Homeಮುಖಪುಟಮಲಯಾಳಂ ಸಾಹಿತ್ಯ ದಿಗ್ಗಜ ಎಂ.ಟಿ. ವಾಸುದೇವನ್ ನಾಯರ್ (91) ನಿಧನ

ಮಲಯಾಳಂ ಸಾಹಿತ್ಯ ದಿಗ್ಗಜ ಎಂ.ಟಿ. ವಾಸುದೇವನ್ ನಾಯರ್ (91) ನಿಧನ

- Advertisement -
- Advertisement -

‘ಎಂಟಿ’ ಎಂದೇ ಖ್ಯಾತರಾಗಿದ್ದ ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ಬುಧವಾರ ಕೋಝಿಕ್ಕೋಡ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಕಳೆದ ವಾರ ಹೃದಯಾಘಾತಕ್ಕೊಳಗಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಐದು ದಿನಗಳಿಂದ ಅವರು ಗಂಭೀರ ಸ್ಥಿತಿಯಲ್ಲಿದ್ದರು. ಮಲಯಾಳಂ ಸಾಹಿತ್ಯ ದಿಗ್ಗಜ

ಬುಧವಾರ ಸಂಜೆ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಹಿರಿಯ ಚಿತ್ರ ಸಾಹಿತಿ ‘ಎಂಟಿ’ ಅವರಿಗೆ ಗೌರವ ಸೂಚಕವಾಗಿ ರಾಜ್ಯ ಸರ್ಕಾರ ಎರಡು ದಿನಗಳ ಶೋಕಾಚರಣೆ ಘೋಷಿಸಿದೆ. ಜ್ಞಾನಪೀಠ, ಪದ್ಮಭೂಷಣ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 3 ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು, 7 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು (ಚಿತ್ರಕಥೆಗಾಗಿ 4) 21 ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಅವರಿಗೆ ದಕ್ಕಿವೆ. ಮಲಯಾಳಂ ಸಾಹಿತ್ಯ ದಿಗ್ಗಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಧುನಿಕ ಮಲಯಾಳಂ ಸಾಹಿತ್ಯದಲ್ಲಿ ಬಹುಮುಖ ಬರಹಗಾರರಾದ ಎಂಟಿ ಅವರು ಸುಮಾರು ಹತ್ತು ಕಾದಂಬರಿಗಳು ಮತ್ತು 15 ಕ್ಕೂ ಹೆಚ್ಚು ಸಣ್ಣ ಕಥೆಗಳು ಮತ್ತು ಮಕ್ಕಳ ಸಾಹಿತ್ಯವನ್ನು ಬರೆದಿದ್ದಾರೆ. ಅವರು ಸುಮಾರು 54 ಚಿತ್ರಗಳಿಗೆ ಚಿತ್ರಕಥೆ ಬರೆದಿದ್ದಾರೆ ಮತ್ತು ಆರು ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಎಂಟಿ ಅವರಿಗೆ 1995 ರಲ್ಲಿ ಜ್ಞಾನಪೀಠ ಮತ್ತು 2005 ರಲ್ಲಿ ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಅವರು ನಾಲ್ಕು ಬಾರಿ ಅತ್ಯುತ್ತಮ ಚಿತ್ರಕಥೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಚಲನಚಿತ್ರ ಮತ್ತು ಸಾಹಿತ್ಯ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆಗಳಿಗಾಗಿ ಅವರನ್ನು ಇತ್ತೀಚೆಗೆ ಕೇರಳ ಸರ್ಕಾರವು ಗೌರವಿಸಿತ್ತು.

ಪಾಲಕ್ಕಾಡ್ ಜಿಲ್ಲೆಯ ಪಟ್ಟಾಂಬಿ ಸಮೀಪದ ಕೂಡಲ್ಲೂರು ಗ್ರಾಮದಲ್ಲಿ ಜನಿಸಿದ ಎಂಟಿ ರಸಾಯನಶಾಸ್ತ್ರ ಶಾಲೆಯ ಶಿಕ್ಷಕರಾಗಿದ್ದರು. ಅವರು ತಮ್ಮ ಪ್ರಶಸ್ತಿ ವಿಜೇತ ಕೃತಿ ‘ನಾಲುಕೆಟ್ಟು’ ಮೂಲಕ ಬರಹಗಾರರಾಗಿ ಜನಪ್ರಿಯರಾಗಿದ್ದರು. ಈ ಕೃತಿ 1958 ರಲ್ಲಿ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಭೀಮಸೇನನ ದೃಷ್ಟಿಕೋನದಿಂದ ಮಹಾಭಾರತದ ಕಥೆಯನ್ನು ಮರುಸೃಷ್ಟಿಸಿದ್ದ ‘ರಂಡಾಂ ವಳಂ’ (‘ಎರಡನೇ ತಿರುವು’) ಎಂಟಿಯವರ ವ್ಯಾಪಕ ಮೆಚ್ಚುಗೆ ಪಡೆದ ಕೃತಿಯಾಗಿದೆ. ಈ ಕಾದಂಬರಿಯನ್ನು ಆಧರಿಸಿ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ದೊಡ್ಡ ಬಜೆಟ್ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದರಾದರೂ, ಎಂಟಿ ಮತ್ತು ಚಲನಚಿತ್ರ ನಿರ್ಮಾಪಕರ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಅದು ಸ್ಥಗಿತಗೊಂಡಿತ್ತು.

ಅವರ ‘ಒರು ವಡಕ್ಕನ್ ವೀರಗಾಥ’, ‘ಕಡವು’, ‘ಸದಯಂ’ ಮತ್ತು ‘ಪರಿಣಯಂ’ ಚಿತ್ರಗಳ ಚಿತ್ರಕಥೆಗಳು ಅತ್ಯುತ್ತಮ ಚಿತ್ರಕಥೆಗಾಗಿ ರಾಷ್ಟ್ರ ಪ್ರಶಸ್ತಿಯನ್ನು ಗಳಿಸಿವೆ. ಎಂಟಿ ಅವರು ಮಾತೃಭೂಮಿ ಪ್ರಕಾಶನದ ನಿಯತಕಾಲಿಕಗಳ ವಿಭಾಗದ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತ ಎಂಟಿ ಅವರು ಪ್ರಮೀಳಾ ಅವರನ್ನು ಮೊದಲಿಗೆ ಮದುವೆಯಾಗಿದ್ದರು, ನಂತರ ಅವರು ಕಲಾಮಂಡಲಂ ಸರಸ್ವತಿ ಅವರನ್ನು ವಿವಾಹವಾದರು. ಅವರು ಪುತ್ರಿಯರಾದ ಸಿತಾರಾ ಮತ್ತು ಅಶ್ವತಿಯನ್ನೂ ಅವರು ಅಗಲಿದ್ದಾರೆ.

ಇದನ್ನೂ ಓದಿ: ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಚೆನ್ನೈ ಪೊಲೀಸರಿಂದ ತನಿಖೆ

ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಚೆನ್ನೈ ಪೊಲೀಸರಿಂದ ತನಿಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...