Homeಮುಖಪುಟಸಿಎಂ ಅತಿಶಿ, ಕೇಜ್ರಿವಾಲ್ ಘೋಷಿಸಿದ ಯೋಜನೆ 'ನಕಲಿ' ಎಂದ ಅವರದ್ದೇ ಸರ್ಕಾರದ ಇಲಾಖೆ : ಎಎಪಿ-ಬಿಜೆಪಿ...

ಸಿಎಂ ಅತಿಶಿ, ಕೇಜ್ರಿವಾಲ್ ಘೋಷಿಸಿದ ಯೋಜನೆ ‘ನಕಲಿ’ ಎಂದ ಅವರದ್ದೇ ಸರ್ಕಾರದ ಇಲಾಖೆ : ಎಎಪಿ-ಬಿಜೆಪಿ ನಡುವೆ ಜಟಾಪಟಿ

- Advertisement -
- Advertisement -

ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಆಮ್‌ ಆದ್ಮಿ ಪಕ್ಷ (ಎಎಪಿ) ಭರ್ಜರಿ ಪ್ರಚಾರದ ಮೂಲಕ ತಯಾರಿ ನಡೆಸುತ್ತಿದೆ. ಈ ನಡುವೆ ಸರ್ಕಾರದ ಯೋಜನೆಯೊಂದರ ವಿಷಯದಲ್ಲಿ ಎಎಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ನಡುವೆ ಜಟಾಪಟಿ ಏರ್ಪಟ್ಟಿದೆ.

ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡುವ ‘ಸಂಜೀವಿನಿ’ ಎಂಬ ಯೋಜನೆಯನ್ನು ಡಿಸೆಂಬರ್ 18ರಂದು ಮಾಜಿ ಸಿಎಂ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಇದಕ್ಕೂ ಮುನ್ನ ಮಹಿಳೆಯರಿಗೆ ಮಾಸಿಕ 1 ಸಾವಿರ ರೂಪಾಯಿ ಧನ ಸಹಾಯ ನೀಡುವ ಯೋಜನೆಯನ್ನು ಕೇಜ್ರಿವಾಲ್ ಘೋಷಿಸಿದ್ದರು. ಚುನಾವಣೆಗೂ ಮೊದಲು 1 ಸಾವಿರ ರೂ. ಕೊಡಲಾಗುವುದು. ಚುನಾವಣೆ ಬಳಿಕ ಮತ್ತೆ ಅಧಿಕಾರಕ್ಕೆ ಬಂದರೆ 2, 100 ರೂ. ನೀಡಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಚುನಾವಣೆ ಪ್ರಚಾರದ ಭಾಗವಾಗಿ ಮನೆ ಮನೆಗೆ ತೆರಳಿ ಎರಡೂ ಯೋಜನೆಗಳಿಗೆ ಅರ್ಹ ಜನರನ್ನು ನೋಂದಣಿ ಮಾಡಿಸುವ ಕಾರ್ಯವನ್ನು ಸ್ವತಃ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರು, ಕಾರ್ಯಕರ್ತರು ಮಾಡುತ್ತಿದ್ದಾರೆ. ಆದರೆ, ಈ ನಡುವೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ “ನಮ್ಮ ಇಲಾಖೆಯಡಿ ‘ಸಂಜೀವಿನಿ’ ಎಂಬ ಯೋಜನೆಯೇ ಇಲ್ಲ ಎಂದಿದೆ.

“ಈ ದಿನದವರೆಗೆ ನಮ್ಮಲ್ಲಿ ‘ಸಂಜೀವಿನಿ’ ಎಂಬ ಯೋಜನೆಯೇ ಇಲ್ಲ. ಈ ಯೋಜನೆಗಾಗಿ ಹಿರಿಯ ನಾಗರಿಕರ ಮಾಹಿತಿಗಳನ್ನು ಸಂಗ್ರಹಿಸಲು ನಾವು ಯಾವುದೇ ಅಧಿಕಾರಿಗಳನ್ನು ನೇಮಿಸಿಲ್ಲ. ಯಾವುದೇ ಸಂಸ್ಥೆಗೆ ಜವಾಬ್ದಾರಿ ಕೊಟ್ಟಿಲ್ಲ. ಯೋಜನೆಯ ಹೆಸರಿನಲ್ಲಿ ಯಾವುದೇ ಕಾರ್ಡ್‌ಗಳನ್ನು ವಿತರಿಸುತ್ತಿಲ್ಲ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

“ಅಸ್ತಿತ್ವದಲ್ಲಿ ಇಲ್ಲದ ‘ಸಂಜೀವಿನಿ’ ಎಂಬ ಯೋಜನೆಯ ಹೆಸರಿನಲ್ಲಿ ಉಚಿತ ಚಿಕಿತ್ಸೆ ನೀಡುವುದಾಗಿ ಮಾಹಿತಿ ಸಂಗ್ರಹಿಸಲು ಯಾರಾದರು ಬಂದರೆ ಮಾಹಿತಿ ಕೊಡಬೇಡಿ. ಯಾವುದೇ ದಾಖಲೆಗೆ ನಿಮ್ಮ ಸಹಿ, ಹೆಬ್ಬೆಟ್ಟಿನ ಗುರುತು ಹಾಕಬೇಡಿ” ಎಂದು ಪ್ರಕಟಣೆಯಲ್ಲಿ ಎಚ್ಚರಿಕೆಯ ಸಲಹೆ ನೀಡಿದೆ.

ಕೇಜ್ರಿವಾಲ್ ಘೋಷಣೆ ಮಾಡಿರುವ ಮತ್ತು ನೋಂದಣಿ ಮಾಡಿಸುತ್ತಿರುವ ಯೋಜನೆಯನ್ನು ಅವರದ್ದೇ ಸರ್ಕಾರದ ಅಧಿಕಾರಿಗಳು ನಕಲಿ ಎಂದು ಪ್ರಕಟಣೆ ಹೊರಡಿಸಿರುವುದು ಎಎಪಿ ನಾಯಕರು ಮುಖಭಂಗ ಅನುಭವಿಸುವಂತೆ ಮಾಡಿದೆ.

ಅಧಿಕಾರಿಗಳ ವಿರುದ್ದ ಕ್ರಮ : ಸಂಜಯ್ ಸಿಂಗ್

ಬಿಜೆಪಿಯ ಒತಡಕ್ಕೆ ಒಳಗಾಗಿ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ ಎಂದು ಎಎಪಿ ಹೇಳಿದೆ. ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಎಎಪಿ ಸಂಸದ ಸಂಜಯ್ ಸಿಂಗ್ ತಿಳಿಸಿದ್ದಾರೆ.

“ಯಾಕೆ ಇಷ್ಟೊಂದು ದ್ವೇಷ? ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯ ವಿರುದ್ದ ಪ್ರಕಟಣೆ ಹೊರಡಿಸುವಂತೆ ಬಿಜೆಪಿ ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ. ಒತ್ತಡಕ್ಕೆ ಮಣಿದು ಪ್ರಕಟಣೆ ಹೊರಡಿಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಬಿಜೆಪಿ ಹಬ್ಬಿಸುವ ಸುಳ್ಳುಗಳನ್ನು ಸಾರ್ವಜನಿಕರು ನಂಬುವುದಿಲ್ಲ” ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.

ದೆಹಲಿ ಜನರನ್ನು ವಂಚಿಸಿದ ಕೇಜ್ರಿವಾಲ್ 

“ಅರವಿಂದ್ ಕೇಜ್ರಿವಾಲ್ ಅಥವಾ ಎಎಪಿ ಸರ್ಕಾರ ದೆಹಲಿ ಸುಳ್ಳು ಯೋಜನೆಯ ಹೆಸರಿನಲ್ಲಿ ದೆಹಲಿಯ ಜನರನ್ನು ವಂಚಿಸಿದೆ. ಅವರ ವಂಚನೆಯನ್ನು ಅಧಿಕಾರಿಗಳು ಬಯಲು ಮಾಡಿದ್ದಾರೆ. ಈ ಕಾರಣಕ್ಕೆ ಈಗ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಸುಳ್ಳು ಯೋಜನೆಯ ಬಗ್ಗೆ ಡಿಜಿಟಲ್ ವೇದಿಕೆಗಳಲ್ಲಿ ಪ್ರಚಾರ ಮಾಡಿ ಕೇಜ್ರಿವಾಲ್ ದೆಹಲಿ ಜನರಿಗೆ ಮೋಸ ಮಾಡಿದ್ದಾರೆ. ಸಿಎಂ ಅತಿಶಿ ಅವರ ಖಾತೆಯಿಂದ ಹಣ ಡ್ರಾ ಅಗ್ತಿದೆ. ಅದು ಎಲ್ಲಿಗೆ ಹೋಗುತ್ತಿದೆ ಗೊತ್ತಿಲ್ಲ. ಇದರ ಬಗ್ಗೆ ಅವರು ಏಕೆ ಸುಮ್ಮನಿದ್ದಾರೆ?” ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ಕೇಜ್ರಿವಾಲ್ V/S ಅತಿಶಿ 

ಅರವಿಂದ್ ಕೇಜ್ರಿವಾಲ್ ಮತ್ತು ಸಿಎಂ ಅತಿಶಿ ನಡುವೆ ಹೊಂದಾಣಿಕೆಯಿಲ್ಲ. ಈ ಕಾರಣಕ್ಕೆ ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯನ್ನು ಅಧಿಕಾರಿಗಳು ನಕಲಿ ಎಂದಿದ್ದಾರೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಕೇಜ್ರಿವಾಲ್ ಘೋಷಿಸಿದ ಯೋಜನೆ ನಕಲಿ : ಕಾಂಗ್ರೆಸ್

ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಕೂಡ ಕೇಜ್ರಿವಾಲ್ ಘೋಷಣೆ ಮಾಡಿರುವ ಯೋಜನೆಯನ್ನು ವಂಚನೆ ಎಂದು ಹೇಳಿದ್ದಾರೆ. “ಈ ಹಿಂದೆಯೂ ನಾವು ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದೆವು… ಹಣಕಾಸು ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಿದಾಗ ಹಣ ಬಿಡುಗಡೆ ಮಾಡಲಾಗ್ತಿದೆ. ಇದು ವಂಚನೆಯಾಗಿದೆ. ಯೋಜನೆಗಳಿಗೆ ನೋಂದಾಯಿಸಲು ಜನರ ಮಾಹಿತಿ ಸಂಗ್ರಹಿಸುವುದು ಡೇಟಾ ಸಂಗ್ರಹಿಸುವ ಮಾರ್ಗವಾಗಿದೆ” ಎಂದಿದ್ದಾರೆ.

ಸಿಎಂ ಅತಿಶಿ ಅವರನ್ನು ಶೀಘ್ರದಲ್ಲೇ ಬಂದಿಸಬಹುದು : ಕೇಜ್ರಿವಾಲ್

ಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಕುರಿತು ಇಂದು (ಡಿ.25) ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು “ನಕಲಿ ಪ್ರಕರಣದಲ್ಲಿ ಅತಿಶಿ ಅವರ ಬಂಧನಕ್ಕೂ ಮುನ್ನ ಎಎಪಿಯ ಹಿರಿಯ ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ. ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿ ಯೋಜನೆಯಂತಹ ಕಲ್ಯಾಣ ಯೋಜನೆಗಳನ್ನು ಕಂಡು ಕೆಲವರು ನಲುಗಿ ಹೋಗಿದ್ದಾರೆ. ಹೀಗಾಗಿ, ಇಂತಹ ಕೆಲಸಕ್ಕೆ ಕೈ ಹಾಕಬಹುದು” ಎಂದಿದ್ದಾರೆ.

ಇದನ್ನೂ ಓದಿ : ʼಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆʼ : ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...