Homeಮುಖಪುಟಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

ಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿರುವ ಹಿನ್ನೆಲೆ ಸತತ ಎರಡನೇ ವರ್ಷವೂ ಏಸು ಕ್ರಿಸ್ತನ ಜನ್ಮ ಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಜನರು ಸಂಭ್ರವಿಲ್ಲದ ಸರಳ ಕ್ರಿಸ್‌ಮಸ್ ಆಚರಿಸಿದರು.

ಕ್ರಿಸ್‌ಮಸ್‌ ಮುನ್ನಾದಿನ ಸಂಜೆ (ಕ್ರಿಸ್‌ಮಸ್‌ ಈವ್) ಬೆಥ್ಲೆಹೆಮ್‌ನ ಐತಿಹಾಸಿಕ ಬೀದಿಗಳಲ್ಲಿ ವಿಶೇಷ ವಸ್ತ್ರ ಧರಿಸಿ ಮೆರವಣಿಗೆ ನಡೆಸಿದ ‘ಟೆರ್ರಾ ಸ್ಯಾಂಕ್ಟಾ ಸ್ಕೌಟ್ ಟ್ರೂಪ್’ ತಂಡದ ಪುಟಾಣಿ ಮಕ್ಕಳು ‘ನಮಗೆ ಸಾವು ಬೇಡ, ಜೀವನ ಬೇಕು. ಗಾಝಾದಲ್ಲಿ ನರಮೇಧ ನಿಲ್ಲಿಸಿ’ ಎಂಬ ಆಗ್ರಹ ವ್ಯಕ್ತಪಡಿಸಿದರು.

ಸತತ ಎರಡನೇ ವರ್ಷ ಈ ಬಾರಿಯೂ ಬೆತ್ಮಹೆಮ್‌ನ ಕ್ರಿಸ್‌ಮಸ್‌ ಸಂಭ್ರಮದ ಮೇಲೆ ಯುದ್ದದ ಕಾರ್ಮೋಡ ಕವಿದಿತ್ತು. ಕಳೆದ ವರ್ಷವೂ ಬೆಥ್ಲೆಹೆಮ್‌ನಲ್ಲಿ ಅದ್ದೂರಿ ಕ್ರಿಸ್‌ಮಸ್ ಆಚರಣೆಯನ್ನು ರದ್ದುಗೊಳಿಸಲಾಗಿತ್ತು.

ಒಂದು ದೊಡ್ಡ ಕ್ರಿಸ್ಮಸ್ ಗಿಡವನ್ನು ಬೆಥ್ಲೆಹೆಮ್‌ನ ಚರ್ಚ್‌ ಬಳಿಯ (ಚರ್ಚ್ ಆಫ್ ನೇಟಿವಿಟಿ) ಐತಿಹಾಸಿಕ ಮ್ಯಾಂಗರ್ ಸ್ಕ್ವೇರ್‌ ಗುಹೆಯೊಂದರ ಮೇಲೆ ಪ್ರತಿವರ್ಷ ಕ್ರಿಸ್‌ಮಸ್‌ ವೇಳೆ ನಿಲ್ಲಿಸಲಾಗುತ್ತದೆ. ಈ ಜಾಗದಲ್ಲಿ ಏಸು ಕ್ರಿಸ್ತ 2,000 ವರ್ಷಗಳ ಹಿಂದೆ ಜನಿಸಿದರು ಎಂದು ಕ್ರಿಶ್ಚಿಯನ್ನರು ನಂಬುತ್ತಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಇಲ್ಲಿ ಸಂಭ್ರಮಕ್ಕೆ ಕಂಡಿಲ್ಲ.

ಕಳೆದ ವರ್ಷದಂತೆ ಈ ವರ್ಷವೂ ಬೆಥ್ಲೆಹೆಮ್‌ ಮುನ್ಸಿಪಾಲಿಟಿ ಗಾಝಾದಲ್ಲಿ ನರಮೇಧ ನಡೆಯುತ್ತಿರುವ ಹಿನ್ನೆಲೆ ಸರಳ ಕ್ರಿಸ್‌ಮಸ್‌ ಆಚರಣೆಯ ನಿರ್ಧಾರ ಕೈಗೊಂಡಿದೆ. ಇಸ್ರೇಲ್‌ನಲ್ಲಿರುವ ಸುಮಾರು 185, 000 ಮತ್ತು ಪ್ಯಾಲೆಸ್ತೀನ್ ಭೂ ಪ್ರದೇಶದ ವ್ಯಾಪ್ತಿಯಲ್ಲಿರುವ ಸುಮಾರು 47, 000 ಕ್ರಿಶ್ಚಿಯನ್ನರು ಶಾಂತಿಯುತ ಮತ್ತು ನೆಮ್ಮದಿಯ ಭವಿಷ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಈ ದುಖಃವನ್ನು ಕೊನೆಗೊಳಿಸಿ, ಶಾಂತಿಯ ವಾತಾವರಣ ನೀಡುವಂತೆ ನಾವು ಏಸುಕ್ರಿಸ್ತನಲ್ಲಿ ಪ್ರಾರ್ಥಿಸುತ್ತೇವೆ ಎಂದು ಆಂಟನ್ ಸಲ್ಮಾನ್ ಹೇಳಿದ್ದಾರೆ.

ಕಳೆದ ಭಾನುವಾರ ಗಾಝಾದಲ್ಲಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಜೆರುಸಲೆಮ್‌ನ ಆರ್ಚ್‌ಬಿಷಪ್ ಪಿಯರ್‌ಬಟ್ಟಿಸ್ಟಾ ಪಿಜ್ಜಾಬಲ್ಲಾ ಅವರು ಕ್ರಿಸ್‌ಮಸ್‌ ಈವ್‌ ದಿನ ಬೆಥ್ಲೆಹೆಮ್‌ನಲ್ಲಿ ಪ್ರಾರ್ಥನೆಗೆ ನೇತೃತ್ವ ನೀಡುವಾಗಲೂ ಶಾಂತಿಗಾಗಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.

“ನಾನು ನಿನ್ನೆಯಷ್ಟೇ ಗಾಝಾದಿಂದ ಬಂದೆ. ಅಲ್ಲಿ ಎಲ್ಲವನ್ನೂ ನಾಶಮಾಡಲಾಗಿದೆ. ಅಲ್ಲಿನ ಶೋಚಣೀಯ ಸ್ಥಿತಿಯನ್ನು ನಾನು ಕಣ್ಣಾರೆ ನೋಡಿದೆ. ಆದರೆ, ಗಾಝಾದ ಜನತೆ ಬಿಟ್ಟುಕೊಡುವರಲ್ಲ. ಅವರು ಆತ್ಮವಿಶ್ವಾಸದಲ್ಲಿದ್ದಾರೆ ಎಂದು ಪಿಯರ್‌ಬಟ್ಟಿಸ್ಟಾ ಅವರು ಬೇಸರದ ಮಾತುಗಳನ್ನು ಆಡಿದ್ದಾರೆ.

ಬೆಥ್ಲೆಹೆಮ್‌ನ ಚರ್ಚ್ ಆಫ್ ನೇಟಿವಿಟಿ ಬಳಿ ಕ್ರಿಸ್‌ಮಸ್ ಈವ್ ದಿನ ಪ್ಯಾಲೆಸ್ತೀನ್ ಜನತೆ ಕೂಡ ವಿಶೇಷ ಮೌನ ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಗಾಝಾದ ನರಮೇಧವನ್ನು ಖಂಡಿಸಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಆಚರಣೆ

ಗಾಝಾದಲ್ಲಿ ಇಸ್ರೇಲ್ ಆಕ್ರಮಣದಿಂದ ಕೇವಲ ಮುಸ್ಲಿಮರಿಗೆ ಮಾತ್ರ ಸಮಸ್ಯೆಯಾಗಿಲ್ಲ. ಅಲ್ಲಿನ ಸ್ಥಳೀಯ ಕ್ರೈಸ್ತರು ಕೂಡ ತಮ್ಮದೆಲ್ಲವನ್ನು ಕಳೆದುಕೊಂಡಿದ್ದಾರೆ. ಸುದ್ದಿ ಸಂಸ್ಥೆ ಅಲ್‌-ಜಝೀರಾ ಜೊತೆ ಮಾತನಾಡಿರುವ ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ “ಕಳೆದ 14 ತಿಂಗಳಿನಿಂದ ನಾವು ಸೇಂಟ್ ಪೋರ್ಫಿರಿಯಸ್ ಮೈದಾನದಲ್ಲಿ ಮಲಗುತ್ತಿದ್ದೇವೆ. ನಮಗೆಲ್ಲಿಯ ಕ್ರಿಸ್‌ಮಸ್‌ ಸಂಭ್ರಮ? ಎಂದು ಪ್ರಶ್ನಿಸಿದ್ದಾರೆ.

ಗಾಝಾ ನಗರದ ಪ್ರಾಚೀನ ಗ್ರೀಕ್ ಆರ್ಥೊಡಾಕ್ಸ್ ಚರ್ಚ್ ಬಳಿಯ ಕಟ್ಟಡವೊಂದಕ್ಕೆ ಕಳೆದ ವರ್ಷ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಮೂವರನ್ನು ಹತ್ಯೆ ಮಾಡಿತ್ತು.

PC ; nytimes.com

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದ ದಿನದಿಂದ ಅಲ್ಲಿನ ಕ್ರೈಸ್ತ ಸಮುದಾಯದ ಜನರು ಸೇಂಟ್ ಪೋರ್ಫಿರಿಯಸ್ ಮತ್ತು ಹೋಲಿ ಫ್ಯಾಮಿಲಿ ಚರ್ಚ್‌ಗಳಲ್ಲಿ ಉಳಿದುಕೊಂಡಿದ್ದಾರೆ. ಅವರಿಗೆ ಅಲ್ಲಿ ಯಾವುದೇ ವ್ಯವಸ್ಥೆಗಳಿಲ್ಲದೆ, ಸಂಕಷ್ಟದ ಜೀವನ ನಡೆಸುತ್ತಿದ್ಧಾರೆ.

“ನಾವು ತುಂಬಾ ದುಖಃದಲ್ಲಿದ್ದೇವೆ. ಶಾಂತಿಗಾಗಿ ಪ್ರಾರ್ಥಿಸುವುದು ಬಿಟ್ಟರೆ ಬೇರೇನು ಇಲ್ಲ” ಎಂದು ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ ಹೇಳಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಎಂದರೆ, ಅಲ್ಲಿ ಯಾವುದೇ ಆಚರಣೆ ಸಂಭ್ರಮವಿಲ್ಲ. ಜನರು ದುಖಃದ ನಡುವೆ ಮನಸ್ಸಿನಲ್ಲೇ ಕ್ರಿಸ್‌ಮಸ್‌ ಆಚರಿಸುತ್ತಿದ್ದಾರೆ ಎಂದು ವರದಿಯೊಂದು ಹೇಳಿದೆ.

ಇದನ್ನೂ ಓದಿ : ರಷ್ಯಾಕ್ಕೆ ತೆರಳುತ್ತಿದ್ದ ವಿಮಾನ ಕಝಾಕಿಸ್ತಾನ್‌ನದಲ್ಲಿ ಪತನ; 42 ಮಂದಿ ಸಾವನ್ನಪ್ಪಿರುವ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...