Homeಮುಖಪುಟಅನಧಿಕೃತ ಗೋಶಾಲೆ ತೆರವು: ಭಜರಂಗದಳದಿಂದ 20 ವಾಹನಗಳ ಧ್ವಂಸ

ಅನಧಿಕೃತ ಗೋಶಾಲೆ ತೆರವು: ಭಜರಂಗದಳದಿಂದ 20 ವಾಹನಗಳ ಧ್ವಂಸ

- Advertisement -
- Advertisement -

ಇಂದೋರ್‌ (ಮಧ್ಯಪ್ರದೇಶ):  ಇಲ್ಲಿನ ರಾಜೇಂದ್ರ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ದತ್ತ್‌ನಗರದಲ್ಲಿ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಅನಧಿಕೃತ ಗೋಶಾಲೆಯನ್ನು ತೆರವುಗೊಳಿಸಿದ ಮುನ್ಸಿಪಲ್‌ ಅಧಿಕಾರಿಗಳ ತಂಡ ಮತ್ತು ಭಜರಂಗದಳದ ಸದಸ್ಯರ ನಡುವೆ ಭಾರೀ ವಾಗ್ವಾದವು  ಘರ್ಷಣೆಗೆ ಕಾರಣವಾಯಿತು. ನಂತರ ನಡೆದ ಹಿಂಸಾಚಾರದಲ್ಲಿ ಸುಮಾರು ಪುರಸಭೆಯ 20 ವಾಹನಗಳನ್ನು ಧ್ವಂಸಗೊಳಿಸಲಾಗಿರುವ ಘಟನೆ ಬುಧವಾರ ವರದಿಯಾಗಿದೆ.

ಮುನ್ಸಿಪಲ್ ಕಾರ್ಪೊರೇಷನ್ ತಂಡವು ಪೊಲೀಸ್ ಸಿಬ್ಬಂದಿಯೊಂದಿಗೆ ಇಂದೋರ್‌ನ ಜನನಿಬಿಡ ಪ್ರದೇಶದ ಸ್ಥಳಕ್ಕೆ ಆಗಮಿಸಿ, ಆಕ್ರಮ ಗೋಶಾಲೆಗಳನ್ನು ಕೆಡವಿದ ನಂತರ ಈ ಘಟನೆಯು  ನಡೆದಿದೆ. ಅತಿಕ್ರಮಣ ಮತ್ತು ಅಕ್ರಮ ನಿರ್ಮಾಣದ ದೂರುಗಳ ಆಧಾರದ ಮೇರೆಗೆ ಮುನ್ಸಿಪಲ್ ಅಧಿಕಾರಿಗಳು ಪೂರ್ವಾನುಮತಿ ಇಲ್ಲದೆ ನಿರ್ಮಿಸಿದ ಗೋಶಾಲೆಗಳ ಧ್ವಂಸಕ್ಕೆ ಮುಂದಾಯಿತು ಎಂದು ವರದಿ ಹೇಳಿದೆ.

ತೆರವುಗೊಳಿಸಿದ್ದನ್ನು ವಿರೋಧಿಸಿ ಭಜರಂಗದಳದ ಸದಸ್ಯರು ಸ್ಥಳದಲ್ಲಿ ಜಮಾಯಿಸಿದಾಗ ಉದ್ವಿಗ್ನತೆ ಉಂಟಾಯಿತು.  ಹಸುಗಳ ರಕ್ಷಣೆಗಾಗಿ ಘೋಷಣೆಗಳನ್ನು ಕೂಗುತ್ತಾ ಮತ್ತು ಧಾರ್ಮಿಕ ಭಾವನೆಗಳಿಗೆ ಘಾಸಿಯನ್ನುಂಟು ಮಾಡಿದ್ದಾರೆಂದು ಗುಂಪು ಆರೋಪಿಸಿದಾಗ ಹಿಂಸಾಚಾರಕ್ಕೆ ತಿರುಗಿತು. ದೊಣ್ಣೆ ಮತ್ತು ಕಲ್ಲುಗಳಿಂದ ಶಸ್ತ್ರಸಜ್ಜಿತವಾಗಿದ್ದ ಗುಂಪು ಪುರಸಭೆಯ ವಾಹನಗಳನ್ನು ಗುರಿಯಾಗಿಸಿ ಅವುಗಳ ಗಾಜುಗಳನ್ನು ಒಡೆದು ಹಾಕಿ, ಉಪಕರಣಗಳನ್ನು ಹಾನಿಗೊಳಿಸಿ, ಸ್ಥಳದಲ್ಲಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಹೆಸರು ಹೇಳಲಿಚ್ಛಿಸದ ಪ್ರದೇಶದ ನಿವಾಸಿಯೊಬ್ಬರು, ಬಜರಂಗದಳದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಾಹನಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದರು. ಇದು ಭಯ ಹುಟ್ಟಿಸುವಂತಿತ್ತು. ಗೋಶಾಲೆಯು ಈಗ ತಿಂಗಳಿನಿಂದ ವಿವಾದಾತ್ಮಕ ವಿಷಯವಾಗಿದೆ ಎಂದಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಲತಾ ಅಗರವಾಲ್, ನಾವು ಬೆಳಿಗ್ಗೆ 6 ಗಂಟೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆವು ಮತ್ತು 9 ಗಂಟೆಗೆ ಅದನ್ನು ಪೂರ್ಣಗೊಳಿಸಿದವು. ಈ ಪ್ರದೇಶದಿಂದ ಹೊರಡುವಾಗ, ಬಜರಂಗದಳದ ಸದಸ್ಯರು ಮತ್ತು ನಮ್ಮ ನೌಕರರ ನಡುವೆ ವಾಗ್ವಾದ ಉಂಟಾಗಿ ವಾಹನಗಳಿಗೆ ಹಾನಿ ಮತ್ತು ನಮ್ಮ ಕೆಲವು ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಘಟನೆಯ ಕುರಿತು ಮುನ್ಸಿಪಲ್ ಕಾರ್ಪೊರೇಷನ್ ದ್ವಾರಕಾ ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಂದಿನ ಕ್ರಮಕ್ಕಾಗಿ ಪಾಲಿಕೆ ಆಯುಕ್ತ ಶಿವಂ ವರ್ಮಾ ಮತ್ತು ಮೇಯರ್ ಪುಷ್ಯಮಿತ್ರ ಭಾರ್ಗವ ಅವರಿಗೆ ಸಂಪೂರ್ಣ ವಿಷಯ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

ಬಜರಂಗದಳವು ತನ್ನ ಕಾರ್ಯವನ್ನು ಸಮರ್ಥಿಸಿಕೊಂಡಿದೆ. ಗೋವುಗಳನ್ನು ರಕ್ಷಿಸುವ ಪ್ರಾಮುಖ್ಯತೆಯನ್ನು ಉಲ್ಲೇಖಿಸಿದೆ ಮತ್ತು ಪುರಸಭೆಯ ಅಧಿಕಾರಿಗಳು ಧಾರ್ಮಿಕ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದ್ದರು ಎಂದು ಅದು ಆರೋಪಿಸಿದೆ. ಸ್ಥಳೀಯ ಬಜರಂಗದಳ ನಾಯಕ ಅನಿಲ್ ತಿವಾರಿ ಮಾತನಾಡಿ, ಗೋಶಾಲೆಯು ಪವಿತ್ರ ಸ್ಥಳವಾಗಿದೆ. ಇದನ್ನು ಕೆಡವುವ ಬದಲು ನಗರಸಭೆಯು ಪರ್ಯಾಯ ಪರಿಹಾರ ಕಂಡುಕೊಳ್ಳಬೇಕಿತ್ತು ಎಂದು ಹೇಳಿದ್ದಾರೆ.

ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಕಾನೂನು  ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಘರ್ಷಣೆಯು ಸ್ಥಳೀಯ ಆಡಳಿತದ ವಿಷಯದಲ್ಲಿ ರಾಜಕೀಯ ಅಥವಾ ಧಾರ್ಮಿಕ ಗುಂಪುಗಳ ಒಳಗೊಳ್ಳುವಿಕೆಯ ಬಗ್ಗೆ ವ್ಯಾಪಕ ಚರ್ಚೆ ಹುಟ್ಟುಹಾಕಿದೆ.  ಶಾಂತಿ ಕಾಪಾಡಲು ಮತ್ತು ಇಂತಹ ಘಟನೆಗಳು ನಗರದಲ್ಲಿ ದೈನಂದಿನ ಜೀವನಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಘಟನೆಯು ಧಾರ್ಮಿಕ ಭಾವನೆಗಳನ್ನು ಸಮತೋಲನಗೊಳಿಸುವುದಕ್ಕೆ ಮತ್ತು ನಗರ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಯ ಜಾರಿಗೆ ಒಂದು ಸವಾಲಾಗಿದೆ.

ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...