Homeಕರ್ನಾಟಕಅಘೋಷಿತ ತುರ್ತುಪರಿಸ್ಥಿತಿಯಲ್ಲಿ "ಗಾಂಧಿ ಭಾರತ" ಅಗತ್ಯ

ಅಘೋಷಿತ ತುರ್ತುಪರಿಸ್ಥಿತಿಯಲ್ಲಿ “ಗಾಂಧಿ ಭಾರತ” ಅಗತ್ಯ

- Advertisement -
- Advertisement -

ಪ್ರಸ್ತುತ ಭಾರತದ ಅಘೋಷಿತ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ, ಎಲ್ಲಿ ನೋಡಿದರಲ್ಲಿ ಹಿಂಸಾತ್ಮಕ ದೃಶ್ಯಾವಳಿಗಳನ್ನು ನೋಡುತ್ತಾ ಯುವಜನತೆಯನ್ನು ಒಕ್ಕಲೆಬ್ಬಿಸುತ್ತಿರುವ ಪ್ರಸ್ತುತ ಭಾರತದ ಹಲವು ದುಷ್ಟಶಕ್ತಿಗಳನ್ನು ನಿರ್ನಾಮಮಾಡಿ, ಅಹಿಂಸಾತ್ಮಕ ಸದ್ಭಾವನೆಗಳನ್ನು ಮೂಡಿಸಿಕೊಳ್ಳುವಲ್ಲಿ “ಗಾಂಧಿ ಭಾರತ” ದ ಕಾರ್ಯಕ್ರಮದ ಅತ್ಯಗತ್ಯವಾಗಿತ್ತು.‌

1924 ಡಿಸೆಂಬರ್ 26 ಮಹಾತ್ಮಗಾಂಧಿಯವರು ಅಧ್ಯಕ್ಷರಾಗಿದ್ದ ಸಮಯದಲ್ಲಿ, ರಾಷ್ಟ್ರೀಯ ಅಧಿವೇಶನವನ್ನು ಬೆಳಗಾವಿಯಲ್ಲಿ ನೆಡೆಸಿದ್ದಕ್ಕೆ ಇಂದಿಗೆ ನೂರು ವರ್ಷ ಪೂರೈಸುತ್ತಿವೆ. ಇದೊಂದು ಅಭೂತಪೂರ್ವ ಭಾಗ್ಯ ಕರ್ನಾಟಕದಾಗಿತ್ತು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅಲ್ಲಿಯವರೆಗೂ ಮುಂಬೈ -ಕಲ್ಕತ್ತಾ -ದೆಹಲಿ ಪ್ರಾಂತ್ಯಗಳಲ್ಲಿ ಬಹಳ ದಕ್ಷತೆಯಿಂದ ರಾಜಕಾರಣದಲ್ಲಿ ಕಾಂಗ್ರೆಸ್ ನೆಲೆಯೂರಿದ್ದರೂ, ಅದು ದೇಶಾದ್ಯಂತ ವ್ಯಾಪಿಸಲು ಈ ಬೆಳಗಾವಿ ಅಧಿವೇಶನ ಹೊಸ ದಿಕ್ಸೂಚಿಯನ್ನು ನೀಡಿತು ಎಂದರೆ ತಪ್ಪಾಗಲಾರದು.

ಮಹಾತ್ಮ ಗಾಂಧಿಯವರು ಕೇವಲ ರಾಜಕಾರಣಿಯಾಗಿರಲಿಲ್ಲ, ಅವರೊಬ್ಬ ಸಮಾಜ ಸುಧಾರಕರೂ ಆಗಿದ್ದರು.‌ ಹಾಗಾಗಿ ತಮ್ಮ ಅಧ್ಯಕ್ಷತೆ ಅವಧಿಯಲ್ಲಿ ಕಾಂಗ್ರೆಸ್ಸನ್ನು ಕೇವಲ ರಾಜಕೀಯ ಪಕ್ಷವಾಗಿ ನೋಡದೆ, ಸಮಾಜ ಸುಧಾರಣೆಯ ಅಂಶಗಳನ್ನು ಅಳವಡಿಸಿದರು. ದೇಶದ ಪ್ರತಿ ಮನೆಮನೆಗೂ ಕಾಂಗ್ರೆಸ್ ಪಕ್ಷವನ್ನು ತಲುಪಿಸುವಲ್ಲಿ ಈ ಅಧಿವೇಶನ ಬಹುಮುಖ್ಯ ಪಾತ್ರವಹಿಸಿತು. ಅಂದಿನಿಂದ ಕಾಶ್ಮೀರದಿಂದ ಕನ್ಯಾಕುಮಾರಿಗೂ ಕಾಂಗ್ರೆಸ್  ಕಾರ್ಯಕರ್ತರು ತಮ್ಮನ್ನು ತಾವು ಸ್ವಾತಂತ್ರ್ಯ ಚಳುವಳಿಗೆ ಸಮರ್ಪಿಸಿಕೊಂಡರು.

ಇಡೀ ಅಖಂಡ ಭಾರತದ ಉದ್ದಗಲಕ್ಕೂ ಪ್ರವಾಸ ಮಾಡಿದ ಗಾಂಧಿಯವರು, 18 ಬಾರಿ ಪ್ರವಾಸ ಮಾಡಿ, 122 ದಿನ ಕರ್ನಾಟಕದ ನೆಲದಲ್ಲಿ ಓಡಾಡಿದರು. ದೇಶದ ವಿವಿಧ ಜಾತಿ- ಧರ್ಮ- ಸಂಸ್ಕೃತಿ ಹಾಗೂ ಜನರ ಸಾಮಾಜಿಕ ಜೀವನವನ್ನು ಅಭ್ಯಾಸ ಮಾಡಿದ ಅವರು, “ಸ್ವಾತಂತ್ರ್ಯ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಭಾಷಾವಾರು ಪ್ರಾಂತ್ಯಗಳಾಗಬೇಕೆಂದು” ಘೋಷಣೆ ಮಾಡುವುದರ ಮೂಲಕ‌ ಅಂದೇ ಬಹುತ್ವ ಭಾರತಕ್ಕೆ ನಾಂದಿ ಹಾಡಿದರು. ಇದಲ್ಲದೇ ಅಸ್ಪೃಶ್ಯತೆ ನಿವಾರಣೆ, ಹಿಂದೂ- ಮುಸ್ಲಿಂ ಭಾತೃತ್ವ, ಸ್ವದೇಶಿ ಖಾದಿ ಬಳಕೆ ಹೀಗೆ ಹತ್ತು ಹಲವಾರು ನಿರ್ಣಯಗಳನ್ನು ಜಾರಿಗೆ ತಂದರು.

ಇಂದು ಕಾಂಗ್ರೆಸ್ಸಿನ ರಾಷ್ರ್ಟೀಯ ಅಧಿವೇಶನ ನೂರು ವರ್ಷ ಹಿಂದೆ ನೆಡೆದ ಸ್ಥಳದಲ್ಲಿ ನೆಡೆಯುತ್ತಿರುವುದು ಕೂಡ ಒಂದು ಐತಿಹಾಸಿಕ.‌ ಇಂದು ರಾಷ್ಟ್ರೀಯ ಕಾಂಗ್ರೇಸ್  ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ  ಈ ರಾಷ್ಟ್ರೀಯ ಅಧಿವೇಶನದ ಅಧ್ಯಕ್ಷತೆ ವಹಿಸುತ್ತಿರುವುದು ಕೂಡ ಮತ್ತೊಂದು ಮೈಲಿಗಲ್ಲು. ಕಾರಣ ನೂರು ವರ್ಷದ ಹಿಂದೆ ನೆಡೆದ ಸಭೆಯಲ್ಲಿ ದಲಿತರನ್ನು ಮುಖ್ಯವಾಹಿನಿಗೆ ತರಬೇಕೆಂದು ಅಂದಿನ ಸರ್ವಸಮ್ಮತದ ನಿರ್ಧಾರವಾಗಿತ್ತು.‌ ನೂರನೇ ವರ್ಷದ ಈ ದಿನದ ಅಧಿವೇಶನದಲ್ಲಿ ದಲಿತರೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದದ್ದು ಕೂಡ ಅಭೂತಪೂರ್ವ ಕ್ಷಣವೆಂದರೆ ಅತಿಶಯೋಕ್ತಿ ಅಲ್ಲ.

ಹಾಗೆ ದೇಶದ ಆದರ್ಶ ಮಹಿಳೆ ಸೋನಿಯಾಗಾಂಧಿ , ಬಹುತ್ವ ಭಾರತದ ಭರವಸೆಯ ಜನನಾಯಕ ರಾಹುಲ್ ಗಾಂಧಿಯವರು, CWC ಸದಸ್ಯರು,ಸ್ರ್ತೀಶಕ್ತಿ ಬೆನ್ನೆಲುಬಾದ ಪ್ರಿಯಾಂಕಗಾಂಧಿ, ರಾಷ್ಟ್ರೀಯ ನಾಯಕರು, ಕರ್ನಾಟಕದ ಸೈದ್ಧಾತಿಕ ಮೇರುವ್ಯಕ್ತಿತ್ವದ ಜನನಾಯಕರಾದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು, ಹಾಗೂ ಎಲ್ಲಾ ಸಚಿವ ಸಂಪುಟದ ಸದಸ್ಯರು, ಶಾಸಕರು,ಸಂಸದರು, ವಿಧಾನಪರಿಷತ್ತು ರಾಜ್ಯಸಭಾ ಸದಸ್ಯರು, ರಾಷ್ಟ್ರೀಯ ಹಾಗೂ ರಾಜ್ಯ ಪಧಾಧಿಕಾರಿಗಳು, ಸೇವಾದಳದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಅಧಿವೇಶನದಲ್ಲಿ ಭಾಗಿಯಾದ ಎಲ್ಲರಿಗೂ ಶುಭಾಶಯಗಳು.

ಸ್ವಾತಂತ್ರ್ಯ ಭಾರತದ ನಂತರ ಈ ದೇಶಕ್ಕೆ ” ಗಾಂಧಿ ಭಾರತ” ಎಂದು ಹೆಸರಿಡಬೇಕು ಎಂದು ಸಮಾಜವಾದಿ ಲೋಹಿಯಾ ಅವರ ಅಪೇಕ್ಷೆಯಾಗಿತ್ತು. ಈ ದೇಶ ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿಸಿ ಸ್ವತಂತ್ರ ತಂದುಕೊಟ್ಟ ಗಾಂಧಿಯವರ ನೇತೃತ್ವದ ಸ್ವಾತಂತ್ರ್ಯ ಅದೆಷ್ಟು ಮುಖ್ಯವೋ, ಸ್ವಾತಂತ್ರ್ಯ ನಂತರದ ಭಾರತದ ಭವಿಷ್ಯಕ್ಕಾಗಿ ನಿರ್ಮಾಣವಾದ ಅಂಬೇಡ್ಕರ್ ನೇತೃತ್ವದ ಸಂವಿಧಾನ ಅಷ್ಟೇ ಮುಖ್ಯ. ಸ್ವಾತಂತ್ರ್ಯ ಮತ್ತು ಸಂವಿಧಾನ ಒಂದು ನಾಣ್ಯದ ಎರಡು ಮುಖಗಳಂತೆ. ಭಾರತದ ಸಂವಿಧಾನ ಈ ದೇಶದ ಉದ್ದಗಲಕ್ಕೂ ಹರಿಯುವ ಮಹಾನದಿಯಾದರೆ, ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಸಂವಿಧಾನಶಿಲ್ಪಿ ಅಂಬೇಡ್ಕರ್ ಎರಡು ದಡಗಳು..

ಹೀಗಾಗಿ ಇಂದಿನ ರ್ಯಾಲಿಗೆ ” ಜೈ ಬಾಪೂ – ಜೈ ಭೀಮ್- ಜೈ ಸಂವಿಧಾನ್ ” ಹೆಸರು ಬಹಳ ಅರ್ಥಪೂರ್ಣವಾಗಿದೆ. ಮನುವಾದಿಗಳನ್ನು ನಿರ್ನಾಮ ಮಾಡಲು ಈ ಮೂರು ವಾಕ್ಯಗಳು ನಮ್ಮ ಕಾಂಗ್ರೆಸ್ಸಿನ  ಮುಂದಿನ ಘೋಷಣೆಗಳಾಗಬೇಕು.

“ಗಾಂಧಿ, ಭಾರತದ ಆತ್ಮವಾದರೆ- ಅಂಬೇಡ್ಕರ್ ದೇಶವೆಂಬ ದೇಹದಲ್ಲಿ ಹರಿದಾಡುವ ರಕ್ತ” ಇತಿಹಾಸದಲ್ಲಿ‌ ಆದ ಹಲವು ಕಹಿಘಟನೆಗಳನ್ನು ಮರೆತು, ನಮ್ಮ ಮುಂದಿನ ಭವಿಷ್ಯದ ಬಹುತ್ವಭಾರತಕ್ಕಾಗಿ ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಜವಬ್ದಾರಿ ನಮ್ಮೆಲ್ಲರದು.

ಒಂದು ವರ್ಷದ ” ಗಾಂಧಿ ಭಾರತ” ದ ರೂಪರೇಷೆಗಳು ವಿಭಿನ್ನವಾಗಿರಲಿ ಹಾಗೂ ಈ ಸುದಿನ ಅರ್ಥಪೂರ್ಣವಾಗಿ ಮುಂದಿನ ಭಾರತದ ನಿರ್ಮಾಣಕ್ಕೆ ಭದ್ರ ಭವಿಷ್ಯ ನಿರ್ಮಾಣ ಮಾಡುವ ಐತಿಹಾಸಿಕ ನಿರ್ಣಯಗಳು ಹೊರಹೊಮ್ಮಲಿ ಎಂದು ಆಶಿಸೋಣ.‌

ಕಾಂಗ್ರೆಸ್ಸಿನ ಬೆಳಗಾವಿ ಮಹಾಧಿವೇಶನಕ್ಕೆ 100ರ ಸಂಭ್ರಮ: ಕುವೆಂಪು ಆತ್ಮಕತೆಯಲ್ಲಿದೆ ಇದರ ಕುರಿತ ಲೇಖನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...