Homeಮುಖಪುಟಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

ಗಾಝಾದಲ್ಲಿ ನರಮೇಧ : ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಸತತ ಎರಡನೇ ವರ್ಷವೂ ಕಳೆಗುಂದಿದ ಕ್ರಿಸ್‌ಮಸ್

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿರುವ ಹಿನ್ನೆಲೆ ಸತತ ಎರಡನೇ ವರ್ಷವೂ ಏಸು ಕ್ರಿಸ್ತನ ಜನ್ಮ ಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಜನರು ಸಂಭ್ರವಿಲ್ಲದ ಸರಳ ಕ್ರಿಸ್‌ಮಸ್ ಆಚರಿಸಿದರು.

ಕ್ರಿಸ್‌ಮಸ್‌ ಮುನ್ನಾದಿನ ಸಂಜೆ (ಕ್ರಿಸ್‌ಮಸ್‌ ಈವ್) ಬೆಥ್ಲೆಹೆಮ್‌ನ ಐತಿಹಾಸಿಕ ಬೀದಿಗಳಲ್ಲಿ ವಿಶೇಷ ವಸ್ತ್ರ ಧರಿಸಿ ಮೆರವಣಿಗೆ ನಡೆಸಿದ ‘ಟೆರ್ರಾ ಸ್ಯಾಂಕ್ಟಾ ಸ್ಕೌಟ್ ಟ್ರೂಪ್’ ತಂಡದ ಪುಟಾಣಿ ಮಕ್ಕಳು ‘ನಮಗೆ ಸಾವು ಬೇಡ, ಜೀವನ ಬೇಕು. ಗಾಝಾದಲ್ಲಿ ನರಮೇಧ ನಿಲ್ಲಿಸಿ’ ಎಂಬ ಆಗ್ರಹ ವ್ಯಕ್ತಪಡಿಸಿದರು.

ಸತತ ಎರಡನೇ ವರ್ಷ ಈ ಬಾರಿಯೂ ಬೆತ್ಮಹೆಮ್‌ನ ಕ್ರಿಸ್‌ಮಸ್‌ ಸಂಭ್ರಮದ ಮೇಲೆ ಯುದ್ದದ ಕಾರ್ಮೋಡ ಕವಿದಿತ್ತು. ಕಳೆದ ವರ್ಷವೂ ಬೆಥ್ಲೆಹೆಮ್‌ನಲ್ಲಿ ಅದ್ದೂರಿ ಕ್ರಿಸ್‌ಮಸ್ ಆಚರಣೆಯನ್ನು ರದ್ದುಗೊಳಿಸಲಾಗಿತ್ತು.

ಒಂದು ದೊಡ್ಡ ಕ್ರಿಸ್ಮಸ್ ಗಿಡವನ್ನು ಬೆಥ್ಲೆಹೆಮ್‌ನ ಚರ್ಚ್‌ ಬಳಿಯ (ಚರ್ಚ್ ಆಫ್ ನೇಟಿವಿಟಿ) ಐತಿಹಾಸಿಕ ಮ್ಯಾಂಗರ್ ಸ್ಕ್ವೇರ್‌ ಗುಹೆಯೊಂದರ ಮೇಲೆ ಪ್ರತಿವರ್ಷ ಕ್ರಿಸ್‌ಮಸ್‌ ವೇಳೆ ನಿಲ್ಲಿಸಲಾಗುತ್ತದೆ. ಈ ಜಾಗದಲ್ಲಿ ಏಸು ಕ್ರಿಸ್ತ 2,000 ವರ್ಷಗಳ ಹಿಂದೆ ಜನಿಸಿದರು ಎಂದು ಕ್ರಿಶ್ಚಿಯನ್ನರು ನಂಬುತ್ತಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಇಲ್ಲಿ ಸಂಭ್ರಮಕ್ಕೆ ಕಂಡಿಲ್ಲ.

ಕಳೆದ ವರ್ಷದಂತೆ ಈ ವರ್ಷವೂ ಬೆಥ್ಲೆಹೆಮ್‌ ಮುನ್ಸಿಪಾಲಿಟಿ ಗಾಝಾದಲ್ಲಿ ನರಮೇಧ ನಡೆಯುತ್ತಿರುವ ಹಿನ್ನೆಲೆ ಸರಳ ಕ್ರಿಸ್‌ಮಸ್‌ ಆಚರಣೆಯ ನಿರ್ಧಾರ ಕೈಗೊಂಡಿದೆ. ಇಸ್ರೇಲ್‌ನಲ್ಲಿರುವ ಸುಮಾರು 185, 000 ಮತ್ತು ಪ್ಯಾಲೆಸ್ತೀನ್ ಭೂ ಪ್ರದೇಶದ ವ್ಯಾಪ್ತಿಯಲ್ಲಿರುವ ಸುಮಾರು 47, 000 ಕ್ರಿಶ್ಚಿಯನ್ನರು ಶಾಂತಿಯುತ ಮತ್ತು ನೆಮ್ಮದಿಯ ಭವಿಷ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಈ ದುಖಃವನ್ನು ಕೊನೆಗೊಳಿಸಿ, ಶಾಂತಿಯ ವಾತಾವರಣ ನೀಡುವಂತೆ ನಾವು ಏಸುಕ್ರಿಸ್ತನಲ್ಲಿ ಪ್ರಾರ್ಥಿಸುತ್ತೇವೆ ಎಂದು ಆಂಟನ್ ಸಲ್ಮಾನ್ ಹೇಳಿದ್ದಾರೆ.

ಕಳೆದ ಭಾನುವಾರ ಗಾಝಾದಲ್ಲಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಜೆರುಸಲೆಮ್‌ನ ಆರ್ಚ್‌ಬಿಷಪ್ ಪಿಯರ್‌ಬಟ್ಟಿಸ್ಟಾ ಪಿಜ್ಜಾಬಲ್ಲಾ ಅವರು ಕ್ರಿಸ್‌ಮಸ್‌ ಈವ್‌ ದಿನ ಬೆಥ್ಲೆಹೆಮ್‌ನಲ್ಲಿ ಪ್ರಾರ್ಥನೆಗೆ ನೇತೃತ್ವ ನೀಡುವಾಗಲೂ ಶಾಂತಿಗಾಗಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.

“ನಾನು ನಿನ್ನೆಯಷ್ಟೇ ಗಾಝಾದಿಂದ ಬಂದೆ. ಅಲ್ಲಿ ಎಲ್ಲವನ್ನೂ ನಾಶಮಾಡಲಾಗಿದೆ. ಅಲ್ಲಿನ ಶೋಚಣೀಯ ಸ್ಥಿತಿಯನ್ನು ನಾನು ಕಣ್ಣಾರೆ ನೋಡಿದೆ. ಆದರೆ, ಗಾಝಾದ ಜನತೆ ಬಿಟ್ಟುಕೊಡುವರಲ್ಲ. ಅವರು ಆತ್ಮವಿಶ್ವಾಸದಲ್ಲಿದ್ದಾರೆ ಎಂದು ಪಿಯರ್‌ಬಟ್ಟಿಸ್ಟಾ ಅವರು ಬೇಸರದ ಮಾತುಗಳನ್ನು ಆಡಿದ್ದಾರೆ.

ಬೆಥ್ಲೆಹೆಮ್‌ನ ಚರ್ಚ್ ಆಫ್ ನೇಟಿವಿಟಿ ಬಳಿ ಕ್ರಿಸ್‌ಮಸ್ ಈವ್ ದಿನ ಪ್ಯಾಲೆಸ್ತೀನ್ ಜನತೆ ಕೂಡ ವಿಶೇಷ ಮೌನ ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಗಾಝಾದ ನರಮೇಧವನ್ನು ಖಂಡಿಸಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಆಚರಣೆ

ಗಾಝಾದಲ್ಲಿ ಇಸ್ರೇಲ್ ಆಕ್ರಮಣದಿಂದ ಕೇವಲ ಮುಸ್ಲಿಮರಿಗೆ ಮಾತ್ರ ಸಮಸ್ಯೆಯಾಗಿಲ್ಲ. ಅಲ್ಲಿನ ಸ್ಥಳೀಯ ಕ್ರೈಸ್ತರು ಕೂಡ ತಮ್ಮದೆಲ್ಲವನ್ನು ಕಳೆದುಕೊಂಡಿದ್ದಾರೆ. ಸುದ್ದಿ ಸಂಸ್ಥೆ ಅಲ್‌-ಜಝೀರಾ ಜೊತೆ ಮಾತನಾಡಿರುವ ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ “ಕಳೆದ 14 ತಿಂಗಳಿನಿಂದ ನಾವು ಸೇಂಟ್ ಪೋರ್ಫಿರಿಯಸ್ ಮೈದಾನದಲ್ಲಿ ಮಲಗುತ್ತಿದ್ದೇವೆ. ನಮಗೆಲ್ಲಿಯ ಕ್ರಿಸ್‌ಮಸ್‌ ಸಂಭ್ರಮ? ಎಂದು ಪ್ರಶ್ನಿಸಿದ್ದಾರೆ.

ಗಾಝಾ ನಗರದ ಪ್ರಾಚೀನ ಗ್ರೀಕ್ ಆರ್ಥೊಡಾಕ್ಸ್ ಚರ್ಚ್ ಬಳಿಯ ಕಟ್ಟಡವೊಂದಕ್ಕೆ ಕಳೆದ ವರ್ಷ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಮೂವರನ್ನು ಹತ್ಯೆ ಮಾಡಿತ್ತು.

PC ; nytimes.com

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದ ದಿನದಿಂದ ಅಲ್ಲಿನ ಕ್ರೈಸ್ತ ಸಮುದಾಯದ ಜನರು ಸೇಂಟ್ ಪೋರ್ಫಿರಿಯಸ್ ಮತ್ತು ಹೋಲಿ ಫ್ಯಾಮಿಲಿ ಚರ್ಚ್‌ಗಳಲ್ಲಿ ಉಳಿದುಕೊಂಡಿದ್ದಾರೆ. ಅವರಿಗೆ ಅಲ್ಲಿ ಯಾವುದೇ ವ್ಯವಸ್ಥೆಗಳಿಲ್ಲದೆ, ಸಂಕಷ್ಟದ ಜೀವನ ನಡೆಸುತ್ತಿದ್ಧಾರೆ.

“ನಾವು ತುಂಬಾ ದುಖಃದಲ್ಲಿದ್ದೇವೆ. ಶಾಂತಿಗಾಗಿ ಪ್ರಾರ್ಥಿಸುವುದು ಬಿಟ್ಟರೆ ಬೇರೇನು ಇಲ್ಲ” ಎಂದು ಗಾಝಾದ ಕ್ರೈಸ್ತ ವ್ಯಕ್ತಿ ರಮೇಝ್ ಸೌರಿ ಹೇಳಿದ್ದಾರೆ.

ಅವಶೇಷಗಳ ನಡುವೆ ಗಾಝಾದಲ್ಲಿ ಕ್ರಿಸ್‌ಮಸ್‌ ಎಂದರೆ, ಅಲ್ಲಿ ಯಾವುದೇ ಆಚರಣೆ ಸಂಭ್ರಮವಿಲ್ಲ. ಜನರು ದುಖಃದ ನಡುವೆ ಮನಸ್ಸಿನಲ್ಲೇ ಕ್ರಿಸ್‌ಮಸ್‌ ಆಚರಿಸುತ್ತಿದ್ದಾರೆ ಎಂದು ವರದಿಯೊಂದು ಹೇಳಿದೆ.

ಇದನ್ನೂ ಓದಿ : ರಷ್ಯಾಕ್ಕೆ ತೆರಳುತ್ತಿದ್ದ ವಿಮಾನ ಕಝಾಕಿಸ್ತಾನ್‌ನದಲ್ಲಿ ಪತನ; 42 ಮಂದಿ ಸಾವನ್ನಪ್ಪಿರುವ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...