮ ತಾಯಿ ಚಿಕ್ಕಂದಿನಲ್ಲಿ ನಾಪತ್ತೆಯಾಗಿದ್ದರು, ಈಗ ಪತ್ತೆಯಾಗಿದ್ದಾರೆ, ನಮ್ಮ ತಾಯಿ ಮರಳಿ ಬಂದರೆ ನಮಗೆ ಸಂತೋಷವಾಗುತ್ತದೆ” ಎಂದರು.

ಸಾಕಮ್ಮ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಅವರ ಪುತ್ರ.

ಸಾಕಮ್ಮನ ಸಂಬಂಧಿಯೊಬ್ಬರು ಮಾತನಾಡಿ, “ನಮ್ಮ ಚಿಕ್ಕಮ್ಮ ನಾಪತ್ತೆಯಾಗಿ ಸುಮಾರು 20 ವರ್ಷಗಳಾಗಿವೆ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಆಕೆ ತೀರಿಕೊಂಡಿದ್ದಾಳೆಂದು ತಿಥಿ ನಡೆಸಿದ್ದೆವು. ಅಧಿಕಾರಿ, ಮೂಲತಃ ಹಾಸನ ಜಿಲ್ಲೆಯವರು, ಮಕ್ಕಳಿಗೆ ಈಗ ತಾಯಿ ಇದ್ದಾರೆ ಎಂದು ನಮಗೆ ಸಂತೋಷವಾಗಿದೆ” ಎಂದರು.

ವಿಡಿಯೋದಲ್ಲಿ ಸಾಕಮ್ಮ ತನ್ನ ಹುಟ್ಟೂರು ಹೊಸಪೇಟೆ ಸಮೀಪದ ಡಣಾನಾಯಕನಹಳ್ಳಿ ಎಂದು ಹೇಳಿದ್ದಾಳೆ. ತಾನು ರೈಲಿನಲ್ಲಿ ಮಂಡಿ ಜಿಲ್ಲೆಗೆ ಬಂದು ಕೆಲವು ವರ್ಷಗಳಿಂದ ಇಲ್ಲೇ ಇದ್ದೇನೆ ಎಂದು ಹೇಳಿದ್ದರು. ತನ್ನ ಹಳ್ಳಿಯಲ್ಲಿ ತನಗೆ ಒಬ್ಬ ಅಣ್ಣ ಮತ್ತು ತಂಗಿ ಇದ್ದಾರೆ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ; ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ, ಆದಿವಾಸಿ, ಎಡಪಕ್ಷಗಳಿಂದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...