Homeಕರ್ನಾಟಕಅಘೋಷಿತ ತುರ್ತುಪರಿಸ್ಥಿತಿಯಲ್ಲಿ "ಗಾಂಧಿ ಭಾರತ" ಅಗತ್ಯ

ಅಘೋಷಿತ ತುರ್ತುಪರಿಸ್ಥಿತಿಯಲ್ಲಿ “ಗಾಂಧಿ ಭಾರತ” ಅಗತ್ಯ

- Advertisement -
- Advertisement -

ಪ್ರಸ್ತುತ ಭಾರತದ ಅಘೋಷಿತ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ, ಎಲ್ಲಿ ನೋಡಿದರಲ್ಲಿ ಹಿಂಸಾತ್ಮಕ ದೃಶ್ಯಾವಳಿಗಳನ್ನು ನೋಡುತ್ತಾ ಯುವಜನತೆಯನ್ನು ಒಕ್ಕಲೆಬ್ಬಿಸುತ್ತಿರುವ ಪ್ರಸ್ತುತ ಭಾರತದ ಹಲವು ದುಷ್ಟಶಕ್ತಿಗಳನ್ನು ನಿರ್ನಾಮಮಾಡಿ, ಅಹಿಂಸಾತ್ಮಕ ಸದ್ಭಾವನೆಗಳನ್ನು ಮೂಡಿಸಿಕೊಳ್ಳುವಲ್ಲಿ “ಗಾಂಧಿ ಭಾರತ” ದ ಕಾರ್ಯಕ್ರಮದ ಅತ್ಯಗತ್ಯವಾಗಿತ್ತು.‌

1924 ಡಿಸೆಂಬರ್ 26 ಮಹಾತ್ಮಗಾಂಧಿಯವರು ಅಧ್ಯಕ್ಷರಾಗಿದ್ದ ಸಮಯದಲ್ಲಿ, ರಾಷ್ಟ್ರೀಯ ಅಧಿವೇಶನವನ್ನು ಬೆಳಗಾವಿಯಲ್ಲಿ ನೆಡೆಸಿದ್ದಕ್ಕೆ ಇಂದಿಗೆ ನೂರು ವರ್ಷ ಪೂರೈಸುತ್ತಿವೆ. ಇದೊಂದು ಅಭೂತಪೂರ್ವ ಭಾಗ್ಯ ಕರ್ನಾಟಕದಾಗಿತ್ತು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅಲ್ಲಿಯವರೆಗೂ ಮುಂಬೈ -ಕಲ್ಕತ್ತಾ -ದೆಹಲಿ ಪ್ರಾಂತ್ಯಗಳಲ್ಲಿ ಬಹಳ ದಕ್ಷತೆಯಿಂದ ರಾಜಕಾರಣದಲ್ಲಿ ಕಾಂಗ್ರೆಸ್ ನೆಲೆಯೂರಿದ್ದರೂ, ಅದು ದೇಶಾದ್ಯಂತ ವ್ಯಾಪಿಸಲು ಈ ಬೆಳಗಾವಿ ಅಧಿವೇಶನ ಹೊಸ ದಿಕ್ಸೂಚಿಯನ್ನು ನೀಡಿತು ಎಂದರೆ ತಪ್ಪಾಗಲಾರದು.

ಮಹಾತ್ಮ ಗಾಂಧಿಯವರು ಕೇವಲ ರಾಜಕಾರಣಿಯಾಗಿರಲಿಲ್ಲ, ಅವರೊಬ್ಬ ಸಮಾಜ ಸುಧಾರಕರೂ ಆಗಿದ್ದರು.‌ ಹಾಗಾಗಿ ತಮ್ಮ ಅಧ್ಯಕ್ಷತೆ ಅವಧಿಯಲ್ಲಿ ಕಾಂಗ್ರೆಸ್ಸನ್ನು ಕೇವಲ ರಾಜಕೀಯ ಪಕ್ಷವಾಗಿ ನೋಡದೆ, ಸಮಾಜ ಸುಧಾರಣೆಯ ಅಂಶಗಳನ್ನು ಅಳವಡಿಸಿದರು. ದೇಶದ ಪ್ರತಿ ಮನೆಮನೆಗೂ ಕಾಂಗ್ರೆಸ್ ಪಕ್ಷವನ್ನು ತಲುಪಿಸುವಲ್ಲಿ ಈ ಅಧಿವೇಶನ ಬಹುಮುಖ್ಯ ಪಾತ್ರವಹಿಸಿತು. ಅಂದಿನಿಂದ ಕಾಶ್ಮೀರದಿಂದ ಕನ್ಯಾಕುಮಾರಿಗೂ ಕಾಂಗ್ರೆಸ್  ಕಾರ್ಯಕರ್ತರು ತಮ್ಮನ್ನು ತಾವು ಸ್ವಾತಂತ್ರ್ಯ ಚಳುವಳಿಗೆ ಸಮರ್ಪಿಸಿಕೊಂಡರು.

ಇಡೀ ಅಖಂಡ ಭಾರತದ ಉದ್ದಗಲಕ್ಕೂ ಪ್ರವಾಸ ಮಾಡಿದ ಗಾಂಧಿಯವರು, 18 ಬಾರಿ ಪ್ರವಾಸ ಮಾಡಿ, 122 ದಿನ ಕರ್ನಾಟಕದ ನೆಲದಲ್ಲಿ ಓಡಾಡಿದರು. ದೇಶದ ವಿವಿಧ ಜಾತಿ- ಧರ್ಮ- ಸಂಸ್ಕೃತಿ ಹಾಗೂ ಜನರ ಸಾಮಾಜಿಕ ಜೀವನವನ್ನು ಅಭ್ಯಾಸ ಮಾಡಿದ ಅವರು, “ಸ್ವಾತಂತ್ರ್ಯ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಭಾಷಾವಾರು ಪ್ರಾಂತ್ಯಗಳಾಗಬೇಕೆಂದು” ಘೋಷಣೆ ಮಾಡುವುದರ ಮೂಲಕ‌ ಅಂದೇ ಬಹುತ್ವ ಭಾರತಕ್ಕೆ ನಾಂದಿ ಹಾಡಿದರು. ಇದಲ್ಲದೇ ಅಸ್ಪೃಶ್ಯತೆ ನಿವಾರಣೆ, ಹಿಂದೂ- ಮುಸ್ಲಿಂ ಭಾತೃತ್ವ, ಸ್ವದೇಶಿ ಖಾದಿ ಬಳಕೆ ಹೀಗೆ ಹತ್ತು ಹಲವಾರು ನಿರ್ಣಯಗಳನ್ನು ಜಾರಿಗೆ ತಂದರು.

ಇಂದು ಕಾಂಗ್ರೆಸ್ಸಿನ ರಾಷ್ರ್ಟೀಯ ಅಧಿವೇಶನ ನೂರು ವರ್ಷ ಹಿಂದೆ ನೆಡೆದ ಸ್ಥಳದಲ್ಲಿ ನೆಡೆಯುತ್ತಿರುವುದು ಕೂಡ ಒಂದು ಐತಿಹಾಸಿಕ.‌ ಇಂದು ರಾಷ್ಟ್ರೀಯ ಕಾಂಗ್ರೇಸ್  ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ  ಈ ರಾಷ್ಟ್ರೀಯ ಅಧಿವೇಶನದ ಅಧ್ಯಕ್ಷತೆ ವಹಿಸುತ್ತಿರುವುದು ಕೂಡ ಮತ್ತೊಂದು ಮೈಲಿಗಲ್ಲು. ಕಾರಣ ನೂರು ವರ್ಷದ ಹಿಂದೆ ನೆಡೆದ ಸಭೆಯಲ್ಲಿ ದಲಿತರನ್ನು ಮುಖ್ಯವಾಹಿನಿಗೆ ತರಬೇಕೆಂದು ಅಂದಿನ ಸರ್ವಸಮ್ಮತದ ನಿರ್ಧಾರವಾಗಿತ್ತು.‌ ನೂರನೇ ವರ್ಷದ ಈ ದಿನದ ಅಧಿವೇಶನದಲ್ಲಿ ದಲಿತರೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದದ್ದು ಕೂಡ ಅಭೂತಪೂರ್ವ ಕ್ಷಣವೆಂದರೆ ಅತಿಶಯೋಕ್ತಿ ಅಲ್ಲ.

ಹಾಗೆ ದೇಶದ ಆದರ್ಶ ಮಹಿಳೆ ಸೋನಿಯಾಗಾಂಧಿ , ಬಹುತ್ವ ಭಾರತದ ಭರವಸೆಯ ಜನನಾಯಕ ರಾಹುಲ್ ಗಾಂಧಿಯವರು, CWC ಸದಸ್ಯರು,ಸ್ರ್ತೀಶಕ್ತಿ ಬೆನ್ನೆಲುಬಾದ ಪ್ರಿಯಾಂಕಗಾಂಧಿ, ರಾಷ್ಟ್ರೀಯ ನಾಯಕರು, ಕರ್ನಾಟಕದ ಸೈದ್ಧಾತಿಕ ಮೇರುವ್ಯಕ್ತಿತ್ವದ ಜನನಾಯಕರಾದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು, ಹಾಗೂ ಎಲ್ಲಾ ಸಚಿವ ಸಂಪುಟದ ಸದಸ್ಯರು, ಶಾಸಕರು,ಸಂಸದರು, ವಿಧಾನಪರಿಷತ್ತು ರಾಜ್ಯಸಭಾ ಸದಸ್ಯರು, ರಾಷ್ಟ್ರೀಯ ಹಾಗೂ ರಾಜ್ಯ ಪಧಾಧಿಕಾರಿಗಳು, ಸೇವಾದಳದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಅಧಿವೇಶನದಲ್ಲಿ ಭಾಗಿಯಾದ ಎಲ್ಲರಿಗೂ ಶುಭಾಶಯಗಳು.

ಸ್ವಾತಂತ್ರ್ಯ ಭಾರತದ ನಂತರ ಈ ದೇಶಕ್ಕೆ ” ಗಾಂಧಿ ಭಾರತ” ಎಂದು ಹೆಸರಿಡಬೇಕು ಎಂದು ಸಮಾಜವಾದಿ ಲೋಹಿಯಾ ಅವರ ಅಪೇಕ್ಷೆಯಾಗಿತ್ತು. ಈ ದೇಶ ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿಸಿ ಸ್ವತಂತ್ರ ತಂದುಕೊಟ್ಟ ಗಾಂಧಿಯವರ ನೇತೃತ್ವದ ಸ್ವಾತಂತ್ರ್ಯ ಅದೆಷ್ಟು ಮುಖ್ಯವೋ, ಸ್ವಾತಂತ್ರ್ಯ ನಂತರದ ಭಾರತದ ಭವಿಷ್ಯಕ್ಕಾಗಿ ನಿರ್ಮಾಣವಾದ ಅಂಬೇಡ್ಕರ್ ನೇತೃತ್ವದ ಸಂವಿಧಾನ ಅಷ್ಟೇ ಮುಖ್ಯ. ಸ್ವಾತಂತ್ರ್ಯ ಮತ್ತು ಸಂವಿಧಾನ ಒಂದು ನಾಣ್ಯದ ಎರಡು ಮುಖಗಳಂತೆ. ಭಾರತದ ಸಂವಿಧಾನ ಈ ದೇಶದ ಉದ್ದಗಲಕ್ಕೂ ಹರಿಯುವ ಮಹಾನದಿಯಾದರೆ, ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಸಂವಿಧಾನಶಿಲ್ಪಿ ಅಂಬೇಡ್ಕರ್ ಎರಡು ದಡಗಳು..

ಹೀಗಾಗಿ ಇಂದಿನ ರ್ಯಾಲಿಗೆ ” ಜೈ ಬಾಪೂ – ಜೈ ಭೀಮ್- ಜೈ ಸಂವಿಧಾನ್ ” ಹೆಸರು ಬಹಳ ಅರ್ಥಪೂರ್ಣವಾಗಿದೆ. ಮನುವಾದಿಗಳನ್ನು ನಿರ್ನಾಮ ಮಾಡಲು ಈ ಮೂರು ವಾಕ್ಯಗಳು ನಮ್ಮ ಕಾಂಗ್ರೆಸ್ಸಿನ  ಮುಂದಿನ ಘೋಷಣೆಗಳಾಗಬೇಕು.

“ಗಾಂಧಿ, ಭಾರತದ ಆತ್ಮವಾದರೆ- ಅಂಬೇಡ್ಕರ್ ದೇಶವೆಂಬ ದೇಹದಲ್ಲಿ ಹರಿದಾಡುವ ರಕ್ತ” ಇತಿಹಾಸದಲ್ಲಿ‌ ಆದ ಹಲವು ಕಹಿಘಟನೆಗಳನ್ನು ಮರೆತು, ನಮ್ಮ ಮುಂದಿನ ಭವಿಷ್ಯದ ಬಹುತ್ವಭಾರತಕ್ಕಾಗಿ ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಜವಬ್ದಾರಿ ನಮ್ಮೆಲ್ಲರದು.

ಒಂದು ವರ್ಷದ ” ಗಾಂಧಿ ಭಾರತ” ದ ರೂಪರೇಷೆಗಳು ವಿಭಿನ್ನವಾಗಿರಲಿ ಹಾಗೂ ಈ ಸುದಿನ ಅರ್ಥಪೂರ್ಣವಾಗಿ ಮುಂದಿನ ಭಾರತದ ನಿರ್ಮಾಣಕ್ಕೆ ಭದ್ರ ಭವಿಷ್ಯ ನಿರ್ಮಾಣ ಮಾಡುವ ಐತಿಹಾಸಿಕ ನಿರ್ಣಯಗಳು ಹೊರಹೊಮ್ಮಲಿ ಎಂದು ಆಶಿಸೋಣ.‌

ಕಾಂಗ್ರೆಸ್ಸಿನ ಬೆಳಗಾವಿ ಮಹಾಧಿವೇಶನಕ್ಕೆ 100ರ ಸಂಭ್ರಮ: ಕುವೆಂಪು ಆತ್ಮಕತೆಯಲ್ಲಿದೆ ಇದರ ಕುರಿತ ಲೇಖನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...