Homeಕರ್ನಾಟಕ'ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ': ಸಂತೋಷ್ ಕೌಲಗಿ

‘ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ’: ಸಂತೋಷ್ ಕೌಲಗಿ

- Advertisement -
- Advertisement -

ಹಳ್ಳಿಯ ಜನರಿಗೆ ಗಾಂಧಿ ಕುರಿತು ಯಾವಾಗ ಬೇಕಾದರೂ ಹೇಳಬಹುದು. ಆದರೆ ನಮ್ಮೊಳಗೆ ಗಾಂಧಿಯನ್ನು ಎಷ್ಟು ಬಿಟ್ಟುಕೊಂಡಿದ್ದೇವೆ ಎಂಬುದನ್ನು ಪರೀಕ್ಷಿಸಲು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್ ಸಂತೋಷ್ ಕೌಲಗಿ ಹೇಳಿದ್ದಾರೆ.

ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿ ವಿಚಾರ ಬಳಗದ ವತಿಯಿಂದಗಾಂಧಿಯಡೆಗೆ ನಮ್ಮ ನಡಿಗೆವಿಷಯವಾಗಿ ಮೇಲುಕೋಟೆಯಿಂದ ಮಂಡ್ಯದವರೆಗೆ ಮೂರು ದಿನಗಳ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನನಗೆ ದಕ್ಕಿದ ಗಾಂಧಿ ಎಷ್ಟು ಎಂಬುದರ ಬಗ್ಗೆ ವಿಮರ್ಶೆ ಮಾಡಿಕೊಳ್ಳಬೇಕಿರುವ ಕಾಲ ಇದಾಗಿದೆ ಎಂದ ಅವರು, ‘ಇಷ್ಟು ದಿನ ಗಾಂಧಿ ಬಗ್ಗೆ ನಾವು ಮತನಾಡದೇ ಬಹಳ ದೊಡ್ಡ ತಪ್ಪು ಮಾಡಿದ್ದೇವೆ ಎಂಬುದು ಪಾದಯಾತ್ರೆಯಲ್ಲಿ ಅರಿವಿಗೆ ಬಂತುಎಂದು ತಿಳಿಸಿದರು.

ಗಾಂಧಿ ಸಮಾಜದ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರ ವಿಚಾರಗಳು ಪ್ರಖರವಾಗಿವೆ. ಆದರೆ ಹೊಳಪನ್ನು ನೋಡಲು ಸಿದ್ದವಿಲ್ಲದವರು ಕಸಕಡ್ಡಿ ಹಾಕಿ ಮಸಕು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಮಗೆ ಗಾಂಧಿ ವಿಚಾರಗಳು ಪ್ರಕಾಶಮಾನವಾಗಿ ಕಾಣುತ್ತಿವೆ ಎಂದರು.

ಪಾದಯಾತ್ರೆಯ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಗಾಂಧಿಯ ವಿಚಾರಕ್ಕೆ ಹೊಸ ಸಂಚಲನ ಶುರುವಾಗಲಿ. ಇದು ಇಲ್ಲಿಗೆ ಮುಗಿಯುವುದಿಲ್ಲ, ಸತತವಾಗಿ ನಡೆಯಬೇಕಾದ ಕ್ರಿಯೆ, ನಡಿಗೆ ಸಹಜವಾಗಿ ನಡೆಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಗಾಂಧಿಯನ್ನು ದುಷ್ಟರು, ಸರಿಯಾದ ಚಿಂತನೆಯಿಲ್ಲದವರು ತೆಗೆದುಕೊಳ್ಳಲು ಬಿಡಬಾರದು. ಏಕೆಂದರೆ ಇಂದು ನಮ್ಮ ದೇಶ ದೇಶ ದೊಡ್ಡ ಕ್ಷೋಭೆಗೆ ಒಳಗಾಗಿದೆ. ಇಡೀ ಪ್ರಪಂಚವೇ ಬಡವರನ್ನು, ಶೋಷಿತರನ್ನು ಪ್ರಪಾತಕ್ಕೆ ತಳ್ಳುತ್ತಿದೆ. ಹಿಂಸಾವಾದಿ ಸರ್ವಾಧಿಕಾರಿಗಳು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಸಂದರ್ಭದಲ್ಲಿ ನಾವು ಗಾಂಧಿಯ ವಿಚಾರಗಳನ್ನು ಮರೆಯದೇ ಮುನ್ನಲೆಗೆ ತರಬೇಕು ಎಂದರು.

ಗಾಂಧಿಯ ಮಾತುಗಳನ್ನು ಮೊದಲು ನಾವೆಲ್ಲರೂ ಪಾಲಿಸಬೇಕು. ಅವರ ವಿಚಾರಗಳನ್ನು ಹೇಳುವುದಕ್ಕಿಂತ ಹೆಚ್ಚಾಗಿ ಪಾಲಿಸಬೇಕಾಗಿದೆ. ಇದಕ್ಕೆ ನಮ್ಮ ಹೃದಯವೇ ಮೌಲ್ಯಮಾಪಕವಾಗಿದೆ‌. ದೇಶಕ್ಕೆ ಆವರಿಸಿರುವ ದೊಡ್ಡ ಕಗ್ಗತ್ತಲೆಯನ್ನು ಹೋಗಲಾಡಿಸಲಿಕ್ಕೆ ಹೃದಯ ಮುಟ್ಟಿ ನೋಡಿಕೊಳ್ಳುತ್ತಲೇ ಗಾಂಧಿಯೆಡೆಗೆ ನಮ್ಮ ನಡಿಗೆ ಮುಂದುವರೆಸಬೇಕು ಎಂದರು.

ಚಿಂತಕರಾದ ಜಗದೀಶ್ ಕೊಪ್ಪರವರು ಮಾತನಾಡಿಗಾಂಧಿ ವಿಚಾರಧಾರೆಯನ್ನು ನಾವಿಂದು ಎದೆಗೆ ಇಳಿಸಿಕೊಳ್ಳಬೇಕಗಿದೆ. ಏಕೆಂದರೆ ಇಂದು ನಾವು ಸ್ವಾರ್ಥಿಗಳಾಗಿದ್ದೇವೆ. ನಮ್ಮೊಳಗಿನ ಬೌದ್ಧಿಕ ದಿವಾಳಿತನತನದಿಂದ ಇಂದು ಗಾಂಧಿಯವರು ನಕಾರತ್ಮಕವಾಗಿ ಬಿಂಬಿಸಲ್ಪಡುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.

ನಮ್ಮ ಅಂತರಂಗದಲ್ಲಿ ಉಂಟಾಗಿರುವ ಸಂಕ್ಷೋಬೆ ಹೋಗಲಾಡಿಸಲು ಗಾಂಧಿ ವಿಚಾರಗಳನ್ನು ಮನನ ಮಾಡಿಕೊಳ್ಳಬೇಕಿದೆ. ನಮ್ಮ ವಯಕ್ತಿಕ ಸ್ವಾರ್ಥಕ್ಕಾಗಿ ನಾವು ಪರಿಸರವನ್ನು ಹಾಳು ಮಾಡಿದ್ದೇವೆ. ಆದರೆ ವಯಕ್ತಿಕ ಹಿತಾಸಕ್ತಿಯಿಂದ ಸಮಾಜ ಉದ್ದಾರ ಆಗುವುದಿಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಇಂದು ಕಲವು ದಲಿತರು ಗಾಂಧಿಯನ್ನು ಶತ್ರು ರೀತಿಯಲ್ಲಿ ನೋಡುತ್ತಿದ್ದಾರೆ. ಪೂನಾ ಒಪ್ಪಂದ ಬಿಟ್ಟು ಗಾಂಧಿಯನ್ನು ನೋಡಿದರೆ ಗಾಂಧಿಯ ಜಾತಿವಿರೋಧಿ ಮನಸ್ಥಿತಿ ಅರ್ಥವಾಗುತ್ತದೆ ಎಂದರು.

ಸಬರಮತಿ ಆಶ್ರಮದಲ್ಲಿ ಗಾಂಧಿಯವರ ಪತ್ನಿ ಕಸ್ತೂರಬಾ ರವರು ನಿಧನಹೊಂದಿದ್ದಾಗ ಗಾಂಧಿಯೊಡನೆ ಹಲವು ಹೆಣ್ಣುಮಕ್ಕಳು ಚಿತೆಗೆ ಬೆಂಕಿ ಸ್ಪರ್ಶ ಮಾಡಿದರು. ಆಗ ಕಸ್ತೂರಬಾರವರು ಧರಿಸಿದ್ದ ಆಭರಣಗಳನ್ನು ದಲಿತ ಬಾಲಕನಿಗೆ ದಾನ ಮಾಡಲಾಯಿತು ಇದೆಲ್ಲದನ್ನು ನಾವು ನೆನಪಿಸಿಕೊಳ್ಳಬೇಕು ಎಂದರು.

ಗಾಂಧಿಯವರು ಸ್ಥಾಪಿಸಿದ್ದ ಹರಿಜನ ಸೇವಕ ಸಂಘಕ್ಕೆ ಅಂಬೇಡ್ಕರ್ ವಿರೋಧ ವ್ಯಕ್ತಪಡಿಸಿದ್ದರು. ಒಬ್ಬರೂ ದಲಿತರಿಲ್ಲದ ದಲಿತ ಸೇವಕ ಸಂಘ ಇದು ಎಂದು ಟೀಕಿಸಿದ್ದರು. ಆಗ ಗಾಂಧಿಯವರುದಲಿತರ ಸೇವೆಯನ್ನು ದಲಿತೇತರರೆ ಮಾಡಬೇಕು“, ಶೋಷಿತ ದಲಿತರ ಪರವಾಗಿ ಸವರ್ಣೀಯರು ನಿಲ್ಲಬೇಕು ಎಂದು ಗಾಂಧಿ ಪ್ರತಿಪಾದಿಸಿದ್ದರು ಎಂದು ತಿಳಿಸಿದರು.

ಗಾಂಧಿ ತಮ್ಮ ಕೊನೆಗಾಲದಲ್ಲಿ ಅಂತರ್ಜಾತಿ ವಿವಾಹಗಳನ್ನು ಹೊರತುಪಡಿಸಿ ಬೇರೆ ಯಾವ ವಿವಾಹಗಳಿಗೂ ತಾನು ಹೋಗುವುದಿಲ್ಲ ಎಂದ ತೀರ್ಮಾನಿಸಿದ್ದರು. ಕಾಶಿಯ ವಿಶ್ವನಾಥ ದೇವಾಲಯಕ್ಕೆ ಹರಿಜನರಿಗೆ ಪ್ರವೇಶ ಇಲ್ಲದಿದ್ದರೆ ತನಗೂ ಬೇಡವೆಂದು ಘೋಷಿಸಿದ್ದರು.ಉಡುಪಿಯ ಕೃಷ್ಣ ಮಂದಿರದ ಮುಂದೆ ಹೋದರೂ ಸಹ ಇದೇ ಕಾರಣಕ್ಕೆ ದೇವಾಲಯ ಪ್ರವೇಶಿಸಲಿಲ್ಲ ಅಲ್ಲವೇ? ಎಂದು ಜಗದೀಶ್ ಕೊಪ್ಪ ತಿಳಿಸಿದರು.

ಪಾದಯಾತ್ರೆಯಲ್ಲಿ ಭಗಾವಹಿಸಿದ್ದ ಹಲವು ಜನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಹಿರಿಯ ಗಾಂಧಿವಾದಿಗಳಾದ ಹೆಗ್ಗೋಡು ಪ್ರಸನ್ನರವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...