Homeಅಂತರಾಷ್ಟ್ರೀಯಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

ಭಾರತದಲ್ಲಿ ರೋಹಿಂಗ್ಯಾ ನಿರಾಶ್ರಿತರು ಶಿಕ್ಷೆ ಪೂರೈಸಿದ ನಂತರವು ಮರುಬಂಧನ

- Advertisement -
- Advertisement -

ಹೊಸದಿಲ್ಲಿ: ಭಾರತದಲ್ಲಿನ  ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನುಅವರು  ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ  ಎಂದು ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತ ಬಂಧಿತರೊಂದಿಗಿನ ಸಂಭಾಷಣೆಯನ್ನು ಆಧರಿಸಿದ ಕೆಲ ಅಧ್ಯಯನಗಳು ಕಂಡುಕೊಂಡಿವೆ.

ಯುಎಸ್-ನೋಂದಾಯಿತ ಎನ್ ಜಿಒ ಸಂಸ್ಥೆಯಾದ ದಿ ಆಜಾದಿ ಪ್ರಾಜೆಕ್ಟ್ ಮತ್ತು ನಿರಾಶ್ರಿತರಿಗಾಗಿ ಪ್ರತಿಪಾದಿಸುವ ಅಮೆರಿಕದ ಲಾಭರಹಿತ ಸಂಸ್ಥೆಯಾದ ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಗಳು ಈ ಅಧ್ಯಯನ  ನಡೆಸಿದ್ದು, ಇದು ಸಾಂವಿಧಾನಿಕ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳಿಗೆ ಭಾರತವು ತನ್ನ ಬದ್ಧತೆಯನ್ನು ಅನುಸರಿಸಲು ವಿಫಲವಾಗಿದೆ ಎಂದು ಈ ಸಂಸ್ಥೆಗಳು ನಡೆಸಿದ ವರದಿ ಹೇಳಿದೆ.

ಭಾರತದಲ್ಲಿನ ನಿರಾಶ್ರಿತ ಬಂಧಿತರು, ಅವರ ಕುಟುಂಬಗಳು ಮತ್ತು ವಕೀಲರು ಮತ್ತು ಬಂಧನ ಕೇಂದ್ರಕ್ಕೆ ಭೇಟಿ ನೀಡಿ ಇವರುಗಳ ಸಂಭಾಷಣೆಯನ್ನು ಆಧರಿಸಿ ಈ ಸಂಸ್ಥೆಗಳು ಅಧ್ಯಯನ ನಡೆಸಿವೆ.

ಹೆಚ್ಚಿನ ರೋಹಿಂಗ್ಯಾ ನಿರಾಶ್ರಿತರನ್ನು ಶಿಕ್ಷೆಯನ್ನು ಪೂರೈಸಿದ ನಂತರವೂ ಬಂಧಿಸಲಾಗುತ್ತಿದೆ. ಭಾರತದಲ್ಲಿ, ಸುಮಾರು 22,500 ರೋಹಿಂಗ್ಯಾ ನಿರಾಶ್ರಿತರು ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ (UNHCR) ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಯುಎನ್‌ಹೆಚ್‌ಸಿಆರ್ ಅಂದಾಜಿನ ಪ್ರಕಾರ 676 ರೋಹಿಂಗ್ಯಾಗಳು ಭಾರತದಾದ್ಯಂತ ವಲಸೆ ಬಂಧನದಲ್ಲಿದ್ದಾರೆ. ಅದರಲ್ಲಿ 608 ನ್ಯಾಯಾಲಯದ ಪ್ರಕರಣಗಳು ಅಥವಾ ಶಿಕ್ಷೆಗಳು ಬಾಕಿ ಉಳಿದಿಲ್ಲ. ಬಂಧಿತರಲ್ಲಿ ಶೇ.50ರಷ್ಟು ಗರ್ಭಿಣಿ ಮಹಿಳೆಯರು, ಹಾಲುಣಿಸುವ ತಾಯಂದಿರು, ಮಕ್ಕಳು, ಅಂಗವಿಕಲರು ಮತ್ತು ವೃದ್ಧರು  ಎಂದು ಈ ವರದಿ ಹೇಳಿದೆ.

ಕಾನೂನು ಸಹಾಯಕ್ಕೆ ಮತ್ತು UNHCR ನಂತಹ ಅಂತರಾಷ್ಟ್ರೀಯ ಸಂಸ್ಥೆಗಳಿಗೆ ಬಹಳ ಸೀಮಿತ ಪ್ರವೇಶದಿಂದಾಗಿ ಅನೇಕ ರೋಹಿಂಗ್ಯಾ ನಿರಾಶ್ರಿತರನ್ನು ಒಂದು ದಶಕದಿಂದ ನಿರಂಕುಶವಾಗಿ ಬಂಧಿಸಲಾಗಿದೆ. ಇವರುಗಳ ಮೇಲೆ ಯಾವುದೇ ಕ್ರಿಮಿನಲ್ ಆರೋಪಗಳಿಲ್ಲದೆ ಇದ್ದರೂ ಸಹ ಈ ಬಂಧನಕ್ಕೆ ಅಂತ್ಯವಿಲ್ಲ ಎಂದು ವರದಿ ಎತ್ತಿ ತೋರಿಸಿದೆ.

ಈ ಬಂಧನ ಕೇಂದ್ರಗಳಲ್ಲಿರುವ ಮಕ್ಕಳಿಗೆ ಶಾಲೆಗೆ ಅಥವಾ ಆಟದ ಮೈದಾನಗಳಿಗೆ ಪ್ರವೇಶವಿಲ್ಲವಾಗಿದೆ. ಬಂಧನಕ್ಕೊಳಗಾದವರಲ್ಲಿ ಕೆಲವರು ತಮ್ಮ ಬಂಧನದ ಸಮಯದಲ್ಲಿ ಶಿಶುಗಳಾಗಿದ್ದರು ಮತ್ತು ಅವರು ಹೊರಗಿನ ಜೀವನವನ್ನು ಎಂದಿಗೂ ಅನುಭವಿಸುತ್ತಿಲ್ಲ.  ದೀರ್ಘಕಾಲದ ಹಸಿವು, ರುಚಿಕರವಲ್ಲದ ಆಹಾರ, ಕಳಪೆ ಪೋಷಣೆ, ಕಳಪೆ ನೈರ್ಮಲ್ಯ ವು ತಾತ್ಕಾಲಿಕ ಪಾರ್ಶ್ವವಾಯು ಸೇರಿದಂತೆ ತೀವ್ರ ಮಾನಸಿಕ ಮತ್ತು ದೈಹಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ ಎಂದು ವರದಿ ಹೇಳಿದೆ.

ಕುಟುಂಬಗಳನ್ನು ಪ್ರತ್ಯೇಕಿಸಬಾರದು ಎಂದು ಹೇಳುವ ಭಾರತದ ಮಾದರಿ ಬಂಧನ ಸಂಹಿತೆಯನ್ನು ಉಲ್ಲಂಘಿಸಿ, ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸಲಾಗಿದೆ. ಸಂಗಾತಿಗಳು ಒಟ್ಟಿಗೆ ಸಮಯ ಕಳೆಯುವುದಕ್ಕೆ ಅನುಮತಿಸುತ್ತಿಲ್ಲ ಮತ್ತು ಮಕ್ಕಳನ್ನು ಅವರ ಪೋಷಕರಿಂದ ಬಲವಂತವಾಗಿ ಬೇರ್ಪಡಿಸಲಾಗಿದೆ ಎಂಬುದನ್ನು ವರದಿ ವಿವರಿಸುತ್ತದೆ.

ಹತ್ಯಾಕಾಂಡದಿಂದ ಬದುಕುಳಿದ ಜನಸಂಖ್ಯೆಯನ್ನು ಪುನರುಜ್ಜೀವನಗೊಳಿಸುವ ಗೌರವಯುತವಾದ ಆಶ್ರಯವನ್ನು ಭಾರತ ಸರ್ಕಾರವು ಒದಗಿಸಬೇಕು. ಅತ್ಯಂತ ದುರ್ಬಲ ರೋಹಿಂಗ್ಯಾ ಬಂಧಿತರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಹೆಚ್ಚಿನ ರೋಹಿಂಗ್ಯಾಗಳ ಅನಿಯಂತ್ರಿತ ಬಂಧನವನ್ನು ಕೊನೆಗೊಳಿಸಬೇಕು ಎಂದು ವರದಿ ಶಿಫಾರಸು ಮಾಡುತ್ತದೆ.

ಭಾರತವು ರೋಹಿಂಗ್ಯಾಗಳ ಕಾನೂನು ಸ್ಥಿತಿಯನ್ನು ಸ್ಪಷ್ಟಪಡಿಸಬೇಕು., 1946ರ ಕಾಯಿದೆಯನ್ನು ಪರಿಷ್ಕರಿಸಬೇಕು ಮತ್ತು ನಿರಾಶ್ರಿತರ ಬಗೆಗಿನ ಅದರ ನೀತಿಗಳು ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿರುತ್ತವೆ ಎಂಬುದನ್ನು ಖಚಿತಪಡಿಸಬೇಕು.  ಕಾನೂನುಬಾಹಿರವಾಗಿ ಬಂಧಿತರಾಗಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಿಡುಗಡೆ ಮಾಡಲು ಮತ್ತು ಬಂಧನ ಕೇಂದ್ರಗಳಲ್ಲಿ ಉತ್ತಮ ಸೌಲಭ್ಯಕ್ಕೆ ಮತ್ತು ಅವರ ಕುಟುಂಬಗಳ ಸಮ್ಮೀಲನಕ್ಕೆ ಅನುಮತಿಸುವಂತೆ ಭಾರತ ಸರಕಾರಕ್ಕೆ ಆಜಾದಿ ಪ್ರಾಜೆಕ್ಟ್ ಮತ್ತು ರೆಫ್ಯೂಜೀಸ್ ಇಂಟರ್‌ನ್ಯಾಷನಲ್ ಒತ್ತಾಯಿಸಿವೆ .

ಭಾರತದಲ್ಲಿನ ರೋಹಿಂಗ್ಯಾ ನಿರಾಶ್ರಿತರಿಗೆ ವಿದೇಶಿಯರ ಕಾಯಿದೆ 1946 ಮತ್ತು 1980ರ ಪಾಸ್‌ಪೋರ್ಟ್ ಕಾಯಿದೆಯ ನಿಯಮ 6ರ ಸೆಕ್ಷನ್ 14 (ಎ) (ಬಿ) ಅಡಿಯಲ್ಲಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ವರದಿಯು ಸೂಚಿಸುವಂತೆ, ಎರಡನೆಯದನ್ನು 1985ರಲ್ಲಿ ಬಿಟ್ಟುಬಿಡಲಾಗಿದೆ. ಭಾರತದ ಸ್ವಂತ ಕಾನೂನಿನ ಅಡಿಯಲ್ಲಿ, ರೋಹಿಂಗ್ಯಾ ನಿರಾಶ್ರಿತರ ಅನಿರ್ದಿಷ್ಟ ಬಂಧನವು ಕಾನೂನುಬಾಹಿರವಾಗಿದೆ ಮತ್ತು ಅನಿಯಂತ್ರಿತವಾಗಿದೆ ಎಂದು ವರದಿ ಹೇಳಿದೆ.

ಗಡ್ಡಧಾರಿ ಮುಸ್ಲಿಂ ವಿದ್ಯಾರ್ಥಿಗೆ ನರ್ಸಿಂಗ್ ಪರೀಕ್ಷೆ ನಿಷೇಧಿಸಿದ ಪರೀಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...