Homeಮುಖಪುಟಯೆಮನ್‌ನ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ : ಪ್ರಾಣಾಪಾಯದಿಂದ ಪಾರಾದ WHO...

ಯೆಮನ್‌ನ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ : ಪ್ರಾಣಾಪಾಯದಿಂದ ಪಾರಾದ WHO ಮುಖ್ಯಸ್ಥ

- Advertisement -
- Advertisement -

ಯೆಮನ್‌ ರಾಜಧಾನಿ ಸನಾ ಮತ್ತು ಕೆಂಪು ಸಮುದ್ರದ ಬಂದರು ನಗರ ಹೊದೈದಾದಲ್ಲಿನ ಪ್ರಮುಖ ಮೂಲ ಸೌಕರ್ಯ ಮತ್ತು ಹೌತಿ ಬಂಡುಕೋರರ ನೆಲೆಗಳ ಮೇಲೆ ಇಸ್ರೇಲ್ ಗುರುವಾರ (ಡಿ.26) ವೈಮಾನಿಕ ದಾಳಿ ನಡೆಸಿದೆ.

ಹೌತಿ ಗುಂಪಿನ ನಿಯಂತ್ರಣದಲ್ಲಿರುವ ಪ್ರದೇಶಗಳಾದ ಸನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಹೆಝ್ಯಾಝ್, ರಾಸ್ ಕನಾತಿಬ್ ವಿದ್ಯುತ್ ಸ್ಥಾವರಗಳು ಮತ್ತು ಹೊದೈದಾ, ಸಲೀಫ್ ಮತ್ತು ರಾಸ್ ಕನಾತಿಬ್ ಬಂದರುಗಳಲ್ಲಿನ ಮಿಲಿಟರಿ ಮೂಲಸೌಕರ್ಯಗಳ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಪ್ರಾಣಾಪಾಯದಿಂದ ಪಾರಾದ ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ

ವರದಿಗಳ ಪ್ರಕಾರ, ಸನಾ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಹೆಚ್‌ಒ) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮತ್ತು ಅಧಿಕಾರಿಗಳು ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಘೆಬ್ರೆಯೆಸಸ್ ಮತ್ತು ವಿಶ್ವಸಂಸ್ಥೆಯ ಇತರ ಅಧಿಕಾರಿಗಳು ವಿಮಾನ ಹತ್ತಲು ಸಿದ್ದತೆ ನಡೆಸುತ್ತಿದ್ದಾಗ ದಾಳಿ ನಡೆದಿದೆ. ಇದರಲ್ಲಿ ಯುಎನ್ ವಿಮಾನದ ಸಹಾಯಕ ಕ್ಯಾಪ್ಟನ್ ಸೇರಿದಂತೆ ಇಬ್ಬರು ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ಹೌತಿ ಸರ್ಕಾರದ ವಿದೇಶಾಂಗ ಸಚಿವ ಜಮಾಲ್ ಅಮೆರ್ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್​ನಲ್ಲಿ ತಿಳಿಸಿದ್ದಾರೆ. ದಾಳಿ ನಡೆದಾಗ ಡಬ್ಲ್ಯುಎಚ್ಒ ಮುಖ್ಯಸ್ಥರು ವಿಮಾನ ನಿಲ್ದಾಣದ ವಿಐಪಿ ಲಾಂಜ್​​ನಲ್ಲಿದ್ದರು ಎಂದು ಅಮೆರ್ ಹೇಳಿದ್ದಾರೆ.

ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದಾಗ, ಅಲ್ಲಿ ಘೆಬ್ರೆಯೆಸಸ್ ಅವರು ಇದ್ದರು ಎಂಬ ವಿಚಾರ ಗೊತ್ತಿತ್ತಾ? ಎಂಬುವುದರ ಬಗ್ಗೆ ಇಸ್ರೇಲ್ ಪ್ರತಿಕ್ರಿಯಿಸಿಲ್ಲ.

ಇರಾನ್ ಬೆಂಬಲಿತ ಹೌತಿ ಬಂಡುಕೋರರು ಇಸ್ರೇಲ್ ಮೇಲೆ ಕ್ಷಿಪಣಿ ಮತ್ತು ಎರಡು ಡ್ರೋನ್‌ಗಳನ್ನು ಹಾರಿಸಿರುವುದಾಗಿ ಹೇಳಿಕೊಂಡ ಒಂದು ದಿನದ ನಂತರ ಇಸ್ರೇಲ್‌ ದಾಳಿ ನಡೆಸಿದೆ.

ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಮತ್ತೊಂದು ಗುಂಪು, ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ನವೆಂಬರ್ ಅಂತ್ಯದಿಂದ ಯೆಮೆನ್‌ನ ಹೌತಿಗಳು ಇಸ್ರೇಲ್ ಮೇಲೆ ತಮ್ಮ ದಾಳಿಯನ್ನು ಹೆಚ್ಚಿಸಿದ್ದಾರೆ.

ರಾಜಧಾನಿ ಸನಾದ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಮತ್ತು ರಾಸ್ ಇಸ್ಸಾ ಬಂದರಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೌತಿ ಮೂಲಗಳು ಆರಂಭದಲ್ಲಿ ಹೇಳಿತ್ತು. ಆದರೆ, ಇಸ್ರೇಲ್ ದಾಳಿಗಳಲ್ಲಿ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ ಎಂದು ಹೌತಿ ಅಲ್-ಮಸಿರಾ ಟಿವಿ ಹೇಳಿದೆ.

ಡಿಸೆಂಬರ್ 19ರ ಬಳಿಕ ಹೌತಿ ಹಿಡಿತದಲ್ಲಿರುವ ವಿಮಾನ ನಿಲ್ದಾಣ, ಮಿಲಿಟರಿ ಸೌಲಭ್ಯಗಳು ಮತ್ತು ವಿದ್ಯುತ್ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಹೌತಿ ಕೂಡ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದೆ.

ವಿಶ್ವಸಂಸ್ಥೆ ಕಾರ್ಯದರ್ಶಿ ಕಳವಳ

ಇಸ್ರೇಲ್ ಮತ್ತು ಹೌತಿಗಳ ನಡುವಿನ ಕಾಳಗ “ಹೆಚ್ಚಾಗುತ್ತಿರುವುದಕ್ಕೆ ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಕಳವಳವ್ಯಕ್ತಪಡಿಸಿದ್ದಾರೆ. ಸನಾ ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ‘ಆತಂಕಕಾರಿ’ ಎಂದಿದ್ದಾರೆ.

ಯೆಮನ್‌ನ ಶೇ.80ರಷ್ಟು ಜನಸಂಖ್ಯೆಯು ವಾಯುಮಾರ್ಗವನ್ನು ಅವಲಂಬಿಸಿದೆ. ಹೀಗಿರುವಾಗ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆದಿರುವುದರಿಂದ ಅಲ್ಲಿನ ಮಾನವೀಯ ಕಾರ್ಯಾಚರಣೆಗೆ ಅಡ್ಡಿಯಾಗಲಿದೆ. ಅಗತ್ಯ ಸಾಮಾಗ್ರಿಗಳ ಸರಬರಾಜಿಗೆ ತಡೆಯಾಗಲಿದೆ ಎಂದು ಗುಟೆರೆಸ್ ಹೇಳಿದ್ದಾರೆ.

ಇದನ್ನೂ ಓದಿ : ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...