Homeಅಂತರಾಷ್ಟ್ರೀಯಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

ಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

- Advertisement -
- Advertisement -

ಹೊಸದಿಲ್ಲಿ: ಭಾರತದಲ್ಲಿನ  ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನುಅವರು  ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ  ಎಂದು ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತ ಬಂಧಿತರೊಂದಿಗಿನ ಸಂಭಾಷಣೆಯನ್ನು ಆಧರಿಸಿದ ಕೆಲ ಅಧ್ಯಯನಗಳು ಕಂಡುಕೊಂಡಿವೆ.

ಯುಎಸ್-ನೋಂದಾಯಿತ ಎನ್ ಜಿಒ ಸಂಸ್ಥೆಯಾದ ದಿ ಆಜಾದಿ ಪ್ರಾಜೆಕ್ಟ್ ಮತ್ತು ನಿರಾಶ್ರಿತರಿಗಾಗಿ ಪ್ರತಿಪಾದಿಸುವ ಅಮೆರಿಕದ ಲಾಭರಹಿತ ಸಂಸ್ಥೆಯಾದ ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಗಳು ಈ ಅಧ್ಯಯನ  ನಡೆಸಿದ್ದು, ಇದು ಸಾಂವಿಧಾನಿಕ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳಿಗೆ ಭಾರತವು ತನ್ನ ಬದ್ಧತೆಯನ್ನು ಅನುಸರಿಸಲು ವಿಫಲವಾಗಿದೆ ಎಂದು ಈ ಸಂಸ್ಥೆಗಳು ನಡೆಸಿದ ವರದಿ ಹೇಳಿದೆ.

ಭಾರತದಲ್ಲಿನ ನಿರಾಶ್ರಿತ ಬಂಧಿತರು, ಅವರ ಕುಟುಂಬಗಳು ಮತ್ತು ವಕೀಲರು ಮತ್ತು ಬಂಧನ ಕೇಂದ್ರಕ್ಕೆ ಭೇಟಿ ನೀಡಿ ಇವರುಗಳ ಸಂಭಾಷಣೆಯನ್ನು ಆಧರಿಸಿ ಈ ಸಂಸ್ಥೆಗಳು ಅಧ್ಯಯನ ನಡೆಸಿವೆ.

ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನು ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ. ಭಾರತದಲ್ಲಿ, ಸುಮಾರು 22,500 ರೋಹಿಂಗ್ಯಾ ನಿರಾಶ್ರಿತರು ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ (UNHCR) ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಯುಎನ್‌ಹೆಚ್‌ಸಿಆರ್ ಅಂದಾಜಿನ ಪ್ರಕಾರ 676 ರೋಹಿಂಗ್ಯಾಗಳು ಭಾರತದಾದ್ಯಂತ ವಲಸೆ ಬಂಧನದಲ್ಲಿದ್ದಾರೆ. ಅದರಲ್ಲಿ 608 ನ್ಯಾಯಾಲಯದ ಪ್ರಕರಣಗಳು ಅಥವಾ ಶಿಕ್ಷೆಗಳು ಬಾಕಿ ಉಳಿದಿಲ್ಲ. ಬಂಧಿತರಲ್ಲಿ ಶೇ.50ರಷ್ಟು ಗರ್ಭಿಣಿ ಮಹಿಳೆಯರು, ಹಾಲುಣಿಸುವ ತಾಯಂದಿರು, ಮಕ್ಕಳು, ಅಂಗವಿಕಲರು ಮತ್ತು ವೃದ್ಧರು  ಎಂದು ಈ ವರದಿ ಹೇಳಿದೆ.

ಕಾನೂನು ಸಹಾಯಕ್ಕೆ ಮತ್ತು UNHCR ನಂತಹ ಅಂತರಾಷ್ಟ್ರೀಯ ಸಂಸ್ಥೆಗಳಿಗೆ ಬಹಳ ಸೀಮಿತ ಪ್ರವೇಶದಿಂದಾಗಿ ಅನೇಕ ರೋಹಿಂಗ್ಯಾ ನಿರಾಶ್ರಿತರನ್ನು ಒಂದು ದಶಕದಿಂದ ನಿರಂಕುಶವಾಗಿ ಬಂಧಿಸಲಾಗಿದೆ. ಇವರುಗಳ ಮೇಲೆ ಯಾವುದೇ ಕ್ರಿಮಿನಲ್ ಆರೋಪಗಳಿಲ್ಲದೆ ಇದ್ದರೂ ಸಹ ಈ ಬಂಧನಕ್ಕೆ ಅಂತ್ಯವಿಲ್ಲ ಎಂದು ವರದಿ ಎತ್ತಿ ತೋರಿಸಿದೆ.

ಈ ಬಂಧನ ಕೇಂದ್ರಗಳಲ್ಲಿರುವ ಮಕ್ಕಳಿಗೆ ಶಾಲೆಗೆ ಅಥವಾ ಆಟದ ಮೈದಾನಗಳಿಗೆ ಪ್ರವೇಶವಿಲ್ಲವಾಗಿದೆ. ಬಂಧನಕ್ಕೊಳಗಾದವರಲ್ಲಿ ಕೆಲವರು ತಮ್ಮ ಬಂಧನದ ಸಮಯದಲ್ಲಿ ಶಿಶುಗಳಾಗಿದ್ದರು ಮತ್ತು ಅವರು ಹೊರಗಿನ ಜೀವನವನ್ನು ಎಂದಿಗೂ ಅನುಭವಿಸುತ್ತಿಲ್ಲ.  ದೀರ್ಘಕಾಲದ ಹಸಿವು, ರುಚಿಕರವಲ್ಲದ ಆಹಾರ, ಕಳಪೆ ಪೋಷಣೆ, ಕಳಪೆ ನೈರ್ಮಲ್ಯ ವು ತಾತ್ಕಾಲಿಕ ಪಾರ್ಶ್ವವಾಯು ಸೇರಿದಂತೆ ತೀವ್ರ ಮಾನಸಿಕ ಮತ್ತು ದೈಹಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ ಎಂದು ವರದಿ ಹೇಳಿದೆ.

ಕುಟುಂಬಗಳನ್ನು ಪ್ರತ್ಯೇಕಿಸಬಾರದು ಎಂದು ಹೇಳುವ ಭಾರತದ ಮಾದರಿ ಬಂಧನ ಸಂಹಿತೆಯನ್ನು ಉಲ್ಲಂಘಿಸಿ, ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸಲಾಗಿದೆ. ಸಂಗಾತಿಗಳು ಒಟ್ಟಿಗೆ ಸಮಯ ಕಳೆಯುವುದಕ್ಕೆ ಅನುಮತಿಸುತ್ತಿಲ್ಲ ಮತ್ತು ಮಕ್ಕಳನ್ನು ಅವರ ಪೋಷಕರಿಂದ ಬಲವಂತವಾಗಿ ಬೇರ್ಪಡಿಸಲಾಗಿದೆ ಎಂಬುದನ್ನು ವರದಿ ವಿವರಿಸುತ್ತದೆ.

ಹತ್ಯಾಕಾಂಡದಿಂದ ಬದುಕುಳಿದ ಜನಸಂಖ್ಯೆಯನ್ನು ಪುನರುಜ್ಜೀವನಗೊಳಿಸುವ ಗೌರವಯುತವಾದ ಆಶ್ರಯವನ್ನು ಭಾರತ ಸರ್ಕಾರವು ಒದಗಿಸಬೇಕು. ಅತ್ಯಂತ ದುರ್ಬಲ ರೋಹಿಂಗ್ಯಾ ಬಂಧಿತರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಹೆಚ್ಚಿನ ರೋಹಿಂಗ್ಯಾಗಳ ಅನಿಯಂತ್ರಿತ ಬಂಧನವನ್ನು ಕೊನೆಗೊಳಿಸಬೇಕು ಎಂದು ವರದಿ ಶಿಫಾರಸು ಮಾಡುತ್ತದೆ.

ಭಾರತವು ರೋಹಿಂಗ್ಯಾಗಳ ಕಾನೂನು ಸ್ಥಿತಿಯನ್ನು ಸ್ಪಷ್ಟಪಡಿಸಬೇಕು., 1946ರ ಕಾಯಿದೆಯನ್ನು ಪರಿಷ್ಕರಿಸಬೇಕು ಮತ್ತು ನಿರಾಶ್ರಿತರ ಬಗೆಗಿನ ಅದರ ನೀತಿಗಳು ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿರುತ್ತವೆ ಎಂಬುದನ್ನು ಖಚಿತಪಡಿಸಬೇಕು.  ಕಾನೂನುಬಾಹಿರವಾಗಿ ಬಂಧಿತರಾಗಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಿಡುಗಡೆ ಮಾಡಲು ಮತ್ತು ಬಂಧನ ಕೇಂದ್ರಗಳಲ್ಲಿ ಉತ್ತಮ ಸೌಲಭ್ಯಕ್ಕೆ ಮತ್ತು ಅವರ ಕುಟುಂಬಗಳ ಸಮ್ಮೀಲನಕ್ಕೆ ಅನುಮತಿಸುವಂತೆ ಭಾರತ ಸರಕಾರಕ್ಕೆ ಆಜಾದಿ ಪ್ರಾಜೆಕ್ಟ್ ಮತ್ತು ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಒತ್ತಾಯಿಸಿವೆ .

ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತರಿಗೆ ವಿದೇಶಿಯರ ಕಾಯಿದೆ 1946 ಮತ್ತು 1980ರ ಪಾಸ್‌ಪೋರ್ಟ್ ಕಾಯಿದೆಯ ನಿಯಮ 6ರ ಸೆಕ್ಷನ್ 14 (ಎ) (ಬಿ) ಅಡಿಯಲ್ಲಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ವರದಿಯು ಸೂಚಿಸುವಂತೆ, ಎರಡನೆಯದನ್ನು 1985ರಲ್ಲಿ ಬಿಟ್ಟುಬಿಡಲಾಗಿದೆ. ಭಾರತದ ಸ್ವಂತ ಕಾನೂನಿನ ಅಡಿಯಲ್ಲಿ, ರೋಹಿಂಗ್ಯಾ ನಿರಾಶ್ರಿತರ ಅನಿರ್ದಿಷ್ಟ ಬಂಧನವು ಕಾನೂನುಬಾಹಿರವಾಗಿದೆ ಮತ್ತು ಅನಿಯಂತ್ರಿತವಾಗಿದೆ ಎಂದು ವರದಿ ಹೇಳಿದೆ.

ಗಡ್ಡಧಾರಿ ಮುಸ್ಲಿಂ ವಿದ್ಯಾರ್ಥಿಗೆ ನರ್ಸಿಂಗ್ ಪರೀಕ್ಷೆ ನಿಷೇಧಿಸಿದ ಪರೀಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...