Homeಮುಖಪುಟಅಯೋಧ್ಯೆ ತೀರ್ಪು ಒಪ್ಪಿದ್ದೇವೆ, ಮರು ಪರಿಶೀಲನೆ ಅರ್ಜಿ ಹಾಕುವುದಿಲ್ಲ: ಸುನ್ನಿ ವಕ್ಫ್ ಮಂಡಳಿ

ಅಯೋಧ್ಯೆ ತೀರ್ಪು ಒಪ್ಪಿದ್ದೇವೆ, ಮರು ಪರಿಶೀಲನೆ ಅರ್ಜಿ ಹಾಕುವುದಿಲ್ಲ: ಸುನ್ನಿ ವಕ್ಫ್ ಮಂಡಳಿ

- Advertisement -
- Advertisement -

ಅಯೋಧ್ಯೆ ವಿವಾದದಲ್ಲಿ ಪ್ರಮುಖ ದಾವೆದಾರರಲ್ಲಿ ಒಂದಾಗಿದ್ದ ಸುನ್ನಿ ವಕ್ಫ್ ಬೋರ್ಡ್ ಮಂಡಳಿಯು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮರುಪರಿಶೀಲನೆ ಮನವಿಯನ್ನು ಸಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಉತ್ತರ ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ಮಂಡಳಿಯ ಅಧ್ಯಕ್ಷ ಜಫರ್ ಅಹ್ಮದ್ ಫರೂಕಿಯವರು ಸುದ್ದಿಗೋಷ್ಠಿ ನಡೆಸಿ “ಮಂಡಳಿಯು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತದೆ. ಹಾಗಾಗಿ ತೀರ್ಪಿನ ಮರುಪರಿಶೀಲನೆ ಮಾಡುವ ಮೇಲ್ಮನವಿಯನ್ನು ಸಲ್ಲಿಸದಿರಲು ನಿರ್ಧರಿಸಿದೆ. ಮಂಡಳಿಯು ಸಂಪೂರ್ಣ ವರದಿಯನ್ನು ಕೂಲಂಕಷವಾಗಿ ಓದಿದ ತರುವಾಯ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಲಾಗುವುದು. ಆದರೆ ಮೇಲ್ಮನವಿ ಸಲ್ಲಿಸದಿರುವುದು ಮಾತ್ರ ಖಚಿತ” ಎಂದು ತಿಳಿಸಿದ್ದಾರೆ.

ಇದಕ್ಕು ಮುನ್ನ, ತೀರ್ಪು ಹೊರಬರುತ್ತಿದ್ದಂತೆಯೇ, ಸುನ್ನಿ ವಕ್ಫ್ ಬೋರ್ಡ್ ಪರ ವಾದ ಮಂಡಿಸಿದ್ದ ಮತ್ತು ಸುನ್ನಿ ವಕ್ಪ್ ಮಂಡಳಿಯ ಸದಸ್ಯರೂ, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಕಾರ್ಯದರ್ಶಿಯೂ ಆದ ಜಫರ್ಯಾಬ್ ಜಿಲಾನಿಯವರು ಪತ್ರಿಕಾಗೋಷ್ಠಿಯಲ್ಲಿ “ತೀರ್ಪಿನ ಬಗ್ಗೆ ಗೌರವವಿದೆ, ಆದರೆ ಸಮಾಧಾನ ತಂದಿಲ್ಲ. ಹಾಗಾಗಿ ಮರುಪರಿಶೀಲನೆ ಅರ್ಜಿ ಹಾಕುವ ಬಗ್ಗೆ ಯೋಚಿಸಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದರು. ಆದರೆ ಫರೂಕಿಯವರ ಹೇಳಿಕೆಯಿಂದ ಮರು ಪರಿಶೀಲನೆ ಅರ್ಜಿ ಸಲ್ಲಿಸಲಾಗುವುದಿಲ್ಲ ಎಂಬುದು ಖಾತ್ರಿಯಾಗಿದೆ.

ಈ ಬಗ್ಗೆ ಜಫರ್ಯಾಬ್ ಜಿಲಾನಿಯವರ ಸ್ಪಷ್ಟಣೆ ಕೇಳಿದಾಗ, “ಮಧ್ಯಾಹ್ನ ನಾನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅದರ ಕಾರ್ಯದರ್ಶಿಯಾಗಿ ಅಭಿಪ್ರಾಯ ಹೇಳಿದ್ದೆ. ವಕ್ಫ್ ಮಂಡಳಿಯ ಪರವಾಗಿ ಅಲ್ಲ.” ಎಂದರು.
`ಸುನ್ನಿ ವಕ್ಫ್ ಮಂಡಳಿಯಲ್ಲದೆ ನಿರ್ಮೋಹಿ ಅಖಾರ, ಶಿಯಾ ವಕ್ಫ್ ಮಂಡಳಿಗಳೂ ಈ ಪ್ರಕರಣದಲ್ಲಿ ದಾವೆದಾರರಾಗಿದ್ದವು. ಅವು ಮೇಲ್ಮನವಿ ಸಲ್ಲಿಸುತ್ತವೋ, ಇಲ್ಲವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟ ವಿಚಾರ’ ಎಂಬ ಮಾತನ್ನೂ ಫರೂಕಿಯವರು ಹೇಳಿದರು.

ಬೆಳಿಗ್ಗೆ ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್ ಅಯೋಧ್ಯೆಯ ವಿವಾದಿತ 2.7 ಎಕರೆ ಜಾಗವನ್ನು ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಬೇಕು, ಈ ಕುರಿತು ಕೇಂದ್ರ ಸರ್ಕಾರ ಒಂದು ಟ್ರಸ್ಟ್ ಸ್ಥಾಪಿಸಬೇಕು. ಮತ್ತು ಇದಕ್ಕೆ ಬದಲಾಗಿ ಅಯೋಧ್ಯೆಯಲ್ಲೇ ಬೇರೆಡೆ ಮಸೀದಿ ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಜಮೀನು ನೀಡಬೇಕು ಎಂದು ಆದೇಶಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...