Homeಚಳವಳಿಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್...  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ...

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…

- Advertisement -
- Advertisement -

ಇಂದು ಪ್ರಜಾವಾಣಿಯ ಮುಖಪುಟದಲ್ಲಿ ಎ. ನಾರಾಯಣ್ ಅವರ “ಆಪದ್ಬಾಂಧವ ಅರ್ಥಮಾಂತ್ರಿಕ” ಲೇಖನದಲ್ಲಿ  ಮನಮೋಹನ್ ಸಿಂಗ್  ಅವರಿಗಿಂತಲೂ ಜಗತ್ತಿನಲ್ಲಿ ಪ್ರಖ್ಯಾತ ಅರ್ಥಶಾಸ್ತ್ರಜ್ಞರು  ಇರಬಹುದು ಆದರೆ, ಒಬ್ಬ ಅರ್ಥಶಾಸ್ತ್ರಜ್ಞನಾಗಿ ಆರ್ಥಿಕವಲಯದ ಎಲ್ಲಾ ಆಯಾಕಟ್ಟಿನ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ ನಿಗರ್ವಿಯಾಗಿ ನಿರ್ಗಮಿಸಿದರು,  ಎಂದು ಓದುವಾಗ ಒಂದು ಕ್ಷಣ ರೋಮಾಂಚನವಾಯಿತು.

ಮನಮೋಹನ್ ಸಿಂಗ್ ಅವರನ್ನು ವಿಶ್ಲೇಷಣೆ ಮಾಡಿ ಬರೆಯಲು ನಾನು ಅರ್ಥಶಾಸ್ತ್ರದ ವಿದ್ಯಾರ್ಥಿ ಅಲ್ಲ ಆದರೆ, ಎರಡುವರೆ ದಶಕದಿಂದ ಸಾಮಾಜಿಕ ಕಾರ್ಯಕರ್ತೆಯಾಗಿ ಹಾಗೂ ರಾಜಕೀಯ ಕಾರ್ಯಕರ್ತೆಯಾಗಿ ನನಗನ್ನಿಸುವುದೇನೆಂದರೆ, ಮನಮೋಹನ್ ಸಿಂಗ್‌ ಅವರು  ತಾವು ಜೀವಿತವಾಗಿರುವಾಗಲೇ, ಜಗತ್ತಿನ ದೊಡ್ಡ ದೊಡ್ಡ ಅರ್ಥಶಾಸ್ತ್ರಜ್ಞರೆಲ್ಲರೂ ತಮ್ಮನ್ನು ಹಾಡಿ ಹೊಗಳಿದವರನ್ನು ಹಾಗೆಯೇ ತಮ್ಮನ್ನು ಅತ್ಯಂತ ಹೀನಾಯವಾಗಿ ಜರಿದವರನ್ನೂ  ಒಟ್ಟೊಟ್ಟಿಗೆ  ತಮ್ಮ ಬದುಕಿನ ಕಾಲಘಟ್ಟದಲ್ಲಿ ಕಂಡರೂ, ಹೊಗಳಿಕೆಗೂ  ಹಾಗೂ ತೆಗಳಿಕೆಗೂ ಅವರ ಮೌನವೇ ಉತ್ತರವಾಗಿತ್ತು…

ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ “ಏನು ಮಾತಾಡಬೇಕು ಎನ್ನುವುದಕ್ಕಿಂತ ಏನೆಲ್ಲಾ ಮಾತಾಡಬಾರದು” ಎನ್ನುವುದನ್ನು ಸ್ವಾಸ್ಥ ನಾಗರಿಕ ಸಮಾಜ ಅತ್ಯಂತ ಗಂಭೀರವಾಗಿ ಯೋಚಿಸುವ ಕಾಲಘಟ್ಟದಲ್ಲಿ, ಮನಮೋಹನ್ ಸಿಂಗ್ ಅವರನ್ನು ಜರಿಯುವುದಕ್ಕಾಗಿ ಬಳಸಿದ ಆ ಮೌನಿಸಿಂಗ್ ಎಂಬ ಪದವೇ ಉತ್ತರವಲ್ಲವೇ? ಯಾಕೋ ಈ ಮೌನಿಸಿಂಗ್ ಎಂಬ ಪದ ನನಗೆ ಬಲು ತಂಪಾಗಿ ಇಂದು ಕೇಳಿಸುತ್ತಿದೆ.‌ ಕಾರಣ  “ಆಡದೇ ಮಾಡುವನು ರೂಢಿಯೊಳಗುತ್ತಮನು” ಎಂಬ ಸರ್ವಜ್ಞನ ಮಾತಿನಂತೆ ಕತ್ತಲಿನಲ್ಲಿ ಕಂದೀಲ ದೀಪದಲ್ಲಿ ವಿದ್ಯಾಭ್ಯಾಸ ಮಾಡಿದರೂ,  ಭಾರತದ ಅರ್ಥವ್ಯವಸ್ಥೆಯ ಪ್ರಜ್ವಲ ಬೆಳಕಾಗಿ ಮೌನವಾಗಿಯೇ ಪ್ರಕಾಶಿಸಿದ್ದು ಒಂದು ಅತ್ಯದ್ಭುತವಾದ ಸಂಗತಿ.

ವಿರೋಧಪಕ್ಷದವರಿಂದ “ಆಕ್ಸಿಡೆಂಟಲ್ ಪ್ರಧಾನಿ” ಎಂದು ಟೀಕೆಗೆ ಒಳಪಟ್ಟರೂ, ಭಾರತದ ಆರ್ಥಿಕ ವ್ಯವಸ್ಥೆಯನ್ನು ಎಲ್ಲಿಯೂ ಆಕ್ಸಿಡೆಂಟ್ ಆಗದ ಹಾಗೆ ಆಡಳಿತ ನಡೆಸಿ ಆರ್ಥಿಕ ಜಗತ್ತಿನ ಮಾಂತ್ರಿಕನಾಗಿ ಮೌನವಾಗಿಯೇ ಮೆರೆದರು.

ಪ್ರಸ್ತುತ ದೇಶದ ಪ್ರಧಾನಿಯವರ ಮಾಧ್ಯಮಗೋಷ್ಠಿಗಾಗಿ 10 ವರ್ಷಗಳಿಂದಲೂ ಕೂಗುಗಳಿದ್ದರೂ, ಮನಮೋಹನ್ ಸಿಂಗ್ ಅವರು 117 ಮಾಧ್ಯಮಗೋಷ್ಠಿಗಳಲ್ಲಿ ನಿರಂತರವಾಗಿ ಮಾತನಾಡುತ್ತಾ, ತಮ್ಮ ಕೊನೆಯ ಗೋಷ್ಠಿಯಲ್ಲಿ ನೂರಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳ ಮುಂದೆ “ನಾನು ಮಾತನಾಡುವುದಕ್ಕೆ ಹೆದರುವ ಪ್ರಧಾನಿಯಲ್ಲ” ಎಂದು ಹೇಳಿದ್ದು ಇದೇ ಮೌನಿಸಿಂಗ್ ಮನಮೋಹನ್ ಸಿಂಗ್ ಅವರೇ….

ಹೀಗೆ ಹೇಳಿ ಮಾತಿನ ತೂಕವನ್ನು ಜಗತ್ತಿಗೆ ಸಾರಿದರು.

ಈ 10-11 ವರ್ಷಗಳಲ್ಲಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಕೇವಲ ಮಾತುಗಳನ್ನು ಕೇಳಿ ಕೇಳಿ ಸಾಕಾಗಿ ಹೋಗಿದೆ.‌ ಇಂದು ಬರೀ ಮಾತುಗಳಿಂದಲೇ ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಸ್ವಾರ್ಥಕ್ಕೆ ಧಕ್ಕೆ ಉಂಟಾಗಿರುವಾಗ, ಮಾತು ಬಂಗಾರದಂತೆ ಬಳಸಿ ಆರ್ಥಿಕ ಸಾರೋಟದಲ್ಲಿ ಜರಿದವರಿಂದಲೇ ಮೆರವಣಿಗೆ ಮಾಡಿಸಿಕೊಂಡವರು ಇದೇ ಮನಮೋಹನ್ ಸಿಂಗ್…‌ ಅಲ್ಲವೇ ?

ಪ್ರಾಧ್ಯಾಪಕನಿಂದ ಪ್ರಧಾನಿ ಹುದ್ದೆ ಏರಿದರೂ, ವಿಶ್ವದ್ಯಾಂತ ಅನೇಕ ರಾಷ್ಟ್ರಗಳಲ್ಲಿ ಪ್ರವಾಸ ಮಾಡಿದರೂ,  ಅನೇಕ ಪ್ರಶಸ್ತಿಗೆ ಭಾಜನರಾಗಿ ಅನೇಕ ಸಾಧನೆಗಳನ್ನು  ಮಾಡಿದರೂ,  ಎಲ್ಲಿಯೂ ಫೋಟೋಶೂಟ್ ಮಾಡಿಸಿಕೊಳ್ಳದೆ ಯಾವುದನ್ನು ಪ್ರಚಾರ ಮಾಡಿಕೊಳ್ಳದೆ, ಮೌನವಾಗಿಯೇ ತಮ್ಮ ಹೆಸರನ್ನು ಇತಿಹಾಸದ ಪುಟಗಳಲ್ಲಿ ಸೇರಿಸಿದ ಮಾಂತ್ರಿಕ, ಅವರೇ ಹೇಳಿದಂತೆ “ಯಾವಾಗ ಏನಾಗಬೇಕೋ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” ( Nobody power on earth can stop an idia whose time has come ) ಎಂದು, ಪ್ರಕೃತಿಯ ಕರೆಗೆ ಓಗೊಟ್ಟು ಸಾಗಿದ ಆರ್ಥಿಕ ಜಗತ್ತಿನ ಸಾಮ್ರಾಟ, ಮೌನವಾಗಿಯೇ ಸಾಧಿಸಿದ ಕಾರ್ಯಗಳು ಈ ಜಗತ್ತು ಇರುವವರೆಗೂ ಮಾತಾಡುತ್ತವೆ..

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್ ಹೋಗಿಬನ್ನಿ, ಇತಿಹಾಸ ನಿಮ್ಮನ್ನು ಎಂದೂ ಮರೆಯುವುದಿಲ್ಲ….

ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...