Homeಮುಖಪುಟಸಿಎಂ ಅತಿಶಿ, ಕೇಜ್ರಿವಾಲ್ ಘೋಷಿಸಿದ ಯೋಜನೆ 'ನಕಲಿ' ಎಂದ ಅವರದ್ದೇ ಸರ್ಕಾರದ ಇಲಾಖೆ : ಎಎಪಿ-ಬಿಜೆಪಿ...

ಸಿಎಂ ಅತಿಶಿ, ಕೇಜ್ರಿವಾಲ್ ಘೋಷಿಸಿದ ಯೋಜನೆ ‘ನಕಲಿ’ ಎಂದ ಅವರದ್ದೇ ಸರ್ಕಾರದ ಇಲಾಖೆ : ಎಎಪಿ-ಬಿಜೆಪಿ ನಡುವೆ ಜಟಾಪಟಿ

- Advertisement -
- Advertisement -

ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಆಮ್‌ ಆದ್ಮಿ ಪಕ್ಷ (ಎಎಪಿ) ಭರ್ಜರಿ ಪ್ರಚಾರದ ಮೂಲಕ ತಯಾರಿ ನಡೆಸುತ್ತಿದೆ. ಈ ನಡುವೆ ಸರ್ಕಾರದ ಯೋಜನೆಯೊಂದರ ವಿಷಯದಲ್ಲಿ ಎಎಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ನಡುವೆ ಜಟಾಪಟಿ ಏರ್ಪಟ್ಟಿದೆ.

ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡುವ ‘ಸಂಜೀವಿನಿ’ ಎಂಬ ಯೋಜನೆಯನ್ನು ಡಿಸೆಂಬರ್ 18ರಂದು ಮಾಜಿ ಸಿಎಂ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಇದಕ್ಕೂ ಮುನ್ನ ಮಹಿಳೆಯರಿಗೆ ಮಾಸಿಕ 1 ಸಾವಿರ ರೂಪಾಯಿ ಧನ ಸಹಾಯ ನೀಡುವ ಯೋಜನೆಯನ್ನು ಕೇಜ್ರಿವಾಲ್ ಘೋಷಿಸಿದ್ದರು. ಚುನಾವಣೆಗೂ ಮೊದಲು 1 ಸಾವಿರ ರೂ. ಕೊಡಲಾಗುವುದು. ಚುನಾವಣೆ ಬಳಿಕ ಮತ್ತೆ ಅಧಿಕಾರಕ್ಕೆ ಬಂದರೆ 2, 100 ರೂ. ನೀಡಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಚುನಾವಣೆ ಪ್ರಚಾರದ ಭಾಗವಾಗಿ ಮನೆ ಮನೆಗೆ ತೆರಳಿ ಎರಡೂ ಯೋಜನೆಗಳಿಗೆ ಅರ್ಹ ಜನರನ್ನು ನೋಂದಣಿ ಮಾಡಿಸುವ ಕಾರ್ಯವನ್ನು ಸ್ವತಃ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರು, ಕಾರ್ಯಕರ್ತರು ಮಾಡುತ್ತಿದ್ದಾರೆ. ಆದರೆ, ಈ ನಡುವೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ “ನಮ್ಮ ಇಲಾಖೆಯಡಿ ‘ಸಂಜೀವಿನಿ’ ಎಂಬ ಯೋಜನೆಯೇ ಇಲ್ಲ ಎಂದಿದೆ.

“ಈ ದಿನದವರೆಗೆ ನಮ್ಮಲ್ಲಿ ‘ಸಂಜೀವಿನಿ’ ಎಂಬ ಯೋಜನೆಯೇ ಇಲ್ಲ. ಈ ಯೋಜನೆಗಾಗಿ ಹಿರಿಯ ನಾಗರಿಕರ ಮಾಹಿತಿಗಳನ್ನು ಸಂಗ್ರಹಿಸಲು ನಾವು ಯಾವುದೇ ಅಧಿಕಾರಿಗಳನ್ನು ನೇಮಿಸಿಲ್ಲ. ಯಾವುದೇ ಸಂಸ್ಥೆಗೆ ಜವಾಬ್ದಾರಿ ಕೊಟ್ಟಿಲ್ಲ. ಯೋಜನೆಯ ಹೆಸರಿನಲ್ಲಿ ಯಾವುದೇ ಕಾರ್ಡ್‌ಗಳನ್ನು ವಿತರಿಸುತ್ತಿಲ್ಲ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

“ಅಸ್ತಿತ್ವದಲ್ಲಿ ಇಲ್ಲದ ‘ಸಂಜೀವಿನಿ’ ಎಂಬ ಯೋಜನೆಯ ಹೆಸರಿನಲ್ಲಿ ಉಚಿತ ಚಿಕಿತ್ಸೆ ನೀಡುವುದಾಗಿ ಮಾಹಿತಿ ಸಂಗ್ರಹಿಸಲು ಯಾರಾದರು ಬಂದರೆ ಮಾಹಿತಿ ಕೊಡಬೇಡಿ. ಯಾವುದೇ ದಾಖಲೆಗೆ ನಿಮ್ಮ ಸಹಿ, ಹೆಬ್ಬೆಟ್ಟಿನ ಗುರುತು ಹಾಕಬೇಡಿ” ಎಂದು ಪ್ರಕಟಣೆಯಲ್ಲಿ ಎಚ್ಚರಿಕೆಯ ಸಲಹೆ ನೀಡಿದೆ.

ಕೇಜ್ರಿವಾಲ್ ಘೋಷಣೆ ಮಾಡಿರುವ ಮತ್ತು ನೋಂದಣಿ ಮಾಡಿಸುತ್ತಿರುವ ಯೋಜನೆಯನ್ನು ಅವರದ್ದೇ ಸರ್ಕಾರದ ಅಧಿಕಾರಿಗಳು ನಕಲಿ ಎಂದು ಪ್ರಕಟಣೆ ಹೊರಡಿಸಿರುವುದು ಎಎಪಿ ನಾಯಕರು ಮುಖಭಂಗ ಅನುಭವಿಸುವಂತೆ ಮಾಡಿದೆ.

ಅಧಿಕಾರಿಗಳ ವಿರುದ್ದ ಕ್ರಮ : ಸಂಜಯ್ ಸಿಂಗ್

ಬಿಜೆಪಿಯ ಒತಡಕ್ಕೆ ಒಳಗಾಗಿ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ ಎಂದು ಎಎಪಿ ಹೇಳಿದೆ. ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಎಎಪಿ ಸಂಸದ ಸಂಜಯ್ ಸಿಂಗ್ ತಿಳಿಸಿದ್ದಾರೆ.

“ಯಾಕೆ ಇಷ್ಟೊಂದು ದ್ವೇಷ? ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯ ವಿರುದ್ದ ಪ್ರಕಟಣೆ ಹೊರಡಿಸುವಂತೆ ಬಿಜೆಪಿ ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ. ಒತ್ತಡಕ್ಕೆ ಮಣಿದು ಪ್ರಕಟಣೆ ಹೊರಡಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಬಿಜೆಪಿ ಹಬ್ಬಿಸುವ ಸುಳ್ಳುಗಳನ್ನು ಸಾರ್ವಜನಿಕರು ನಂಬುವುದಿಲ್ಲ” ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.

ದೆಹಲಿ ಜನರನ್ನು ವಂಚಿಸಿದ ಕೇಜ್ರಿವಾಲ್ 

“ಅರವಿಂದ್ ಕೇಜ್ರಿವಾಲ್ ಅಥವಾ ಎಎಪಿ ಸರ್ಕಾರ ದೆಹಲಿ ಸುಳ್ಳು ಯೋಜನೆಯ ಹೆಸರಿನಲ್ಲಿ ದೆಹಲಿಯ ಜನರನ್ನು ವಂಚಿಸಿದೆ. ಅವರ ವಂಚನೆಯನ್ನು ಅಧಿಕಾರಿಗಳು ಬಯಲು ಮಾಡಿದ್ದಾರೆ. ಈ ಕಾರಣಕ್ಕೆ ಈಗ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಸುಳ್ಳು ಯೋಜನೆಯ ಬಗ್ಗೆ ಡಿಜಿಟಲ್ ವೇದಿಕೆಗಳಲ್ಲಿ ಪ್ರಚಾರ ಮಾಡಿ ಕೇಜ್ರಿವಾಲ್ ದೆಹಲಿ ಜನರಿಗೆ ಮೋಸ ಮಾಡಿದ್ದಾರೆ. ಸಿಎಂ ಅತಿಶಿ ಅವರ ಖಾತೆಯಿಂದ ಹಣ ಡ್ರಾ ಅಗ್ತಿದೆ. ಅದು ಎಲ್ಲಿಗೆ ಹೋಗುತ್ತಿದೆ ಗೊತ್ತಿಲ್ಲ. ಇದರ ಬಗ್ಗೆ ಅವರು ಏಕೆ ಸುಮ್ಮನಿದ್ದಾರೆ?” ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ಕೇಜ್ರಿವಾಲ್ V/S ಅತಿಶಿ 

ಅರವಿಂದ್ ಕೇಜ್ರಿವಾಲ್ ಮತ್ತು ಸಿಎಂ ಅತಿಶಿ ನಡುವೆ ಹೊಂದಾಣಿಕೆಯಿಲ್ಲ. ಈ ಕಾರಣಕ್ಕೆ ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯನ್ನು ಅಧಿಕಾರಿಗಳು ನಕಲಿ ಎಂದಿದ್ದಾರೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಕೇಜ್ರಿವಾಲ್ ಘೋಷಿಸಿದ ಯೋಜನೆ ನಕಲಿ : ಕಾಂಗ್ರೆಸ್

ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಕೂಡ ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯನ್ನು ವಂಚನೆ ಎಂದು ಹೇಳಿದ್ದಾರೆ. “ಈ ಹಿಂದೆಯೂ ನಾವು ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದೆವು… ಹಣಕಾಸು ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಿದಾಗ ಹಣ ಬಿಡುಗಡೆ ಮಾಡಲಾಗ್ತಿದೆ. ಇದು ವಂಚನೆಯಾಗಿದೆ. ಯೋಜನೆಗಳಿಗೆ ನೋಂದಾಯಿಸಲು ಜನರ ಮಾಹಿತಿ ಸಂಗ್ರಹಿಸುವುದು ಡೇಟಾ ಸಂಗ್ರಹಿಸುವ ಮಾರ್ಗವಾಗಿದೆ” ಎಂದಿದ್ದಾರೆ.

ಸಿಎಂ ಅತಿಶಿ ಅವರನ್ನು ಶೀಘ್ರದಲ್ಲೇ ಬಂದಿಸಬಹುದು : ಕೇಜ್ರಿವಾಲ್

ಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಕುರಿತು ಇಂದು (ಡಿ.25) ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು “ನಕಲಿ ಪ್ರಕರಣದಲ್ಲಿ ಅತಿಶಿ ಅವರ ಬಂಧನಕ್ಕೂ ಮುನ್ನ ಎಎಪಿಯ ಹಿರಿಯ ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ. ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿ ಯೋಜನೆಯಂತಹ ಕಲ್ಯಾಣ ಯೋಜನೆಗಳನ್ನು ಕಂಡು ಕೆಲವರು ನಲುಗಿ ಹೋಗಿದ್ದಾರೆ. ಹೀಗಾಗಿ, ಇಂತಹ ಕೆಲಸಕ್ಕೆ ಕೈ ಹಾಕಬಹುದು” ಎಂದಿದ್ದಾರೆ.

ಇದನ್ನೂ ಓದಿ : ʼಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆʼ : ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...