Homeಚಳವಳಿಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್...  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ...

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…

- Advertisement -
- Advertisement -

ಇಂದು ಪ್ರಜಾವಾಣಿಯ ಮುಖಪುಟದಲ್ಲಿ ಎ. ನಾರಾಯಣ್ ಅವರ “ಆಪದ್ಬಾಂಧವ ಅರ್ಥಮಾಂತ್ರಿಕ” ಲೇಖನದಲ್ಲಿ  ಮನಮೋಹನ್ ಸಿಂಗ್  ಅವರಿಗಿಂತಲೂ ಜಗತ್ತಿನಲ್ಲಿ ಪ್ರಖ್ಯಾತ ಅರ್ಥಶಾಸ್ತ್ರಜ್ಞರು  ಇರಬಹುದು ಆದರೆ, ಒಬ್ಬ ಅರ್ಥಶಾಸ್ತ್ರಜ್ಞನಾಗಿ ಆರ್ಥಿಕವಲಯದ ಎಲ್ಲಾ ಆಯಾಕಟ್ಟಿನ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ ನಿಗರ್ವಿಯಾಗಿ ನಿರ್ಗಮಿಸಿದರು,  ಎಂದು ಓದುವಾಗ ಒಂದು ಕ್ಷಣ ರೋಮಾಂಚನವಾಯಿತು.

ಮನಮೋಹನ್ ಸಿಂಗ್ ಅವರನ್ನು ವಿಶ್ಲೇಷಣೆ ಮಾಡಿ ಬರೆಯಲು ನಾನು ಅರ್ಥಶಾಸ್ತ್ರದ ವಿದ್ಯಾರ್ಥಿ ಅಲ್ಲ ಆದರೆ, ಎರಡುವರೆ ದಶಕದಿಂದ ಸಾಮಾಜಿಕ ಕಾರ್ಯಕರ್ತೆಯಾಗಿ ಹಾಗೂ ರಾಜಕೀಯ ಕಾರ್ಯಕರ್ತೆಯಾಗಿ ನನಗನ್ನಿಸುವುದೇನೆಂದರೆ, ಮನಮೋಹನ್ ಸಿಂಗ್‌ ಅವರು  ತಾವು ಜೀವಿತವಾಗಿರುವಾಗಲೇ, ಜಗತ್ತಿನ ದೊಡ್ಡ ದೊಡ್ಡ ಅರ್ಥಶಾಸ್ತ್ರಜ್ಞರೆಲ್ಲರೂ ತಮ್ಮನ್ನು ಹಾಡಿ ಹೊಗಳಿದವರನ್ನು ಹಾಗೆಯೇ ತಮ್ಮನ್ನು ಅತ್ಯಂತ ಹೀನಾಯವಾಗಿ ಜರಿದವರನ್ನೂ  ಒಟ್ಟೊಟ್ಟಿಗೆ  ತಮ್ಮ ಬದುಕಿನ ಕಾಲಘಟ್ಟದಲ್ಲಿ ಕಂಡರೂ, ಹೊಗಳಿಕೆಗೂ  ಹಾಗೂ ತೆಗಳಿಕೆಗೂ ಅವರ ಮೌನವೇ ಉತ್ತರವಾಗಿತ್ತು…

ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ “ಏನು ಮಾತಾಡಬೇಕು ಎನ್ನುವುದಕ್ಕಿಂತ ಏನೆಲ್ಲಾ ಮಾತಾಡಬಾರದು” ಎನ್ನುವುದನ್ನು ಸ್ವಾಸ್ಥ ನಾಗರಿಕ ಸಮಾಜ ಅತ್ಯಂತ ಗಂಭೀರವಾಗಿ ಯೋಚಿಸುವ ಕಾಲಘಟ್ಟದಲ್ಲಿ, ಮನಮೋಹನ್ ಸಿಂಗ್ ಅವರನ್ನು ಜರಿಯುವುದಕ್ಕಾಗಿ ಬಳಸಿದ ಆ ಮೌನಿಸಿಂಗ್ ಎಂಬ ಪದವೇ ಉತ್ತರವಲ್ಲವೇ? ಯಾಕೋ ಈ ಮೌನಿಸಿಂಗ್ ಎಂಬ ಪದ ನನಗೆ ಬಲು ತಂಪಾಗಿ ಇಂದು ಕೇಳಿಸುತ್ತಿದೆ.‌ ಕಾರಣ  “ಆಡದೇ ಮಾಡುವನು ರೂಢಿಯೊಳಗುತ್ತಮನು” ಎಂಬ ಸರ್ವಜ್ಞನ ಮಾತಿನಂತೆ ಕತ್ತಲಿನಲ್ಲಿ ಕಂದೀಲ ದೀಪದಲ್ಲಿ ವಿದ್ಯಾಭ್ಯಾಸ ಮಾಡಿದರೂ,  ಭಾರತದ ಅರ್ಥವ್ಯವಸ್ಥೆಯ ಪ್ರಜ್ವಲ ಬೆಳಕಾಗಿ ಮೌನವಾಗಿಯೇ ಪ್ರಕಾಶಿಸಿದ್ದು ಒಂದು ಅತ್ಯದ್ಭುತವಾದ ಸಂಗತಿ.

ವಿರೋಧಪಕ್ಷದವರಿಂದ “ಆಕ್ಸಿಡೆಂಟಲ್ ಪ್ರಧಾನಿ” ಎಂದು ಟೀಕೆಗೆ ಒಳಪಟ್ಟರೂ, ಭಾರತದ ಆರ್ಥಿಕ ವ್ಯವಸ್ಥೆಯನ್ನು ಎಲ್ಲಿಯೂ ಆಕ್ಸಿಡೆಂಟ್ ಆಗದ ಹಾಗೆ ಆಡಳಿತ ನಡೆಸಿ ಆರ್ಥಿಕ ಜಗತ್ತಿನ ಮಾಂತ್ರಿಕನಾಗಿ ಮೌನವಾಗಿಯೇ ಮೆರೆದರು.

ಪ್ರಸ್ತುತ ದೇಶದ ಪ್ರಧಾನಿಯವರ ಮಾಧ್ಯಮಗೋಷ್ಠಿಗಾಗಿ 10 ವರ್ಷಗಳಿಂದಲೂ ಕೂಗುಗಳಿದ್ದರೂ, ಮನಮೋಹನ್ ಸಿಂಗ್ ಅವರು 117 ಮಾಧ್ಯಮಗೋಷ್ಠಿಗಳಲ್ಲಿ ನಿರಂತರವಾಗಿ ಮಾತನಾಡುತ್ತಾ, ತಮ್ಮ ಕೊನೆಯ ಗೋಷ್ಠಿಯಲ್ಲಿ ನೂರಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳ ಮುಂದೆ “ನಾನು ಮಾತನಾಡುವುದಕ್ಕೆ ಹೆದರುವ ಪ್ರಧಾನಿಯಲ್ಲ” ಎಂದು ಹೇಳಿದ್ದು ಇದೇ ಮೌನಿಸಿಂಗ್ ಮನಮೋಹನ್ ಸಿಂಗ್ ಅವರೇ….

ಹೀಗೆ ಹೇಳಿ ಮಾತಿನ ತೂಕವನ್ನು ಜಗತ್ತಿಗೆ ಸಾರಿದರು.

ಈ 10-11 ವರ್ಷಗಳಲ್ಲಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಕೇವಲ ಮಾತುಗಳನ್ನು ಕೇಳಿ ಕೇಳಿ ಸಾಕಾಗಿ ಹೋಗಿದೆ.‌ ಇಂದು ಬರೀ ಮಾತುಗಳಿಂದಲೇ ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಸ್ವಾರ್ಥಕ್ಕೆ ಧಕ್ಕೆ ಉಂಟಾಗಿರುವಾಗ, ಮಾತು ಬಂಗಾರದಂತೆ ಬಳಸಿ ಆರ್ಥಿಕ ಸಾರೋಟದಲ್ಲಿ ಜರಿದವರಿಂದಲೇ ಮೆರವಣಿಗೆ ಮಾಡಿಸಿಕೊಂಡವರು ಇದೇ ಮನಮೋಹನ್ ಸಿಂಗ್…‌ ಅಲ್ಲವೇ ?

ಪ್ರಾಧ್ಯಾಪಕನಿಂದ ಪ್ರಧಾನಿ ಹುದ್ದೆ ಏರಿದರೂ, ವಿಶ್ವದ್ಯಾಂತ ಅನೇಕ ರಾಷ್ಟ್ರಗಳಲ್ಲಿ ಪ್ರವಾಸ ಮಾಡಿದರೂ,  ಅನೇಕ ಪ್ರಶಸ್ತಿಗೆ ಭಾಜನರಾಗಿ ಅನೇಕ ಸಾಧನೆಗಳನ್ನು  ಮಾಡಿದರೂ,  ಎಲ್ಲಿಯೂ ಫೋಟೋಶೂಟ್ ಮಾಡಿಸಿಕೊಳ್ಳದೆ ಯಾವುದನ್ನು ಪ್ರಚಾರ ಮಾಡಿಕೊಳ್ಳದೆ, ಮೌನವಾಗಿಯೇ ತಮ್ಮ ಹೆಸರನ್ನು ಇತಿಹಾಸದ ಪುಟಗಳಲ್ಲಿ ಸೇರಿಸಿದ ಮಾಂತ್ರಿಕ, ಅವರೇ ಹೇಳಿದಂತೆ “ಯಾವಾಗ ಏನಾಗಬೇಕೋ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” ( Nobody power on earth can stop an idia whose time has come ) ಎಂದು, ಪ್ರಕೃತಿಯ ಕರೆಗೆ ಓಗೊಟ್ಟು ಸಾಗಿದ ಆರ್ಥಿಕ ಜಗತ್ತಿನ ಸಾಮ್ರಾಟ, ಮೌನವಾಗಿಯೇ ಸಾಧಿಸಿದ ಕಾರ್ಯಗಳು ಈ ಜಗತ್ತು ಇರುವವರೆಗೂ ಮಾತಾಡುತ್ತವೆ..

ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್ ಹೋಗಿಬನ್ನಿ, ಇತಿಹಾಸ ನಿಮ್ಮನ್ನು ಎಂದೂ ಮರೆಯುವುದಿಲ್ಲ….

ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...