Homeಕರ್ನಾಟಕಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ...

ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಬೆಳಗಾವಿಯಲ್ಲಿ ಇಂದು (ಡಿ.27) ನಡೆಯಬೇಕಿದ್ದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ರದ್ದು ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ನಿನ್ನೆ (ಡಿ.26) ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಇಂದು (ಶುಕ್ರವಾರ) ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಟರ ಬಳಿ ಮಾತನಾಡಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಆದಷ್ಟು ಬೇಗ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಇಂದು ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರ ಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಭಾಗವಹಿಸಿ ಗೌರವ ಸಲ್ಲಿಸಿದರೆ ಸಾಕು. ಹೊರ ಊರುಗಳಿಂದ ಹೊರಡುವ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಡಿಕೆಶಿ ಮನವಿ ಮಾಡಿದ್ದಾರೆ.

ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು ಎಂದು ಡಿಕೆಶಿ ಸೂಚಿಸಿದ್ದಾರೆ.

ಅಂತಿಮ ದರ್ಶನಕ್ಕಾಗಿ ದೆಹಲಿಗೆ ಪ್ರಯಾಣ

“ನೀವು ದೆಹಲಿಗೆ ತೆರಳುವಿರಾ? ಎಂದು ಪತ್ರಕರ್ತರು ಕೇಳಿದಾಗ, “ಪಕ್ಷದ ಅಧ್ಯಕ್ಷನಾಗಿ ಮನಮೋಹನ್ ಸಿಂಗ್ ಅವರ ಅಂತಿಮ ದರ್ಶನದಲ್ಲಿ ಭಾಗವಹಿಸುವುದು ನನ್ನ ಕರ್ತವ್ಯ. ರಾಜ್ಯದ ಹಿರಿಯ ನಾಯಕರು ಸೇರಿದಂತೆ ಒಂದಷ್ಟು ಮಂದಿ ದೆಹಲಿಗೆ ತೆರಳಲಿದ್ದೇವೆ. ನಾವೆಲ್ಲರೂ ಅವರ ಮಾರ್ಗದರ್ಶನದಲ್ಲಿ ಹಾಗೂ ಕೈ ಕೆಳಗೆ ಕೆಲಸ ಮಾಡಿದವರು ಎಂದು ಡಿಕೆಶಿ ಹೇಳಿದ್ದಾರೆ.

‘ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ಕೊಟ್ಟವರು ಸಿಂಗ್’

“ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ, ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದವರು. ‘ನರ್ಮ್ ಯೋಜನೆ’ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದವರು. ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಅವರು ನೀಡಿದ ಕೊಡುಗೆಗಳು. ಮನಮೋಹನ್ ಸಿಂಗ್ ಅವರ ಬಗ್ಗೆ ಮಾತನಾಡಲು ಒಂದ ದಿನ ಸಾಲುವುದಿಲ್ಲ. ಅವರು ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ಕೊಟ್ಟಿದ್ದಾರೆ. ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರು” ಎಂದು ಡಿಕೆಶಿ ಸ್ಮರಿಸಿದ್ದಾರೆ.

“ಪ್ರತಿ ಕೆಲಸದಲ್ಲಿಯೂ ಗಾಂಭೀರ್ಯತೆ ಪ್ರಾಮಾಣಿಕತೆಯನ್ನು ಉಳಿಸಿಕೊಂಡಿದ್ದವರು ಮನಮೋಹನ್ ಸಿಂಗ್. ಅವರ ಆಡಳಿತ ಅವಧಿಯಲ್ಲಿ ಬಡವರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ನರೇಗಾ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಉದ್ಯೋಗ ಗ್ಯಾರಂಟಿ ಸೃಷ್ಟಿ ಮಾಡಿದವರು. ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು ಸೇರಿದಂತೆ ಈ ದೇಶವನ್ನು ಗಟ್ಟಿಗೊಳಿಸುವ ಅನೇಕ ಕಾಯ್ದೆಗಳನ್ನು ನೀಡಿದವರು” ಎಂದಿದ್ದಾರೆ.

“ಗಾಂಧಿ ಭಾರತ’ ಕಾರ್ಯಕ್ರಮ ಅಂಗವಾಗಿ ಬೆಳಗಾವಿಯಲ್ಲಿ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ ಉಳಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಶುಕ್ರವಾರ ಬೆಳಿಗ್ಗೆ ಮಾಹಿತಿ ನೀಡಲಾಗುವುದು. ಸಾಕಷ್ಟು ಜನರು ದೀಪಾಲಂಕಾರವನ್ನು ವೀಕ್ಷಿಸುತ್ತಿದ್ದಾರೆ. ಈ ಕಾರಣಕ್ಕೆ ಉಳಿಸಿಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಗುವುದು” ಎಂದು ಡಿಸಿಎಂ ಹೇಳಿದ್ದಾರೆ.

ಇದನ್ನೂ ಓದಿ : ಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...