Homeಅಂತರಾಷ್ಟ್ರೀಯಅಘ್ಘಾನಿಸ್ತಾನದ ಭಯೋತ್ಪಾದಕರ ಮೇಲೆ ಪಾಕ್ ವಾಯುದಾಳಿ: 15 ಜನ ಸಾವು; ತಾಲಿಬಾನ್ ತೀವ್ರ ಖಂಡನೆ

ಅಘ್ಘಾನಿಸ್ತಾನದ ಭಯೋತ್ಪಾದಕರ ಮೇಲೆ ಪಾಕ್ ವಾಯುದಾಳಿ: 15 ಜನ ಸಾವು; ತಾಲಿಬಾನ್ ತೀವ್ರ ಖಂಡನೆ

- Advertisement -
- Advertisement -

ಲಾಹೋರ್: ನೆರೆಯ ಅಫ್ಘಾನಿಸ್ತಾನದಲ್ಲಿನ  ಶಂಕಿತ ಭಯೋತ್ಪಾದಕರ ಮೇಲೆ ಪಾಕಿಸ್ತಾನವು ಮಂಗಳವಾರ  ತಡರಾತ್ರಿ ನಡೆಸಿದ ವಾಯುದಾಳಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ತಾಲಿಬಾನ್  ಸರಕಾರವು ಇದನ್ನು ಏಕಪಕ್ಷೀಯ ವೈಮಾನಿಕ ದಾಳಿಯೆಂದು ಖಂಡಿಸಿದೆ ಮತ್ತು ಪ್ರತೀಕಾರದ ಎಚ್ಚರಿಕೆ ನೀಡಿದೆ.

ದಾಳಿಯು ಪಾಕಿಸ್ತಾನಿ ತಾಲಿಬಾನ್‌ ಅಥವಾ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ಗಳನ್ನು ಗುರಿಯಾಗಿಸಿಕೊಂಡಿತ್ತು ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಪಕ್ಟಿಕಾ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ.

ದಾಳಿಯಲ್ಲಿ 7 ಹಳ್ಳಿಗಳನ್ನು ಗುರಿ ಮಾಡಲಾಗಿತ್ತು.  ಅವುಗಳಲ್ಲಿ ಒಂದು ಸಂಪೂರ್ಣವಾಗಿ ನಾಶವಾಗಿದೆ. ನಮ್ಮ ತರಬೇತಿ ಪರಿಕರಗಳನ್ನು ಸಂಪೂರ್ಣ  ಹಾಳುಗೆಡುವುಲಾಗಿದೆ. ಹಾಗೆಯೇ ಕೆಲವು ಭಯೋತ್ಪಾದಕರು  ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಮಾಧ್ಯಮ ವರದಿ ಮಾಡಿವೆ.

ತಾಲಿಬಾನ್‌ನ ರಕ್ಷಣಾ ಸಚಿವಾಲಯವು ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಖಂಡಿಸಿದೆ. ಪಾಕ್ ನಮ್ಮ ನಾಗರಿಕರನ್ನು ಗುರಿಯಾಗಿಸಿಕೊಂಡಿದೆ ಮತ್ತು ಈ ದಾಳಿಯ  ಬಲಿಪಶುಗಳಲ್ಲಿ ಹೆಚ್ಚಿನವರು ವಜೀರಿಸ್ತಾನ್ ಪ್ರದೇಶದ ನಿರಾಶ್ರಿತರು ಎಂದು ಹೇಳಿದೆ.

ಇಸ್ಲಾಮಿಕ್ ಎಮಿರೇಟ್ ಆಫ್ ಅಫ್ಘಾನಿಸ್ತಾನವು ಇದನ್ನು ಎಲ್ಲಾ ಅಂತರರಾಷ್ಟ್ರೀಯ ನಿಯಮಗಳನ್ನು ಗಾಳಿಗೆ ತೂರಿದ ಕ್ರೂರ ಕೃತ್ಯವೆಂದು ಪರಿಗಣಿಸಿದೆ ಮತ್ತು ಇದನ್ನು ಬಲವಾಗಿ ಖಂಡಿಸಿದೆ ಎಂದು ಆಫ್ಘಾನಿಸ್ತಾನದ ಸಚಿವಾಲಯ ಹೇಳಿದೆ.

ಪಾಕಿಸ್ತಾನಿ ತಾಲಿಬಾನ್ ಅಥವಾ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ತನ್ನ ದೇಶದ ಮೇಲೆ ಅಫ್ಘಾನ್ ನೆಲದಿಂದ ದಾಳಿ ನಡೆಸುತ್ತದೆ ಎಂದು ಪಾಕ್  ಹೇಳುತ್ತಿರುತ್ತದೆ. ಇದನ್ನು ಅಫ್ಘಾನ್  ನಿರಾಕರಿಸಿದೆ.

ವೈಮಾನಿಕ ದಾಳಿಯನ್ನು “ಹೇಡಿಗಳ ಕೃತ್ಯ” ಎಂದು ಕರೆದ ಸಚಿವಾಲಯ, ಪಾಕಿಸ್ತಾನದ ಈ “ಏಕಪಕ್ಷೀಯ ವೈಮಾನಿಕ ದಾಳಿ” ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಮತ್ತು ತನ್ನ ಭೂಪ್ರದೇಶ ಮತ್ತು ಭೂಪ್ರದೇಶದ ರಕ್ಷಣೆಯಿಂದ ಬೇರ್ಪಡಿಸಲಾಗದು  ಎಂದು ಹೇಳಿದೆ.

ಅಫ್ಘಾನಿಸ್ತಾನದ ಪಾಕಿಸ್ತಾನದ ವಿಶೇಷ ಪ್ರತಿನಿಧಿ ಮೊಹಮ್ಮದ್ ಸಾದಿಕ್ ಅವರು ಕಾಬೂಲ್‌ನಲ್ಲಿ ತಾಲಿಬಾನ್ ನಾಯಕತ್ವವನ್ನು ಭೇಟಿಯಾಗಿ ಬಾಂಧವ್ಯವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದ ಕೆಲ ಸಮಯಗಳ ನಂತರ ಈ ದಾಳಿ ಸಂಭವಿಸಿದೆ.

ಭೇಟಿಯ ಸಮಯದಲ್ಲಿ, ಸಾದಿಕ್ ಅಫ್ಘಾನಿಸ್ತಾನದ ಹಂಗಾಮಿ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿ ಅವರನ್ನು ಭೇಟಿಯಾದರು. ಅವರ ಚಿಕ್ಕಪ್ಪ ಖಲೀಲ್ ಹಕ್ಕಾನಿ ಇತ್ತೀಚೆಗೆ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದರು ಎಂದು ಇಸ್ಲಾಮಿಕ್ ಸ್ಟೇಟ್ ಗುಂಪಿನ ಪ್ರಾದೇಶಿಕ ಅಂಗಸಂಸ್ಥೆಯು ಹೇಳಿಕೊಂಡಿದೆ. ಖಲೀಲ್ ಹಕ್ಕಾನಿ ಅವರು ಅಫ್ಘಾನ್ ನಲ್ಲಿ ನಿರಾಶ್ರಿತರು ಮತ್ತು ವಾಪಸಾತಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.

2021 ರಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡಿತು ಮತ್ತು ದೇಶದಲ್ಲಿ ತಾಲಿಬಾನ್ ಸ್ವಾಧೀನಪಡಿಸಿಕೊಂಡಿರುವುದು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್(ಟಿಟಿಪಿ) ಗೆ ಮತ್ತಷ್ಟು ಸ್ಥೈರ್ಯ ಬಂದಿದೆ.  ಇದರ ನಾಯಕರು ಮತ್ತು ಹೋರಾಟಗಾರರು ಅಫ್ಘಾನಿಸ್ತಾನದಲ್ಲಿ ಅಡಗಿಕೊಂಡಿದ್ದಾರೆ ಎಂದು ಪಾಕ್ ಆರೋಪಿಸುತ್ತಿದೆ.

ಕಾಬೂಲ್‌ನಲ್ಲಿ ಅಫ್ಘಾನಿಸ್ತಾನ ಸರ್ಕಾರವು ಆಯೋಜಿಸಿದ್ದ ತಿಂಗಳುಗಳ ಮಾತುಕತೆ ವಿಫಲವಾದ ನಂತರ ಪಾಕ್ ಸರ್ಕಾರದೊಂದಿಗೆ ಏಕಪಕ್ಷೀಯವಾಗಿ ಕದನ ವಿರಾಮವನ್ನು ಕೊನೆಗೊಳಿಸಿ, ನವೆಂಬರ್ 2022 ರಿಂದ ಟಿಟಿಪಿಯು ಪಾಕಿಸ್ತಾನಿ ಸೈನಿಕರು ಮತ್ತು ಪೊಲೀಸರ ಮೇಲೆ ದಾಳಿಯನ್ನು ಹೆಚ್ಚಿಸಿದೆ. ಇತ್ತೀಚಿನ ತಿಂಗಳುಗಳಲ್ಲಿ, ಈ ಗುಂಪು ದೇಶದೊಳಗಿನ ದಾಳಿಗಳಲ್ಲಿ ಡಜನ್ ಗಟ್ಟಲೆ ಸೈನಿಕರನ್ನು ಕೊಂದುಹಾಕಿದೆ.

ಮಾರ್ಚ್‌ನಲ್ಲಿ, ಟಿಟಿಪಿಯ ಪಾಕಿಸ್ತಾನಿ ಪಡೆಗಳ ಮೇಲಿನ ಮಾರಣಾಂತಿಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನಿ ವಾಯುಪಡೆಯ ಜೆಟ್‌ಗಳು ಅಫ್ಘಾನಿಸ್ತಾನದ ಖೋಸ್ಟ್ ಮತ್ತು ಪಕ್ಟಿಕಾ ಗಡಿ ಪ್ರದೇಶಗಳಲ್ಲಿ ಇದರ ವಿರುದ್ಧ ವೈಮಾನಿಕ ದಾಳಿ ನಡೆಸಿತು. ಇದರ  ಪರಿಣಾಮವಾಗಿ ಲೆಫ್ಟಿನೆಂಟ್ ಕರ್ನಲ್ ಮತ್ತು ಕ್ಯಾಪ್ಟನ್ ಸೇರಿದಂತೆ ಏಳು ಸೈನಿಕರು ಕೊಲ್ಲಲ್ಪಟ್ಟರು. ಈ ದಾಳಿಯ ಹೊಣೆಯನ್ನು ಟಿಟಿಪಿಯ ಹಫೀಜ್ ಗುಲ್ ಬಹದ್ದೂರ್ ಗುಂಪು ಹೊತ್ತುಕೊಂಡಿತ್ತು.

25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...